Subscribe to Updates
Get the latest creative news from FooBar about art, design and business.
Author: kannadanewsnow09
ಚಾಮರಾಜನಗರ: ಕರಿಮಣಿ ಮಾಲೀಕ ಹಾಡು ತುಂಬಾನೇ ಫೇಮಸ್ ಆಗಿದೆ. ಅದರಲ್ಲೂ ರೀಸ್ಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಇಂತಹ ಫೇಮಸ್ ಹಾಡಿಗೆ ಕರಿಮಣಿ ಮಾಲೀಕ ನೀನಲ್ಲ ಎಂಬುದಾಗಿ ಪತ್ನಿಯೊಬ್ಬರು ರೀಲ್ಸ್ ಮಾಡಿದ್ದಾರೆ. ಹೀಗೆ ರೀಲ್ಸ್ ಮಾಡಿದ್ದನ್ನು ನೋಡಿದಂತ ಪತಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಚಾಮರಾಜನಗರ ಪಿ.ಜಿ ಪಾಳ್ಯದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದಲ್ಲಿ ಕುಮಾರ್ ಹಾಗೂ ರೂಪಾ ಅನ್ಯೂನ್ಯವಾಗಿದ್ದರು. ಫೇಸ್ ಬುಕ್ ನಲ್ಲಿ ಆಗಾಗ ರೂಪಾ ರೀಲ್ಸ್ ಕೂಡ ಮಾಡೋ ಗೀಳು ಇತ್ತು. ಈ ಮೊದಲು ವಿವಿಧ ಹಾಡುಗಳಿಗೆ ರೀಲ್ಸ್ ಮಾಡಿದ್ದಂತ ರೂಪ, ಇತ್ತೀಚೆಗೆ ಫೇಮಸ್ ಆಗಿದ್ದಂತ ಕರಿಮಣಿ ಮಾಲೀಕ ನೀನಲ್ಲ ಹಾಡಿಗೆ ರೀಲ್ಸ್ ಮಾಡಿದ್ದಳು. ರೂಪಾ ಇಂತಹ ಹಾಡಿಗೆ ರೀಲ್ಸ್ ಮಾಡಿದ್ದ ವೀಡಿಯೋವನ್ನು ನೋಡಿದಂತ ಕುಮಾರ್(33) ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಮಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಕುಮಾರ್ ಅವರ ಸಹೋದರ ಮಹದೇವ ಸ್ವಾಮಿಯವರು ಹನೂರು ಠಾಣೆಗೆ ದೂರು ನೀಡಿದ್ದು, ತನ್ನ…
ಪಣಜಿ: ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ( Nationalist Congress Party -NCP) ಎಂದು ಮಹಾರಾಷ್ಟ್ರ ಸ್ಪೀಕರ್ ಗುರುವಾರ ತೀರ್ಪು ನೀಡಿದ್ದಾರೆ. ಕಳೆದ ವರ್ಷ ಜೂನ್ 30 ರಿಂದ ಶರದ್ ಪವಾರ್ ಮತ್ತು ಅಜಿತ್ ಪವಾರ್ ಅವರು ಎರಡು ಸಮಾನಾಂತರ ಹಕ್ಕುಗಳನ್ನು ಹೊಂದಿದ್ದಾರೆ ಎಂದು ತೀರ್ಪು ಪ್ರಕಟಿಸುವಾಗ ಸ್ಪೀಕರ್ ಹೇಳಿದರು. “ಪ್ರಸ್ತುತ ವಿಷಯದಲ್ಲಿ, ಸಂಬಂಧಿತ ಎನ್ಸಿಪಿ ಸಂವಿಧಾನದ ಬಗ್ಗೆ ಯಾವುದೇ ವಿವಾದವಿಲ್ಲ. ಎರಡೂ ಪಕ್ಷಗಳು ಸಂವಿಧಾನ ಮತ್ತು ಸಂವಿಧಾನದ ಅನುಬಂಧ ಆರ್ -1 ಮತ್ತು ಆರ್ -2 ಆಗಿ ಲಗತ್ತಿಸಲಾದ ನಿಯಮಗಳ ಮೇಲೆ ಅವಲಂಬಿತವಾಗಿವೆ. ಎನ್ಸಿಪಿಯ ನಾಯಕತ್ವ ರಚನೆಯನ್ನು ಗುರುತಿಸಲು ಈ ಎನ್ಸಿಪಿ ಸಂವಿಧಾನವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ” ಎಂದು ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನರ್ವೇಕರ್ ಅನರ್ಹತೆ ಅರ್ಜಿಗಳ ಬಗ್ಗೆ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಸ್ಪೀಕರ್ ನಿರ್ಧಾರವು ಶಾಸಕಾಂಗ ಬಹುಮತದ ಅಂಶವನ್ನು ಆಧರಿಸಿದೆ. “ಪ್ರಸ್ತುತ ಪರಿಸ್ಥಿತಿಯಲ್ಲಿ, ಶಾಸಕಾಂಗದ ಬಹುಮತವು ನಿರ್ವಿವಾದವಾಗಿದೆ” ಎಂದು ಸ್ಪೀಕರ್ ಹೇಳಿದರು. ಈ ತಿಂಗಳ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವಂತ 3ನೇ ಟೆಸ್ಟ್ ಪಂದ್ಯಾವಳಿಯಲ್ಲಿ ರವೀಂದ್ರ ಜಡೇಜಾ ಅವರು ಭರ್ಜರಿ ಶತಕವನ್ನು ಭಾರಿಸಿದ್ದಾರೆ. ರಾಜ್ಕೋಟ್ನಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಧ್ರುವ್ ಜುರೆಲ್ ಮತ್ತು ಸರ್ಫರಾಜ್ ಖಾನ್ ಪಾದಾರ್ಪಣೆ ಮಾಡಲಿದ್ದು, ಮೊಹಮ್ಮದ್ ಸಿರಾಜ್ ಮತ್ತು ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಶೋಯೆಬ್ ಬಶೀರ್ ಬದಲಿಗೆ ಮಾರ್ಕ್ ವುಡ್ ತಂಡದಲ್ಲಿ ಸ್ಥಾನ ಪಡೆದಿರುವುದರಿಂದ ಇಂಗ್ಲೆಂಡ್ ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದೆ. ಸರಣಿಯು 1-1ರಲ್ಲಿ ಸಮಬಲದಲ್ಲಿದ್ದು, ಸರ್ಫರಾಜ್ ಖಾನ್ ಮತ್ತು ವಿಕೆಟ್ ಕೀಪರ್ ಧ್ರುವ್ ಜುರೆಲ್ ಅವರಂತಹ ಇಬ್ಬರು ಚೊಚ್ಚಲ ಆಟಗಾರರನ್ನು ಒಳಗೊಂಡಿರುವ ಅನನುಭವಿ ಮಧ್ಯಮ ಕ್ರಮಾಂಕವು ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಮೇಲೇರಬಹುದು ಎಂದು ಭಾರತ ಆಶಿಸಿದೆ. ಇಂದು ರಾಜ್ ಕೋಟ್ ನಲ್ಲಿ ಭಾರತ-ಇಂಗ್ಲೇಟ್ ನಡುವಿನ 3ನೇ ಟೆಸ್ಟ್ ಪಂದ್ಯಾವಳಿಯ ವೇಳೆಯಲ್ಲಿ, ಕಳೆದ 10 ನಿಮಿಷಗಳಲ್ಲಿ ತೀವ್ರ ಕುತೂಹಲವೇ ಮೂಡಿತ್ತು. 99 ರನ್ ಪೇರಿಸಿದಂತ ರವೀಂದ್ರ ಜಡೇಜಾ…
ಬಳ್ಳಾರಿ : ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆ(ನಗರ) 2.0 ಯೋಜನೆಯಡಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರುಗೋಡು ಪುರಸಭೆ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ ಕುರುಗೋಡು ಪುರಸಭೆಗೆ ಒಟ್ಟು 66 ವೈಯಕ್ತಿಕ ಶೌಚಾಲಯ ಗುರಿ ನಿಗಧಿಪಡಿಸಿದ್ದು, ಈಗಾಗಲೇ ಪ್ರಕಟಣೆ ಹೊರಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 27 ಅರ್ಜಿಗಳು ಸ್ವೀಕೃತಗೊಂಡಿವೆ. ಇನ್ನುಳಿದ 39 ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೇ ಇರುವ ಮತ್ತು ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಬಹುದಾಗಿದೆ. ಅರ್ಜಿಗಳನ್ನು ಫೆ.17ರೊಳಗಾಗಿ ಕಚೇರಿ ಸಮಯದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂ.08393-263166ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳರಲುತ್ತಿದ್ದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಅಲ್ಲಿ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/state-level-mega-job-fair-to-be-held-on-february-26-27/ https://kannadanewsnow.com/kannada/good-news-for-those-who-have-applied-for-new-bpl-apl-cards-minister-muniyappa-announces-that-cards-will-be-issued-from-april-1/
ಬಳ್ಳಾರಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಅಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರು ಭಾಗವಹಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ದೊರಕಿಸುವ ಸಲುವಾಗಿ ವಿವಿಧ ಇಲಾಖೆಗಳ (ಬೃಹತ್ ಕೈಗಾರಿಕೆ, ಉನ್ನತ ಶಿಕ್ಷಣ, ಯುವಸಬಲೀಕರಣ, ಕೌಶಲ್ಯಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ ಇತ್ಯಾದಿ) ಸಚಿವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ಸಮಿತಿಯ ಮಾರ್ಗದರ್ಶನದಂತೆ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಅಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕಂಪನಿಗಳು ಭಾಗವಹಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿವೆ. ಈ ಮೇಳದಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಎಲ್ಲಾ ವಿದ್ಯಾರ್ಹತೆಯ ವಿದ್ಯಾರ್ಥಿಗಳು ಹಾಗೂ ಖಾಸಗಿ ವಲಯದ ಯಾವುದೇ ನಿಯೋಜಕರು (ಕಂಪನಿಗಳು) ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಮತ್ತು ಕಂಪನಿಗಳು ಈ…
ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಪ್ರದೇಶದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಫೆ.19 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ಉದ್ದಿಮೆದಾರರಿಂದ ಅಪ್ರೆಂಟೀಸ್ ತರಬೇತಿಗಾಗಿ ಸಂದರ್ಶನ ಏರ್ಪಡಿಸಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ಹೆಚ್.ಎಂ.ಪಂಡಿತಾರಾಧ್ಯ ಅವರು ತಿಳಿಸಿದ್ದಾರೆ. ಸಂದರ್ಶನದಲ್ಲಿ ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ.ಎಂ, ಎಂ.ಎಂ.ವಿ, ಮೆಕ್ಯಾನಿಕ್ ಡೀಸಲ್, ಕೊಪಾ, ಟಾಟಾ ವಿವಿಧ ವೃತ್ತಿಗಳ ಐ.ಟಿ.ಐ ಪಾಸಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ತರಬೇತಿದಾರರು ಭಾಗವಹಿಸಬಹುದು. ದಾಖಲೆಗಳು ಸಂದರ್ಶನದಲ್ಲಿ ಭಾಗವಹಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರಗಳು, ಆಧಾರ್ ಕಾರ್ಡ್ನ ಪ್ರತಿ ಹಾಗೂ ಸ್ವ-ವಿವರವುಳ್ಳ ಬಯೋಡೇಟಾ ತರಬೇಕು. 18 ವರ್ಷ ಮೇಲ್ಪಟ್ಟವರು ಅರ್ಹರಾಗಿರುತ್ತಾರೆ. ಸಂದರ್ಶನವು ಫೆ.19 ರಂದು ಬೆಳಿಗ್ಗೆ 9 ಗಂಟೆಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9741183501 ಗೆ ಸಂಪರ್ಕಿಸಬಹುದು. ಅರ್ಹರು ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಿ ಇದರ ಲಾಭಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/the-interview-for-the-post-of-field-officer-in-the-department-of-posts-will-be-held-on-february-22/ https://kannadanewsnow.com/kannada/good-news-for-transport-employees-here-are-the-details-of-all-private-hospitals-recognized-by-the-state-government/
ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್ಕೋಟೆ ಅವರು ತಿಳಿಸಿದ್ದಾರೆ. ನೇರ ಸಂದರ್ಶನವನ್ನು ಫೆ.22 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. ಅರ್ಹತೆಗಳು ಅರ್ಜಿದಾರರು ಕನಿಷ್ಠ 18 ವಯಸ್ಸಿನವರಾಗಿರಬೇಕು, ಗರಿಷ್ಠ ವಯೋಮಿತಿ ಇರುವುದಿಲ್ಲ. ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು 5000 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಮಾಡುತ್ತಿದ್ದರೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. 5000 ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ…
ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಗಳು ಆರ್ಆರ್ಬಿ ಎಎಲ್ಪಿ ನೇಮಕಾತಿ 2024 ರ ನೋಂದಣಿ ಪ್ರಕ್ರಿಯೆಯನ್ನು ಜನವರಿ 20, 2024 ರಂದು ಪ್ರಾರಂಭಿಸಲಾಗಿತ್ತು. ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆರ್ಆರ್ಬಿಗಳ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ ಸಂಸ್ಥೆಯಲ್ಲಿ 5696 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ ಫೆಬ್ರವರಿ.19 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳು ಫಿಟ್ಟರ್, ಎಲೆಕ್ಟ್ರಿಷಿಯನ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮಿಲ್ ರೈಟ್/ ಮೆಂಟೇನೆನ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ ಟ್ರೇಡ್ಗಳಲ್ಲಿ ಎನ್ಸಿವಿಟಿ / ಎಸ್ಸಿವಿಟಿಯ ಮಾನ್ಯತೆ ಪಡೆದ ಸಂಸ್ಥೆಗಳಿಂದ ಮೆಟ್ರಿಕ್ಯುಲೇಷನ್ / ಎಸ್ಎಸ್ಎಲ್ಸಿ ಮತ್ತು ಐಟಿಐ ಪ್ರಮಾಣಪತ್ರವನ್ನು ಪಡೆದಿರಬೇಕು ಅಥವಾ ಮೆಟ್ರಿಕ್ಯುಲೇಷನ್ / ಎಸ್ಎಸ್ಎಲ್ಸಿ ಪ್ಲಸ್ ಕೋರ್ಸ್ ಪೂರ್ಣಗೊಳಿಸಿದ ಟ್ರೇಡ್ಗಳಲ್ಲಿ ಆಕ್ಟ್ ಅಪ್ರೆಂಟಿಸ್ಶಿಪ್ ಅನ್ನು ಜನವರಿ 20 ರಂದು ಬಿಡುಗಡೆ ಮಾಡುವ ವಿವರವಾದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗುವುದು ಅಥವಾ ಮೆಟ್ರಿಕ್ಯುಲೇಷನ್/ ಎಸ್ಎಸ್ಎಲ್ಸಿ ಜೊತೆಗೆ ಮೆಕ್ಯಾನಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಆಟೋಮೊಬೈಲ್ ಎಂಜಿನಿಯರಿಂಗ್ನಲ್ಲಿ ಮೂರು…
ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನಲ್ಲಿ ಇವತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ ಅತ್ಯಂತ ಆಕ್ಷೇಪಾರ್ಹವಾಗಿತ್ತು ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಲ್ಕರಿಂದ ಐದು ನಿಮಿಷದ ಮಿತಿ ಉಳ್ಳ ಪ್ರಶ್ನೆಗೆ ಸಂಬಂಧಿಸಿ ಮಾತನಾಡಿದ ಮುಖ್ಯಮಂತ್ರಿಗಳು ಕೇಂದ್ರ ಸರಕಾರವನ್ನು ಸುದೀರ್ಘವಾಗಿ ಟೀಕಿಸಿದ್ದಾರೆ. ಗಂಟೆಗಟ್ಟಲೆ ಕೇಂದ್ರ ಸರಕಾರವನ್ನು ಟೀಕಿಸಿದ್ದು, ನಾವು ಆಕ್ಷೇಪಿಸಿದ್ದೇವೆ. ಆದರೆ, ನಮ್ಮ ಆಕ್ಷೇಪಕ್ಕೆ ಉತ್ತರಿಸುವುದನ್ನು ಬಿಟ್ಟ ಸಿಎಂ ಅವರು ಸದನದಲ್ಲಿ ಇದ್ದ ಎಲ್ಲ ವಿಪಕ್ಷಗಳನ್ನು ಗೂಂಡಾಗಳು ಎಂದಿದ್ದಾರೆ ಎಂದು ವಿವರಿಸಿದರು. ಛೀ, ಛೀ ಎಂಬಿತ್ಯಾದಿ ಅತ್ಯಂತ ಕಠಿಣ ಕೆಟ್ಟ ಶಬ್ದಗಳನ್ನು ಅವರು ಬಳಸಿದ್ದಾರೆ. ಮುಖ್ಯಮಂತ್ರಿಗಳು ಸದನದಲ್ಲಿ ಗೂಂಡಾಗಳು ಎಂಬ ಶಬ್ದ ಬಳಸಿದ್ದನ್ನು ನಾನು ನೋಡಿಲ್ಲ. ಅವರು ಎರಡೂ ಶಬ್ದಗಳನ್ನು ವಾಪಸ್ ಪಡೆದು ಕ್ಷಮೆ ಕೇಳಲು ಆಗ್ರಹಿಸಿದ್ದೇವೆ. ಇದೆಲ್ಲವನ್ನು ಪ್ರತಿಭಟಿಸಿ ನಾವು ಮತ್ತು ನಮ್ಮ ಸಹಪಕ್ಷ ಜೆಡಿಎಸ್ನವರು ಸಭಾತ್ಯಾಗ ಮಾಡಿದ್ದೇವೆ ಎಂದು ತಿಳಿಸಿದರು. ಜೆಡಿಎಸ್ನ ಶರವಣ ಅವರು ಮಾತನಾಡಿ, ಮುಖ್ಯಮಂತ್ರಿಗಳ…