Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಹೃದಯ ಭಾಗವಾಗಿದ್ದಂತ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಟ್ರಾನ್ಸ್ ಫಾರ್ಮರ್ ಹಾಳಾಗಿದ್ದರಿಂದ ಪವರ್ ಕಟ್ ಆಗಿತ್ತು. ಈಗ ಬೆಸ್ಕಾಂ ಇಲಾಖೆಯಿಂದ ದುರಸ್ಥಿಗೊಳಿಸಲಾಗಿದ್ದು, ಮರಳಿ ಕರೆಂಟ್ ಬಂದಿರುವುದಾಗಿ ಬಿಎಂಟಿಸಿ ತಿಳಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿಯು, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿನ ಟ್ರಾನ್ಸ್ ಫಾರ್ಮರ್ ಸುಟ್ಟು ಹೋಗಿದ್ದರಿಂದಾಗಿ ವಿದ್ಯುತ್ ಸ್ಥಗಿತ ಉಂಟಾಗಿತ್ತು. ಆದರೇ ಜನರೇಟರ್ ಬಳಸಿ ವಿದ್ಯುತ್ ಅನ್ನು ಬಿಎಂಟಿಸಿ ನಿಲ್ದಾಣದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿತ್ತು. ನಿಮ್ಮ ಕನ್ನಡ ನ್ಯೂಸ್ ನೌ ಆ ಬಗ್ಗೆ ಬೆಂಗಳೂರಿನ ‘ಮೆಜೆಸ್ಟಿಕ್’ನಲ್ಲೇ ವಿದ್ಯುತ್ ಕಡಿತ: ಕತ್ತಲಲ್ಲಿ ‘BMTC ಬಸ್ ನಿಲ್ದಾಣ’ದಲ್ಲಿ ಪ್ರಯಾಣಿಕರ ಪರದಾಟ ಎಂಬುದಾಗಿ ವರದಿಯನ್ನು ಪ್ರಕಟಿಸಿತ್ತು. ಈ ಸುದ್ದಿಯ ನಂತ್ರ ಬಿಎಂಟಿಸಿಯಿಂದ ತ್ವರಿತ ಕಾರ್ಯದ ನಂತ್ರ, ಬೆಸ್ಕಾಂ ಇಲಾಖೆಯಿಂದ ಟ್ರಾನ್ಸ್ ಫಾರ್ಮಾರ್ ಬದಲಿಸಿ, ವಿದ್ಯುತ್ ಮರು ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಪವರ್ ಮತ್ತೆ ಬಂದಂತೆ ಆಗಿದೆ. https://kannadanewsnow.com/kannada/hunsagi-rail-action-committee-urges-union-railway-minister-to-implement-alamatti-yadgir-railway-line-project/ https://kannadanewsnow.com/kannada/here-is-a-rare-principal-in-the-state-his-cleanliness-work-has-been-greatly-appreciated/
ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಯೋಜನೆ ಜಾರಿಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಹುಣಸಗಿ ರೈಲು ಹೋರಾಟ ಸಮಿತಿ ಮನವಿ
ಯಾದಗಿರಿ: ಆಲಮಟ್ಟಿ -ಯಾದಗಿರಿ ರೈಲುಮಾರ್ಗದ ಯೋಜನೆ ಜಾರಿಗೆ ಬರುವಂತೆ ಹಾಗೂ ಕೇಂದ್ರದ ರೈಲು ಸಚಿವರಿಗೆ ಮನವಿ ಮಾಡಲು ಹುಣಸಗಿ ರೈಲು ಹೋರಾಟ ಸಮಿತಿ ನಿಯೋಗದ ಮೂಲಕ ದೆಹಲಿಗೆ ತೆರಳಲು ರಾಯಚೂರು ಸಂಸದ ಜಿ, ಕುಮಾರ ನಾಯಕ ಅವರಿಗೆ ಯಾದಗಿರಿಯಲ್ಲಿ ಮನವಿ ಮಾಡಿದರು. ಕೇಂದ್ರ ರೈಲ್ವೆ ಸಚಿವರಿಗೆ ಮಾಡಿದಂತ ಮನವಿಯಲ್ಲಿ ನಿಡಗುಂದಿ, ಮುದ್ದೇಬಿಹಾಳ, ತಾಳಿಕೋಟೆ, ಹುಣಸಗಿ ಮತ್ತು ಶೋರಾಪುರ ಮೂಲಕ ಆಲಮಟ್ಟಿ ಮತ್ತು ಯಾದಗಿರಿ ನಡುವಿನ ರೈಲ್ವೆ ಮಾರ್ಗವು ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಸ್ತಾಪಿಸಲ್ಪಟ್ಟಿತು, ವಿವಿಧ ಕಾರಣಗಳಿಂದಾಗಿ ಹಲವಾರು ದಶಕಗಳ ನಂತರವೂ ಇನ್ನೂ ಪೂರ್ಣಗೊಂಡಿಲ್ಲ ಎಂಬುದಾಗಿ ಹುಣಸಗಿ ರೈಲು ಹೋರಾಟ ಸಮಿತಿಯ ನಿಯೋಗವು ತಿಳಿಸಿದೆ. ಬ್ರಿಟಿಷರು ಈ ಮಾರ್ಗದಲ್ಲಿ ಮಾರ್ಗವನ್ನು ಹಾಕಲು ಸಿದ್ಧತೆಗಳನ್ನು ಮಾಡಿದ್ದರು. ಆದಾಗ್ಯೂ, ಸ್ವಾತಂತ್ರ್ಯ ಹೋರಾಟದಿಂದಾಗಿ ಅದನ್ನು ನಿಲ್ಲಿಸಲಾಯಿತು. ಆದರೆ, ಹಲವಾರು ವರ್ಷಗಳ ನಂತರ, ಈ ಪ್ರದೇಶದ ಜನರು ಈಗ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಯೋಜಿಸಿದರು ಮತ್ತು ಉದ್ದೇಶಿತ ಮಾರ್ಗವನ್ನು ಪೂರ್ಣಗೊಳಿಸುವಂತೆ ಇಲಾಖೆಯನ್ನು ಒತ್ತಾಯಿಸಿ ಸಹಿ ಅಭಿಯಾನಕ್ಕೆ ಸಿದ್ಧತೆ ನಡೆಸಿದರು ಎಂದಿದೆ. ಆಲಮಟ್ಟಿ…
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯನ್ನು ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿ, ಆನಂತ್ರ ಮದುವೆಯಾಗದೇ ಪರಾರಿಯಾಗಿದ್ದಂತ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಠಾಣೆಯಲ್ಲಿ 24 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿ, ಬಳಿಕ ಪರಾರಿಯಾಗಿದ್ದಾನೆ ಎಂಬುದಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ನಲೆಮಂಗಲ ಟೌನ್ ಠಾಣೆಯ ಪೊಲೀಸರು ಆರೋಪಿ ಶ್ರೀಕಾಂತ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಶ್ರೀಕಾಂತ್ 24 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಲಾಡ್ಜ್ ಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದನಂತೆ. ಆ ಬಳಿಕ ಮದುವೆಯಾಗಲು ನಿರಾಕರಿಸಿದ್ದನಂತೆ. ಅಲ್ಲದೇ ನಾಪತ್ತೆಯಾಗಿದ್ದಾಗಿ ಯುವತಿ ಆರೋಪಿಸಿದ್ದಾಳೆ. ಈ ಹಿನ್ನಲೆಯಲ್ಲಿ ನೆಲಮಂಗಲ ಟೌನ್ ಠಾಣೆಯ ಪೊಲೀಸರು ಆರೋಪಿ ಶ್ರೀಕಾಂತ್ ನನ್ನು ಅರೆಸ್ಟ್ ಮಾಡಿದ್ದಾರೆ. https://kannadanewsnow.com/kannada/17-year-old-girl-raped-by-physical-teacher-in-karnataka/ https://kannadanewsnow.com/kannada/vikram-gowdas-encounter-is-not-fake-no-need-for-judicial-probe-minister-laxmi-hebbalkar/ https://kannadanewsnow.com/kannada/drug-controller-umesh-suspended-in-pregnant-womens-death-case-cm-siddaramaiah/
ಬೆಂಗಳೂರು: ರಾಜ್ಯದ ಜನರು ಬೆಚ್ಚಿ ಬೀಳುವಂತೆ ದೈಹಿಕ ಶಿಕ್ಷಕನೊಬ್ಬನು ತನ್ನ ವಿದ್ಯಾರ್ಥಿನಿಯ ಮೇಲೆಯೇ ಕೀಚಕ ಕೃತ್ಯವೆಸಗಿದ್ದಾನೆ. 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವಂತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಬಾಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದಬಾಸ್ ಪೇಟೆಯಲ್ಲೇ ಇಂತದ್ದೊಂದು ಘಟನೆ ನಡೆದಿದೆ. ತನ್ನ ಶಾಲೆಯ 17 ವರ್ಷದ ಬಾಲಕಿಯನ್ನು ನಂಬಿಸಿ ದೇವರಾಯ ದುರ್ಗಕ್ಕೆ 22 ವರ್ಷದ ದೈಹಿಕ ಶಿಕ್ಷಕ ಕರೆದೊಯ್ದಿದ್ದಾನೆ. ಆ ನಂತ್ರ ಅಲ್ಲಿಂದ ತುಮಕೂರಿಗೆ ಕರೆದೊಯ್ದು ಲಾಡ್ಜ್ ಒಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಲ್ಲಿಗೆ ಸುಮ್ಮನಾಗದಂತ ನೀಚ ದೈಹಿಕ ಶಿಕ್ಷಕ ತನ್ನ ಮನೆಗೆ ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಹೊರಗೆ ಹೇಳಿದ್ರೆ ಕೊಂದು ಬಿಡುವುದಾಗಿಯೂ ಹೆದರಿಸಿದ್ದಾನೆ. ದೈಹಿಕ ಶಿಕ್ಷಕನ ಕಾಟ ಹೆಚ್ಚಾದಂತೆ ಬಾಲಕಿ ಪೋಷಕರಿಗೆ ತಿಳಿಸಿದ್ದಾರೆ. ಇದೀಗ ಪೋಷಕರು ದಬಾಸ್ ಪೇಟೆ ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ದೈಹಿಕ ಶಿಕ್ಷಕನನ್ನು ಬಂಧಿಸಲಾಗಿದೆ. https://kannadanewsnow.com/kannada/here-is-a-rare-principal-in-the-state-his-cleanliness-work-has-been-greatly-appreciated/…
ಶಿವಮೊಗ್ಗ: ರಾಜ್ಯದಲ್ಲೇ ಅಪರೂಪದಲ್ಲಿ ಅಪರೂಪ ಎನ್ನುವಂತ ಮುಖ್ಯೋಪಾಧ್ಯಯರೊಬ್ಬರು ಸಾಗರ ನಗರದಲ್ಲಿದ್ದಾರೆ. ಇವರು ಶುಚಿತ್ವಕ್ಕಾಗಿ ಮಾಡಿದಂತ ಕಾರ್ಯ ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ಹಾಗಾದ್ರೆ ಯಾರವರು? ಏನು ಮಾಡಿದ್ದು ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಬೆಳಲಮಕ್ಕಿಯಲ್ಲಿ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಈ ಶಾಲೆಯ ಮುಖ್ಯೋಪಾಧ್ಯಯರಾಗಿ ದೇವೇಂದ್ರಪ್ಪ.ಕೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಾಲೆಯಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ, ಶುಚಿತ್ವಕ್ಕೆ ಹೆಚ್ಚು ಒತ್ತು ಕೊಡ್ತಾರೆ. ಹೀಗಾಗೇ ಶಾಲೆಗೆ ಯಾರೇ ಎಂಟ್ರಿಕೊಟ್ರು, ಅದ್ಬುತವಾಗಿದೆ ಎಂದೇ ಹುಬ್ಬೇರುವಂತೆ ಮಾಡುತ್ತದೆ. ಶೌಚಾಲಯ ಸ್ವಚ್ಛಗೊಳಿಸಿದ ಮುಖ್ಯೋಪಾಧ್ಯಯರು ರಾಜ್ಯದ ಅನೇಕ ಕಡೆಯಲ್ಲಿ ಶಾಲಾ ಶೌಚಾಲಯವನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿ, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿರುವಂತ ಸುದ್ದಿ ಕೇಳಿದ್ದೀರಿ, ನೋಡಿದ್ದೀರಿ. ಆದರೇ ದೇವೇಂದ್ರಪ್ಪ.ಕೆ ಮಾತ್ರ ಇದಕ್ಕೆ ವ್ಯತಿರಿಕ್ತ. ಶೌಚಾಲಯ ಕ್ಲೀನ್ ಇಲ್ಲ ಅಂದ್ರೆ ವಿದ್ಯಾರ್ಥಿಗಳಿಂದ ಮಾಡಿಸೋ ಮಾತೇ ಇಲ್ಲ. ಖುದ್ದು ತಾವೇ ಪೊರಕೆ, ಶೌಚಾಲಯ ಕ್ಲೀನ್ ಮಾಡುವ ಬ್ರಷ್ ಹಿಡಿದು ಕ್ಲೀನ್ ಮಾಡಿ ಸ್ವಚ್ಛಗೊಳಿಸುತ್ತಾರೆ. ಶುಚಿತ್ವಕ್ಕೆ ಮೊದಲ ಆದ್ಯತೆ, ವಿದ್ಯಾರ್ಥಿಗಳ…
ಬೆಂಗಳೂರು: ನಗರದ ಹೃದಯ ಭಾಗವೇ ಆಗಿರುವಂತ ಮೆಜೆಸ್ಟಿಕ್ ನಲ್ಲಿಯೇ ವಿದ್ಯುತ್ ಕಡಿತ ಉಂಟಾಗಿದೆ. ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಟ್ರಾಸ್ಸ್ ಫಾರ್ಮರ್ ಕೆಟ್ಟು ಹೋಗಿರುವ ಪರಿಣಾಮ ಕತ್ತಲಲ್ಲಿ ಪ್ರಯಾಣಿಕರು ಪರದಾಡುತ್ತಿರುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತದಿಂದ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಡೆಯುತ್ತಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣಾ ಕಾರ್ಯದ ಪರಿಣಾಮವಾಗಿ ಈ ಸ್ಥಗಿತವಾಗಿದೆ ಎಂದಿದೆ. ಒಂದು ಗಂಟೆಯೊಳಗೆ ವಿದ್ಯುತ್ ಸರಬರಾಜನ್ನು ಪುನಃಸ್ಥಾಪಿಸಲಾಗುವುದು ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ. ಏತನ್ಮಧ್ಯೆ, ಪ್ರಯಾಣಿಕರ ಅನುಕೂಲ ಮತ್ತು ಸುರಕ್ಷತೆಗಾಗಿ ಎಲ್ಲಾ ಸಾರ್ವಜನಿಕ ಪ್ರದೇಶಗಳು ಮತ್ತು ಪ್ಲಾಟ್ ಫಾರ್ಮ್ ಗಳಲ್ಲಿ ಸಾಕಷ್ಟು ಬೆಳಕನ್ನು ಒದಗಿಸಲು ಜನರೇಟರ್ ಗಳ ಕಾರ್ಯಾಚರಣೆಯನ್ನು ನಾವು ಖಚಿತಪಡಿಸಿದ್ದೇವೆ ಎಂದಿದೆ. https://kannadanewsnow.com/kannada/cm-siddaramaiah-announces-rs-2-lakh-ex-gratia-for-kin-of-deceased-in-series-of-deaths/ https://kannadanewsnow.com/kannada/drug-controller-umesh-suspended-in-pregnant-womens-death-case-cm-siddaramaiah/
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಬೋಧಕ, ಬೋಧಕೇತರ ಅಧಿಕಾರಿ ಹಾಗೂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇ ಪರಿಷ್ಕೃತ ವೇತನ ಹಾಗೂ ವೇತನ ಶ್ರೇಣಿಯಲ್ಲಿ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನಿಗದಿಪಡಿಸಿ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 01-07-2022 ರಿಂದ 31-07-2024 ರವರೆಗೆ ನಿವೃತ್ತರಾಗಿರುವ ಬೋಧಳ /ಬೋಧಕೇತರ ಅಧಿಕಾರಿ ಹಾಗೂ ನೌಕರರುಗಳಿಗೆ ಪರಿಷ್ಕೃತ ವೇತನ ಹಾಗೂ ವೇತನ ಶ್ರೇಣಿಯಲ್ಲಿ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನಿಗದಿಪಡಿಸಲಾಗುತ್ತಿದೆ ಎಂದಿದ್ದಾರೆ. ದಿನಾಂಕ: 01-07-2022 ರಿಂದ 31-07-2024 ರವರೆಗೆ ನಿವೃತ್ತರಾಗಿರುವ ಬೋಧಕ /ಬೋಧಕೇತರ ಅಧಿಕಾರಿ ಹಾಗೂ ನೌಕರರುಗಳಿಗೆ ಪರಿಷ್ಕೃತ ವೇತನ ಹಾಗೂ ವೇತನ ಶ್ರೇಣಿಯಲ್ಲಿ ಪಿಂಚಣಿ ಹಾಗೂ ಕುಟುಂಬ ಪಿಂಚಣಿಯನ್ನು ನಿಗದಿಪಡಿಸುವ ಸಂಬಂಧ ಉಲ್ಲೇಖಿತ-01 ರ ಸರ್ಕಾರದ ಆದೇಶದಗಳನ್ವಯ ನಿಯಮಾನುಸಾರ ವಿಳಂಬವಿಲ್ಲದಂತೆ ಅಗತ್ಯ ಕ್ರಮವಹಿಸಲು ಎಲ್ಲಾ ಡಿಡಿಓ ಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ. https://kannadanewsnow.com/kannada/new-maharashtra-chief-minister-to-take-oath-on-december-5/ https://kannadanewsnow.com/kannada/big-news-no-one-should-shed-tears-we-are-not-dead-we-have-lost-nikhil-kumaraswamy/
ಮುಂಬೈ: ಮಹಾರಾಷ್ಟ್ರದಲ್ಲಿ ಹೊಸದಾಗಿ ರಚನೆಯಾದ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭವು ಡಿಸೆಂಬರ್ 5, 2024 ರ ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾನ್ಕುಲೆ ಅವರು ಮರಾಠಿ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯುವ ಮೂಲಕ ಕಾರ್ಯಕ್ರಮದ ವಿವರಗಳನ್ನು ಘೋಷಿಸಲು ಎಕ್ಸ್ (ಹಿಂದಿನ ಟ್ವಿಟರ್) ಗೆ ಹೋದರು. “ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭ ಡಿಸೆಂಬರ್ 5, 2024 ರ ಗುರುವಾರ ಸಂಜೆ 5 ಗಂಟೆಗೆ ಮುಂಬೈನ ಆಜಾದ್ ಮೈದಾನದಲ್ಲಿ ವಿಶ್ವದ ಹೆಮ್ಮೆಯ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. https://kannadanewsnow.com/kannada/bjp-should-say-what-chandrasekharanatha-swamiji-said-minister-lakshmi-hebbalkar/ https://kannadanewsnow.com/kannada/big-news-no-one-should-shed-tears-we-are-not-dead-we-have-lost-nikhil-kumaraswamy/
ಬೆಂಗಳೂರು : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು. ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದರು. ಹೀಗಿದೆ ಮುಖ್ಯಮಂತ್ರಿ ಅವರು ನೀಡಿದ…
ಉಡುಪಿ: ಮುಸ್ಲಿಮರಿಂದ ಮತದಾನದ ಹಕ್ಕನ್ನು ವಾಪಸ್ ಪಡೆಯಬೇಕು ಎಂದು ಚಂದ್ರಶೇಖರನಾಥ ಸ್ವಾಮೀಜಿ ಅವರು ನೀಡಿರುವ ಹೇಳಿಕೆ ಮಾದರಿಯಲ್ಲೆ ಬಿಜೆಪಿಯವರು ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು. ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿಗೆ ಬಿಜೆಪಿ ಬೆಂಬಲ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ದೇಶದಲ್ಲಿ ಸಂವಿಧಾನ ಇದೆಯಲ್ಲಾ? ಸಂವಿಧಾನ ದಿನದ ಬಗ್ಗೆ ನಾವು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದೇವಲ್ಲವೇ? ಸಂವಿಧಾನ ಎಲ್ಲರಿಗೂ ಅನ್ವಯಿಸಬೇಕಲ್ಲವೇ ಎಂದು ಪ್ರಶ್ನಿಸಿದರು. ಒಂದುಕಡೆ ಪ್ರಧಾನಿ ಮೋದಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎನ್ನುತ್ತಾರೆ. ಸ್ವಾಮೀಜಿಗಳು ಹೇಳಿದಂತೆ ಬಿಜೆಪಿಯವರು ಹೇಳಿ ಬಿಡಲಿ ನೋಡೋಣ. ಸ್ವಾಮೀಜಿಗಳು ಇರುವುದು ಸಮಾಜದ ಸ್ವಾಸ್ಥ್ಯವನ್ನು ಕಾಪಾಡೋದಕ್ಕೆ, ಹಾಳು ಮಾಡೋದಿಕ್ಕೆ ಅಲ್ಲ ಎಂದರು. ಸಮಾಜದ ಸ್ವಾಸ್ಥ್ಯ ಕೆಡಿಸುವುದು ಸ್ವಾಮೀಜಿಗಳ ಕೆಲಸ ಅಲ್ಲ. ಸ್ವಾಮೀಜಿಗಳ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ. ಸ್ವಾಮೀಜಿಗಳು ಸಮಾಜಕ್ಕೆ ಮಾರ್ಗದರ್ಶನ ಮಾಡಬೇಕು. ನಾವೆಲ್ಲಾ ಭಾರತದಲ್ಲಿದ್ದೇವೆ ಅಂಬೇಡ್ಕರ್ ಅವರ ಸಂವಿಧಾನ ಇದೆ.…