Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಆಂಧ್ರ ಪ್ರದೇಶದ ವಿಶಾಖಪಟ್ಟಣಕ್ಕೆ ಒಂದು-ಮಾರ್ಗದ ವಿಶೇಷ ರೈಲು ಸೇವೆಯನ್ನು ಓಡಿಸಲಿದೆ. ರೈಲು ಸಂಖ್ಯೆ 08544 ಅಕ್ಟೋಬರ್ 22, 2025 ರಂದು ಮಧ್ಯಾಹ್ನ 3:50ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡಲಿದೆ. ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಜೋಲಾರ್ಪೇಟೆ, ಕಾಟ್ಪಾಡಿ, ರೇಣಿಗುಂಟ, ಗೂಡೂರು, ನೆಲ್ಲೂರು, ಗುಡಿವಾಡ, ಕೈಕಲೂರು, ಆಕಿವಿಡು, ಭೀಮಾವರಂ, ತನುಕು, ನಿಡದವೋಲು, ರಾಜಮಂಡ್ರಿ, ಸಾಮಲಕೋಟ, ಎಲಮಂಚಿಲಿ ಮತ್ತು ದುವ್ವಾಡ ನಿಲ್ದಾಣಗಳಲ್ಲಿ ನಿಲುಗಡೆ ಮಾಡಿ, ಅಕ್ಟೋಬರ್ 23, 2025 ರಂದು ಮಧ್ಯಾಹ್ನ 1:30ಕ್ಕೆ ವಿಶಾಖಪಟ್ಟಣಂ ನಿಲ್ದಾಣವನ್ನು ತಲುಪಲಿದೆ. https://kannadanewsnow.com/kannada/state-government-did-not-ban-rss-cm-siddaramaiah-clarifies/ https://kannadanewsnow.com/kannada/enterpreneur-gifts-51-brand-new-cars-to-employees-for-diwali/
ದಕ್ಷಿಣ ಕನ್ನಡ: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದಿದ್ದಾರೆ. https://twitter.com/CMofKarnataka/status/1980251058900459783 https://kannadanewsnow.com/kannada/gst-officer-participates-in-rss-procession-held-in-basavakalyan-photo-goes-viral/ https://kannadanewsnow.com/kannada/good-news-18-thousand-teachers-recruitment-in-karnataka-applications-invited-for-tet-examination-tet-exam-2025/
ಬೀದರ್: ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ ಟಿ ಅಧಿಕಾರಿ ಭಾಗಿಯಾಗಿರುವಂತ ಪೋಟೋ, ವೀಡಿಯೋ ವೈರಲ್ ಆಗಿವೆ. ಕಲಬುರ್ಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವಂತ ಮಹೇಶ್ ಪಾಟೀಲ್ ಎಂಬುವರೇ ಆರ್ ಎಸ್ ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದಂತ ಅಧಿಕಾರಿಯಾಗಿದ್ದಾರೆ. ಅಕ್ಟೋಬರ್.14ರಂದು ಬಸವಕಲ್ಯಾಣದಲ್ಲಿ ನಡೆದಿದ್ದಂತ ಆರ್ ಎಸ್ ಎಸ್ ಪಥಸಂಚಲನದಲ್ಲಿ ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ ಭಾಗಿಯಾಗಿದ್ದಂತ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಎಸ್ಟಿ ಅಧಿಕಾರಿ ಮಹೇಶ್ ಪಾಟೀಲ್ ಅಲ್ಲದೇ ಈ ಪಥ ಸಂಚಲನದಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಹಾಗೂ ಪಿಡಿಓಗಳು ಕೂಡ ಭಾಗಿಯಾಗಿದ್ದರು ಎನ್ನಲಾಗುತ್ತಿದೆ. ಅದು ಖಚಿತವಾಗಬೇಕಿದೆ. https://kannadanewsnow.com/kannada/we-have-not-banned-rss-we-have-issued-the-order-that-was-issued-during-shettars-tenure-cm-siddaramaiah/ https://kannadanewsnow.com/kannada/good-news-for-the-states-farmers-this-time-there-is-a-possibility-of-good-monsoon-rains/
ದಕ್ಷಿಣ ಕನ್ನಡ: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಪುತ್ತೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದೇಶದಲ್ಲಿ ಯಾವುದೇ ಸಂಘ ಅಥವಾ ಸಂಸ್ಥೆ ಎಂದಿದೆ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು , ನಾವು ಮಾಡಬಾರದೇ ಎಂದು ಪ್ರಶ್ನಿಸಿದರು. 2013 ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಮಾಡಿರುವುದು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದರು. ಅನುಮತಿ ನೀಡುವುದು ಕಡ್ಡಾಯವಲ್ಲ ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದರು. https://kannadanewsnow.com/kannada/good-news-for-the-states-farmers-this-time-there-is-a-possibility-of-good-monsoon-rains/ https://kannadanewsnow.com/kannada/problems-have-increased-after-bjp-miscreants-started-harassing-congress-mla/
ಬೆಂಗಳೂರು: ರಾಜ್ಯದ ರೈತರಿಗೆ ಸಂತಸದ ಸುದ್ದಿ ಎನ್ನುವಂತೆ ಈ ಬಾರಿ ಹಿಂಗಾರು ಮಳೆಯೂ ಉತ್ತಮವಾಗಿ ಆಗುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಬಗ್ಗೆ ಬೆಂಗಳೂರು ಕೇಂದ್ರ ಹವಾಮಾನ ಇಲಾಖೆಯ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ವಾಯುಭಾರ ಕುಸಿತದ ಪರಿಣಾವಾಗಿ ರಾಜ್ಯದಲ್ಲಿ ಹಿಂಗಾರು ಕ್ರಿಯಾಶೀಲವಾಗಿದ್ದು, ಈ ವಾರಾಂತ್ಯದವರೆಗೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಇನ್ನೂ ಒಂದು ವಾರ ಮುಂದುವರೆಯಲಿದೆ. ಈಶಾನ್ಯ ಹಿಂಗಾರು ಮಳೆ ಅಕ್ಟೋಬರ್.16ರಂದು ಪ್ರಾರಂಭವಾಗಿದ್ದು, ಡಿಸೆಂಬರ್ ವರೆಗೂ ಮುಂದುವರೆಯಲಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮವಾಗಿ ಹಿಂಗಾರು ಚೇತರಿಕೆಯನ್ನು ಕಾಣಲಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಈ ವಾಯುಭಾರ ಕುಸಿತದ ಜೊತೆಗೆ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಲ್ಲದೇ ಬಂಗಾಳ ಕೊಲ್ಲಿಯ ದಕ್ಷಿಮ ಭಾಗದಲ್ಲಿ ಮತ್ತೊಂದು ವಾಯುಭಾರ ಕುಸಿತವಾಗಲಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಅಕ್ಟೋಬರ್.26ರವರೆಗೂ ಉತ್ತಮ ಮಳೆಯ ನಿರೀಕ್ಷೆಯಿದೆ…
ಬೆಂಗಳೂರು: ಆರ್ ಎಸ್ ಎಸ್ ತನ್ನ ಪಾಡಿಗೆ ತಾನು ಕೆಲಸ ಮಾಡಿಕೊಂಡು ಹೋಗುತ್ತಿದ್ದರು. ಅದರಿಂದ ಯಾವುದೇ ಸಮಸ್ಯೆಗಳು ಆಗುತ್ತಿರಲಿಲ್ಲ. ಆದರೇ ಬಿಜೆಪಿ ಪುಡಾರಿಗಳು ಚೆಡ್ಡಿ ಹಾಕಲು ಶುರುವಾದ ಮೇಲೆ ಸಮಸ್ಯೆಗಳು ಹೆಚ್ಚಾಗಿವೆ. ಈ ವಿಷಯವಾಗಿ ಆರ್ ಎಸ್ ಎಸ್ ನವರೇ ಬಿಜೆಪಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾಗಿ ಸಾಗರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆರ್ ಎಸ್ ಎಸ್ ನಿಂದ ಯಾವುದೇ ಸಮಸ್ಯೆಗಳಾಗುತ್ತಿರಲಿಲ್ಲ. ಬಿಜೆಪಿ ಪುಡಾರಿಗಳು ಗಣವೇಷ ಹಾಕಿದ ಬಳಿಕ ಸಂಘಕ್ಕೆ ಕೆಟ್ಟ ಹೆಸರು ಬಂದಿದೆ ಎಂದರು. ಆರ್ ಎಸ್ ಎಸ್ ಪಥ ಸಂಚಲನ ನಮ್ಮ ಸಾಗರ ತಾಲ್ಲೂಕಿನಲ್ಲೂ ನಡೆಯಿತು. ಅದಕ್ಕೆ ಅನುಮತಿಯನ್ನು ನೀಡಲಾಗಿತ್ತು. ಮಸೀದಿ ಬಳಿ ಮೆರವಣಿಗೆ ಹೋಗಬೇಕು ಎಂದಿದ್ದರು. ಅದಕ್ಕೂ ಅವಕಾಶ ಮಾಡಿಕೊಡಲಾಗಿತ್ತು ಎಂದು ಹೇಳಿದರು. ಸಂಘ ಪರಿವಾರ ಇರಲಿ ಅಥವಾ ಯಾವುದೇ ಸಂಘಟನೆ ಇರಲಿ ಅನುಮತಿ…
ಮಂಗಳೂರು: ನಗರದಲ್ಲಿ ನಡೆಯುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರ ಅಶೋಕ ಜನಮನ-2026ರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ, ಉಸಿರುಗಟ್ಟಿ 11 ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವಂತ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲ್ಲೂಕಿನ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಶೋಕ ಜನಮನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯ ಜನರು ಸೇರಿದ್ದರು. ಹೀಗಾಗಿ ನೂಕು ನುಗ್ಗಲು ಉಂಟಾಗಿ, ಈ ಘಟನೆ ನಡೆದಿದೆ. ಕಿಕ್ಕಿರಿದು ತುಂಬಿದ್ದಂತ ಜನಸ್ತೋಮದ ಕಾರಣದಿಂದಾಗಿ ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪುತ್ತೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಹಾಸನ: ಅಕ್ಟೋಬರ್.22ರ ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರವೇ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಆ ಬಳಿಕ ಅವಕಾಶ ಇರುವುದಿಲ್ಲ ಎಂಬುದಾಗಿ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೀಪಾವಳಿ ವಿಶೇಷ ಪೂಜೆ ನೈವೇದ್ಯಗಳು ಹಾಗೂ ಇತರ ಅಲಂಕಾರಗಳ ಕಾರಣಕ್ಕಾಗಿ ಕೆಲವು ಸಂದರ್ಭಗಳಲ್ಲಿ ಹಾಸನಾಂಬೆ ದೇಗುಲದ ಬಾಗಿಲನ್ನು ಮುಚ್ಚಲಾಗಿದೆ ಎಂಬುದಾಗಿ ಹೇಳಿದರು. ಇಂದು ಕೂಡ ಹಾಸನಾಂಬ ದರ್ಶನ ಸುಗಮವಾಗಿ ನಡೆಯುತ್ತಿದೆ. ಪೂಜಾ ಕಾರ್ಯಕ್ರಮದ ಕಾರಣ ಸೋಮವಾರ ಹಾಗೂ ಮಂಗಳವಾರ ಮಧ್ಯಾಹ್ನ 2ರಿಂದ 3.30 ಗಂಟೆಯ ನಡುವೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ನಾಳೆಯ ಮಂಗಳವಾರದಂದು ದೀಪಾವಳಿ ವಿಶೇಷ ಪೂಜೆಯ ಕಾರಣಕ್ಕೆ ರಾತ್ರಿ 9 ಗಂಟೆಗೆ ಸಾರ್ವಜನಿಕ ದರ್ಶನದ ಬಾಗಿಲುಗಳನ್ನು ಮುಚ್ಚಲಾಗುತ್ತದೆ. ಬುಧವಾರ ಬೆಳಗಿನ ಜಾವ 5.30ಕ್ಕೆ ಪೂಜೆ ಮುಗಿಸಿ ಮತ್ತೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದರು. ಅ.22ರ ಬುಧವಾರದ ಸಂಜೆ 7 ಗಂಟೆಯವರೆಗೆ ಮಾತ್ರವೇ ಹಾಸನಾಂಬೆ ದೇವಿಯ ದರ್ಶನಕ್ಕೆ…
ಶಿವಮೊಗ್ಗ : ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. 3000ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಆದರೆ, ಅಧಿಕವಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ 13,000…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲೇ ಈಗ ಮರಣ ನೋಂದಣಿಗೆ ಅವಕಾಶ ನೀಡಲಾಗಿದೆ. ಜನನ-ಮರಣ ನೋಂದಣಿಗೆ ಅವಕಾಶ ನೀಡಲಾಗಿದ್ದು, ಅಲ್ಲಿಯೇ ಪ್ರಮಾಣಪತ್ರಗಳನ್ನು ಪಡೆಯಬಹುದಾಗಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಹಿತಿ ಹಂಚಿಕೊಂಡಿದ್ದು, ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ಈಗ ಮರಣ ನೋಂದಣಿ ಸಾಧ್ಯವಿದೆ. ಮೊದಲ ಪ್ರಮಾಣ ಪತ್ರ ಉಚಿತವಾಗಿರುತ್ತದೆ ಎಂದಿದೆ. ನಿಮಗಿದು ತಿಳಿದಿರಲಿ ಜನನ, ಮರಣ, ನಿರ್ಜೀವ ಜನನಗಳನ್ನು ನಿಮ್ಮ ಗ್ರಾಮ ಪಂಚಾಯ್ತಿಯಲ್ಲೇ ನೋಂದಣಿ ಮಾಡಿಸಿ, ಮೊದಲ ಪ್ರಮಾಣ ಪತ್ರವನ್ನು ಇಚಿತವಾಗಿ ಪಡೆಯಬಹುದಾಗಿದೆ. ಈ ಮೂಲಕ ಪ್ರತಿಯೊಂದು ಜನನ, ಮರಣ ನೋಂದಣಿಯನ್ನು ಖಚಿತಪಡಿಸಿಕೊಳ್ಳಿ ಅಂತ ತಿಳಿಸಿದೆ. ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ವಾಹನ ಚಾಲನಾ ಪರವಾನಗಿ ಚುನಾವಣಾ ಗುರುತಿನ ಚೀಟಿ ಪಾಸ್ ಪೋರ್ಟ್ ಜನನ ಪ್ರಮಾಣ ಪತ್ರ SSLC, PUC ಅಂಕಪಟ್ಟಿ ವಿದ್ಯಾರ್ಥಿ ಗುರುತಿನ ಚೀಟಿ https://kannadanewsnow.com/kannada/amazon-prime-video-snapchat-perplexity-venmo-down-worldwide-users-frustrated/ https://kannadanewsnow.com/kannada/now-gram-panchayat-property-tax-payment-is-even-simpler-pay-through-the-upi-app-while-sitting-like-this/














