Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಂತೆ ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸಲು ರಾಜ್ಯ ಸರ್ಕಾರವು ರೂಪಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಈ ಯೋಜನೆಗೆ HRMS ವ್ಯವಸ್ಥೆಯಡಿ ಸರ್ಕಾರಿ ನೌಕರರ ನೋಂದಾವಣೆಯನ್ನು ಕೈಗೊಳ್ಳಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳ 6 ಲಕ್ಷ ನೌಕರರು ಸೇರಿದಂತೆ ಅವರ ಕುಟುಂಬದ ಸದಸ್ಯರನ್ನು ಒಳಗೊಂಡಂತೆ ಅಂದಾಜು 25 ಲಕ್ಷ ಫಲಾನುಭವಿಗಳು ನಗದು ರಹಿತ ಆರೋಗ್ಯ ಸೌಲಭ್ಯವನ್ನು ಪಡೆಯಲಿದ್ದಾರೆ. ಈ ಯೋಜನೆಯಡಿ ಮೊದಲನೇ ಹಂತದಲ್ಲಿ ಸರ್ಕಾರಿ ನೌಕರರು ಅಂದಾಜು 2000 ಒಳರೋಗಿ ಚಿಕಿತ್ಸಾ ವಿಧಾನಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ನೋಂದಾಯಿತವಾದ ಖಾಸಗಿ ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ಚಿಕಿತ್ಸೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. https://kannadanewsnow.com/kannada/anti-farmer-anti-poor-govt-in-karnataka-by-vijayendra/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಯನ್ನು ಜನರಿಗೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದ ಸರಕಾರ ಸಿದ್ದರಾಮಯ್ಯನವರದು ಎಂದು ಟೀಕಿಸಿದರು. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮತ್ತು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ರೂಪಾಯಿಗಳನ್ನು ಸಿದ್ದರಾಮಯ್ಯನವರ ಸರಕಾರ ದುರ್ಬಳಕೆ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ರಾಜ್ಯದಲ್ಲಿ ಇರುವುದು ಜನಪರ ಸರಕಾರ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಬಡವರ, ರೈತರ, ಜನಸಾಮಾನ್ಯರ ಪರವಾದ ಸರಕಾರ ಅಲ್ಲ. ಈ ಸರಕಾರ ರೈತ ವಿರೋಧಿ ಹಾಗೂ ಬಡವರ ವಿರೋಧಿ ಎಂದು ತಿಳಿಸಿದರು. ಕಾಂಗ್ರೆಸ್ ಶಾಸಕರಿಂದ ಸರಕಾರ ಉರುಳಿಸುವ ಕಾರ್ಯ ಕಾಂಗ್ರೆಸ್ ಮುಖಂಡರು…
ಬೆಂಗಳೂರು: ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಮಹತ್ವದ ಕ್ರಮವಹಿಸಲಾಗಿದೆ. ಬಿಬಿಎಂಪಿ ಶಾಲೆಗಳಲ್ಲಿ ಇಂಗುಗುಂಡಿ ನಿರ್ಮಾಣ ಮಾಡಲಾಗುತ್ತದೆ ಅಂತ ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ. ಬಿಬಿಎಂಪಿಯ ಶಾಲೆಗಳ ಆವರಣದಲ್ಲಿ ಲಭ್ಯವಿರುವ ಜಾಗಕ್ಕೆ ಅನುಗುಣವಾಗಿ ಇಂಗುಗುಂಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಷ್ಟೇ ನೀರು ಇಂಗಲಿದೆ ಎಂಬುದನ್ನು ಮಾಪನ ಮಾಡುವ ಸಾಧನಗಳನ್ನು ಅಳವಡಿಸುತ್ತಿಲ್ಲ. ಮಳೆ ನೀರನ್ನು ಇಂಗಿಸಿ, ಅಂತರ್ಜಲ ಮಟ್ಟವನ್ನು ವೃದ್ಧಿಸಲು ಶಾಲೆಗಳ ಆವರಣದಲ್ಲಿ ಸಣ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ. https://twitter.com/KarnatakaVarthe/status/1914284999064600676 https://kannadanewsnow.com/kannada/today-is-a-rare-day-when-3-planets-come-together-look-at-the-sky-at-9-09-pm-and-say-your-wishes-will-be-fulfilled/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/
ಇಂದು, ಸೋಮವಾರ, ಏಪ್ರಿಲ್ 21, 2025, ಮೂರು ಗ್ರಹಗಳು ಜೋಡಣೆಗೆ ಬರಲಿವೆ. ಇಂದು ಪವಾಡದ ದಿನವೆಂದು ಪರಿಗಣಿಸಲಾಗಿದೆ. ಈ ದಿನ ರಾತ್ರಿ ಆಕಾಶವನ್ನು ನೋಡಿ ನಾವು ಏನೇ ಪ್ರಾರ್ಥಿಸಿದರೂ ಅದು ತಕ್ಷಣವೇ ನೆರವೇರುತ್ತದೆ ಎಂದು ಜ್ಯೋತಿಷ್ಯ ನಂಬುತ್ತದೆ. ಇಂದಿನ ಅಪರೂಪದ ದಿನದಂದು ಸರಳ ರೇಖೆಯಲ್ಲಿ ಬರುವ ಮೂರು ಗ್ರಹಗಳು ಯಾವುವು? ಇಂದು ರಾತ್ರಿ ಬಯಲಿನಲ್ಲಿ ನಿಂತು ನಾವು ಮಾಡಬೇಕಾದ ಪರಿಹಾರವೇನು? ಈ ಪೋಸ್ಟ್ನಲ್ಲಿ ನಿಮಗಾಗಿ ಕೆಲವು ಆಧ್ಯಾತ್ಮಿಕ ಮಾಹಿತಿಯನ್ನು ಒದಗಿಸಲಾಗಿದೆ. ಇಂದು, ಚಂದ್ರ, ಶುಕ್ರ ಮತ್ತು ಗುರು ಎಂಬ ಮೂರು ಗ್ರಹಗಳು ಒಂದೇ ಸಾಲಿನಲ್ಲಿರುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…
ಬೆಂಗಳೂರು : ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ ಹಣಕಾಸು ವಿಭಾಗದ ನಿರ್ದೇಶಕರಾದ ಕೆ ಎನ್ ಗಂಗಾಧರ್ ಜೀವನ ಪ್ರಮಾಣ ಪತ್ರ ಪ್ರಮಾಣೀಕರಣ ತಂತ್ರಾಂಶವನ್ನು ಅನಾವರಣಗೊಳಿಸಿದರು. ತಂತ್ರಾಂಶ ಚಾಲನೆಗೊಳಿಸಿ ಮಾತನಾಡಿದ ಗಂಗಾಧರ್, ಪಿಂಚಣಿದಾರರಿಗೆ ಅನುಕೂಲ ಕಲ್ಪಿಸಲು ನಿಗಮದ ಮಾಹಿತಿ ತಂತ್ರಜ್ಞಾನ ವಿಭಾಗ “ಎನ್ಐಸಿಯ ಜೀವನ್ ಪ್ರಮಾಣ್ ಅಪ್ಲಿಕೇಷನ್ ಜತೆಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್” (ಡಿಎಲ್ಸಿ) ಪ್ರಮಾಣೀಕರಣ ತಂತ್ರಾಂಶ ಅಭಿವೃದ್ಧಿಗೊಳಿಸಿದ್ದು ಪಿಂಚಣಿದಾರರಿಗೆ ತಾವಿದ್ದ ಸ್ಥಳದಿಂದಲೇ ಲೈಫ್ ಸರ್ಟಿಫಿಕೇಟ್ ವೆರಿಫಿಕೇಷನ್ ಮಾಡಬಹುದಾಗಿದೆ. ಪಿಂಚಣಿದಾರರಿಗೆ ಈ ತಂತ್ರಾಂಶದ ಬಗ್ಗೆ ಸಂಬಂಧಿಸಿದ ವಿಭಾಗಗಳಲ್ಲಿ ಜಾಗೃತಿ ಮೂಡಿಸಲಾಗುವುದು,” ಎಂದು ತಿಳಿಸಿದರು. ಕೆಇಬಿ ಪೆನ್ಷನರ್ಸ್ ಅಸೋಸಿಯೇಷನ್ ಅಧ್ಯಕ್ಷ ಕುಮಾರಸ್ವಾಮಿ ಬಿ.ಪಿ, ಮಾತನಾಡಿ, “ರಾಜ್ಯದೆಲ್ಲೆಡೆ 40 ಸಾವಿರ ಪಿಂಚಣಿದಾರರಿದ್ದಾರೆ. ವರ್ಷದಲ್ಲಿ ಎರಡು ಬಾರಿ ಖುದ್ದು ಕಚೇರಿಗೆ ತೆರಳಿ…
ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ತೆರಳಿದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಪರೀಕ್ಷಾ ಮಾರ್ಗ ಸೂಚಿಯ ವಸ್ತ್ರಸಂಹಿತೆ ನೀತಿಯಲ್ಲಿ ಅವಶ್ಯಕ ಬದಲಾವಣೆ ಮಾಡುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಅವರಿಗೆ ಪತ್ರ ಬರೆದಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ ರಾಜಕಾರಣಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದು ಹೇಳಿದ್ದಾರೆ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು( ಕಳೆದ ಬಾರಿಯ ಕೆ ಎ ಎಸ್ ಪರೀಕ್ಷೆಯಲ್ಲಿ ನಡೆದ ಘಟನೆ)…
ಬೆಂಗಳೂರು: ಬೇಸಿಗೆಯ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆಯಲ್ಲಿ ಕಿಂಚಿತ್ತು ಲೋಪವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸಚಿವರು ಇಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಡಿಯೊ ಸಭೆ ನಡೆಸಿ ಕುಡಿಯುವ ನೀರು ಸರಬರಾಜು ಸಂಬಂಧದಲ್ಲಿ ಹಲವು ಸೂಚನೆಗಳನ್ನು ನೀಡಿದರು. ಕಳೆದ ವರ್ಷದ ಸಮಸ್ಯೆಗಳನ್ನು ಅವಲೋಕನ ಮಾಡಿ ಕಳೆದ ವರ್ಷ ಜಿಲ್ಲೆಗಳಲ್ಲಿ ಉದ್ಭವಿಸಿದ್ದ ಸಮಸ್ಯೆಗಳನ್ನು ಅವಲೋಕನ ಮಾಡಿ ಮುಂಜಾಗರೂಕತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ ಸಚಿವರು ಕೊಳವೆ ಬಾವಿಗಳ ದುರಸ್ತಿ, ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯುವುದು, ವಾಹನಗಳ ಮೂಲಕ ನೀರು ಸರಬರಾಜು ಸೇವೆಗೆ ಆದ್ಯತೆ ನೀಡಬೇಕು, ಜಿಲ್ಲಾಧಿಕಾರಿಗಳು ಹಾಗೂ ಇತರ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆಗಳನ್ನು ನಡೆಸಬೇಕು, ತಾಲ್ಲೂಕು ಪಂಚಾಯತಿಗಳ ನಿರ್ವಹಣಾಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸುವ ವಿಚಾರವಾಗಿ ಮಾನ್ಯ ಉಚ್ಛ ನ್ಯಾಯಾಲಯ, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದರು. ಆದರೂ ಕೂಡ ಇತ್ತೀಚಿನ ದಿನಗಳಲ್ಲಿ ಉಲ್ಲಂಘನೆಗಳು ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು. ನಗರದಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಹೊಸದಾಗಿ ಸುತ್ತೋಲೆ ಹೊರಡಿಸಲಾಗುತ್ತಿದೆ. ಅದರಲ್ಲಿ, ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗೆ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಅಧಿಕಾರವನ್ನು ನೀಡಿ ಎಫ್.ಐ.ಆರ್ ದಾಖಲಿಸಿ, ತೆರವುಗೊಳಿಸುವ ವೇಳೆ ವ್ಯಯವಾಗುವ ವೆಚ್ಚವನ್ನು ವಸೂಲಿ ಮಾಡುವುದರ ಜೊತೆಗೆ ದುಪ್ಪಟ್ಟು ದಂಡ…
ಬೆಂಗಳೂರು: ಬಿಡದಿಯ ಬಳಿಯಲ್ಲಿ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಗಾಯಗೊಂಡು ರಿಕ್ಕಿ ರೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಪ್ರಕರಣವನ್ನು ರದ್ದುಗೊಳಿಸುವಂತೆ ಮುತ್ತಪ್ಪ ರೈ ಪತ್ನಿ ಅನುರಾಧಾ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಆಸ್ತಿಯ ವಿಚಾರವಾಗಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿರುವಂತ ರಿಕ್ಕಿ ರೈ, ಅಲ್ಲಿಂದಲೇ ಹೇಳಿಕೆ ನೀಡಿ, ಈ ಘಟನೆಗೆ ನನ್ನ ಚಿಕ್ಕಮ್ಮನೇ ಕಾರಣ ಎಂಬುದಾಗಿ ಆರೋಪಿಸಿದ್ದರು. ಅವರ ಹೇಳಿಕೆ ಆಧರಿಸಿ, ಮುತ್ತಪ್ಪ ರೈ ಪತ್ನಿ ಅನುರಾಧ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣಕ್ಕೆ ಮಧ್ಯಂತ ತಡೆ ನೀಡುವಂತೆ, ಪ್ರಕರಣ ರದ್ದು ಮಾಡುವಂತೆ ಮುತ್ತಪ್ಪ ರೈ ಪತ್ನಿ ಅನುರಾಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/gold-price-touches-rs-1-lakh-mark-for-jewellery-lovers/ https://kannadanewsnow.com/kannada/complaint-to-lokayukta-to-probe-smart-meter-scam-dr-cn-ashwathnarayan/
ನವದೆಹಲಿ: ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ 10 ಗ್ರಾಂಗೆ 1 ಲಕ್ಷ ರೂಪಾಯಿ ಮಾನಸಿಕ ಗಡಿಯನ್ನು ತಲುಪಿದ್ದು, ಬೆಲೆಬಾಳುವ ಹಳದಿ ಲೋಹದ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಲೇ ಇದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, 99.9 ಪ್ರತಿಶತ ಶುದ್ಧತೆಯ ಹಳದಿ ಲೋಹವು 1,650 ರೂಪಾಯಿಗಳಷ್ಟು ಏರಿಕೆಯಾಗಿ 10 ಗ್ರಾಂಗೆ 99,800 ರೂಪಾಯಿಗಳನ್ನು ತಲುಪಿದೆ. ಶುಕ್ರವಾರ ಇದರ ಮೌಲ್ಯ 20 ರೂಪಾಯಿಗಳಷ್ಟು ಇಳಿಕೆಯಾಗಿ 98,150 ರೂಪಾಯಿಗಳಿಗೆ ತಲುಪಿತ್ತು. ಅದೇ ರೀತಿ, 99.5 ಪ್ರತಿಶತ ಶುದ್ಧತೆಯ ಚಿನ್ನವು ಸ್ಥಳೀಯ ಮಾರುಕಟ್ಟೆಗಳಲ್ಲಿ 10 ಗ್ರಾಂಗೆ 1,600 ರೂಪಾಯಿಗಳಷ್ಟು ಏರಿಕೆಯಾಗಿ 99,300 ರೂಪಾಯಿಗಳ ಹೊಸ ಗರಿಷ್ಠ ಮಟ್ಟವನ್ನು ತಲುಪಿತ್ತು. ಹಿಂದಿನ ಮಾರುಕಟ್ಟೆ ಮುಕ್ತಾಯದಲ್ಲಿ ಇದು ಸ್ವಲ್ಪ ಕುಸಿದು 10 ಗ್ರಾಂಗೆ 97,700 ರೂಪಾಯಿಗಳಿಗೆ ತಲುಪಿತ್ತು. ಬೆಳ್ಳಿ ಬೆಲೆಯೂ ಸಹ ಏರಿಕೆ ಬೆಳ್ಳಿ ಬೆಲೆಯೂ ಸಹ 500 ರೂಪಾಯಿಗಳಷ್ಟು ಏರಿಕೆಯಾಗಿ ಪ್ರತಿ ಕೆಜಿಗೆ 98,500 ರೂಪಾಯಿಗಳಿಗೆ ತಲುಪಿದೆ. ಶುಕ್ರವಾರ ಬಿಳಿ ಲೋಹವು ಪ್ರತಿ ಕೆಜಿಗೆ 98,000 ರೂ.ಗೆ ಸ್ಥಿರವಾಗಿ ವಹಿವಾಟು…













