Author: kannadanewsnow09

ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ. ನಾನು ಅಧಿಕಾರದಲ್ಲಿ ಇರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 100 ಕನ್ನಡ ಸಾಧಕರಿಗೆ ಪ್ರಶಸ್ತಿ 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು…

Read More

ಬೆಂಗಳೂರು: ದೀಪಾವಳಿಯ ನಂತರದ ಅವಧಿಯಲ್ಲಿ ಮತ್ತು ಮುಂಬರುವ ದೀರ್ಘ ವಾರಾಂತ್ಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್) ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 3 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಹೊರಟು, ನವೆಂಬರ್ 4 ರಂದು ಯಶವಂತಪುರ ನಿಲ್ದಾಣವನ್ನು ಮುಂಜಾನೆ 3:30 ಗಂಟೆಗೆ ತಲುಪಲಿದೆ. ಪುನಃ ಇದೆ ರೈಲು (07354) ನವೆಂಬರ್ 4ರಂದು ಯಶವಂತಪುರದಿಂದ ಬೆಳಗ್ಗೆ 4.45 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ರೈಲಿನಲ್ಲಿ ಒಂದು…

Read More

ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿರುವಂತ ವೈದ್ಯರು ಚಿಕಿತ್ಸೆಯ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ನರರೋಗ ತಜ್ಞ ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು, ನಟ ದರ್ಶನ್ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಫಿಸಿಯೋಥೆರವಿ ನೀಡಲಾಗುತ್ತಿದೆ. ಚಿಕಿತ್ಸೆ ಆರಂಭಿಸಿ ವೈದ್ಯಕೀಯ ಪರೀಕ್ಷೆ ಮಾಡ್ತಿದ್ದೇವೆ ಎಂದರು. ನಟ ದರ್ಶನ್ ಅವರಿಗೆ ಬೆನ್ನು ನೋವಿನ ಕಾರಣದಿಂದಾಗಿ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವಿದೆ. ಎಡಗಾಲು ಸೆಳೆತವಿದೆ. ಮುಂದಿನ 48 ಗಂಟೆಗಳಲ್ಲಿ ಹೆಲ್ತ್ ರಿಪೋರ್ಟ್ ಸಿಗಲಿದೆ. ಆ ವರದಿಯ ನಂತ್ರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/big-news-isro-launched-indias-first-analog-space-mission/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ಬೆಂಗಳೂರು: ಕಾಂಗ್ರೆಸ್ ಸರಕಾರ ಕೊಟ್ಟ 5 ಗ್ಯಾರಂಟಿಗಳೂ ನಾಪತ್ತೆ ಆಗುತ್ತಿವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಕಾಂಗ್ರೆಸ್ ಸರಕಾರದ ಕಥೆ ಹೇಗಾಗಿದೆ ಎಂದರೆ ಎತ್ತು ಏರಿಗೆ ಕೋಣ ನೀರಿಗೆ ಎಂಬಂತಾಗಿದೆ. ದಯವಿಟ್ಟು ಎತ್ತು ಯಾರು, ಕೋಣ ಯಾರೆಂದು ಕೇಳದಿರಿ. ಅದನ್ನು ನೀವೇ ಅರ್ಥ ಮಾಡಿಕೊಳ್ಳಿ ಎಂದು ನುಡಿದರು. ಜನರಿಗೆ ಮೋಸ ಮಾಡಿ, ವಂಚನೆ ಮಾಡಿ 5 ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ನಿಜವಾಗಿಯೂ 50 ಗ್ಯಾರಂಟಿ ಕೊಟ್ಟವರು. 5 ಗ್ಯಾರಂಟಿಗಳಲ್ಲಿ ಯಾವುದೂ ಸರಿಯಾಗಿ ಜನರನ್ನು ತಲುಪುತ್ತಿಲ್ಲ. ಗೃಹಲಕ್ಷ್ಮಿ 3 ತಿಂಗಳಿನಿಂದ ಬಂದಿಲ್ಲ. ಬೆಳಗಾವಿಯ ಲಕ್ಷ್ಮಕ್ಕ ಹೇಳುತ್ತಿದ್ದರೂ ಹಣ ಬರುತ್ತಿಲ್ಲ. ಅನ್ನಭಾಗ್ಯದ ಭಾಗ್ಯವೂ ಇಲ್ಲ. ಸರ್ವರ್ ಡೌನ್, ಇವತ್ತು- ನಾಳೆ ಅನ್ನುತ್ತಾರೆ. ಯುವನಿಧಿ ಯಾರಿಗೆ ಬಂತೆಂದು ಒಬ್ಬರೂ ಹೇಳಿಲ್ಲ. ಈ ಪರಿಸ್ಥಿತಿಯಲ್ಲಿ ಶಕ್ತಿ ಯೋಜನೆ ವಾಪಸ್…

Read More

ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣ ಗೊಳಿಸಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಕಿಡಿಕಾರಿದರು. ಯತ್ನಾಳ್ ಬಗ್ಗೆ ಮಾತನಾಡಲು ಏನೂ ಇಲ್ಲ. ಅವರಿಗೆ ಹಿಂದೂ – ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ . ಅದನ್ನು ಹೇಳಿಕೊಂಡೆ ಅವರು ಗೆದ್ದುಕೊಂಡು ಬಂದವರು. ಮಹಾತ್ಮ ಗಾಂಧಿ ಅಂಬೇಡ್ಕರ್ ಹೇಳಿ ಕೊಟ್ಟಂತೆ ಬದುಕುವವರು ನಾವು ಎಂದರು. ಎಚ್.ವಿಶ್ವನಾಥ್ ಹೇಳಿಕೆಗೆ ಗರಂ ಬಿಯರ್‌ ರೇಟ್ ಜಾಸ್ತಿ ಮಾಡಿ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುತ್ತಿದೆ ಎಂಬ ಮಾಜಿ ಸಚಿವ ಹಾಗೂ ವಿಧಾನ ಪರಿಷತ್…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ರೇ, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಓರ್ವರು ಮೃತ ಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಕಾರೆಹೊಂಡದ ಆಟೋ ಚಾಲಕ ರಾಘವೇಂದ್ರ ಎಂದು ತಿಳಿದು ಬಂದಿದೆ. ಕಾರೆಹೊಂಡದ ಒಂದೇ ಕುಟುಂಬದ ಮಾಲತಿ (35) ಕೃತಿಕಾ (12)ರಾಮಪ್ಪ (40) ಸಾನ್ವಿಕ ( 8) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಆಟೋ ಚಾಲಕ ರಾಘವೇಂದ್ರ ಎಂಬುವವರ ಮೃತದೇಹವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ವರದಿ: ಉಮೇಶ್ ಮೊಗವೀರ, ಸಾಗರ https://kannadanewsnow.com/kannada/how-to-track-a-lost-mobile-phone-just-do-this-detection-guarantee/ https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ನಮ್ಮ ಸ್ಮಾರ್ಟ್ಫೋನ್ಗಳು ಬ್ಯಾಂಕಿಂಗ್ ಡೇಟಾ ಸೇರಿದಂತೆ ನಮ್ಮ ಎಲ್ಲಾ ಡೇಟಾವನ್ನು ಹಿಡಿದಿಟ್ಟುಕೊಳ್ಳುತ್ತವೆ. ಅದನ್ನು ಕಳೆದುಕೊಳ್ಳುವುದು ಅಥವಾ ನಮ್ಮ ಸ್ಮಾರ್ಟ್ಫೋನ್ಗಳನ್ನು ಕದ್ದಾಗ ನಿಜವಾಗಲೂ ತುಂಬಾ ನೋವು, ಲಾಸ್ ಆಗುತ್ತದೆ. ಆದರೆ ನಿಮ್ಮ ಸ್ಮಾರ್ಟ್ ಫೋನ್ ಅನ್ನು ಯಾರಾದರೂ ಕದ್ದರೆ ನೀವು ಏನು ಮಾಡಬೇಕು? ನೀವು ಅದನ್ನು ಹೇಗೆ ಟ್ರ್ಯಾಕ್ ಮಾಡಬಹುದು? ಯಾರೂ ಅದನ್ನು ಕಾನೂನುಬಾಹಿರವಾಗಿ ಪ್ರವೇಶಿಸದಂತೆ ನೀವು ಸಾಧನವನ್ನು ನಿರ್ಬಂಧಿಸಬಹುದೇ? ಚಿಂತಿಸಬೇಡಿ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಮುಂದಿದೆ ಓದಿ. ಕಳೆದುಹೋದ ಸ್ಮಾರ್ಟ್ ಫೋನ್ ಅನ್ನು ಟ್ರ್ಯಾಕ್ ಮಾಡುವುದು ಮತ್ತು ನಿರ್ಬಂಧಿಸುವುದು ಹೇಗೆ? ನಿಮ್ಮ ಸ್ಮಾರ್ಟ್ಫೋನ್ ಕಳೆದುಹೋದರೆ, ಮೊದಲನೆಯದಾಗಿ ಭಯಪಡಬೇಡಿ. ನಿಮ್ಮ ಸಹಾಯಕ್ಕಾಗಿ ಭಾರತ ಸರ್ಕಾರವು ಸಂಚಾರ್ ಸಾಥಿ ಪೋರ್ಟಲ್ ಅನ್ನು ಪರಿಚಯಿಸಿದೆ. ದೂರಸಂಪರ್ಕ ಇಲಾಖೆ ಈ ಪೋರ್ಟಲ್ ಅನ್ನು ಸ್ಥಾಪಿಸಿದೆ. ಇದು ನಿಮ್ಮ ಸಾಧನವನ್ನು ಪತ್ತೆಹಚ್ಚಲು ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (ಸಿಇಐಆರ್) ಅನ್ನು ಬಳಸುತ್ತದೆ. ಈ ಪೋರ್ಟಲ್ ಸಹಾಯದಿಂದ, ದುರುಪಯೋಗವನ್ನು ತಡೆಗಟ್ಟಲು ನಿಮ್ಮ ಸಾಧನವನ್ನು ನೀವು ಸುಲಭವಾಗಿ ಟ್ರ್ಯಾಕ್ ಮಾಡಬಹುದು…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಭೀಕರ ಅಪಘಾತವೊಂದು ಸಂಭವಿಸಿದೆ. ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬೊಮ್ಮತ್ತಿ ಸಮೀಪ ಆಟೋ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಆಟೋ ಚಾಲಕ ರಾಘು ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಆಟೋದಲ್ಲಿ ತೆರಳುತ್ತಿದ್ದಂತ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಅಪಘಾತದಲ್ಲಿ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/applying-for-a-new-ration-card-will-begin-soon-keep-these-documents-ready/ https://kannadanewsnow.com/kannada/big-news-isro-launched-indias-first-analog-space-mission/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ಶಿಗ್ಗಾವ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್ ಗೆಲ್ಲಿಸಿ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಲಗೂರು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಟಾಣ್ ಪರ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಯವರು ಪಿತೂರಿ ಮಾಡಿ ಸಿದ್ದರಾಮಯ್ಯ ಅವರನ್ನು ಇಳಿಸಲು ಸಂಚು ರೂಪಿಸಿದ್ದಾರೆ. ಉಪ ಚುನಾವಣೆ ಯಲ್ಲಿ ಕಾಂಗ್ರೆಸ್ ಗೆಲ್ಲಿಸಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು. ಬಿಜೆಪಿ ಯವರು ಚುನಾವಣೆ ಇದೆ ಎಂದು ಜನರನ್ನು ದಿಕ್ಕು ತಪ್ಪಿಸಿ ಅನಗತ್ಯ ವಿವಾದ ಸೃಷ್ಠಿ ಮಾಡುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಹಿಂದೂ ಮುಸ್ಲಿಂ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದು ಅವರಿಗೆ ಸೂಕ್ತ ಪಾಠ ಕಲಿಸಿ ಎಂದು ಹೇಳಿದರು. ಅಜ್ಜಂ ಪೀರ್ ಖಾದ್ರಿ ಅವರಿಗೆ ಟಿಕೆಟ್ ತಪ್ಪಿರಬಹುದು. ಆದರೆ ದೊಡ್ಡ ಅವಕಾಶ ಅವರಿಗೆ ಸಿಗಲಿದೆ. ಯಾಸೀರ್ ಪಟಾಣ್ ಅವರ ಶಿಷ್ಯ ರಾಗಿದ್ದು ಎಲ್ಲರೂ ಜತೆಗೂಡಿ ಕೆಲಸ ಮಾಡಿ ಗೆಲ್ಲಿಸಿ…

Read More

ನವದೆಹಲಿ: ಪಡಿತರ ತೆಗೆದುಕೊಳ್ಳುವವರಿಗೆ ಒಂದು ಪ್ರಮುಖ ಸುದ್ದಿ ಇದೆ. ಪಡಿತರ ಚೀಟಿ ಮೂಲಕ ಪಡಿತರ ಪಡೆಯುವವರಿಗೆ ನವೆಂಬರ್ 1ರ ಇಂದಿನಿಂದ ನಿಯಮಗಳು ಬದಲಾಗಲಿವೆ. ಹೊಸ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ನವೆಂಬರ್ 1ರ ಇಂದಿನಿಂದ ಪಡಿತರ ಪಡೆಯುವ ಪ್ರಕ್ರಿಯೆಯಲ್ಲಿ ಬದಲಾವಣೆಗಳಾಗಲಿವೆ. ಇದು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಪಡಿತರ ಚೀಟಿಯ ಸಹಾಯದಿಂದ, ಭಾರತದ ಬಡ ಮತ್ತು ನಿರ್ಗತಿಕ ಜನರಿಗೆ ಪಡಿತರ ಅಂಗಡಿಯಿಂದ ಅಗ್ಗದ ದರದಲ್ಲಿ ಆಹಾರ ಧಾನ್ಯಗಳನ್ನು ಪೂರೈಸಲಾಗುತ್ತದೆ. ಈಗ, ಈ ಧಾನ್ಯವು ಉಚಿತವಾಗಿ ಲಭ್ಯವಿದೆ. ನೀವು ಇ ಕೆವೈಸಿ ಹೊಂದಿಲ್ಲದಿದ್ದರೆ, ನೀವು ಪಡಿತರದಲ್ಲಿ ಧಾನ್ಯವನ್ನು ಪಡೆಯುವುದಿಲ್ಲ. ನೀವು ಇಕೆವೈಸಿ ಮಾಡಲು ಬದ್ಧರಾಗಿದ್ದೀರಿ. ಅನೇಕರು ಇನ್ನೂ ಈ ಕೆವೈಸಿ ಮಾಡಿಲ್ಲ. ಅವರಿಗೆ ಅಕ್ಟೋಬರ್ 31 ಕೊನೆಯ ದಿನಾಂಕವಾಗಲಿದೆ. ಅದರ ನಂತರ ಇ-ಕೆವೈಸಿ ಮಾಡಲಾಗುವುದಿಲ್ಲ. ಅಕ್ಟೋಬರ್ 31 ರೊಳಗೆ ಇ-ಕೆವೈಸಿ ಮಾಡದಿದ್ದರೆ, ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ಹೊರಗಿಡಲಾಗುತ್ತದೆ. ಅಂತಹ ವ್ಯಕ್ತಿಗಳಿಗೆ ನವೆಂಬರ್ 1ರ ಇಂದಿನಿಂದ ಪಡಿತರ ಧಾನ್ಯಗಳು ಸಿಗುವುದಿಲ್ಲ. ಅವರ ಹೆಸರುಗಳನ್ನು…

Read More