Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 5922 ವಿದ್ಯಾರ್ಥಿಗಳು RTE ಅಡಿಯಲ್ಲಿ ಪ್ರವೇಶಾವಕಾಶ ಸೌಲಭ್ಯ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ನಿಯಮ-4ರ ತಿದ್ದುಪಡಿಯಲ್ಲಿ ಉಪನಿಯಮ-7 ರನ್ವಯ ವಾರ್ಡ್‍ಗಳ ಮರು ವಿಂಗಡಣೆಯಾಗಿದ್ದು, ಆಯಾ ವಾರ್ಡ್ ಗಳಲ್ಲಿ ಸರ್ಕಾರಿ /ಅನುದಾನಿತ ಶಾಲೆಗಳಿದ್ದಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಿಗೆ 12(1)(ಸಿ) ರನ್ವಯ ಪ್ರವೇಶಾತಿ ಅನ್ವಯಿಸುವುದಿಲ್ಲ. ರಾಜ್ಯದಲ್ಲಿ ಕನ್ನಡ ಭಾಷೆ ಕಲಿಕಾ ಅಧಿನಿಯಮ, 2015ನ್ನು 2015ನೇ ಸಾಲಿನಲ್ಲಿ ಜಾರಿಗೆ ತರಲಾಗಿದ್ದು, ಕನ್ನಡ ಭಾಷೆ ಕಲಿಕಾ ನಿಯಮಗಳನ್ನು ಶಿಕ್ಷಣ ಇಲಾಖೆಯ ವತಿಯಿಂದ 2017ನೇ ಸಾಲಿನಲ್ಲಿ ರೂಪಿಸಿ…

Read More

ಬೆಳಗಾವಿ ಸುವರ್ಣ ವಿಧಾನಸೌಧ: ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ ಹಾಗೂ ಸಂಚಿತ ನಿಧಿಯಿಂದಾಗಲಿ, ಸರ್ಕಾರದ ಅನುದಾನದಿಂದಾಗಲಿ ಇವರಿಗೆ ವೇತನ ಪಾವತಿಸಿರುವುದಿಲ್ಲ, ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶವಿರುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು. ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ‘ಖಾಸಗಿ ಭೂ ಮಾಪಕರ ಸೇವೆ’ ಗೆ ಅವಕಾಶವಿದ್ದು ಕಳೆದ ಹಲವು ದಶಕಗಳಿಂದ ಖಾಸಗಿ ಭೂಮಾಪಕರು ಅಧಿಕೃತವಾಗಿ ಭೂದಾಖಲೆಗಳ ಹಾಗೂ ಭೂಮಾಪನ ಇಲಾಖೆಯ ನಿಯಮಗಳಿಗುಣವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ರಾಜ್ಯದ ಭೂದಾಖಲೆಗಳ ಹಾಗೂ ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ ಸರ್ಕಾರಿ ಭೂಮಾಪಕರ ಹುದ್ದೆಗಳನ್ನು ‘ಒಂದು ಬಾರಿಯ ವಿಶೇಷ ನೇಮಕಾತಿ” ಉಪಕ್ರಮದಲ್ಲಿ ಸೇವಾನುಭವದ ಆಧಾರದಲ್ಲಿ ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡುವ ಸಂಬಂಧ ಇಲಾಖಾ ಮಟ್ಟದಲ್ಲಿ ಹಾಗೂ ಸಚಿವರ ಹಂತದಲ್ಲಿ ನಡೆದ ಸಭೆಯಲ್ಲಿ…

Read More

ಮಗಳು……… ಯಾವಾಗ ಮಗಳು ತಾಯಿಯಾದಳೋ,ಯಾವಾಗ ಮಗಳ ಪಯಣ ತಾಯಿಯ ಪಯಣದಲ್ಲಿ ಬದಲಾಯಿತೋ ಗೊತ್ತಿಲ್ಲ, ಯಾವಾಗ ಮಗಳು ದೊಡ್ಡವಳಾಗಿಬಿಟ್ಟಳೋ ಗೊತ್ತಿಲ್ಲ, ಮಗಳು ವರ್ತಮಾನ, ಮಗಳು ಭವಿಷ್ಯ, ಮಗಳು ಎಂದರೆ ಬೆಲೆ ಕಟ್ಟಲಾಗದಂಥವಳು….. ಮಗಳು ಮದುವೆ ಮಂಟಪದಿಂದ ಅತ್ತೆಯ ಮನೆಗೆ ಹೋಗುತ್ತಾಳೆ, ಆಗ ಆಕೆ ಬೇರೆಯವಳಾಗಿ ಕಾಣುವುದಿಲ್ಲ, ಆದರೆ, ಆಕೆ ತವರುಮನೆಗೆ ಬಂದಾಗ ಮುಖ ತೊಳೆದು ಎದುರಿಗೇ ಇರುವ ಟವೆಲ್ ನ ಬದಲಿಗೆ ತನ್ನ ಬ್ಯಾಗಿನಲ್ಲಿರುವ ಕರವಸ್ತ್ರದಿಂದ ಮುಖ ಒರೆಸಿಕೊಂಡಾಗ, ಆಕೆ ಬೇರೆಯವಳಾಗಿ ಕಾಣುತ್ತಾಳೆ, ಆಕೆ ಅಡುಗೆ ಮನೆಯಲ್ಲಿ ಬಾಗಿಲಲ್ಲಿ ಅಪರಿಚಿತಳಾಗಿ ನಿಂತಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ವಾಷಿಂಗ್ ಮಷೀನ್ ಬಳಸಲೇ, ಫ್ಯಾನ್ ಹಾಕಲೇ ಎಂದಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಟೇಬಲ್ ಮೇಲೆ ಊಟ ಬಡಿಸಿದ್ದಾಗಲೂ ಆಕೆ ಮುಚ್ಚಳ ತೆಗೆದು ನೋಡುವುದಿಲ್ಲ, ಆಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ದುಡ್ಡು ಎಣಿಸುತ್ತಿದ್ದಾಗ ದೃಷ್ಟಿಯನ್ನು ಆಕಡೆ ಈಕಡೆ ತಿರುಗಿಸಿದಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಮಾತುಮಾತಿಗೂ ತಮಾಷೆ ಮಾಡಿ ನಗುವ ನಾಟಕ ಮಾಡುತ್ತಿರುವಾಗ ಆಕೆ ಬೇರೆಯವಳಾಗಿ ಕಾಣುತ್ತಾಳೆ, ಹಾಗೂ…

Read More

ಒಂದು ದಿನ ಒಂದು ಕೋರ್ಟಿನಲ್ಲಿ ಜಡ್ಜ್ ಮುಂದೆ ಒಂದು ಕೇಸ್ ಬಂದಿತ್ತು. ಒಬ್ಬ ಫಿರ್ಯಾದಿ ತಂದ ಕೇಸ್ ಹೀಗಿತ್ತು. ಒಬ್ಬ ಮಾಮೂಲಿ ಅರ್ಚಕ, ದೇವಸ್ಥಾನದಲ್ಲಿ ಮಂಗಳಾರತಿ ತಟ್ಟೆಯ ಪುಡಿಗಾಸಿನಿಂದ ಬದುಕುವವನು, ಸರ್ಕಾರಕ್ಕೆ ಯಾವುದೇ ತೆರಿಗೆ ಕಟ್ಟದೇ ಕೆಲವೇ ಸಮಯದಲ್ಲಿ ಶ್ರೀಮಂತನಾದ ಎಂದರೆ ಅವನು ಅಕ್ರಮ ರೀತಿಯಲ್ಲಿ ಧನಸಂಪಾದನೆ ಮಾಡಿರಬೇಕು. ಆದ್ದರಿಂದ ಆ ಅರ್ಚಕನ ಅಕ್ರಮ ಸಂಪಾದನೆಯ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಶಿಕ್ಷೆ ವಿಧಿಸಬೇಕೆಂದು ಪ್ರಾರ್ಥನೆ. ‘ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…

Read More

ಶಿವಮೊಗ್ಗ: ಸಾಗರವನ್ನು ಜಿಲ್ಲೆ ಮಾಡುವಂತೆ ಒತ್ತಾಯ, ಹೋರಾಟ, ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಿದೆ. ನಾಳೆ ಸಾಗರ ಬಂದ್ ಕೂಡ ಮಾಡೋದಕ್ಕೆ ಸಾಗರ ಜಿಲ್ಲಾ ಹೋರಾಟ ಸಮಿತಿ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಹಿ ಗಾರ್ಮೆಂಟ್ಸ್ ನಿಂದ ನೌಕರರಿಗೆ ರಜೆಯನ್ನು ಘೋಷಿಸಲಾಗಿದೆ. ಸಾಗರ ಜಿಲ್ಲಾ ಹೋರಾಟ ಸಮಿತಿಯು ಸಾಗರ ಜಿಲ್ಲೆ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಕಳೆದ 12 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ, ಆಗ್ರಹ ಮಾಡಿದರೂ ಸರ್ಕಾರ, ಜನಪ್ರತಿನಿಧಿಗಳು, ಯಾವುದೇ ರೀತಿ ಸ್ಪಂದನೆ ಮಾಡಿಲ್ಲ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದೆ. ಐತಿಹಾಸಿಕತೆಗೆ ಸಾಕ್ಷಿ ಸಾಗರ ಸಾಗರ ಪಟ್ಟಣವು ಐತಿಹಾಸಿಕ ನಗರವಾಗಿದ್ದು, ಸಾಗರ ತಾಲ್ಲೂಕಿನ ಕೆಳದಿ ಸಂಸ್ಥಾನವು ಕ್ರಿ.ಶ 1499ರಿಂದ 1763ರವರೆಗೆ ಸುಮಾರು 265 ವರ್ಷಗ ಕಾಲ ಅರಸರಾದ ಚೌಡಪ್ಪ ನಾಯಕರಿಂದ ಸದಾಶಿವ ನಾಯಕರ, ಶಿವಪ್ಪ ನಾಯಕ, ಕೆಳದಿ ಚೆನ್ನಮ್ಮಾಜಿ ಒಟ್ಟು 19 ರಾಜಮಹಾರಾಜರು 13 ಜಿಲ್ಲೆಗಳನ್ನು ಒಳಗೊಂಡು ಆಡಳಿತ ನಡೆಸಿದ ಇತಿಹಾಸವಿದೆ. ಸಾಗರ ಪ್ರಾಂತ್ಯವು ಕೆಳದಿ ಸಂಸ್ಥಾನ ಆಡಳಿತ ನಡೆಸಿದ ಐತಿಹಾಸಿಕ…

Read More

ಬೆಳಗಾವಿ ಸುವರ್ಣಸೌಧ: ಇಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಇಂದು ನಾಲ್ಕು ತಿದ್ದುಪಡಿ ವಿಧೇಯಕಗಳನ್ನು ಮಂಡನೆ ಮಾಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ(ತಿದ್ದುಪಡಿ) ವಿಧೇಯಕ, ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರದ (2ನೇ ತಿದ್ದುಪಡಿ) ವಿಧೇಯಕ, ಬಾಂಬೆ ಸಾರ್ವಜನಿಕ ನ್ಯಾಸ ( ಕರ್ನಾಟಕ ತಿದ್ದುಪಡಿ) ವಿಧೇಯಕ, ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ(ತಿದ್ದುಪಡಿ) ವಿಧೇಯಕವನ್ನು ಇಂದಿನ ಸುವರ್ಣ ವಿಧಾನಸಭೆದಲ್ಲಿ ನಡೆಯುತ್ತಿರುವಂತ ವಿಧಾನಸಭೆಯಲ್ಲಿ ಮಂಡಿಸಲಾಗಿದೆ. https://kannadanewsnow.com/kannada/good-news-for-those-waiting-for-food-security-in-the-state-food-security-is-available-even-with-minimal-documentation/ https://kannadanewsnow.com/kannada/ipl-2026-auction-full-list-of-sold-players/

Read More

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು. ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತ&ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನಾಂಕ 19-12-2025 ರ ಶುಕ್ರವಾರ ಬೆಳಗ್ಗೆ 11.15ಗಂಟೆಗೆ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ತ್ಯಾಗರಾಜ ಕೋ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಆಸ್ಟ್ರೇಲಿಯಾದ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಮಂಗಳವಾರ (ಡಿಸೆಂಬರ್ 16) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಅತ್ಯಂತ ದುಬಾರಿ ವಿದೇಶಿ ಆಟಗಾರ ಎಂಬ ದಾಖಲೆಯನ್ನು ಮುರಿದು ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. 26 ವರ್ಷದ ಕ್ರಿಕೆಟಿಗ ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ತೀವ್ರ ಬಿಡ್ಡಿಂಗ್ ಯುದ್ಧದ ನಂತರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 25.20 ಕೋಟಿ ರೂ.ಗೆ ಸೇರಿಕೊಂಡರು. ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಐಪಿಎಲ್ 2026 ರ ಹರಾಜಿನಲ್ಲಿ ಖರೀದಿದಾರರನ್ನು ಕಂಡುಕೊಂಡ ಮೊದಲ ಆಟಗಾರ. ಅವರನ್ನು ದೆಹಲಿ ಕ್ಯಾಪಿಟಲ್ಸ್ ತನ್ನ ಮೂಲ ಬೆಲೆಯಾದ 2 ಕೋಟಿ ರೂ.ಗೆ ಸಹಿ ಮಾಡಿತು. ಗ್ರೀನ್ ನಂತರ, ಕೆಕೆಆರ್ ಶ್ರೀಲಂಕಾದ ವೇಗಿ ಮಥೀಷ ಪತಿರಣ ಅವರನ್ನು 18 ಕೋಟಿ ರೂ.ಗೆ ಖರೀದಿಸಿತು. ಭಾರತದ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡವು ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್…

Read More

ಶಿವಮೊಗ್ಗ: ಸಾಗರವನ್ನು ಜಿಲ್ಲೆಯಾಗಿ ಮಾಡಬೇಕು ಎಂಬುದಾಗಿ ಆಗ್ರಹಿಸಿ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ನಾಳೆ ಸಾಗರ ಬಂದ್ ಗೆ ಕರೆ ನೀಡಲಾಗಿದೆ. ನಾಳೆಯ ಸಾಗರ ಬಂದ್ ಗೆ ವಿವಿಧ ಸಂಘಟನೆಗಳಿಂದ ಬೆಂಬಲ ಸೂಚಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿ ಮಾಹಿತಿ ನೀಡಿದ್ದು, ಸಾಗರ ಜಿಲ್ಲೆ ಘೋಷಣೆ ಮಾಡಬೇಕು ಎಂಬುದಾಗಿ ಒತ್ತಾಯಿಸಿ ಕಳೆದ 12 ವರ್ಷಗಳಿಂದಲೂ ಸರ್ಕಾರಕ್ಕೆ ಮನವಿ, ಆಗ್ರಹ ಮಾಡಿದರೂ ಸರ್ಕಾರ, ಜನಪ್ರತಿನಿಧಿಗಳು, ಯಾವುದೇ ರೀತಿ ಸ್ಪಂದನೆ ಮಾಡಿಲ್ಲ ಎಂಬುದಾಗಿ ಹೇಳಿದೆ. ಸಾಗರ ಪಟ್ಟಣವು ಐತಿಹಾಸಿಕ ನಗರವಾಗಿದ್ದು, ಸಾಗರ ತಾಲ್ಲೂಕಿನ ಕೆಳದಿ ಸಂಸ್ಥಾನವು ಕ್ರಿ.ಶ 1499ರಿಂದ 1763ರವರೆಗೆ ಸುಮಾರು 265 ವರ್ಷಗ ಕಾಲ ಅರಸರಾದ ಚೌಡಪ್ಪ ನಾಯಕರಿಂದ ಸದಾಶಿವ ನಾಯಕರ, ಶಿವಪ್ಪ ನಾಯಕ, ಕೆಳದಿ ಚೆನ್ನಮ್ಮಾಜಿ ಒಟ್ಟು 19 ರಾಜಮಹಾರಾಜರು 13 ಜಿಲ್ಲೆಗಳನ್ನು ಒಳಗೊಂಡು ಆಡಳಿತ ನಡೆಸಿದ ಇತಿಹಾಸವಿದೆ. ಸಾಗರ ಪ್ರಾಂತ್ಯವು ಕೆಳದಿ ಸಂಸ್ಥಾನ ಆಡಳಿತ ನಡೆಸಿದ ಐತಿಹಾಸಿಕ ಸಾಕ್ಷಿಯಾಗಿದೆ ಎಂದು ತಿಳಿಸಿದೆ. ಸಾಗರವು ಉಪ…

Read More

ಬೆಂಗಳೂರು: ಕಳೆದ ನಿನ್ನೆಯಿಂದ ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಪಾಕಿಸ್ತಾನ ಐಎಸ್ಐ ಬ್ರ್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ದಾವಣಗೆರೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಕೆಲ ದಿನಗಳಲ್ಲಿ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ವಿಜಯಪುರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಹೀಗಾಗಿ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳವು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತುಮಕೂರು ಡಿಸಿ ಕಚೇರಿ ಸ್ಪೋಟಿಸುವುದಾಗಿಯೂ ಬೆಳಗ್ಗೆ 7ಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು. ತುಮಕೂರು ಡಿಸಿ ಶುಭ ಕಲ್ಯಾಣ್ ಇ-ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಮಾಡಲಾಗಿತ್ತು. ಡಿಸಿ ಕಚೇರಿಯಲ್ಲಿ ತಪಾಸಣೆಯನ್ನು ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ನಡೆಸಲಾಗಿತ್ತು. https://kannadanewsnow.com/kannada/a-letter-has-been-written-to-the-center-stating-that-the-kasturirangan-report-cannot-be-implemented-in-the-state-minister-eshwar-khandre/ https://kannadanewsnow.com/kannada/breaking-this-time-the-ipl-match-will-be-inaugurated-in-bangalore-ksca-president-venkatesh-prasad/

Read More