Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೆಲ ದಿನಗಳ ಹಿಂದೆ ಜಿಲ್ಲೆಯ ಸಾಗರ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಆನೆ ದಾಳಿ ನಡೆಸಿ, ಬೆಳೆ ಹಾನಿಗೊಳಿಸಿತ್ತು. ಈ ಸ್ಥಳಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ, ಪರಿಶೀಲಿಸಿದರು. ಇಂದು ಸಾಗರ ಶಾಸಕಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮಾದಾಪುರದಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇನ್ನೂ ಆನೆ ದಾಳಿಯಿಂದ ಬೆಳೆಹಾನಿಗೊಂಡಿದ್ದಂತ ರೈತನಿಗೆ ಧೈರ್ಯ ತುಂಬಿದಂತ ಅವರು, ಬೆಳೆಹಾನಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತ ಭರವಸೆಯನ್ನು ನೀಡಿದರು. ಜೊತೆಗೆ ಆನೆ ದಾಳಿಯಿಂದ ಬೆಳೆ ನಷ್ಟ ಹೊಂದಿದಂತ ರೈತರಿಗೆ ವೈಯಕ್ತಿಕವಾಗಿ ಧನ ಸಹಾಯವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದಂತ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆನೆಗಳ ದಾಳಿಯಿಂದ ರೈತರ ಜಮೀನು, ತೋಟಗಳಿಗೆ ಹಾನಿಯಾಗದಂತೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. https://kannadanewsnow.com/kannada/kumbh-mela-to-be-held-at-t-narasipur-in-mysuru/ https://kannadanewsnow.com/kannada/breaking-priests-bless-deputy-cm-dk-shivakumar-with-trident-as-next-cm/ https://kannadanewsnow.com/kannada/now-bone-marrow-transplant-free-under-ayushman-bharat-arogya-karnataka-scheme/
ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಕುಂಭಮೇಳ ಆಯೋಜಿಸಲು ಡೇಟ್ ಫಿಕ್ಸ್ ಆಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಫೆಬ್ರವರಿ 10, 11 ಮತ್ತು 12ರಂದು ಮೂರು ದಿನಗಳ ಕಾಲ ಟಿ.ನರಸೀಪುರದ ಮೂರು ನದಿಗಳ ಸಂಗಮ ಸ್ಥಳದಲ್ಲಿ ಕುಂಭಮೇಳವನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 10 ಕೋಟಿ ನೀಡುವಂತೆ ಜಿಲ್ಲಾಡಳಿತ ಪ್ರಸ್ತಾವನೆಯನ್ನು ಸಲ್ಲಿಸಿದೆ. ಕಳೆದ ಬಾರಿ 4 ಕೋಟಿ ಕೊಡಲಾಗಿತ್ತು. ಈ ಬಾರಿ 5 ರಿಂದ 6 ಕೋಟಿ ನೀಡುವ ನಿರೀಕ್ಷೆಯಿದೆ ಎಂದರು. ಮೂರು ದಿನಗಳ ಕಾಲ ಜನರು ಹೆಚ್ಚಿನ ಸಂಖ್ಯೆಯಲ್ಲಿ ಟಿ.ನರಸೀಪುರದಲ್ಲಿನ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ನಾನು ಕೂಡ ಪುಣ್ಯಸ್ನಾನ ಮಾಡುತ್ತೇನೆ. ನನಗೆ ಧಾರ್ಮಿಕ ಆಚರಣೆಗಳಿಗೆ ವೈಯಕ್ತಿಕವಾಗಿ ವಿರೋಧವಿಲ್ಲ. ಅವರವರ ಧಾರ್ಮಿಕ ನಂಬಿಕೆಯಂತೆ ಆಚರಣೆ ಮಾಡುತ್ತಾರೆ. ಇದು ಸಂವಿಧಾನಾತ್ಮಕ…
ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಸೆಕ್ಟರ್ 19ರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿ ಹಲವು ಟೆಂಟ್ ಗಳು ಸುಟ್ಟು ಭಸ್ಮವಾಗಿದ್ದವು. ಈ ಘಟನಾ ಸ್ಥಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭೇಟಿ ನೀಡಿದ್ದಾರೆ. https://twitter.com/ANI/status/1880944252836098415 ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭ ಮೇಳದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಟೆಂಟ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿತ್ತು. ಈ ಬಳಿಕ ಅದೇ ಸಾಲಿನಲ್ಲಿನ ಇತರೆ ಟೆಂಟ್ ಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ 12ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ದುರಂತವೇ ಸಂಭವಿಸಿದೆ. https://twitter.com/IndiaToday/status/1880938790434513136 ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳ 2025 ರಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಿಯಂತ್ರಣಕ್ಕೆ ತರುವಂತೆ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇದ್ದು ಬೆಂಕಿ ನಂದಿಸುವ…
ಉತ್ತರಪ್ರದೇಶ: ಇಲ್ಲಿನ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕ್ಷಣ ಕ್ಷಣಕ್ಕೂ ಗಾಳಿಯಿಂದಾಗಿ ಬೆಂಕಿ ಒಂದು ಟೆಂಟ್ ನಿಂದ ಮತ್ತೊಂದು ಟೆಂಟಿಗೆ ವ್ಯಾಪಿಸುತ್ತಿದ್ದು, ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. https://twitter.com/ANI/status/1880944252836098415 ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭ ಮೇಳದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಟೆಂಟ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿತ್ತು. ಈ ಬಳಿಕ ಅದೇ ಸಾಲಿನಲ್ಲಿನ ಇತರೆ ಟೆಂಟ್ ಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ 12ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ದುರಂತವೇ ಸಂಭವಿಸಿದೆ. https://twitter.com/IndiaToday/status/1880938790434513136 ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳ 2025 ರಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಿಯಂತ್ರಣಕ್ಕೆ ತರುವಂತೆ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. https://twitter.com/ANI/status/1880941229791494518…
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಎಸ್ಡಿಆರ್ಎಫ್ ತಂಡವೂ ಸ್ಥಳದಲ್ಲಿತ್ತು. ತ್ವರಿತ ಪ್ರಯತ್ನಗಳ ನಂತರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. https://twitter.com/ANI/status/1880934473359102359 ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ, ಅಧಿಕಾರಿಗಳ ಜಾಗರೂಕತೆಯು ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದ್ದರಿಂದ ದೊಡ್ಡ ಘಟನೆಯನ್ನು ತಪ್ಪಿಸಿದೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಆರಂಭಿಕ ವರದಿಗಳ ಪ್ರಕಾರ, ಶಿಬಿರದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಪ್ರದೇಶದಲ್ಲಿ ಸ್ಥಾಪಿಸಲಾದ ಹಲವಾರು ಡೇರೆಗಳನ್ನು ಆವರಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಅಧಿಕಾರಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡವೂ ಘಟನಾ ಸ್ಥಳಕ್ಕೆ ಆಗಮಿಸಿದೆ. https://twitter.com/ANI/status/1880931730120638946 ಹತ್ತಿರದ ಸೇತುವೆಯ ಮೇಲೆ ಪ್ರಯಾಣಿಸುತ್ತಿದ್ದ ರೈಲು ಪ್ರಯಾಣಿಕರೊಬ್ಬರು ಸೆರೆಹಿಡಿದ ವೀಡಿಯೊದಲ್ಲಿ ಕ್ಯಾಂಪ್ ಸೈಟ್ ಅನ್ನು ಭಾರಿ ಜ್ವಾಲೆಗಳು…
ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾ ಕುಂಭ ಮೇಳದಲ್ಲಿ ಭಾನುವಾರ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಪವಿತ್ರ ನಗರದಲ್ಲಿ ಗೊಂದಲದ ದೃಶ್ಯವನ್ನು ಸೃಷ್ಟಿಸಿದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹಲವಾರು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಸ್ಥಳೀಯ ಅಧಿಕಾರಿಗಳು, ಪೊಲೀಸರು ಮತ್ತು ಅಗ್ನಿಶಾಮಕ ತಂಡಗಳೊಂದಿಗೆ ಬೆಂಕಿಯನ್ನು ನಂದಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ. https://twitter.com/ABPNews/status/1880936305724662129 https://kannadanewsnow.com/kannada/poovanahalli-in-k-r-pet-in-mandya-district-selected-for-pm-jan-man-yojana-hdk/ https://kannadanewsnow.com/kannada/chikkamagaluru-kalasa-police-station-psi-nithyananda-suspended-for-assaulting-wife-dowry-harassment/
ಚಿಕ್ಕಮಗಳೂರು: ಜಿಲ್ಲೆಯ ಕಳಸ ಪೊಲೀಸ್ ಠಾಣೆಯ ಪಿಎಸ್ಐ ನಿತ್ಯಾನಂದ ಎಂಬುವರ ವಿರುದ್ಧ ಪತ್ನಿಯ ಮೇಲೆ ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯದ ಐಜಿಪಿ ಅಮಿತ್ ಸಿಂಗ್ ಆದೇಶಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ನಿತ್ಯಾನಂತ ವಿರುದ್ಧ ರಾತ್ರೋರಾತ್ರಿ ಠಾಣೆಗೆ ತೆರಳಿದ್ದಂತ ಅವರ ಪತ್ನಿ ಅಮಿತಾ ಎಂಬುವರು ಹಲ್ಲೆ, ವರದಕ್ಷಿಣೆ ಕಿರುಕುಳ ಆರೋಪ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ನನಗೆ ಪತಿ ಪಿಎಸ್ಐ ನಿತ್ಯಾನಂದ ಮಾನಿಸಿಕವಾಗಿ, ದೈಹಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಕಳಸ ಪೊಲೀಸ್ ವಸತಿ ಗೃಹದಲ್ಲಿಯೇ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನಿತ್ಯಾನಂದನಿಗೆ ಅನೈತಿಕ ಸಂಬಂಧವಿದೆ ಎಂಬುದಾಗಿ ಆರೋಪಿಸಿ ಕಳಸ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪಿಎಸ್ಐ ನಿತ್ಯಾನಂದ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು. ಈ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಿ ದಕ್ಷಿಣ ವಲಯದ ಐಜಿ ಅಮಿತ್ ಸಿಂಗ್ ಆದೇಶಿಸಿದ್ದಾರೆ. https://kannadanewsnow.com/kannada/poovanahalli-in-k-r-pet-in-mandya-district-selected-for-pm-jan-man-yojana-hdk/ https://kannadanewsnow.com/kannada/arrest-warrant-issued-against-shakib-al-hasan/
ಢಾಕಾ: ಬೌನ್ಸ್ ಆದ ಚೆಕ್ ಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ನ್ಯಾಯಾಲಯವು ಕ್ರಿಕೆಟಿಗ ಶಕೀಬ್ ಅಲ್ ಹಸನ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಇದರ ಒಟ್ಟು ಮೊತ್ತವು 300,000 ಡಾಲರ್ (ಅಂದಾಜು 2.6 ಕೋಟಿ ರೂ.) ಗಿಂತ ಹೆಚ್ಚಾಗಿದೆ ಎಂದು ಎಎಫ್ಪಿ ವರದಿ ಮಾಡಿದೆ. ಬಾಂಗ್ಲಾದೇಶದ ಐಎಫ್ಐಸಿ ಬ್ಯಾಂಕ್ ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ರಾಜಕಾರಣಿ ವಿರುದ್ಧ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯವು ಈ ಹಿಂದೆ ಶಕೀಬ್ಗೆ ಸಮನ್ಸ್ ನೀಡಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗಲಿಲ್ಲ ಎಂದು ಬ್ಯಾಂಕಿನ ಅಧಿಕಾರಿಯೊಬ್ಬರು ಎಎಫ್ಪಿಗೆ ತಿಳಿಸಿದರು. ವಿಶೇಷವೆಂದರೆ, ಶಕೀಬ್ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್ಗೆ ಸೇರಿದವರು ಮತ್ತು ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ಅದನ್ನು ವಿಸರ್ಜಿಸುವವರೆಗೂ ದೇಶದ ಸಂಸತ್ತಿನ ಸದಸ್ಯರಾಗಿದ್ದರು. ಕಳೆದ ವರ್ಷ ದೇಶದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ನೂರಾರು ಜೀವಗಳನ್ನು ಕಳೆದುಕೊಂಡ ನಂತರ ಶಕೀಬ್ ಮತ್ತು ಇತರ ಅವಾಮಿ ಲೀಗ್ ಸದಸ್ಯರು ಸಾರ್ವಜನಿಕ ಕೋಪಕ್ಕೆ ಗುರಿಯಾಗಿದ್ದರು…
ಬೆಂಗಳೂರು: ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದಂತ ಬೋಧಕ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಅಲ್ಲದೇ ಆರ್ಥಿಕ ಇಲಾಖೆಯೂ ಗ್ರೀನ್ ಸಿಗ್ನಲ್ ನೀಡಿತ್ತು. ಆದರೇ ಹುದ್ದೆಗಳನ್ನು ತುಂಬಿಕೊಳ್ಳಲು ತಂತ್ರಾಂಶದ 1ನೇ ಮತ್ತು 2ನೇ ಹಂತವನ್ನು ಬಿಡುಗಡೆಗೊಳಿಸಿರಲಿಲ್ಲ. ಈ ತಂತ್ರಾಂಶ ಬಿಡುಗಡೆಗೆ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿ ಶಿಕ್ಷಕರ ಸಂಘಟನೆ ಮನವಿ ಮಾಡಿದೆ. ಈ ಸಂಬಂಧ ಸಮಾಜಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರನ್ನು ಭೇಟಿಯಾಗಿರುವಂತ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ, ಅನುದಾನ ರಹಿತ ಶಿಕ್ಷಕರ ಸಂಘಟನೆಯ ಅಧ್ಯಕ್ಷ ತಿಪ್ಪೇಸ್ವಾಮಿ ಜಿ ಬಳ್ಳಾರಿಯ ನೇತೃತ್ವದ ಶಿಕ್ಷಕರು ಮನವಿ ಮಾಡಿದ್ದಾರೆ. ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಏನಿದೆ.? ನಾವು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಕಳೆದ 8-9 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದು, ಸರ್ಕಾರದಿಂದ ಹಾಗೂ ಆಡಳಿತ ಮಂಡಳಿಯಿಂದ ಯಾವುದೇ ರೀತಿಯ ವೇತನವಿಲ್ಲದೆ, ಉಚಿತವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸುತ್ತಾ ಬಂದಿರುತ್ತೇವೆ. ನಾವೆಲ್ಲರೂ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಸರ್ಕಾರದ ಆರ್ಥಿಕ ಇಲಾಖೆಯು 2016 ರಿಂದ…
ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್ ಮನ್ ಯೋಜನೆಗೆ ಪರಿಗಣಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ ವರ್ಷ ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು. 79,000 ಕೋಟಿಗಳ ಈ ಬೃಹತ್ ಯೋಜನೆಯ ಮೂಲಕ ದೇಶದ 63,000 ಹಳ್ಳಿಗಳನ್ನು ಆಮೂಲಾಗ್ರವಾಗಿ ಅಭಿವೃದ್ದಿ ಮಾಡುವುದು…