Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ.ಜಿ ನಿರ್ದೇಶನ ನೀಡಿದರು. ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡುವ ಸಂಬಂಧ ಕರೆಯಲಾಗಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಕ್ವಿಂಟಲ್ ರಾಗಿಗೆ 4,886 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಪಡಿಸಿದ್ದು, 2025ರ ಅಕ್ಟೋಬರ್ 01 ರಿಂದ ಡಿಸೆಂಬರ್ 15 2025 ರ ವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಜನವರಿ 01 2026 ರಿಂದ ಮಾರ್ಚ್ 31 2026 ರವರೆಗೆ ರಾಗಿ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರಂ, ಬೆಂಗಳೂರು ದಕ್ಷಿಣ…
ಬೆಳಗಾವಿ: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದಿದ್ದಾರೆ. ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ. ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ…
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಯ’ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಆದರೆ, ಈಗ ಕಾಂಗ್ರೆಸ್ನ ಗ್ಯಾರಂಟಿಗಳನ್ನು ವಿರೋಧಿಸಲು ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸುರ್ಜೇವಾಲಾ, ಬಿಜೆಪಿ-ಜೆಡಿಎಸ್ ಮೈತ್ರಿಯ ದ್ವೇಷಕ್ಕೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿದೆ. ಇಂತಹ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ. ಗ್ಯಾರಂಟಿಗಳಿಂದ ಆದ ಪರಿವರ್ತನೆ: ಈ ಯೋಜನೆಗಳ ಯಶಸ್ಸಿನ ಅಂಕಿ-ಅಂಶಗಳನ್ನು ನೀಡಿದ ಸುರ್ಜೇವಾಲಾ, ಗ್ಯಾರಂಟಿಗಳಿಂದ ಜನಸಾಮಾನ್ಯರ ಬದುಕಿನ ಮೇಲೆ ಆಗಿರುವ ಪರಿಣಾಮಗಳನ್ನು…
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿತ್ತು. ರೈಲಿನ ಅಡಿಯಲ್ಲಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಿರುವಂತ ಸಿಬ್ಬಂದಿಗಳು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು. ನಮ್ಮ ಮೆಟ್ರೋ ರೈಲು ಹಳಿಯ ಮೇಲೆ ಜಿಗಿದ ನಂತ್ರ ರೈಲು ಸಾಗಿತ್ತು. ಹೀಗಾಗಿ ರೈಲಿನ ಅಡಿಯಲ್ಲಿ ಯುವಕ ಸಿಲುಕಿಕೊಂಡಿದ್ದನು. ಹೀಗೆ ಆತ್ಮಹತ್ಯೆಗೆ ಯತ್ನಿಸಿ, ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದಂತ ಯುವಕನನ್ನು ರಕ್ಷಿಸಲಾಗಿದೆ. ಗಾಯಗೊಂಡಿರುವಂತ ಆತನನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://kannadanewsnow.com/kannada/national-best-teacher-awardee-pg-dwarkanath-passes-away/ https://kannadanewsnow.com/kannada/note-do-you-know-how-many-days-you-can-store-water-in-your-home/
ಬೆಂಗಳೂರು: ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಪಿ.ಜಿ ದ್ವಾರಕನಾಥ್ ಅವರ ನಿಧನ ಅತ್ಯಂತ ದುಃಖಕರ ಸಂಗತಿಯಾಗಿದೆ. ಅವರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಅನುಭವವೂ ಶ್ಲಾಘನೀಯ ಹಾಗೂ ಅವರ ನಾಯಕತ್ವವು ವಿದ್ಯಾವರ್ಧಕ ಸಂಘದ ಬೆಳವಣಿಗೆಗೆ ಕಾರಣವಾಗಿತ್ತು ಎಂದಿದ್ದಾರೆ. 25 ವರ್ಷಗಳ ಕಾಲ ಹೈಸ್ಕೂಲ್ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿರುವ ಪಿ.ಜಿ ದ್ವಾರಕನಾಥ್ ಅವರ ಅಗಲಿಕೆ ಶೈಕ್ಷಣಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಇಂದು ಅವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ತಿಳಿಸಲಾಯಿತು. ಅಗಲಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ತಿಳಿಸಿದ್ದಾರೆ. https://twitter.com/dkshivakumar/status/1974415380279111752?s=46 https://kannadanewsnow.com/kannada/veteran-actor-sandhya-shantaram-no-more/ https://kannadanewsnow.com/kannada/note-do-you-know-how-many-days-you-can-store-water-in-your-home/
ನವದೆಹಲಿ: ಹಿರಿಯ ನಟಿ ಸಂಧ್ಯಾ ಶಾಂತಾರಾಮ್ 94 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯನ್ನು ಇಂದು ಶಿವಾಜಿ ಪಾರ್ಕ್ನಲ್ಲಿರುವ ವೈಕುಂಠ ಧಾಮದಲ್ಲಿ ನಡೆಸಲಾಯಿತು. ಅವರ ಸಾವಿಗೆ ಕಾರಣವೇನೆಂದು ಸ್ಪಷ್ಟತೆ ಇಲ್ಲವಾದರೂ, ಅವರು ವೃದ್ಧಾಪ್ಯದ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಮೂಲಗಳು ಇಂಡಿಯಾಟುಡೇ.ಇನ್ಗೆ ತಿಳಿಸಿವೆ. ತಮ್ಮ ಆಕರ್ಷಕ ಅಭಿನಯ ಮತ್ತು ಪ್ರತಿಯೊಂದು ಪಾತ್ರಕ್ಕೂ ಆಳವನ್ನು ತರುವ ಸಾಮರ್ಥ್ಯಕ್ಕೆ ಹೆಸರುವಾಸಿಯಾದ ಸಂಧ್ಯಾ, ಭಾರತೀಯ ಚಿತ್ರರಂಗದ ಸುವರ್ಣ ಯುಗವನ್ನು ವ್ಯಾಖ್ಯಾನಿಸುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಚಲನಚಿತ್ರ ನಿರ್ಮಾಪಕ ವಿ ಶಾಂತಾರಾಮ್ ಅವರನ್ನು ವಿವಾಹವಾದ ಸಂಧ್ಯಾ ಅವರ ಸಂಗೀತಗಾರ ಮತ್ತು ತಮ್ಮದೇ ಆದ ರೀತಿಯಲ್ಲಿ ಪ್ರಮುಖ ನಟಿಯಾಗಿದ್ದರು. ಸಂಕೀರ್ಣ ಭಾವನೆಗಳನ್ನು ಸುಲಭವಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದ ಮರಾಠಿ ಕ್ಲಾಸಿಕ್ ‘ಪಿಂಜಾರ’ದಲ್ಲಿನ ಅವರ ಕೆಲಸಕ್ಕಾಗಿ ಅವರು ವ್ಯಾಪಕವಾಗಿ ಗುರುತಿಸಲ್ಪಟ್ಟರು. ‘ದೋ ಆಂಖೇನ್ ಬಾರಾ ಹಾತ್’ ನಲ್ಲಿ, ಅವರು ನಟನೆ ಮತ್ತು ನೃತ್ಯವನ್ನು ಸಂಯೋಜಿಸಿದರು, ಅವರ ಬಹುಮುಖ ಪ್ರತಿಭೆಗೆ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸಿದರು. ಅವರ ವೃತ್ತಿಜೀವನವು ಬಹು ಭಾಷೆಗಳು ಮತ್ತು ಪ್ರಕಾರಗಳನ್ನು…
ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರಸಿದ್ಧ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಬರೋಬ್ಬರಿ 36 ಲಕ್ಷ ಪೀಕಿರುವಂತ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ಈ ಸಂಬಂಧ ಇಬ್ಬರ ವಿರುದ್ಧ FIR ದಾಖಲಾಗಿದ್ದು, ಆರೋಪಿಗಳಾದಂತ ಓರ್ವ ಯುವತಿ, ಆಕೆಯ ಬಾಯ್ ಫ್ರೆಂಡ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ರಾಜಶ್ರೀ ಎಲೆಕ್ಟ್ರಾನಿಕ್ಸ್ ಅಂದ್ರೆ ತುಂಬಾನೇ ಪ್ರಸಿದ್ಧಿ. ಇಂತಹ ಅಂಗಡಿ ಮಾಲೀಕರಿಗೆ ಬ್ಲಾಕ್ ಮೇಲ್ ಮಾಡಿ ಅಂಗಡಿಯಲ್ಲೇ ಕೆಲಸ ಮಾಡುತ್ತಿದ್ದಂತ ಯುವತಿ ಹಾಗೂ ಬಾಯ್ ಫ್ರೆಂಡ್ ಹಂತ ಹಂತವಾಗಿ 36 ಲಕ್ಷ ಹಣ ಪಡೆದಿದ್ದಾರೆ. ಈ ಸಂಬಂಧ ಅಂಗಡಿ ಮಾಲೀಕರು ನೀಡಿದಂತ ದೂರಿನ ಅನ್ವಯ ಸಾಗರ ಪೇಟೆ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 329(4), 308(2), 351(2) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘FIR’ನಲ್ಲಿ ಏನಿದೆ.? ದಿನಾಂಕ:-01/10/2025 ರಂದು 9-30.ಎ.ಎಂ ಗಂಟೆಗೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಪಿರ್ಯಾದಿದಾರರು ಈಗೆ 50 ವರ್ಷಗಳಿಂದ ಸಾಗರ…
ಬೆಂಗಳೂರು: ನಗರದ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಪ್ರಯಾಣಿಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದಂತ ಮತ್ತೊಂದು ಘಟನೆ ನಡೆದಿದೆ. ಬೆಂಗಳೂರಿನ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ಹಳಿಗೆ ವ್ಯಕ್ತಿಯೊಬ್ಬ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪ್ರಸ್ತುತ ನಮ್ಮ ಮೆಟ್ರೋ ರೈಲಿನ ಅಡಿಯಲ್ಲಿ ಪ್ರಯಾಣಿಕ ಸಿಲುಕಿದ್ದಾನೆ. ಆತನನ್ನು ಹೊರಗೆ ತರಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/two-arrested-for-blackmailing-a-well-known-shop-owner-in-the-state/
ಮಂಡ್ಯ: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ. ನವೆಂಬರ್ ಗೆ ಯಾವ ಕ್ರಾಂತಿ ಆಗಲ್ಲ ಎಂಬುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇಂದು ಮಡ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನವೆಂಬರ್ ಗೆ ಯಾವ ಕ್ರಾಂತಿ ಇಲ್ಲ, ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳ್ತಿದ್ದಾರೆ. 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರ್ತಾರೆ. ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದರು. ಮೈಸೂರಿನಲ್ಲಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ 5 ವರ್ಷನಾನೇ ಸಿಎಂ. ನಮ್ಮ ಪಕ್ಷ ಹೈಕಾಮಂಡ್ ಪಕ್ಷ ತೀರ್ಮಾನ ಎಲ್ಲ ಹೈಕಾಮಂಡ್ ಮಾಡುತ್ತೆ. ಹೈಕಾಮಂಡ್ ತೀರ್ಮಾನಕ್ಕೆ ನಾವು ಬದ್ದವಾಗಿದ್ದೇವೆ ಎಂದರು. ಅವರವರ ಬೆಂಬಲಿಗರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋದು ಆಸೆ ಇರುತ್ತೆ. ನಮ್ಮ ಅಧ್ಯಕ್ಷರೆ ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದ್ರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟೀಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ 5 ವರ್ಷ…
ಮಂಡ್ಯ: ಸ್ಲಂ ಬೋರ್ಡ್, ರಾಜೀವ್ ಗಾಂಧಿ ಯೋಜನೆಯಲ್ಲಿ ಒಂದು ಮನೆಯನ್ನ ಬಿಜೆಪಿ ಕೊಟ್ಟಿದ್ರೆ ನಾನು ದೇವರಾಣೆ ರಾಜಕೀಯ ನಿವೃತ್ತಿ ತಗೊಳ್ಳುತ್ತೇನೆ. ಬಿಜೆಪಿ ಸಾಬೀತು ಮಾಡಿದ್ರೆ ಸಾಯಂಕಾಲ ರಾಜ್ಯಪಾಲರ ಮನೆಗೆ ಹೋಗಿ ರಾಜಿನಾಮೆ ಕೊಡ್ತೇನೆ ಎಂಬುದಾಗಿ ಸಚಿವ ಜಮೀರ್ ಅಹಮದ್ ಹೇಳುವ ಮೂಲಕ ವಿಜಯೇಂದ್ರ, ಅಶೋಕ್ ಗೆ ಓಪನ್ ಚಾಲೆಂಜ್ ಹಾಕಿದ್ದಾರೆ. ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಶೋಕ್ ತಾಕತ್ ಧಮ್ ಇದ್ಯಾ ನಿಮಗೆ? ಬಿಜೆಪಿಯವರಿಗೆ ಕೆಲಸ ಇಲ್ಲ ಬರಿ ಟಿಕೇ ಮಾಡೋದೆ ಕೆಲಸ. ಯಾವುದಾದರೂ ಅಭಿವೃದ್ಧಿ ಕೆಲಸ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿರುವ ಭಾಗ್ಯದ ಬಗ್ಗೆ ನಾವು ಹೇಳ್ತೇವೆ. ಬಿಜೆಪಿಯವರ ಕಾರ್ಯಕ್ರಮ ಸೋನ್ನೆ ಅವರು ಬರಿ ಹಿಂದು-ಮುಸ್ಲಿಂ ಅಷ್ಟೆ. ಅವರಿಗೆ ಹಿಂದೂ ಮುಸ್ಲಿಂ ಬೇಕಾಗಿಲ್ಲ ಬರಿ ಕುರ್ಚಿ ಬೇಕಷ್ಟೆ ಎಂದು ಕಿಡಿಕಾರಿದರು. ಪ್ರಧಾನಿ ನರೇಂದ್ರ ಮೋದಿ 15 ಲಕ್ಷ ಎಲ್ಲಿ? ಗ್ಯಾರಂಟಿ ಗಳ ಬಗ್ಗೆ ಟಿಕೆ ಮಾಡಿದ್ರು ನಮ್ಮ ಸರ್ಕಾರ ಗ್ಯಾರಂಟಿ ಸಕ್ಸಸ್ ಅಗಿದೆ. ಸಿದ್ದರಾಮಯ್ಯ ಹಿಂದೆ ಸ್ಲಂ ಬೋರ್ಟ್ 1.80…














