Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಬಿಎಂಪಿ ಇ-ಖಾತಾ ವ್ಯವಸ್ಥೆಯನ್ನು ನಾಗರಿಕರಿಗೆ ಅನುಕೂಲವಾಗುವ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಬಿಬಿಎಂಪಿ ಅಧಿಕಾರಿಗಳು ಬಯಸಿದರೂ ಸಹ, ನಿಮ್ಮ ಮಾಹಿತಿ ಮತ್ತು ಆಸ್ತಿ ಫೋಟೋವನ್ನು ನೀಡದೆ ಅವರು ನಿಮ್ಮ ಅಂತಿಮ ಇ-ಖಾತಾವನ್ನು ರಚಿಸಲು ಸಾಧ್ಯವಿಲ್ಲ. ಸುಮಾರು 22 ಲಕ್ಷ ಆಸ್ತಿಗಳಿಗೆ ಕರಡು ಇ-ಖಾತಾಗಳನ್ನು ವಾರ್ಡ್ವಾರು ಆನ್ಲೈನ್ನಲ್ಲಿ BBMPeAasthi.karnataka.gov.in ನಲ್ಲಿ ಹಾಕಲಾಗಿರುತ್ತದೆ ನಿಮ್ಮ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಅನ್ನು ನೀವು ತಿಳಿದುಕೊಳ್ಳಬಹುದು. ವೀಡಿಯೊ ನೋಡುವ ಮೂಲಕ ಇ-ಖಾತಾ ಪಡೆಯಿರಿ ಕನ್ನಡ: https://m.youtube.com/watch?v=JR3BxET46po ಇಂಗ್ಲಿಷ್: https://youtu.be/GL8CWsdn3wo?si=Zu_EMs3SCw5-wQwT ಇ-ಖಾತಾ ಸಹಾಯವಾಣಿ ಸಂಖ್ಯೆ – 94806 83695 ಮೊಬೈಲ್ ಸಂಖ್ಯೆ ಮತ್ತು OTP ಬಳಸಿ ಲಾಗಿನ್ ಮಾಡಿ ಮತ್ತು ವಾರ್ಡ್ವಾರು ಪಟ್ಟಿಯಲ್ಲಿ ಮಾಲೀಕರ ಹೆಸರನ್ನು ಬಳಸಿಕೊಂಡು ನಿಮ್ಮ ಆಸ್ತಿಯನ್ನು ಹುಡುಕಬಹುದಾಗಿದೆ. (1) ಮಾಲೀಕರ ಆಧಾರ್ (2) ಆಸ್ತಿ ತೆರಿಗೆ ಅರ್ಜಿ ಸಂಖ್ಯೆ (ಆಸ್ತಿ ತೆರಿಗೆ ವ್ಯವಸ್ಥೆಯಿಂದ ಸ್ವಯಂಚಾಲಿತವಾಗಿ ದತ್ತಾಂಶವನ್ನು ಪಡೆಯುತ್ತದೆ) (3) ಮಾರಾಟ/ನೋಂದಣಿ ಪತ್ರದ ಸಂಖ್ಯೆ (ಉಪ ನೋಂದಣಿದಾರರಿಂದ ಸ್ವಯಂಚಾಲಿತವಾಗಿ ಅದನ್ನು ಪಡೆಯುತ್ತದೆ) (4) ಬೆಸ್ಕಾಂ 10-ಅಂಕಿಯ ಐಡಿ…
384 KAS ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ಅಂತಿಮ ಕೀ ಉತ್ತರ ಪ್ರಕಟ: 5 ಪ್ರಶ್ನೆಗಳಿಗೆ ಕೃಪಾಂಕ | KAS Recruitment
ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಮರು ಪರೀಕ್ಷೆಯ ಅಂತಿಮ ಪರಿಷ್ಕೃತ ಕೀ ಉತ್ತರವನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ಪ್ರಕಟಿಸಲಾಗಿದೆ. ಈ ಕುರಿಕಂತೆ ಕೆಪಿಎಸ್ಸಿ ಮಾಹಿತಿ ನೀಡಿದ್ದು, ಆಯೋಗದಿಂದ ದಿನಾಂಕ 29-12-2024ರಂದು ಗೆಜೆಟೆಡ್ ಪ್ರೊಬೈಷನರ್ 384 ಹುದ್ದೆಗಳಿಗೆ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಗಿತ್ತು. ಪೂರ್ವಭಾವಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಪತ್ರಿಕೆ-1 ಮತ್ತು ಪತ್ರಿಕೆ-2 ಕೀ ಉತ್ತರಗಳನ್ನು ದಿನಾಂಕ 15-01-2025ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 22-01-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು ಎಂಬುದಾಗಿ ತಿಳಿಸಿದೆ. ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ ಪತ್ರಿಕೆ-1 ಮತ್ತು ಪತ್ರಿಕೆ-2ಗಳಿಗೆ ಸಂಬಂಧಿಸಿದಂತೆ ಅಂತಿಮ ಪರಿಷ್ಕೃತ ಕೀ ಉತ್ತರವನ್ನು ಪ್ರಕಟಿಸಲಾಗಿದೆ ಎಂಬುದಾಗಿ ಹೇಳಿದೆ. ಪತ್ರಿಕೆ ಒಂದರಲ್ಲಿ ಮೂರು ಪ್ರಶ್ನೆಗಳಿಗೆ ಕೃಪಾಂಕ ನೀಡಿದ್ದರೇ, ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಎರಡು ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿದೆ. ಈ ಮೂಲಕ ಐದು ಪ್ರಶ್ನೆಗಳಿಗೆ ಕೆಎಎಸ್ ಹುದ್ದೆಯ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೃಪಾಂಕ ನೀಡುವ ಮೂಲಕ, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
GOOD NEWS: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ: ಪೊಲೀಸ್ ನೇರ ನೇಮಕಾತಿ ಮೀಸಲಾತಿ ಶೇ.2ರಿಂದ 3ಕ್ಕೆ ಹೆಚ್ಚಳ
ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ನೀಡಲಾಗುತ್ತಿದ್ದಂತ ಮೀಸಲಾತಿ ಪ್ರಮಾಣವನ್ನು ಶೇ.2ರಿಂದ 3ಕ್ಕೆ ಹೆಚ್ಚಳ ಮಾಡುವಂತ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. ಗುರುವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್ನಿಂದ ಡಿವೈಎಸ್ಪಿ ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈಗ ಈ ಮೀಸಲಾತಿ ಪ್ರಮಾಣ ಶೇ.2 ರಷ್ಟಿದ್ದು ಇದನ್ನು ಶೇ.3ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. 2023ರಲ್ಲಿನ ಅನುಸೂಚಿಯ ಕ್ರಮ ಸಂಖ್ಯೆ (3) ರಲ್ಲಿ ಡಿ.ವೈ.ಎಸ್.ಪಿ ಹುದ್ದೆಯ ವಯೋಮಿತಿ ಕಾಲಂನಲ್ಲಿ ಎಸ್ಸಿ/ಎಸ್ಟಿ ಹಾಗೂ ಕೆಟಗರಿ-1 ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 45 ವರ್ಷಗಳಿಗೆ ಹೆಚ್ಚಿಸಲು ನಿಯಮಗಳಿಗೆ ತಿದ್ದುಪಡಿ ತರಲಾಗುತ್ತದೆ. ಕರ್ನಾಟಕ ರಾಜ್ಯ ಪೊಲೀಸ್ ಸೇವೆಗಳು (ಪೊಲೀಸ್ ಕಾನ್ಸ್ ಸ್ಟೇಬಲ್, ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಮತ್ತು ಪೊಲೀಸ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ. ಇನ್ನೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು…
ದಾವಣಗೆರೆ : ನಗರದ ಬೇತೂರು ರಸ್ತೆ, ಅಜಾದ್ ನಗರ ವ್ಯಾಪ್ತಿಯಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ನಿಗಮಗಳು, ಸಂಸ್ಥೆಗಳು, ಗ್ರಾಮ ಪಂಚಾಯತಿಗಳು ಮತ್ತು ಸ್ಥಳೀಯ ಸಂಸ್ಥೆಗಳು, ತಾಲ್ಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಥವಾ ವಿ.ಎಸ್.ಎಸ್.ಎಂ.ಎಸ್, ತೋಟಗಾರಿಕೆ ಉತ್ಪಾನ್ನಗಳ ಸಹಕಾರ ಸಂಘದ ಮಾರಾಟ ಮಂಡಳಿ ನಿಯಮಿತ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ದೊಡ್ಡ ಪ್ರಮಾಣದ ಆದಿವಾಸಿಗಳ ವಿವಿದೋದ್ದೇಶ ಸಹಕಾರ ಸಂಘ, ನೊಂದಾಯಿತ ನೇಕಾರರ ಮತ್ತು ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ಅಂಗವಿಕಲರ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕಿನಿಂದ ನಡೆಸಲ್ಪಡುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್( ಸಹಕಾರ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಣಿಯಾಗಿರಬೇಕು. ಕನಿಷ್ಠ ಎರಡು ಲಕ್ಷ ರೂಪಾಯಿ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರಬೇಕು) ಹಾಗೂ ವಿಕಲಚೇತನರು,…
ದಾವಣಗೆರೆ : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್ಐಆರ್ ದಾಖಲಿಸುವಂತೆ ತಿಳಿಸಿದರು. ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ…
ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unified Payments Interface – UPI) ವ್ಯವಸ್ಥೆಯಲ್ಲಿ ಮುಂಬರುವ ಬದಲಾವಣೆಯು ಫೆಬ್ರವರಿ 1, 2025 ರಿಂದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (National Payments Corporation of India – NPCI) ಗಮನಾರ್ಹ ನವೀಕರಣದಿಂದಾಗಿದೆ. ವಿಶೇಷ ಅಕ್ಷರಗಳೊಂದಿಗೆ ವಹಿವಾಟು ಐಡಿಗಳನ್ನು ರಚಿಸುವ ಯುಪಿಐ ಅಪ್ಲಿಕೇಶನ್ಗಳು ಇನ್ನು ಮುಂದೆ ಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುವುದಿಲ್ಲ. ಈ ಬದಲಾವಣೆಯು ಯುಪಿಐ ವಹಿವಾಟು ಐಡಿ ಸ್ವರೂಪವನ್ನು ಪ್ರಮಾಣೀಕರಿಸುವ ಮತ್ತು ವ್ಯವಸ್ಥೆಯಾದ್ಯಂತ ಸುಗಮ, ಹೆಚ್ಚು ಸುರಕ್ಷಿತ ವಹಿವಾಟುಗಳನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಬಳಕೆದಾರರು ತಿಳಿದುಕೊಳ್ಳಬೇಕಾದದ್ದು ಮತ್ತು ಇದು ಯುಪಿಐ ವಹಿವಾಟಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಇಲ್ಲಿದೆ. ಯುಪಿಐ ವಹಿವಾಟಿನ ಮೇಲೆ ಏಕೆ ಪರಿಣಾಮ ಬೀರುತ್ತದೆ ಫೆಬ್ರವರಿ 1, 2025 ರಿಂದ, ಎನ್ಪಿಸಿಐ ಎಲ್ಲಾ ಯುಪಿಐ ವಹಿವಾಟು ಐಡಿಗಳು ಆಲ್ಫಾನ್ಯೂಮೆರಿಕ್ (ಅಕ್ಷರಗಳು ಮತ್ತು ಸಂಖ್ಯೆಗಳನ್ನು ಮಾತ್ರ ಒಳಗೊಂಡಿರುತ್ತದೆ) ಆಗಿರಬೇಕು ಎಂದು ಕಡ್ಡಾಯಗೊಳಿಸಿದೆ. ವಹಿವಾಟು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ವಿಜಯವಾಣಿಯ ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಹಾಗೂ ಪಬ್ಲಿಕ್ ಟಿವಿಯ ಜಿಲ್ಲಾ ಇಂಚಾರ್ಜರ್ ಬದ್ರುದ್ದೀನ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ಕೆಳಗಿನ ವ್ಯಕ್ತಿಗಳನ್ನು ಕರ್ನಾಟಕ ಮಾಹಿತಿ ಆಯೋಗದಲ್ಲಿ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದಿದೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತರು: 1. ಆಶಿತ್ ಮೋಹನ್ ಪ್ರಸಾದ್, ನಿವೃತ್ತ ಐಪಿಎಸ್ ಅಧಿಕಾರಿ ರಾಜ್ಯ ಮಾಹಿತಿ ಆಯುಕ್ತರು: 1. ರಾಮನ್. K. 2. ಡಾ.ಹರೀಶ್ ಕುಮಾರ್. 3. ರುದ್ರಣ್ಣ ಹರ್ತಿಕೋಟೆ. 4. ನಾರಾಯಣ್ ಜಿ ಚನ್ನಲ್.…
ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನಾಗಿ ನಿವೃತ್ತ ಐಪಿಎಸ್ ಅಧಿಕಾರಿ ಅಶಿತ್ ಮೋಹನ್ ಪ್ರಸಾದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ಕೆಳಗಿನ ವ್ಯಕ್ತಿಗಳನ್ನು ಕರ್ನಾಟಕ ಮಾಹಿತಿ ಆಯೋಗದಲ್ಲಿ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸುತ್ತೇವೆ ಎಂದಿದ್ದಾರೆ. ರಾಜ್ಯ ಮುಖ್ಯ ಮಾಹಿತಿ ಆಯುಕ್ತರು: ನಿವೃತ್ತ IPS ಅಧಿಕಾರಿ ಆಶಿತ್ ಮೋಹನ್ ಪ್ರಸಾದ್ ನೇಮಕ 1. ಆಶಿತ್ ಮೋಹನ್ ಪ್ರಸಾದ್, ನಿವೃತ್ತ ಐಪಿಎಸ್ ಅಧಿಕಾರಿ ರಾಜ್ಯ ಮಾಹಿತಿ ಆಯುಕ್ತರು: 1. ರಾಮನ್. K. 2. ಡಾ.ಹರೀಶ್ ಕುಮಾರ್. 3. ರುದ್ರಣ್ಣ ಹರ್ತಿಕೋಟೆ. 4.…
ಸಾಕಷ್ಟು ಕಠಿಣ ಪರಿಶ್ರಮದ ನಂತರವೂ, ನೀವು ಕೆಲಸದಲ್ಲಿ ಯಶಸ್ಸನ್ನು ಪಡೆಯದಿದ್ದರೆ ಅಥವಾ ನಿಮ್ಮ ಕೈಯಲ್ಲಿ ಹಣ ನಿಲ್ಲಬೇಕಾದರೆ ಏನು ಮಾಡಬೇಕು..? ಹಣದ ಸಮಸ್ಯೆ ದೂರಾಗಿಸಿಕೊಳ್ಳುವುದು ಹೇಗೆ..? ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಅವರಿಂದ ತಿಳಿಯೋಣ ಬನ್ನಿ. ಈಗಿನ ಕಾಲದಲ್ಲಿ ಹಣವೇ ಮುಖ್ಯ ಎನ್ನುವುದು ವಿದ್ಯಾರ್ಥಿಗಳಿಂದ ಹಿಡಿದು ವಯಸ್ಸಾದವರವರೆಗೆ ಎಲ್ಲರಿಗೂ ಕೂಡ ಮನವರಿಕೆಯಾಗಿದೆ. ಹಣಕಾಸಿನ ಪರಿಸ್ಥಿತಿ ಹದಗೆಟ್ಟವರಿಗೆ ಯಾರು ಕೂಡ ಬೆಲೆ ಕೊಡುವುದಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ…