Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ನೌಕಾಪಡೆಯು ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ನೌಕೆ ಐಎನ್ಎಸ್ ಅರಿಘಾಟ್ನಿಂದ 3,500 ಕಿ.ಮೀ ಕೆ -4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿದೆ ಎಂದು ರಕ್ಷಣಾ ಮೂಲಗಳು ಗುರುವಾರ ತಿಳಿಸಿವೆ. ಬುಧವಾರ ಪರೀಕ್ಷಾ ಫೈರಿಂಗ್ ನಡೆಸಲಾಗಿದ್ದು, ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ ಎಂದು ಅವರು ಹೇಳಿದರು. “ದೋಣಿಯನ್ನು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದರು. “ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷೆಯನ್ನು ಪೂರ್ಣ ವ್ಯಾಪ್ತಿಯವರೆಗೆ ನಡೆಸಲಾಯಿತು. ವಿವರಗಳನ್ನು ವಿಶ್ಲೇಷಿಸಲಾಗುತ್ತಿದೆ ಮತ್ತು ಸಂಪೂರ್ಣ ವಿಶ್ಲೇಷಣೆಯ ನಂತರ ನಿಖರವಾದ ವಿವರಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ ಅಧಿಕಾರಿಗಳಿಗೆ ವಿವರಿಸಲಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. https://kannadanewsnow.com/kannada/bmtc-collects-rs-17-96-lakh-fine-from-8891-passengers-for-travelling-without-tickets/ https://kannadanewsnow.com/kannada/breaking-break-6-accused-arrested-in-chitradurga-murder-case/
ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತಪಾಸಣಾ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ರೂ. 17,96,030/- ದಂಡ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್-2024ರ ಮಾಹೆಗಳಲ್ಲಿ ಒಟ್ಟು 57,219 ಟ್ರಿಪ್ಗಳನ್ನು ತಪಾಸಿಸಿ 8,891 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 17,96,030/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 5268 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 1,178 ಪುರುಷ ಪ್ರಯಾಣಿಕರಿಂದ ಒಟ್ಟು ರೂ.…
ಶಿವಮೊಗ್ಗ: ಜೋಗದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ತ್ವರಿತವಾಗಿ ನಡೆಸೋದಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರವಾಸಿಗರು ಜೋಗಕ್ಕೆ ಬಂದ್ರೆ ಇಲ್ಲಿಂದ ಬಿಟ್ಟು ಹೋಗಲೇ ಬಾರದು ಆ ರೀತಿ ಅಭಿವೃದ್ಧಿಗೊಳಿಸುವುದು. ಬಿಜೆಪಿ ಹೇಳುತ್ತಿರುವುದು ಸುಳ್ಳು. ಬಿಜೆಪಿ ಅವಧಿಯಲ್ಲಿ 20 ಕೋಟಿ ಮಾತ್ರವೇ ಜೋಗ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 75 ಕೋಟಿ ಬಿಡುಗಡೆ ಮಾಡಿದ್ದೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಇಂದು ಜೋಗ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಜೋಗದಲ್ಲಿನ ಕಚೇರಿಯಲ್ಲಿ ನಡೆಸಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಜೋಗದಲ್ಲಿ ನಡೆಯುತ್ತಿರುವಂತ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಜೋಗದಲ್ಲಿ ನಡೆಯುತ್ತಿರುವಂತ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಖುದ್ದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜೋಗಕ್ಕೆ ಪ್ರವಾಸಿಗರು ಬಂದ್ರೆ ಬಿಟ್ಟೋಗ ಬಾರದು ಹಾಗೆ ಅಭಿವೃದ್ಧಿ ಜೋಗ ಅಭಿವೃದ್ಧಿಗೆ 185 ಕೋಟಿ ಅನುದಾನ ನೀಡಲಾಗಿದೆ. ಜೋಗದ ಎಲ್ಲಾ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಜನರಿಗೆ ಆಕರ್ಷಣೆ ಇರಬೇಕು. ಜನರು ನಿರಂತರವಾಗಿ ಈ…
ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ಮೇಷ ರಾಶಿ ಇಂದಿನ ದಿನ ಇಂದು ನೀವು ಮಿಶ್ರ ಫಲವನ್ನು ಪಡೆಯುವ ದಿನ. ಅಂತಹ ಪರಿಸ್ಥಿತಿಯಲ್ಲಿ, ಉನ್ನತ ಅಧಿಕಾರಿಯೊಂದಿಗಿನ ಸಂಘರ್ಷವು ಹಾನಿಕಾರಕವಾಗಿರುತ್ತದೆ. ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ವ್ಯವಹಾರದಲ್ಲಿ ಹೊಸ ಸಂಬಂಧಗಳು ಅದೃಷ್ಟವನ್ನು ತರುತ್ತವೆ. ಇಂದು ನಿಮಗೆ ಸಾಮಾಜಿಕ ಗೌರವ ಸಿಗುತ್ತದೆ. ಸ್ನೇಹಿತರೊಂದಿಗೆ ಸುದೀರ್ಘ ಪ್ರವಾಸಕ್ಕೆ ಹೋಗಬಹುದು. ದಂಪತಿಗಳು ಜೀವನದಲ್ಲಿ ಮಾಧುರ್ಯ…
ಬೆಂಗಳೂರು: ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರಗಳನ್ನು ಸರಬರಾಜು ಮಾಡಲಾಗಿರುತ್ತದೆ ಎಂದಿದ್ದಾರೆ. ಇನ್ನೂ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ದೂರುಗಳು ಕೂಡ ಸ್ವೀಕೃತವಾಗಿಲ್ಲ. 2024-25ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಎಲ್ಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗಿದೆ ಅಂತ ತಿಳಿಸಿದೆ. ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್’ ಅಭಿಯಾನದಲ್ಲಿ ಹೊಸ ದಾಖಲೆ, 10 ಮಿಲಿಯನ್ ಪ್ರಮಾಣಪತ್ರ ವಿತರಣೆ : ಜಿತೇಂದ್ರ ಸಿಂಗ್ – Kannada News | India News | Breaking news | Live news | Kannada…
ಬೆಂಗಳೂರು: ಬೆಂಗಳೂರಿನ ವೈಟ್ ಫೀಲ್ಡ್ನಲ್ಲಿರುವ ಮೆಡಿಕವರ್ ಹಾಸ್ಪಿಟಲ್ಸ್ ಕಳೆದ ವಾರ ಪೂರ್ತಿ ಆರೋಗ್ಯ ಜಾಗೃತಿ ಮತ್ತು ಅನಾರೋಗ್ಯ ತಡೆಗಟ್ಟುವ ವಿಚಾರದಲ್ಲಿ ಜಾಗೃತಿ ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ವಿಶ್ವ ಮಧುಮೇಹ ದಿನದ ಅಂಗವಾಗಿ ವಾಕಥಾನ್, ಗರ್ಭಕಂಠದ ಕ್ಯಾನ್ಸರ್ ದಿನಾಚರಣೆ ಹಿನ್ನೆಲೆಯಲ್ಲಿ ಜಾಗೃತಿ ಮತ್ತು ಉಚಿತ ಲಸಿಕೆ ವಿತರಣೆ ಹಾಗೂ ವರ್ಲ್ಡ್ ಪ್ರಿಮೆಚುರ್ ಡೇ ಹಿನ್ನೆಲೆಯಲ್ಲಿ ಮಕ್ಕಳಿಗೆ ಹಲವಾರು ಚಟುವಟಿಕೆಗಳನ್ನು ಆಯೋಜಿಸಿತ್ತು. ವಾರಪೂರ್ತಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೆಡಿಕವರ್ ಆಸ್ಪತ್ರೆಯು, ಸಮುದಾಯ ಆರೋಗ್ಯದ ಬಗ್ಗೆ ತನ್ನ ಸಮರ್ಪಣೆಯನ್ನು ಎತ್ತಿ ತೋರಿಸಿದೆ. ರೋಗದ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಸಮಗ್ರ ಆರೈಕೆಯ ಮಹತ್ವ ಒತ್ತಿಹೇಳಲು ವಿವಿಧ ಗುಂಪುಗಳೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ವಿಶ್ವ ಮಧುಮೇಹ ದಿನದ ಅಂಗವಾಗಿ ವಾಕಥಾನ್ ಆಯೋಜಿಸುವ ಮೂಲಕ ಆ ವಾರವು ಪ್ರಾರಂಭಗೊಂಡಿತ್ತು. ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಆಸಕ್ತರ ಭಾಗವಹಿಸುವಿಕೆ ಕಂಡುಬಂತು. ಗೋಪಾಲನ್ ಕಾಲೇಜ್ ಆಫ್ ಕಾಮರ್ಸ್ನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ಅಲ್ಲಿ ಡಾ.ಎಂ.ರವಿಕುಮಾರ್, ಡಾ.ಎಂ.ರಘುವರ್ಮ ಮತ್ತು ಡಾ.ಕಲ್ಪಜಿತ್…
ಬೆಂಗಳೂರು :- ಸಚಿವ ಸಂಪುಟ ಪುನರ್ ರಚನೆ ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಆಶಯಗಳು, ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಮತ್ತು ಧರ್ಮಗಳಿಗೆ ಕೊಟ್ಟಿರುವ ಹಕ್ಕು ಮತ್ತು ಅವಕಾಶಗಳನ್ನು ಅವರು ಸರಿಯಾಗಿ ನೋಡಿಕೊಂಡಿಲ್ಲ. ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ನಾವು ಮಾತನಾಡುವುದಾಗಲಿ ಅಥವಾ ಕ್ರಮ ಮಾಡುವುದು ಸಾದುವಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಯಾರು ಮಾತನಾಡಬಾರದು ಎಂದು ಹೇಳಿದರು. ಎರಡು ಗ್ಯಾರಂಟಿ ಯೋಜನೆ ನಿಲ್ಲಿಸುವಂತೆ ಶಾಸಕ ಗವಿಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು…
ವಿಜಯಪುರ: ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ ಒಂದೇ ಕಾನೂನು. ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದರು. ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ ನಾನು ಕರ್ನಾಟಕದ ಮಂತ್ರಿಯಾಗಿದ್ದರೂ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ನನ್ನ ತಮ್ಮ ಹಾಗೂ ನನ್ನ ಮಗ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದರು. ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು…
ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ, ಗ್ರಾಮ ಪಂಚಾಯತ್, ಮಹಾನಗರಪಾಲಿಕೆ, ನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣಾ ಅರ್ಜಿಗಳನ್ನು ದಿ: 04-12-2024 ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಸಲ್ಲಿಸಬಹುದು. ಭದ್ರಾವತಿ ತಾಲ್ಲೂಕು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಶಿವಮೊಗ್ಗ ಕಾರ್ಯಕರ್ತೆಯರು 33, ಸಹಾಯಕಿಯರು 118, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65 ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು 09 ಹಾಗೂ ಸಹಾಯಕಿರಯರು 41 ಹುದ್ದೆಗಳ…
ಬೆಂಗಳೂರು : ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ. ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯರೋಪಗಳ ಸ್ಮರಿಸಿದ ನ್ಯಾಯಾದೀಶರು ಅರ್ಜಿದಾರರ ವಾದವನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ…