Subscribe to Updates
Get the latest creative news from FooBar about art, design and business.
Author: ವಸಂತ್ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮೈಸೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಸರಾ ವೇದಿಕೆಯಲ್ಲೇ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದಂತ ಅವರು, ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು. ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಎರಡು ಸ್ಲ್ಯಾಬ್ ಜಿಎಸ್ಟಿ ಜಾರಿಗೊಳಿಸಿದ್ದಾರೆ. ಈ ಮೂಲಕ ಜನರಿಗೆ ದೀಪಾವಳಿ ಉಡುಗೊರೆ ನೀಡಿದ್ದಾರೆ. ಅದಕ್ಕಾಗಿ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಮತ್ತು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಬಿಜೆಪಿ ಅಭಿನಂದಿಸುತ್ತದೆ. ಜನತೆಯ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಲು ಈ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಜಗತ್ತಿನ ದೊಡ್ಡಣ್ಣ ಅಮೇರಿಕದ ಅಧ್ಯಕ್ಷ ಟ್ರಂಪ್ ಅವರು ಬೇರೆ ಬೇರೆ ದೇಶಗಳಿಗೆ ತೆರಿಗೆಯನ್ನು ಹೆಚ್ಚಿಸಿರುವುದನ್ನು ನಾವು ನೋಡಿದ್ದೇವೆ. ಇಂದು ಭಾರತಕ್ಕೆ ದೊಡ್ಡ ಸವಾಲನ್ನು ಹಾಕಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರು ಭಾರತ ಯಾವುದಕ್ಕೂ ಜಗ್ಗುವುದಿಲ್ಲ ಮತ್ತು…
ಚನ್ನರಾಯಪಟ್ಟಣ : ನಲವತ್ತು ವರ್ಷಗಳ ಕಾಲ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೆಲ್ಲರೂ ಒಂದೆಡೆ ಸೇರಿ, ತಮಗೆ ಪಾಠ ಕಲಿಸಿದ ಶಿಕ್ಷಕರನ್ನು ಪುಷ್ಪವೃಷ್ಠಿ ಮಾಡಿ ವೇದಿಕೆಗೆ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು. ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ತಗಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ವಿಭಿನ್ನವಾಗಿ ಮೂಡಿ ಬಂದಿದ್ದಲ್ಲದೆ, ಜನಮನ ಸೆಳೆಯಿತು. ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಅವರು, ನಾನೂ ಒಬ್ಬ ಉಪಾಧ್ಯಾಯನ ಮಗನಾಗಿ ಈ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ. ನೀವು ಕೂಡ ನಿಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಗುರುವಿನ ಕೃಪೆ ಮುಖ್ಯವಾಗಿದೆ ಎಂದರು. ಪ್ರಸ್ತುತ ಸಮಾಜದಲ್ಲಿ ಎಲ್ಲ ವರ್ಗಗಳಲ್ಲೂ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಹೀಗಾಗಿ ಪಾಲಕರು ಮಕ್ಕಳನ್ನು ಶಿಕ್ಷಣವಂತರಾಗಿ ಮಾಡಬೇಕೆಂದು ಸಲಹೆ ನೀಡಿದರು. ಹಳೆಯ ವಿದ್ಯಾರ್ಥಿಗಳು ಒಂದೆಡೆ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್.ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11ಕೆ.ವಿ ಯೆಲ್ಲಾರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಎ.ಕೆ.ಅಶ್ರಮ್ ರಸ್ತೆ, ದೇವಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗರ್ಡನ್, ಮೋದಿ ಗರ್ಡನ್, ಸೈನಿಕ ಪ್ರದೇಶ (ಮಿಲಿಟರಿ ಏರಿಯಾ), ವೀರಣ್ಣಪಾಳ್ಯ, ಲುಂಬಿನಿ ಗರ್ಡನ್, ಬಿಡಬ್ಲ್ಯೂಎಸ್ಎಸ್ಬಿ ಮಲಮೂತ್ರ ಶುದ್ಧೀಕರಣ ಘಟಕ (ಸೆವೇಜ್ ಪ್ಲಾಂಟ್), ಮರಿಯಣ್ಣಪಾಳ್ಯ, ಕಾಫಿ ಬರ್ಡ್ ಲೇಔಟ್, ಕೆಂಪಾಪುರ, ದಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕರ್ಪೊರೇಟ್ ಕಚೇರಿ, ಚಾಣಕ್ಯ ಲೇಔಟ್, ನಾಗವಾರಾ, ಎಂ.ಎಸ್.ರಾಮಯ್ಯ ನರ್ತ್ ಸಿಟಿ, ತಾಣಿಸಂದ್ರ…
ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್ ಸಂದರ್ಭದಲ್ಲಿಯೂ ಯಾವ ರಾಜ್ಯಕ್ಕೂ ತೊಂದರೆ ಆದಗಂತೆ ನೋಡಿಕೊಂಡಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಈಗ ಆರ್ಥಿಕ ಸುಭದ್ರತೆಯ ಹಿನ್ನೆಲೆಯಲ್ಲಿ ಬಹಳಷ್ಟು ವಸ್ತುಗಳಿಗೆ ತೆರಿಗೆ ವಿನಾಯತಿ ಮಾಡಿದ್ದಾರೆ. ಶೇ. 90 ರಷ್ಟು ವಸ್ತುಗಳ ಮೇಲಿನ ತೆರಿಗೆಯನ್ನು ಶೇ ೫% ಕ್ಕೆ ಇಳಿಸಿದ್ದಾರೆ. ಕೆಲವು ವಸ್ತುಗಳಿಗೆ ಶೇ 18% ರಷ್ಟು ತೆರಿಗೆ ಮಾಡಿ ಕೇವಲ ಎರಡೇ ಸ್ಲ್ಯಾಬ್ ಮಾಡಿ ತೆರಿಗೆ ಸರಳೀಕರಣ ಮಾಡಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ…
ಬೆಂಗಳೂರು: ರಾಜ್ಯದ ಆರೋಗ್ಯಇ ಇಲಾಖೆಯಲ್ಲಿ ವರ್ಗಾವಣೆಗಳ ಕುರಿತು ರೋಸಿಹೋದ ಇಲಾಖೆಯ ನೌಕರರು, ಸಿಡಿದೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಮೂಲಕ ನೌಕರರ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ. ಮುಖ್ಯವಾಗಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರ ವಿರುದ್ಧವೇ ನೇರ ಆರೋಪ ಮಾಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಕಿಡಿಕಾರಿದ್ದಾರೆ. ಶಿಕ್ಷಣ ಇಲಾಖೆ ಬಳಿಕ ವೃಂದ ಬಲದಲ್ಲಿ ಆರೋಗ್ಯ ಇಲಾಖೆ ದೊಡ್ಡದು. ಇಂತಹ ಆರೋಗ್ಯ ಇಲಾಖೆಯಲ್ಲಿ ದಿನಕ್ಕೊಂದು ವರ್ಗಾವಣೆ ಆದೇಶ ಹೊರಡಿಸುತ್ತಾ, ಸರ್ಕಾರದ ಬಗ್ಗೆ ಕೆಟ್ಟ ಅಭಿಪ್ರಾಯ ಬರುವಂತೆ ಸ್ಥಿತಿ ನಿರ್ಮಾಣ ಮಾಡಲಾಗಿದೆ. ವೈದ್ಯಕೀಯ ಪರಿಣಿತರ ಅಭಿಪ್ರಾಯ ಪಡೆಯದೆ, ವೈದ್ಯಾಧಿಕಾರಿಗಳ ಮತ್ತು ಪ್ಯಾರಾಮೆಡಿಕಲ್ ಸಿಬ್ಬಂದಿಗೆ ಗ್ರೇಟರ್ ಬೆಂಗಳೂರು ಮತ್ತು ಜೋನ್ ಎ ನಿಯಮವನ್ನು ಅಳವಡಿಸಿಕೊಂಡು, ಸಾಮೂಹಿಕ ವರ್ಗಾವಣೆ ನೆಪದಲ್ಲಿ ಕ್ರಿಟಿಕಲ್ ಮತ್ತು ನಾನ್ ಕ್ರಿಟಿಕಲ್ ಎಂಬ ವರ್ಗಾವಣೆ ಸ್ಥಳಗಳನ್ನಾಗಿ ಮಾರ್ಪಡಿಸಿಕೊಂಡು ಮನಸೋ ಇಚ್ಛೆ ವರ್ಗಾಯಿಸಲಾಗಿದೆ ಆಪಾದಿಸಲಾಗಿದೆ. ಕೆಲ ವೈದ್ಯರು ಮತ್ತು ಸಿಬ್ಬಂದಿಯನ್ನು ಸುಮೋಟೊ ಟ್ರಾನ್ಸ್ಫರ್ ನೆಪದಲ್ಲಿ ಏಕಪಕ್ಷೀಯವಾಗಿ ಕೌನ್ಸೆಲಿಂಗ್…
ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿಕ ಲ್ಪನಾ (38) ಅವರು (ಹಾಸನದ ಕಲಾವಿದ ಬಿ.ಎಸ್.ದೇಸಾಯಿ ಅವರ ಸೊಸೆ) ಬೆಂಗಳೂರು ನಂದಿನಿ ಲೇಔಟ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಇಂದು ಪ್ರಜಾವಾಣಿಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ಅವರು ಮಗಳು ಡಿಂಪನಾ(4) ಶಾಲೆಗೆ ಬಿಟ್ಟು ಆಫೀಸ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಲಾರಿ ಡಿಕ್ಕಿ ಹೊಡೆದು ಅಪಘಾತ ನಡೆದಿದೆ. ಗಾಯಗೊಂಡ ಕಲ್ಪನಾ ಅವರನ್ನು ಕೂಡಲೇ ಕಣ್ವ ಸತ್ಯಸಾಯಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದರೂ ಪ್ರಯೋಜನವಾಗಲಿಲ್ಲ. ಪುತ್ರಿ ಶಶಿಕಿರಣ ಅವರ ಪತ್ನಿ ಕಲ್ಪನಾ ನಿಧನರಾಗಿದ್ದಾರೆ. ಅವರನ್ನು ಇಂದು ಸಂಜೆ ಹಾಸನಕ್ಕೆ ಹೋಗಿ ಅಂತ್ಯಕ್ರಿಯೆ ಮಾಡುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ ಎಂದಿದ್ದಾರೆ. ಶಿವಾನಂದ ತಗಡೂರು ಸಂತಾಪ ಕಲ್ಪನಾ ಅವರ ನಿಧನಕ್ಕೆ…
ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಎರಡು ತಿಂಗಳ ಹೆಣ್ಣು ಮಗುವನ್ನು ಹಸುಳೆ ಎಂದು ಕೂಡ ನೋಡದೇ, ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವಂತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ ನಲ್ಲಿ ಎರಡು ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ತಾಯಿ ಕೊಂದಿದ್ದಾರೆ. ಹಸುಗೂಸನ್ನು ಕಾಲುವೆಗೆ ಎಸೆದಂತ ಪಾಪಿ ತಾಯಿ ಪ್ರಿಯಾಂಕಾ ದೇವಿ ಎಂಬುವರು ಆಗಿದ್ದಾರೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ ಕಂಪನಿಯೊಂದರಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಿಯಾಂಕಾ ದೇವಿ ಹಾಗೂ ಸೂರಜ್ ಕುಮಾರ್ ದಂಪತಿಗಳು ಬಿಹಾರ ಮೂಲದವರಾಗಿದ್ದಾರೆ. ಈ ದಂಪತಿಗಳು ಬಳ್ಳಾರಿಯ ಸಂಡೂರಿನ ತೋರಣಗಲ್ ನಲ್ಲಿ ವಾಸವಿದ್ದರು. ಈ ದಂಪತಿಗಳಿಗೆ ಈಗಾಗೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಮೂರನೇ ಮಗುವಾಗಿ ಎರಡು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಇದೇ ಕಾರಣಕ್ಕೆ ಪ್ರಿಯಾಂಕಾ ದೇವಿ ಕಾಲುವೆಗೆ ಎಸೆದು ಹಸುಗೂಸು ಕೊಂದಿದ್ದಾರೆ. ಕಾಲುವೆಗೆ ಎಸೆದು ಬಂದು, ಪೊಲೀಸರ ಮುಂದೆ…
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ವೀಕ್ಷಣೆಗೆ ಹೊರಟಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ 2,300ಕ್ಕೂ ಹೆಚ್ಚು ವಿಶೇಷ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೇ ಪ್ರವಾಸಿಗರಿಗೆ ಸ್ಪೆಷಲ್ ಪ್ಯಾಕೇಜ್ ಕೂಡ ಕಲ್ಪಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ದಸರಾ-2025ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ), ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್) ಹಾಗೂ ಅಂಬಾರಿ ಕ್ಲಬ್ ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಈ ಕೆಳಕಂಡಂತೆ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ…
ಬೆಂಗಳೂರು: ಸೆಪ್ಟೆಂಬರ್.22ರ ನಾಳೆಯಿಂದ ವಿವಾದದ ನಡುವೆಯೂ ಸಾಮಾಜಿ ಹಾಗೂ ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ವಿವಾದಕ್ಕೆ ಕಾರಣವಾಗಿದ್ದಂತ ಕ್ರಿಶ್ಚಿಯನ್ ಗೆ ಮತಾಂತರ ಆದ 33 ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆ ನಡೆಸುವ ನಿರ್ಧಾರದಿಂದ ಕೈ ಬಿಟ್ಟಿದೆ. ಹೀಗಾಗಿ ಮತಾಂತರ ಆಗಿದ್ದರೇ ಆ ಧರ್ಮವೇ ಫಿಕ್ಸ್ ಆದಂತೆ ಆಗಿದೆ. ಇಂದು ಹಿಂದುಳಿದ ವರ್ಗಗಳ ಆಯೋಗವು ಈ ಮಾಹಿತಿ ನೀಡಿದ್ದು, ಗೊಂದಲಕ್ಕೆ ಕಾರಣವಾದಂತ 33 ಜಾತಿಗಳನ್ನು ಸಾರ್ವಜನಿಕರ ಸಲಹೆಯ ಮೇರೆಗೆ ಕೈಬಿಡಲಾಗಿದೆ. ನಾಳೆಯಿಂದ ಆರಂಭಗೊಳ್ಳುವಂತ ಜಾತಿ ಗಣತಿ ಸಮೀಕ್ಷೆಯ ಪಟ್ಟಿಯಲ್ಲಿ ಆ ಜಾತಿಗಳು ಇರೋದಿಲ್ಲ. ಇಚ್ಚೆ ಇರೋರು ಅವುಗಳನ್ನು ಸ್ವಇಚ್ಚೆಯಿಂದ ಬರೆಸಬಹುದು ಎಂದಿದೆ. ಇನ್ನೂ ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯಿಸಲಿದೆ. ಮೂಲ ಜಾತಿ ಅವರಿಗೆ ಅನ್ವಯಿಸೋದಿಲ್ಲ. ಸಮೀಕ್ಷೆಯ ನಂತ್ರ ಯಾವ ಜಾತಿ ಯಾವ ಕೆಟಗರಿಯಲ್ಲಿ ಬರುತ್ತದೆ ಎಂಬುದಾಗಿ ತಜ್ಞರ ತಂಡವು ನಿರ್ಧರಿಸಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/a-shocking-act-in-the-state-a-sinful-mother-who-threw-her-newborn-girl-into-a-drain-to-die/ https://kannadanewsnow.com/kannada/a-masked-woman-who-placed-slippers-on-the-ganapati-idol-in-hassan-has-been-arrested/







