Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರ ಗೌರವಧನವನ್ನು 7,000ಕ್ಕೆ ಹೆಚ್ಚಳ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾದಂತ ಅವರು ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ ರಾಜ್ಯ ಸರ್ಕಾರ ನೀಡುವ 5,000 ಜೊತೆಗೆ, 2,000 ಸೇರಿಸಿ ಒಟ್ಟು 7,000 ನೀಡಲಾಗುವುದು ಎಂದು ತಿಳಿಸಿದರು. ಇನ್ನೂ ಆಶಾ ಕಾರ್ಯಕರ್ತೆಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ, ಪ್ರೋತ್ಸಾಹಧನವನ್ನು ಪಾರದರ್ಶಕವಾಗಿ ನೀಡಲಾಗುವುದು ಎಂಬುದಾಗಿ ಹೇಳಿದರು. ಒಂದು ವೇಳೆ ಯಾರಿಗೆ ತಮ್ಮ ಚಟುವಟಿಕೆಗಳ ಪ್ರಕಾರ ಪ್ರೋತ್ಸಾಹಧನ ದೊರೆಯುವುದಿಲ್ಲ ಅದನ್ನ 6 ತಿಂಗಳ ಕಾಲಮಿತಿಯೊಳಗೆ ಪರಿಹರಿಸಬೇಕು. ಕಾಲಮಿತಿಯೊಳಗೆ ಪರಿಹಾರವಾಗದಿದ್ದರೆ ಕಾರ್ಯಕರ್ತೆಯರಿಗೆ ನೇರವಾಗಿ ಸಿಗಬೇಕಾದ ಪ್ರೋತ್ಸಶಹಧನ ವರ್ಗಾವಣೆಯಾಗುವಂತೆ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು. ಅಲ್ಲದೇ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಚಟುವಟಿಕೆಗಳಿಗೆ ನೀಡುವ ಟೀಮ್ ಬೇಸ್ಟ್ ಇನ್ಸೆಂಟಿವ್ ನ್ನು ಆಶಾ ನಿಧಿ ತಂತ್ರಾಂಶದ ಮುಖೇನವೇ ನೇರವಾಗಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವುದು. ಆಶಾ ಕಾರ್ಯಕರ್ತೆಯರು ತಾವು ನಿರ್ವಹಿಸಿದ ಚಟುವಟಿಕೆಗಳನ್ನು…
ಬೆಂಗಳೂರು: ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ .ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರು ಎತ್ತಿನಹೊಳೆ ಯೋಜನೆಯಲ್ಲಿ ಇರುವ ತೊಡಕುಗಳನ್ನ ನಿವಾರಿಸಿ ಆದಷ್ಟು ಬೇಗ ಈ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು. ಟಿ.ಬಿ ಜಯಚಂದ್ರ ಅವರು ಮಾತನಾಡು ಶಿರಾ ತಾಲೂಕಿನ 200 ಕೆರೆಗಳಿಗೆ ಎತ್ತಿನ ಹೊಳೆ ಯೋಜನೆ ಮೂಲಕ ನೀರು ಹರಿಸಲು ಯೋಜನೆ ರೂಪಿಸಲಾಗಿದ್ದು ಕಾಮಗಾರಿ ಕುಂಟುತ್ತಾ ಸಾಗಿದೆ ಎಂದು ಗಮನ ಸೆಳೆದರು. “ಈಗಾಗಲೇ ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ ಹಾಗೂ ಮಧುಗಿರಿ ತಾಲೂಕುಗಳ ಅಂತರ್ಜಲ ಅಭಿವೃದ್ಧಿಗೆ 4.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. ಶಿರಾ ತಾಲೂಕಿನ ಕೆರೆಗಳಲ್ಲಿ ಮಳೆ ನೀರು ಶೇಖರಣೆ ಕಷ್ಟವಾಗಿದ್ದು, ಈ ಭಾಗದ ಅಂತರ್ಜಲ ಮಟ್ಟ ಕುಸಿದಿದೆ. ಈ ಭಾಗದ ಜನ ಫ್ಲೋರೈಡ್ ಗಳಿಂದ ಕೂಡಿದ ನೀರನ್ನು ಕುಡಿಯುವಂತಾಗಿದೆ…
ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಮೇಲಿನ ನಿಷೇಧವನ್ನು ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ತಕ್ಷಣದಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಂಡಿದೆ. ಭಾರತೀಯ ಸಂಸ್ಥೆ ಸರಿಯಾದ ಸಮಯದಲ್ಲಿ ಚುನಾವಣೆ ನಡೆಸಲು ವಿಫಲವಾದ ನಂತರ ಯುಡಬ್ಲ್ಯೂಡಬ್ಲ್ಯೂ ಕಳೆದ ವರ್ಷ ಆಗಸ್ಟ್ 23 ರಂದು ಡಬ್ಲ್ಯುಎಫ್ಐ ಅನ್ನು ತಾತ್ಕಾಲಿಕ ಅಮಾನತುಗೊಳಿಸಿತ್ತು. ಒಕ್ಕೂಟದಲ್ಲಿ ಪರಿಸ್ಥಿತಿ ಕನಿಷ್ಠ ಆರು ತಿಂಗಳವರೆಗೆ ಮೇಲುಗೈ ಸಾಧಿಸಿದ್ದರಿಂದ ಸಂಸ್ಥೆಯ ಮೇಲೆ ತಾತ್ಕಾಲಿಕ ಅಮಾನತು ವಿಧಿಸಲು ಸಾಕಷ್ಟು ಆಧಾರಗಳಿವೆ ಎಂದು ಯುಡಬ್ಲ್ಯೂಡಬ್ಲ್ಯೂ ಶಿಸ್ತು ಚೇಂಬರ್ ನಿರ್ಧರಿಸಿತು. https://twitter.com/wrestling/status/1757405017575760148 ಇತರ ವಿಷಯಗಳ ನಡುವೆ ಅಮಾನತು ಪರಿಶೀಲಿಸಲು ಯುಡಬ್ಲ್ಯೂಡಬ್ಲ್ಯೂ ಬ್ಯೂರೋ ಫೆಬ್ರವರಿ 9 ರಂದು ಸಭೆ ಸೇರಿ ಎಲ್ಲಾ ಅಂಶಗಳು ಮತ್ತು ಮಾಹಿತಿಯನ್ನು ಪರಿಗಣಿಸಿ, ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಅಮಾನತು ತೆಗೆದುಹಾಕಲು ನಿರ್ಧರಿಸಿತು. ಡಬ್ಲ್ಯೂಎಫ್ಐ ತನ್ನ ಅಥ್ಲೀಟ್ಗಳ ಆಯೋಗದ ಚುನಾವಣೆಗಳನ್ನು ಮತ್ತೆ ಕರೆಯಬೇಕಾಗಿದೆ. ಈ ಆಯೋಗದ ಅಭ್ಯರ್ಥಿಗಳು ಸಕ್ರಿಯ ಕ್ರೀಡಾಪಟುಗಳಾಗಿರಬೇಕು ಅಥವಾ ನಾಲ್ಕು ವರ್ಷಗಳಿಗಿಂತ ಹೆಚ್ಚು ಕಾಲ ನಿವೃತ್ತರಾಗಬಾರದು. ಮತದಾರರು ಪ್ರತ್ಯೇಕವಾಗಿ ಕ್ರೀಡಾಪಟುಗಳಾಗಿರುತ್ತಾರೆ. ಈ ಚುನಾವಣೆಗಳು ಟ್ರಯಲ್ಸ್ ಅಥವಾ…
ಬೆಂಗಳೂರು: ನವಜಾತ ಶಿಶುಗಳಿಗೆ ತುರ್ತು ಆರೋಗ್ಯ ಸೇವೆ ಮತ್ತು ಶಿಶುಗಳ ಮರಣ ಪ್ರಮಾಣವನ್ನು ಏಕ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ ಆರೋಗ್ಯ ಇಲಾಖೆ ನವಜಾತ ಶಿಶುಗಳ ಆಂಬ್ಯುಲೆನ್ಸ್ ಸೇವೆಯನ್ನು ಪ್ರಾರಂಭಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ನೂತನ 4 ನವಜಾತ ಆಂಬ್ಯುಲೆನ್ಸ್ ಸೇವೆಗಳಿಗೆ ಚಾಲನೆ ನೀಡಿದರು. ಅವಧಿಪೂರ್ವವಾಗಿ ಜನಿಸಿದ ಮಗು ಮತ್ತು ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಈ ಅಂಬ್ಯುಲೆನ್ಸ್ ಗಳು ಸಹಕಾರಿಯಾಗಲಿವೆ. ಸುಧಾರಿತ ಜೀವ ರಕ್ಷಕ ಸೌಲಭ್ಯಗಳನ್ನು ಒಳಗೊಂಡ ವಾಹನದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಕರೆದೊಯ್ಯಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸಮಸ್ಯೆ ಇರುವ ಮತ್ತು ವಿಶೇಷ ಆರೈಕೆಯ ಅಗತ್ಯವಿರುವ ಶಿಶುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ಅಂಬ್ಯುಲೆನ್ಸ್ ಗಳ ಸೇವೆ ಮುಖ್ಯ. ನೂತನ ನವಜಾತ ಶಿಶು ಆಂಬ್ಯುಲೆನ್ಸ್ಗಳು ಸೇವೆಗೆ ಲಭ್ಯವಾಗುವುದರ ಮೂಲಕ ಆರೈಕೆಯಲ್ಲಿನ ಅಂತರವು ಕಡಿಮೆಯಾಗಲಿದೆ. ವೆಂಟಿಲೇಟರ್, ಮೇಲ್ವಿಚಾರಣೆ…
ಬೆಂಗಳೂರು: ರಾಜ್ಯದ ಉರ್ದು ಶಾಲೆಯ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಪ್ರತಿ ಶುಕ್ರವಾರ ಬ್ಯಾಗ್ ರಹಿತ ದಿನ ಆಚರಣೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಡಿಎಸ್ಇಆರ್ ಟಿಯ ನಿರ್ದೇಶಕಿ ವಿ.ಸುಮಂಗಲಾ ಅವರು ನಿರ್ದೇಶನ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಸಂತಸದಾಯಕ ಕಲಿಕೆ ನೀಡುವ ನಿಟ್ಟಿನಲ್ಲಿ ಎಲ್ಲ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರ ಮಕ್ಕಳ ಬ್ಯಾಗ್ ರಹಿತ ದಿನವನ್ನಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ. ಉರ್ದು ಶಾಲೆಗಳು ಶುಕ್ರವಾರ ಅರ್ಧ ದಿನ ಮತ್ತು ಶನಿವಾರ ಪೂರ್ಣ ದಿನ ಶಾಲೆ ನಡೆಯುತ್ತಿರುವ ಕಾರಣ ʼಸಂಭ್ರಮ ಶನಿವಾರʼ ಆಚರಣೆಯನ್ನು ಶುಕ್ರವಾರ ಅಥವಾ ಶನಿವಾರ ಆಚರಿಸುವ ಕುರಿತು ಹಲವು ಶಾಲೆಗಳು ಮಾರ್ಗದರ್ಶನ ನೀಡುವಂತೆ ಕೋರಿದ್ದವು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ʼಶುಕ್ರವಾರ ಬ್ಯಾಗ್ ರಹಿತʼ ದಿನವನ್ನಾಗಿ ಆಚರಿಸಲು ಕ್ರಮವಹಿಸುವಂತೆ ಡಿಎಸ್ಇಆರ್ಟಿ ನಿರ್ದೇಶಕಿ ವಿ.ಸುಮಂಗಲಾ ನಿರ್ದೇಶನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.…
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ ಎಂದರು. ಅನುಮತಿ ಹಿಂಪಡೆದರೂ ನೋಟೀಸ್ ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟೀಸ್ ನೀಡುತ್ತಿದ್ದಾರೆ. ಯಾಕೆ ನೊಟೀಸ್ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು. https://kannadanewsnow.com/kannada/another-good-news-for-the-people-of-the-state-minister-gundu-rao-inaugurates-8-district-mobile-ophthalmology-units/ https://kannadanewsnow.com/kannada/no-permanent-guest-lecturers-state-govt/
ಬೆಂಗಳೂರು: ರಾಜ್ಯದ ಜನತೆಗೆ ಮತ್ತಷ್ಟು ಆರೋಗ್ಯ ಸೇವೆಯನ್ನು ಒದಗಿಸೋ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, 8 ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋ ರೋಗಿಗಳಿಗೆ ಮನೆ ಬಾಗಿಲಲ್ಲೇ ನೇತ್ರ ಚಿಕಿತ್ಸೆ ದೊರೆಯುವಂತೆ ಆಗಲಿದೆ. ಇಂದು ಆರೋಗ್ಯ ಸೇವೆಗಳು ಲಭ್ಯವಿಲ್ಲದ ಗ್ರಾಮೀಣ, ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಕಣ್ಣಿನ ಆರೈಕೆ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿಹೀನತೆಯ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ (NPCB&V) 8 ‘ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ’ ಲೋಕಾರ್ಪಣೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ಫೆಬ್ರವರಿ 13, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಆರೋಗ್ಯ ಸೌಧದ ಮುಂಭಾಗದಲ್ಲಿ ನೆರವೇರಿಸಲಿದ್ದಾರೆ. ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರ ಕಣ್ಣಿನ ಪ್ರಾಥಮಿಕ ತಪಾಸಣೆ ನಡೆಸಲು ಅಗತ್ಯವಾದ ಉಪಕರಣಗಳನ್ನು ಒಳಗೊಂಡಿರುವ ಈ ವಾಹನದಲ್ಲಿ ಓರ್ವ ನೇತ್ರ ತಜ್ಞರು, ಪ್ಯಾರಾ ಮೆಡಿಕಲ್ ನೇತ್ರ…
ಪ್ರತಿಯೊಬ್ಬ ವ್ಯಕ್ತಿಗೂ ದೇವರಲ್ಲಿ ನಂಬಿಕೆ ಇರುತ್ತದೆ. ಆದ್ದರಿಂದಲೇ ನಮಗೆ ಕಷ್ಟ ಬಂದಾಗೆಲ್ಲ ದೇವರನ್ನು ಮೊದಲು ಸ್ಮರಿಸುತ್ತೇವೆ. ಪ್ರತಿ ಹಿಂದೂ ಕುಟುಂಬದಲ್ಲಿ ದೇವರು ಮತ್ತು ದೇವತೆಗಳನ್ನು ಪ್ರತಿದಿನ ಪೂಜಿಸಲಾಗುತ್ತದೆ. ಆದರೆ ಮನೆಯಲ್ಲಿ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಕ್ಕೂ ಹೋಗಬೇಕು. ಪ್ರತಿದಿನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುವುದರಿಂದ ಒಂದಲ್ಲ ಎರಡಲ್ಲ 36 ಪ್ರಯೋಜನಗಳಿವೆ ಮತ್ತು ಈ ಪ್ರಯೋಜನಗಳನ್ನು ಧರ್ಮ ಗ್ರಂಥಗಳ ಆಧಾರದ ಮೇಲೆ ಮತ್ತು ವೈಜ್ಞಾನಿಕ ಆಧಾರದ ಮೇಲೆ ಪ್ರಯೋಜನಕಾರಿ ಎಂದು ಪರಿಗಣಿಸ ಲಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ಬೆಂಗಳೂರು : ನೀರಾವರಿ ಕ್ಷೇತ್ರದ ಅಭಿವೃದ್ಧಿ, ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸುವುದಕ್ಕೆ ಮೊದಲ ಆದ್ಯತೆ. ನಂತರ ರಸ್ತೆ ಅಭಿವೃದ್ದಿಗೆ ಒತ್ತು ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೃಹತ್ ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು. ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರು ಯಗಚಿ ನದಿ ಆಣೆಕಟ್ಟಿನ ಅಭಿವೃದ್ಧಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ; “ಯಗಚಿ ನದಿ ಅಣೆಕಟ್ಟಿನ ಕಾಲುವೆಗಳ ಅಭಿವೃದ್ದಿ ಬಗ್ಗೆ ಅಧಿಕಾರಿಗಳು ವರದಿ ನೀಡಿದ್ದು, ಈಗಾಗಲೇ 5.5 ಕಿ.ಮೀ.ನಷ್ಟು ಮಣ್ಣನ್ನು ತೆಗೆದಿದ್ದು, 1.5 ಕಿ.ಮೀ.ನಷ್ಟು ಕಾಮಗಾರಿ ಭೂಸ್ವಾಧೀನದ ವಿಚಾರವಾಗಿ ಸ್ಥಗಿತಗೊಂಡಿದೆ. ಎತ್ತಿನಹೊಳೆ ಯೋಜನೆಗೆ ಮಹತ್ವ ನೀಡಿದಂತೆ ಯಗಚಿ ಯೋಜನೆಗೂ ಮೊದಲ ಆದ್ಯತೆ ನೀಡುತ್ತೇವೆ” ಎಂದರು. ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್ ಬಾಬು ಅವರ “ಭದ್ರಾ ಮೇಲ್ದಂಡೆ ಯೋಜನೆಯ ಮಂದಗತಿ ಕಾಮಗಾರಿಯ ಬಗ್ಗೆ…
ಬೆಂಗಳೂರು: ಕರ್ನಾಟಕದಲ್ಲಿ ಸ್ವತಃ ಉಪ ಮುಖ್ಯಮಂತ್ರಿ ಸೇರಿ ಹಲವಾರು ಶಾಸಕರು ಅಭಿವೃದ್ಧಿಗೆ ಅನುದಾನ ಇಲ್ಲ ಎಂದಿದ್ದಾರೆ. ಕಾಂಗ್ರೆಸ್ಸಿನ ಘೋಷಣೆಗಳು ಅರ್ಧಂಬರ್ಧ ಆಶ್ವಾಸನೆಗಳು. ಅವನ್ನು ಈಡೇರಿಸಲಾಗದೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಜೆಟ್ 2.98 ಲಕ್ಷ ಕೋಟಿ ಇದ್ದು, ಫೆಬ್ರವರಿ ಮಧ್ಯಭಾಗಕ್ಕೆ ಬಂದರೂ ಶೇ 38 ರಷ್ಟು ಹಣ ವ್ಯಯಿಸದೆ ಬಾಕಿ ಇದೆ. 1.13 ಲಕ್ಷ ಕೋಟಿ ಹಣ ಖರ್ಚಾಗಿಲ್ಲ. ನಮ್ಮ ಕಡೆ ಒಮ್ಮೆ ಬಂದು ಚೆಕ್ ಮಾಡಿ ಎಂದರಲ್ಲದೆ, ನಮ್ಮಲ್ಲಿ ಪ್ರತಿ ತಿಂಗಳೂ ಪ್ರಧಾನಿಯವರು ಹಣ ಖರ್ಚಾದುದರ ಕುರಿತು ಸಭೆ ನಡೆಸುತ್ತಾರೆ. ಇಲ್ಲಿ ಮಾರ್ಚ್ನಲ್ಲಿ ಲೆಕ್ಕ ತೋರಿಸುತ್ತಾರಷ್ಟೇ ಎಂದು ಟೀಕಿಸಿದರು. ಕೇಂದ್ರ ಪ್ರಾಯೋಜಿತ ವಿವಿಧ ಯೋಜನೆಗಳ ಶೇ 34 ರಷ್ಟು (5,727 ಕೋಟಿ ರೂ) ಹಣ ಖರ್ಚಾಗದೆ ಉಳಿದಿದೆ.…