Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಮತ್ತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದ ವಿವಿಧೆಡೆ ನಾಳೆ ಮತ್ತು ನಾಡಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಎಂದು ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸೋಮವಾರ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲೂ ಭಾರೀ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಜಲಾಶಯವು ಸತತ ನಾಲ್ಕನೇ ಬಾರಿಗೆ ಕೋಡಿ ಬಿದ್ದಿದೆ. ಡ್ಯಾಂ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿದು ಹೋಗುತ್ತಿರುವುದನ್ನು ನೋಡುವುದಕ್ಕೆ ಜನರ ದಂಡೇ ಹರಿದು ಬರುತ್ತಿದೆ. ಆದರೇ ಹೀಗೆ ಕೋಡಿ ನೀರಿನಲ್ಲಿ ಆಡುತ್ತಿದ್ದಂತ ವೇಳೆಯಲ್ಲೇ ವ್ಯಕ್ತಿಯೊಬ್ಬ ಕೊಚ್ಚಿ ಹೋದ ಬಳಿಕ, ಪೊಲೀಸರು ರಕ್ಷಣೆ ಮಾಡಿರುವಂತ ಆಘಾತಕಾರಿ ಘಟನೆ ನಡೆದಿದೆ. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಿವಿ ಸಾಗರ ಜಲಾಶಯ ನಾಲ್ಕನೇ ಬಾರಿಗೆ ಕೋಡಿಬಿದ್ದಿದ್ದು, ಕೋಡಿ ವೀಕ್ಷಣೆಗೆ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಾನುವಾರದ ಇಂದು ಕೋಡಿ ಜಾಗದಲ್ಲಿ ಸಾರ್ವಜನಿಕರು ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿ ಪ್ರವಾಸಿಗನೊಬ್ಬ ನೀರಿನಲ್ಲಿ ಇಳಿದು ಉಚ್ಛಾಟ ಮೆರೆದ ಹಿನ್ನೆಲೆಯಲ್ಲಿ ಹೊರಹರಿವಿನ ಕೊಡೆತಕ್ಕೆ ಕೊಚ್ಚಿ ಹೋಗಿರುವಂತ ದೃಶ್ಯ ಪ್ರವಾಸಿಗರ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಕೊಡಿ ಜಾಗದಲ್ಲಿ ಸಾರ್ವಜನಿಕ ಹೋಗದಂತೆ ಇದೀಗ ಸಮಾನ ಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ. ಅಲ್ಲದೆ…
ಬೆಂಗಳೂರು: ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ “ವೋಟ್ ಚೋರಿ” ವಿರುದ್ಧ ನಡೆಯುತ್ತಿರುವ “ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ಮತದಾರರ ಲಿಸ್ಟ್ ಅನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಕ್ರಮ ಆಗಿಲ್ಲ. ನಕಲಿ ಮತಗಳ ಡಿಲೀಟ್ ಮಾಡುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮೀನ ಮೇಷ ಎಣಿಸುತ್ತಿರುವುದು ಏಕೆ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ತಶ್ನಿಸಿದರು. ದೇಶದಲ್ಲಿ ಈಗಾಗಲೇ ಮತಗಳ್ಳತನ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿರವರು ಸವಿಸ್ತಾರವಾಗಿ ದೇಶದ ಜನತೆಗೆ ದಾಖಲೆಯ ಸಮೇತವಾಗಿ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆಂತಕಪಡುವ ಸ್ಥಿತಿಯಲ್ಲಿದೆ. ಸಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ವೋಟ್ ಬ್ಯಾಂಕ್ ಮಾಡಿಕೊಂಡಿರುವುದು ಅತ್ಯಂತ ಖಂಡನೀಯ. ಕರ್ನಾಟಕ ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ…
ನೆಲಮಂಗಲ: ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿರುವಂತ ಘಟನೆ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿಯನ್ನು ಅಪರಿಚಿತರು ನಡೆಸಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮನೆಯ ಬಳಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಗುಂಡಿನ ದಾಳಿಯ ಬಳಿಕ ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ. ಅಪರಿಚಿತರ ಗುಂಡಿನ ದಾಳಿಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಕೈ, ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಸಲೀಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/two-arrested-for-murdering-woman-in-bengaluru-and-dumping-her-body-in-auto/ https://kannadanewsnow.com/kannada/big-news-big-shock-from-the-government-for-those-who-illegally-obtained-bpl-ration-cards/
ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರನ್ನು ಹತ್ಯೆಗೈದು ಆಟೋದಲ್ಲಿ ಶವ ಇರಿಸಿದ್ದಂತ ಘಟನೆ ನಿನ್ನೆ ನಡೆದಿತ್ತು. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದು, ನಿನ್ನೆ ತಿಲಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆ ಹತ್ಯೆಗೈದು ಶವವನ್ನು ಆಟೋದಲ್ಲಿ ಎಸೆದು ಹೋಗಿದ್ದಂತ ಘಟನೆ ಬೆಳಕಿಗೆ ಬಂದಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಿದಾಗ ಕೊಲೆ ಮಾಡಿದ್ದು ಗೊತ್ತಾಗಿತ್ತು ಎಂದರು. ಈ ಪ್ರಕರಣ ಸಂಬಂಧ ಕೇಸ್ ದಾಖಲಾದ ಬಳಿಕ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆಗೈದು ಬೇರೆ ಜಿಲ್ಲೆಗೆ ಆರೋಪಿಗಳು ಹೋಗಿ ತಲೆ ಮರೆಸಿಕೊಂಡಿದ್ದರು. ಆರೋಪಿಗಳಲ್ಲಿ ಓರ್ವ ಕಾರ್ಪೆಂಟರ್, ಮತ್ತೋರ್ವ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದಾಗಿ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆ ಬೇರೆಯೊಬ್ಬನ ಜೊತೆ ಪೋನ್ ನಲ್ಲಿ ಮಾತನಾಡುತ್ತಿದ್ದಳು. ಬೇರೆಯವರ ಜೊತೆಗೆ ಅಕ್ರಮ ಸಂಬಂಧ ಇರಬಹುದೆಂದು ಶಂಕಿಸಿ ಹತ್ಯೆ ಮಾಡಲಾಗಿದೆ. ತನಿಖೆಯಿಂದ ಮಹಿಳೆಯ ಕೊಲೆಗೆ…
ಬೆಂಗಳೂರು: “ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…” ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು. ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವಾರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು. ನಾಗರಿಕರೊಬ್ಬರು, “ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ” ಎಂದು ಬೆಂಬಲ ವ್ಯಕ್ತಪಡಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ಅವರು, “ನಾನು ಸಹ ಸಾಕಷ್ಟು ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ ಬದಲು ಸುರಂಗ…
ನವದೆಹಲಿ: ಭಾರತದ ಅತಿದೊಡ್ಡ ಸಾಲದಾತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ), ತನ್ನ ಕಾರ್ಯಾಚರಣೆಯನ್ನು ಬಲಪಡಿಸಲು ಮತ್ತು ದೇಶಾದ್ಯಂತ ಸೇವಾ ವಿತರಣೆಯನ್ನು ಹೆಚ್ಚಿಸಲು ಸುಮಾರು 3,500 ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಯೋಜಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಬ್ಯಾಂಕ್ ಜೂನ್ನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು (ಪಿಒ) ನೇಮಕ ಮಾಡಿಕೊಂಡಿದೆ ಮತ್ತು ಇದೇ ಸಂಖ್ಯೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ… ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಎಸ್ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ (ಎಚ್ಆರ್) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಒ) ಕಿಶೋರ್ ಕುಮಾರ್ ಪೊಲುಡಾಸು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ತಜ್ಞ ಅಧಿಕಾರಿಗಳಿಗೆ ಸಂಬಂಧಿಸಿದಂತೆ, ಐಟಿ ಮತ್ತು ಸೈಬರ್ ಭದ್ರತಾ ಜಾಗವನ್ನು ನೋಡಿಕೊಳ್ಳಲು ಸುಮಾರು 1,300 ಅಧಿಕಾರಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು. 541 ಪಿಒ ಹುದ್ದೆಗಳು 541 ಪಿಒ ಹುದ್ದೆಗಳಿಗೆ ಜಾಹೀರಾತು ಹೊರಬಿದ್ದಿದೆ. ಈಗಾಗಲೇ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಪಿಒಗಳಿಗೆ ನೇಮಕಾತಿ ಮೂರು ಹಂತದ ಪ್ರಕ್ರಿಯೆಯ ಮೂಲಕ ನಡೆಯುತ್ತದೆ: ಪೂರ್ವಭಾವಿ…
ಧಾರವಾಡ: ಕಾಂಗ್ರೆಸ್ ಹೈಕಮಾಂಡ್ ಎರಡೂವರೆ ವರ್ಷಕ್ಕೆ ಸಂಪುಟ ವಿಸ್ತರಣೆ ಮಾಡುವಂತೆ ಸೂಚನೆ ನೀಡಿರುವುದಾಗಿ ಕಿತ್ತೂರು ಉತ್ಸವದಲ್ಲಿ ನನಗೆ ಸಿಎಂ ತಿಳಿಸಿದ್ದಾಗಿ ಶಾಸಕ ಎನ್ ಹೆಚ್ ಕೋನರೆಡ್ಡಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್ ಎಂಬುದಾಗಿ ತಿಳಿದು ಬಂದಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಪದೇ ಪದೇ ಇದನ್ನು ಹೇಳುವುದು ಸರಿಯಲ್ಲ. ಶಾಸಕರ ಕೆಲಸದ ವಿವರ ಪಡೆದು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದೆ. ಅಲ್ಲದೇ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ವಿಚಾರವಾಗಿಯೂ ಶಾಸಕರು ಏನು ಮಾತನಾಡಬಾರದೆಂದು ಹೈಕಮಾಂಡ್ ಸೂಚಿಸಿದೆ ಎಂದರು. ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಉಳಿಸಿಕೊಂಡು ಸಂಪುಟ ವಿಸ್ತರಣೆಯ ವೇಳೆ ಬದಲಾವಣೆ ಮಾಡಬೇಕು. ಕೃಷ್ಣಬೈರೇಗೌಡ ಅವರು ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಉತ್ತಮ ಕೆಲಸ ಮಾಡಿದ್ದಾರೆ. ಈಗ ಕಂದಾಯ ಸಚಿವರಾಗಿಯೂ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಉಳಿಸಿಕೊಂಡು ಬದಲಾವಣೆ ಮಾಡುವುದು, ಬಿಡುವುದು ಸಿಎಂ, ಡಿಸಿಎಂಗೆ ಬಿಟ್ಟ…
ಪಾಟ್ನಾ: ಬಿಹಾರದಲ್ಲಿ 2025 ರ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವಂತೆಯೇ, ಕಾಂಗ್ರೆಸ್ ಪಕ್ಷವು ಭಾನುವಾರ (ಅಕ್ಟೋಬರ್ 26) ಮೊದಲ ಹಂತದ ಮತದಾನಕ್ಕಾಗಿ 40 ಸ್ಟಾರ್ ಪ್ರಚಾರಕರ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯು ತನ್ನ ರಾಷ್ಟ್ರೀಯ ನಾಯಕತ್ವ ಮತ್ತು ಪ್ರಾದೇಶಿಕ ಪ್ರಭಾವಿಗಳನ್ನು ಸಜ್ಜುಗೊಳಿಸುವ ಪಕ್ಷದ ಪ್ರಯತ್ನವನ್ನು ಪ್ರತಿಬಿಂಬಿಸುತ್ತದೆ, ಏಕೆಂದರೆ ರಾಜ್ಯದಲ್ಲಿ ಅದು ವಿರೋಧ ಪಕ್ಷದ ಭಾರತ ಬಣದ ಭಾಗವಾಗಿ ಸ್ಪರ್ಧಿಸುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಶೋಕ್ ಗೆಹ್ಲೋಟ್ ಪ್ರಮುಖ ಹೆಸರುಗಳಲ್ಲಿ ಸೇರಿದ್ದಾರೆ, ಅವರು ಪ್ರಮುಖ ಕ್ಷೇತ್ರಗಳಲ್ಲಿ ಹೈ-ವೋಲ್ಟೇಜ್ ರ್ಯಾಲಿಗಳು ಮತ್ತು ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಗಳೊಂದಿಗೆ ಪಕ್ಷದ ಪ್ರಚಾರವನ್ನು ಮುನ್ನಡೆಸುವ ನಿರೀಕ್ಷೆಯಿದೆ. ಬಿಹಾರದಾದ್ಯಂತ ಪ್ರಚಾರ ಮಾಡಲಿರುವ ಪ್ರಮುಖ ನಾಯಕರ ಪಟ್ಟಿ ಹೀಗಿದೆ ಈ ಪಟ್ಟಿಯಲ್ಲಿ ಹಿರಿಯ ನಾಯಕರು, ಯುವ ಐಕಾನ್ಗಳು ಮತ್ತು ಪ್ರಾದೇಶಿಕ ತಂತ್ರಜ್ಞರ ಮಿಶ್ರಣವೂ ಸೇರಿದೆ, ಅವುಗಳೆಂದರೆ- ಸಚಿನ್ ಪೈಲಟ್ ಭೂಪೇಶ್ ಬಾಘೇಲ್ ಗೌರವ್ ಗೊಗೊಯ್ ಕನ್ಹಯ್ಯಾ ಕುಮಾರ್ ಜಿಗ್ನೇಶ್ ಮೇವಾನಿ ದಿಗ್ವಿಜಯ್ ಸಿಂಗ್…
ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ (16/6/2018ರಂತೆ) ತಮಿಳುನಾಡಿಗೆ ವರ್ಷಕ್ಕೆ 177.25 ನೀರನ್ನು ಹರಿಸಬೇಕಿತ್ತು. ಜೂನ್ ನಿಂದ ಜೂನ್ ವರೆಗಿನ ಜಲವರ್ಷ ಪ್ರಕಾರ ಜೂನ್ 2025ರಿಂದ ಇಲ್ಲಿಯವರೆಗೆ 138.014 ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು. ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ 273.426 ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, 135.412 ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ. ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ…














