Author: kannadanewsnow09

ಬೆಂಗಳೂರು : ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಳೆಯ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ನೆಲಸಮಗೊಳಿಸಿ ಇದೇ ಜಾಗದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಗುರುವಾರದಂದು ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಮಟಾ ಶಾಸಕರಾದ ದಿನಕರ್ ಕೇಶವಶೆಟ್ಟಿ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಭೂಮಿಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹಸ್ತಾಂತರವಾಗಿರುವುದಿಲ್ಲ ಮತ್ತು ಸದರಿ ಪ್ರಸ್ತಾವನೆಗೆಗೆ ಯಾವುದೇ ರೀತಿಯ ಅನುದಾನ ಮಂಜೂರಾಗಿರುವುದಿಲ್ಲ. ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದ್ದು ಈಗಾಗಲೇ ಇಲಾಖೆಯಿಂದ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು…

Read More

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ನ್ನು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿಯ ವೇಳೆಯಲ್ಲಿ 3 ಗಂಟೆಗಳ ಕಾಲ ಒಟ್ಟು 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ಕೃಷಿ ಫೀಡರ್ ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ ನಿರಂತರವಾಗಿ 3 ಪೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆÉ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್ ಕುಮಾರ್ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಾರ್ಮ್ ಹೌಸ್ ಗಳನ್ನು ಹೊಂದಿರುವ ಎಲ್ಲಾ ಕೃಷಿ ಪೀಡರ್ ಗಳಿಗೆ ಒಎಲ್‍ಪಿ-ರಿಲೇಗಳ್ನು ಬಳಸಿಕೊಂಡು…

Read More

ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರುಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಅಲೋಪತಿ ವೈದ್ಯರುಗಳಿಗೆ ನೀಡಲಾಗುತ್ತಿರುವ ವೇತನ ಶ್ರೇಣಿ, ವೇತನ ಭತ್ಯೆ ಸೌಲಭ್ಯ ಮತ್ತು ಸ್ಥಾನಮಾನಗಳನ್ನು ಸಮಾನಾಂತರವಾಗಿ ವಿಸ್ತರಿಸಿ ಕಾಲ ಕಾಲಕ್ಕೆ ಸಮಾನತೆ ಕಾಪಾಡುವ ಸರ್ಕಾರದ ನೀತಿ ವಿಷಯಕ್ಕೆ ಅನುಮೋದನೆ ನೀಡಲಾಗಿದೆ ಹಾಗೂ ವೇತನ ಮತ್ತು ಭತ್ಯೆಗಳಿಗೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಗುರುವಾರದಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ರಿಜ್ವಾನ್ ಅರ್ಷದ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆದೇಶ ಸಂಖ್ಯೆ :ಆಕುಕ ಪಿಐಯಂ 2016 ದಿನಾಂಕ: 18-18-2016ರನ್ವಯ ಅಲೋಪತಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ವೈದ್ಯರಿಗೆ 2016ರಲ್ಲಿ ನೀಡಿದ ಪರಿಷ್ಕøತ ವಿಶೇಷ ಭತ್ಯೆಯನ್ನು ಆಯುಷ್ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ವೈದ್ಯರಿಗೂ ವಿಸ್ತರಿಸಲಾಗಿದೆ. ಪ್ರಸ್ತುತ ಇಲಾಖೆಯಲ್ಲಿ 180 ಖಾಯಂ ವೈದ್ಯರುಗಳು ಸ್ನಾತಕೋತ್ತರ ಪದವಿ ಪಡೆದು ಸೇವೆ ಸಲ್ಲಿಸುತ್ತಿದ್ದು, ಇವರುಗಳನ್ನು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮವು ಸತತ ಲಾಭದಲ್ಲಿದ್ದು 2023-24ನೇ ಆರ್ಥಿಕ ವರ್ಷದಲ್ಲಿ ಒಟ್ಟು ರೂ.121.97 ಕೋಟಿ ವಹಿವಾಟು ನಡೆಸಿದ್ದು ರೂ.56.11 ಕೋಟಿ ನಿವ್ವಳ ಲಾಭಗಳಿಸಿದೆ. ನಿವ್ವಳ ಲಾಭದ ಮೇಲೆ ಡಿವಿಡೆಂಡ್ ರೂ.16.77 ಕೋಟಿ ಮತ್ತು ವಿಶೇಷ ಲಾಭಾಂಶ ರೂ.76.64 ಕೋಟಿ ಒಟ್ಟು ರೂ.93.41 ಕೋಟಿ ಚೆಕ್‍ಗಳನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ನವರಿಗೆ ಸಣ್ಣ ಕೈಗಾರಿಕಾ ಸಚಿವರಾದ ಶರಣ ಬಸಪ್ಪ ದರ್ಶನಾಪುರ, ನಿಗಮದ ಅಧ್ಯಕ್ಷರಾದ ಟಿ.ರಘುಮೂರ್ತಿ, ಚಳ್ಳಕೆರೆ ವಿಧಾನಸಭೆ ಸದಸ್ಯರು, ಬಸವರಾಜ ರಾಯರೆಡ್ಡಿ, ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರರು, ಸರ್ಕಾರದ ಕಾರ್ಯದರ್ಶಿಗಳಾದ ರಮಣ್ ದೀಪ್ ಚೌದರಿ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ರವರುಗಳು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/teachers-should-not-be-given-any-other-work-speaker-basavaraj-horatti/

Read More

ಬೆಂಗಳೂರು: ಶಾಲಾ ಮಕ್ಕಳಿಗೆ ಬೋಧನೆ ಮಾಡುತ್ತಿರುವ ಶಿಕ್ಷಕರಿಗೆ ಚುನಾವಣೆ ಸೇರಿ ಅನ್ಯ ಕಾರ್ಯಗಳಿಗೆ ನಿಯೋಜನೆ ಮಾಡಬಾರದು ಎಂಬುದಾಗಿ ಶಾಲಾ ಶಿಕ್ಷಣ ಸಚಿವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ. ಗುರುವಾರದಂದು ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಕೇಳಿದ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಉತ್ತರಿಸಿದರು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರು, ಪ್ರಾಥಮಿಕ ಹಂತದಲ್ಲಿ ಮಕ್ಕಳಲ್ಲಿ ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಬೇಕಾದರೇ ಶಿಕ್ಷಕರಿಗೆ ಬೇರಿ ಕಾರ್ಯಗಳಿಗೆ ನೇಮಿಸಬಾರದು ಎಂದರು. ಸಭಾಪತಿಗಳ ಮಾತಿಗೆ ಒಪ್ಪಿದಂತ ಸಚಿವ ಮಧು ಬಂಗಾರಪ್ಪ, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ಇಲಾಖೆಯಿಂದ ಹಲವು ಕ್ರಮ ಕೈಗೊಳ್ಳಲಾಗಿದೆ. ನಿಮ್ಮ ಮಾತಿಗೆ ಸಹಮತವಿದ್ದು, ಶಿಕ್ಷಕರಿಗೆ ಅನ್ಯ ಕಾರ್ಯ ನೀಡದಂತೆ ಸೂಚಿಸುವುದಾಗಿ ಸದನಕ್ಕೆ ತಿಳಿಸಿದರು. https://kannadanewsnow.com/kannada/new-vaccine-for-monkey-disease-next-year-minister-dinesh-gundu-rao/

Read More

ಬೆಂಗಳೂರು: ಮಲೆನಾಡಿನ ಭಾಗದಲ್ಲಿ ಹರಡುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುಂದಿನ ವರ್ಷ ಹೊಸ ಲಸಿಕೆ ಬರುವ ನಿರೀಕ್ಷೆಯಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಗುರುವಾರದಂದು ವಿಧಾನಸಭೆಯಲ್ಲಿ ಬಿಜೆಪಿಯ ಅರಗ ಜ್ಞಾನೇಂದ್ರ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು ಪುಣೆ ಪ್ರಯೋಗಾಲಯ 1989ರಲ್ಲಿ ಸಂಶೋಧಿಸಿದ್ದ ಲಸಿಕೆಯ ಕ್ಷಮತೆ ತಗ್ಗಿದೆ ಎಂಬುದಾಗಿ ತಜ್ಞರು ಖಚಿತ ಪಡಿಸಿದ್ದಾರೆ. ಹೊಸ ಲಸಿಕೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಜೊತೆಗೆ ಚರ್ಚಿಸಿ ಒಪ್ಪಿಸಲಾಗಿದೆ. ಹೈದರಾಬಾದ್ ಪ್ರಯೋಗಾಲಯದಲ್ಲಿ ಸಂಶೋಧನೆ ಪ್ರಗತಿಯಲ್ಲಿದೆ ಎಂದರು. ಮಂಗನ ಕಾಯಿಲೆ ಅಂದರೆ ಕ್ಯಾಸನೂರು ಅರಣ್ಯ ರೋಗಕ್ಕೆ ಮುಂದಿನ ವರ್ಷ ಹೊಸ ಲಸಿಕೆ ಬರುವ ನಿರೀಕ್ಷೆಯಿದೆ. ಬೇಸಿಗೆಯಲ್ಲಿ ಈ ರೋಗ ಹೆಚ್ಚು ಬಾಧಿಸುವ ಸಾಧ್ಯತೆಗಳಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. https://kannadanewsnow.com/kannada/home-minister-g-parameshwara-warns-of-suo-motu-case-against-those-who-create-riots-in-the-state/

Read More

ಬೆಂಗಳೂರು: ರಾಜ್ಯದಲ್ಲಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಉದ್ದೇಶದಿಂದ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಗುರುವಾರದಂದು ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್.ಭೋಜೇಗೌಡ ಅವರು ಇಂದು ಪ್ರಶ್ನೋತ್ತರ ಕಲಾಪ ವೇಳೆ ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಕೇಳಿದ ವಿವಿಧ ಪ್ರಶ್ನೆಗಳಿಗೆ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಉತ್ತರಿಸಿರುವ ಪ್ರಮುಖ ಅಂಶಗಳು:- ರಾಜ್ಯಾದ್ಯಂತ 136 ವ್ಹಿಲಿಂಗ್ ಪ್ರಕರಣಗಳನ್ನು ದಾಖಲಿಸಿ, ಈ ಪ್ರಕರಣಗಳಲ್ಲಿ 128 ಜನರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2024ರಲ್ಲಿ 266 ಪ್ರಕರಣಗಳಲ್ಲಿ 179 ಜನರನ್ನು ಬಂಧಿಸಲಾಗಿದೆ. 2025ರಲ್ಲಿ ಈವರೆಗೆ 47 ಪ್ರಕರಣಗಳಲ್ಲಿ 30 ಜನರನ್ನು ಬಂಧಿಸಲಾಗಿದೆ. ಮಾರಕಸ್ತ್ರಗಳನ್ನು ಹಿಡಿದು ಪುಂಡಾಟಿಕೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. 2023ರಲ್ಲಿ 68 ಪ್ರಕರಣ ದಾಖಲಿಸಿ, 147 ಆರೋಪಿಗಳನ್ನು ಬಂಧಿಸಲಾಗಿದೆ. 2024ರಲ್ಲಿ 66 ಪ್ರಕರಣಗಳಲ್ಲಿ 187 ಆರೋಪಿಗಳು ,…

Read More

ಸ್ಯಾಂಟಿಯಾಗೊ: ಉತ್ತರ ಚಿಲಿಯಲ್ಲಿ ಗುರುವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಹೀಗಾಗಿ ಚಿಲಿಯಲ್ಲಿ ಜನರು ಬೆಚ್ಚಿ ಬಿದ್ದಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಬೊಲಿವಿಯಾ ಗಡಿಯ ಸಮೀಪವಿರುವ ಸಣ್ಣ ಪಟ್ಟಣವಾದ ಸ್ಯಾನ್ ಪೆಡ್ರೊ ಡಿ ಅಟಕಾಮಾದ ನೈಋತ್ಯಕ್ಕೆ 104 ಕಿಲೋಮೀಟರ್ ದೂರದಲ್ಲಿದೆ. ಅಧಿಕಾರಿಗಳ ಪ್ರಕಾರ, ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳು ಹೊರಬಂದಿಲ್ಲ. ಭೂಕಂಪದ ನಂತರ ಯಾವುದೇ ಹಾನಿ, ಗಾಯಗಳು ಅಥವಾ ಸುನಾಮಿ ಎಚ್ಚರಿಕೆಗಳ ಬಗ್ಗೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳು ಮತ್ತು ತುರ್ತು ಸೇವೆಗಳು ಯಾವುದೇ ಭೂಕಂಪನಗಳು ಅಥವಾ ಸಂಭಾವ್ಯ ಪರಿಣಾಮಕ್ಕಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ಗಮನಾರ್ಹವಾಗಿ, ಪೆಸಿಫಿಕ್ ರಿಂಗ್ ಆಫ್ ಫೈರ್ ಉದ್ದಕ್ಕೂ ಇರುವ ಚಿಲಿ ಹೆಚ್ಚು ಭೂಕಂಪನಾತ್ಮಕವಾಗಿ ಸಕ್ರಿಯವಾಗಿದೆ ಮತ್ತು ಆಗಾಗ್ಗೆ ಭೂಕಂಪಗಳನ್ನು ಅನುಭವಿಸುತ್ತದೆ. ಅಧಿಕಾರಿಗಳ ಪ್ರಕಾರ, ಸ್ಥಳೀಯ ಸಮಯ ಮಧ್ಯಾಹ್ನ 12.21 ಕ್ಕೆ ಸಂಭವಿಸಿದ ಭೂಕಂಪವು 93 ಕಿಲೋಮೀಟರ್ ಆಳದಲ್ಲಿತ್ತು. ಚಿಲಿಯ ರಾಷ್ಟ್ರೀಯ ವಿಪತ್ತು ಸಂಸ್ಥೆ…

Read More

ಬೆಂಗಳೂರು: ರಾಜ್ಯ ಹೆದ್ದಾರಿಗಳು ಹಾದು ಹೋಗುವ ನಗರ, ಪಟ್ಟಣ, ಗ್ರಾಮಗಳ ಪರಿಮಿತಿ ಹಾಗೂ ಇತರೆ ಆಕ್ಷೇಪಿತ ಪ್ರದೇಶಗಳಿಗೆ ಅನ್ವಯಿಸುವಂತೆ ನಿಗದಿಪಡಿಸಿದ್ದ ಕಟ್ಟಡ ರೇಖೆಯನ್ನು ಜಿಲ್ಲಾ ಮುಖ್ಯ ರಸ್ತೆಗಳಿಗೂ ಅನ್ವಯಿಸುವಂತೆ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಈ ಕುರಿತು ಲೋಕೋಪಯೋಗಿ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿರುವ ರಾಜ್ಯ ಹೆದ್ದಾರಿಗಳಲ್ಲಿ ಬರುವ ಸಿಟಿ ಕಾರ್ಪೊರೇಷನ್, ಸಿಟಿ ಮುನಿಸಿಪಲ್ ಕೌನ್ಸಿಲ್, ಟೌನ್ ಮುನಿಸಿಪಲ್ ಕೌನ್ಸಿಲ್, ಟೌನ್ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಪರಿಮಿತಿಗಳಲ್ಲಿ ರಾಜ್ಯ ಹೆದ್ದಾರಿಯ ದಾಖಲಿತ ರಸ್ತೆ ಭೂಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರವನ್ನು ಮೇಲೆ ಕ್ರಮ ಸಂಖ್ಯೆ (1)ರಲ್ಲಿ ಓದಲಾದ ಆದೇಶದಲ್ಲಿ ನಿಗಧಿಗೊಳಿಸಿ ಆದೇಶಿಸಲಾಗಿತ್ತು. ಸದರಿ ಆದೇಶವು ಇದುವರೆವಿಗೂ ಚಾಲ್ತಿಯಲ್ಲಿರುತ್ತದೆ. ಹಾಗೂ ಸದರಿ ಆದೇಶದಲ್ಲಿ ತಿಳಿಸಿರುವಂತೆ ಕಟ್ಟಡ ರೇಖೆಗಳನ್ನು ಗುರುತಿಸುವ ಬಗ್ಗೆ ಹೆಚ್ಚುವರಿ ಸ್ಪಷ್ಟನೆಯನ್ನು ಮೇಲೆ ಕ್ರಮ ಸಂಖ್ಯೆ (2)ರಲ್ಲಿ ಓದಲಾದ ಸುತ್ತೋಲೆಯಲ್ಲಿ ನೀಡಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:18.10.2004 ರ ಆದೇಶವು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ…

Read More

ನವದೆಹಲಿ: ನಿಮ್ಮ ಇಪಿಎಫ್ ಖಾತೆಯಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ನವೀಕರಿಸುವುದು ಹೆಚ್ಚು ಸುಲಭವಾಗಿದೆ. ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಈಗ ಆಧಾರ್-ಪರಿಶೀಲಿಸಿದ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಹೊಂದಿರುವ ಸದಸ್ಯರಿಗೆ ಯಾವುದೇ ದಾಖಲೆಗಳನ್ನು ಅಪ್ಲೋಡ್ ಮಾಡದೆಯೇ ತಮ್ಮ ಪ್ರೊಫೈಲ್ ಅನ್ನು ನವೀಕರಿಸಲು ಅನುಮತಿಸುತ್ತದೆ. ನಿಮ್ಮ ಯುಎಎನ್ ಈಗಾಗಲೇ ಆಧಾರ್ ಗೆ ಲಿಂಕ್ ಆಗಿದ್ದರೆ, ನೀವು ಯಾವುದೇ ದಾಖಲೆಗಳನ್ನು ಸಲ್ಲಿಸದೆ ಹೆಸರು, ಹುಟ್ಟಿದ ದಿನಾಂಕ, ಲಿಂಗ, ರಾಷ್ಟ್ರೀಯತೆ, ಪೋಷಕರ ಹೆಸರುಗಳು, ವೈವಾಹಿಕ ಸ್ಥಿತಿ, ಸಂಗಾತಿಯ ಹೆಸರು, ಸೇರಿದ ದಿನಾಂಕ ಮತ್ತು ಕೆಲಸ ಬಿಟ್ಟ ದಿನಾಂಕದಂತಹ ವೈಯಕ್ತಿಕ ವಿವರಗಳನ್ನು ನವೀಕರಿಸಬಹುದು. ಈ ಮೊದಲು, ಸದಸ್ಯರು ಈ ವಿವರಗಳನ್ನು ಬದಲಾಯಿಸಲು ತಮ್ಮ ಉದ್ಯೋಗದಾತರಿಂದ ಅನುಮೋದನೆ ಪಡೆಯಬೇಕಾಗಿತ್ತು. ಇದಲ್ಲದೆ, ಮೇಲೆ ತಿಳಿಸಿದ ವಿವರಗಳನ್ನು ಬದಲಾಯಿಸುವುದು ಸಮಯ ತೆಗೆದುಕೊಳ್ಳುತ್ತದೆ. ಅಲ್ಲದೆ, ಈ ಹಿಂದೆ, ಉದ್ಯೋಗದಾತರ ಪರಿಶೀಲನೆಯಿಂದಾಗಿ ಬದಲಾವಣೆಗಳು 28 ದಿನಗಳವರೆಗೆ ತೆಗೆದುಕೊಳ್ಳುತ್ತಿದ್ದವು. ಯುಎಎನ್ ಅನ್ನು ಅಕ್ಟೋಬರ್ 1, 2017 ಕ್ಕಿಂತ ಮೊದಲು ನೀಡಿದ್ದರೆ, ಪ್ರೊಫೈಲ್ನಲ್ಲಿ ಯಾವುದೇ ನವೀಕರಣವು…

Read More