Author: kannadanewsnow09

ಬೆಂಗಳೂರು: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು. “ನಿಮ್ಮ (ಬಿಜೆಪಿ) ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗ, ನಿಮ್ಮ ಪರಿಕಲ್ಪನೆ ಮೇಲೆ ನೀವು ಈ ಹೊಸ ವಿವಿಗಳನ್ನು ಸ್ಥಾಪಿಸಿದ್ದೀರಿ. ನಾವು ಖಾಸಗಿ ವಿವಿ ಮಾಡಬೇಕಾದರೂ ಕೆಲವು ಮಾನದಂಡಗಳನ್ನು ನಿಗದಿ ಮಾಡಿದ್ದೇವೆ. ವಿದ್ಯಾರ್ಥಿಗಳಿಗೂ ವಿವಿಗಳಿಗೂ ಏನು ಸಂಬಂಧ? ವಿದ್ಯಾರ್ಥಿಗಳು ತಾವುಗಳು ವ್ಯಾಸಂಗ ಮಾಡುತ್ತಿರುವ ಅದೇ ಕಾಲೇಜುಗಳಲ್ಲಿ ವ್ಯಾಸಂಗ ಮುಂದುವರಿಸುತ್ತಾರೆ. ಆದರೆ ಮೈಸೂರು ವಿವಿ, ಮಂಡ್ಯ ವಿವಿ, ಚಾಮರಾಜನಗರ ವಿವಿಗಳನ್ನೇ ಉದಾಹರಣೆಯಾಗಿ ತೆಗೆದುಕೊಡು ನೋಡುವುದಾಗರೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಇಂದು ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025ವನ್ನು ಮಂಡಿಸಲಾಯಿತು. ಈ ವಿಧೇಯಕಕ್ಕೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರ ದೊರೆತಿದೆ. ಇಂದು ರಾಜ್ಯ ವಿಧಾನಸಭೆಯಲ್ಲಿ ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ವಿಧೇಯಕವನ್ನು ಮಂಡಿಸಲಾಯಿತು. ವಿಧೇಯಕ ಕುರಿತಾಗಿ ಆಡಳಿತ ವಿಪಕ್ಷಗಳ ನಡುವೆ ಜಟಾವಟಿ ನಡೆಯಿತು. ಇದನ್ನು ರಾಜಕೀಯ ದ್ವೇಷಕ್ಕಾಗಿ ತಂದಿದ್ದೀರಿ ಎಂಬುದಾಗಿ ವಿಪಕ್ಷ ನಾಯಕ ಬಿ.ವೈ ವಿಜಯೇಂದ್ರ ಆರೋಪಿಸಿದರು. ಇದಷ್ಟೇ ಅಲ್ಲದೇ ವಿಧಾನಸಭೆಯಲ್ಲಿ ಅರಮನೆ ಭೂ ನಿಯಂತ್ರ ವಿಧೇಯಕ ಅಂಗೀಕರಿಸುತ್ತಿದ್ದಂತೆ, ವಿಪಕ್ಷಗಳ ನಾಯಕರು ಸರ್ಕಾರಕ್ಕೆ ಚಾಮುಂಡೇಶ್ವರಿ ಶಾಪ ತಟ್ಟುತ್ತದೆ ಎಂಬುದಾಗಿ ಗುಡುಗಿದರು. ಸದನದಲ್ಲಿ ವಿಧೇಯಕ ವಿರುದ್ಧ ಅಭಿಪ್ರಾಯವನ್ನು ವಿಪಕ್ಷ ಬಿಜೆಪಿ ನಾಯಕರು ತೋರಿಸಿದರ ನಡುವೆ ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ…

Read More

ಶಿವಮೊಗ್ಗ: ಜಿಲ್ಲೆಯ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣವನ್ನು ಬೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಕಳ್ಳತನ ಮಾಡಿದಂತ ಕಳ್ಳ, ಕಂದ ಆಭರಣ ಖರೀದಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು, ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಗಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಕೇಸ್ ಗಳನ್ನು ಬೇಧಿಸಿ ಆರೋಪಿ ಪತ್ತೆಗಾಗಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಅವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಅವರು ಸೂಚಿಸಿದ್ದರು ಎಂದರು. ಎಸ್ಪಿ ಸೂಚನೆಯಂತೆ ಸಾಗರ ಗ್ರಾಮಾಂತರ ವೃತ್ತ ನಿರೀಕ್ಷಕ ಸಂತೋಷ್ ಶೆಟ್ಟಿ ಅವರ ನೇತೃತ್ವದಲ್ಲಿ, ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಯುವರಾಜ್.ಕೆ, ಸಿಬ್ಬಂದಿಗಳಾದಂತ ಅಶೋಕ್, ಪರಶುರಾಮ, ಉಮೇಶ್ ಲಮಾಣಿ, ಸಂತೋಷ್ ಕುಮಾರ್, ನೂತನ್, ನಿರಂತನ್, ಸುಬ್ರಹ್ಮಣ್ಯ ಎಸ್, ಭರತ್ ಕುಮಾರ್, ಚಾಲಕ ನರಸಿಂಹಸ್ವಾಮಿ, ಸತೀಶ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು ಎಂದು ಹೇಳಿದರು. ಈ ತಂಡವು 12…

Read More

ಚಿತ್ರದುರ್ಗ : ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಕ್ಷೇತ್ರದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳ ಕಾರ್ಯಕ್ರಮಗಳು, ಯೋಜನೆಗಳು, ಸೌಲಭ್ಯಗಳು ಹಾಗೂ ಆಯಾ ಇಲಾಖೆಗೆ ಸಂಬಂಧಿಸಿದ ಇನ್ನಿತರೆ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ವಸ್ತುಪ್ರದರ್ಶವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ವಸ್ತುಪ್ರದರ್ಶನ ಏರ್ಪಡಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಮಾರ್ಚ್ 09 ರಿಂದ 24 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 16ರಂದು ದೊಡ್ಡ ರಥೋತ್ಸವ ನಡೆಯಲಿದೆ. ಜಾತ್ರೆಗೆ 3 ರಿಂದ 4 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಜಾತ್ರಾ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸಹಕಾರದೊಂದಿಗೆ ಕನಿಷ್ಟ 10 ರಿಂದ 12 ಮಳಿಗೆಗಳಲ್ಲಿ ಕೃಷಿ, ಅರಣ್ಯ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ…

Read More

ಬೆಂಗಳೂರು: ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದ ಕೆಲವು ದಿನಗಳಿಂದ ನಮ್ಮ ಸಂಪುಟದ ಸಚಿವರು, ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ರೈತ, ಶೋಷಿತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಧರ್ಮಗಳ ಗುರುಗಳೊಂದಿಗೆ ಸಭೆ ನಡೆಸಿ, ಪಕ್ಷಾತೀತವಾಗಿ ಸಮಾಜದ ಎಲ್ಲಾ ಜಾತಿ, ಜನಾಂಗ, ವರ್ಗದ ಜನರ ಆಶೋತ್ತರಗಳನ್ನು ಆಲಿಸಿ, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಪ್ರಯತ್ನವನ್ನು ಈ ಬಜೆಟ್ ಮೂಲಕ ಮಾಡಿದ್ದೇನೆ ಎಂದಿದ್ದಾರೆ. ಬಜೆಟ್ ಎಂಬುದು ಬರಿ ಹಾಳೆಗಳ ಮೇಲಿನ ಲೆಕ್ಕವಲ್ಲ, ರಾಜ್ಯದ ಏಳುಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎನ್ನುವುದು ನನ್ನ ನಂಬಿಕೆ. ನಾಡಿನ ಪ್ರತಿಯೊಬ್ಬ ಪ್ರಜೆಯನ್ನು ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿಯನ್ನಾಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ್ ಮೂಲಕ ಮಾಡಿಸುತ್ತಿದ್ದೇನೆ ಎನ್ನುವ ಭರವಸೆ ನನಗಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/CMofKarnataka/status/1897627755178557753?t=wdzmfS33SlyXHOSbkAg1gw&s=19…

Read More

ಮಡಿಕೇರಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‍ನ್ನು ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ,…

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂನ 220/110/11ಕೆ.ವಿ ಅಲ್ಲೀಪುರ ಸ್ವೀಕರಣ ಕೇಂದ್ರದ ಎಫ್-37 ಮತ್ತು ಎಫ್-38 ಕೈಗಾರಿಕಾ ಫೀಡರ್‌ಗಳ ಹೆಚ್ಚುವರಿ ಭಾರವನ್ನು ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮೇಲೆ ವರ್ಗಾಹಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ ಮಾ.08 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 03 ಗಂಟೆಯವರೆಗೆ ವಿವಿಧ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ, ಆಲದಹಳ್ಳಿ, ಕೃಷಿ ಪ್ರದೇಶಗಳು. ಎಫ್-37 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಗ್ರಾಮ, ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ. ಎಫ್-38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ ಗ್ರಾಮ. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಾಳ್ಳಿ, ಹೊನ್ನಳ್ಳಿ ತಾಂಡ…

Read More

ಮುಂಬೈ: 12 ವರ್ಷದ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಘಾತಕ್ಕೊಳಗಾದ ಸಂತ್ರಸ್ತೆ ದಾದರ್ ರೈಲ್ವೆ ನಿಲ್ದಾಣದಲ್ಲಿ ತೊಂದರೆಯಲ್ಲಿ ಅಲೆದಾಡುತ್ತಿರುವುದು ಕಂಡುಬಂದಾಗ ಈ ಅಪರಾಧ ಬೆಳಕಿಗೆ ಬಂದಿದೆ. ಜೋಗೇಶ್ವರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಫೆಬ್ರವರಿ 26 ರಂದು ಈ ಭೀಕರ ಘಟನೆ ನಡೆದಿದೆ. ವರದಿಗಳ ಪ್ರಕಾರ ಆರೋಪಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ರೂಮಿಗೆ ಕರೆದೊಯ್ದಿದ್ದಾನೆ. ಅಲ್ಲಿ ಈಗಾಗಲೇ ಇತರ ನಾಲ್ವರು ಪುರುಷರು ಹಾಜರಿದ್ದರು. ನಂತರ ಐವರು ಪುರುಷರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ದಾದರ್ ರೈಲ್ವೆ ನಿಲ್ದಾಣದ ಬಳಿ ಬಿಟ್ಟು ಸ್ಥಳದಿಂದ ಪರಾರಿಯಾಗುವುದಾಗಿ ತಿಳಿದು ಬಂದಿದೆ. ಮರುದಿನ, ಫೆಬ್ರವರಿ 27 ರಂದು, ದಾದರ್ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 12 ರಲ್ಲಿ ಸಂತ್ರಸ್ತೆಯನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಗುರುತಿಸಿದರು. ಆಕೆಯ ದುಃಖಿತ ಸ್ಥಿತಿಯನ್ನು ಗಮನಿಸಿದ ಅಧಿಕಾರಿಗಳು ಅವಳನ್ನು ಸಂಪರ್ಕಿಸಿದರು. ಅವಳ ವಿಶ್ವಾಸವನ್ನು ಗಳಿಸಿದ ನಂತರ, ಅಪರಾಧದ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದರು. ಬಾಲಕಿಯನ್ನು ತಕ್ಷಣ ಜೋಗೇಶ್ವರಿ…

Read More

ಇದನ್ನು ಯಾರೂ ಕೇಳಿರದ ವಿಚಿತ್ರ ಪರಿಹಾರ ಎಂದು ಕರೆಯಬಹುದು. ಮುರುಗ ದೇವರನ್ನು ಯೋಚಿಸಿ ಈ ಪ್ರಾಯಶ್ಚಿತ್ತವನ್ನು ಮಾಡಲೇಬೇಕೆಂಬ ಯಾವುದೇ ಬಾಧ್ಯತೆಯಿಲ್ಲ. ನಿಮ್ಮ ನೆಚ್ಚಿನ ದೇವತೆ ಯಾವುದು? ನೀವು ಪ್ರತಿದಿನ ಯಾವ ದೇವರನ್ನು ನೆನೆದು ಮನೆಯಲ್ಲಿ ದೀಪ ಹಚ್ಚಿ ಪೂಜಿಸುತ್ತೀರಿ? ಆ ದೇವತೆಯನ್ನು ಸ್ಮರಿಸುತ್ತಾ ನೀವು ಈ ಪರಿಹಾರವನ್ನು ಸಹ ಮಾಡಬಹುದು. ಮುರುಗನ್ ವಿಜಯದ ದೇವರು. ನೀವು ಯಾವುದಾದರೂ ವಿಷಯದಲ್ಲಿ ಯಶಸ್ಸನ್ನು ಸಾಧಿಸಲು ಬಯಸಿದರೆ, ಮುರುಗನ್ ದೇವರನ್ನು ಯೋಚಿಸಿ ಪರಿಹಾರ ಮಾಡಿದರೆ ನಿಮಗೆ ಹೆಚ್ಚುವರಿ ಪ್ರಯೋಜನಗಳು ಸಿಗುತ್ತವೆ. ಜೀವನದಲ್ಲಿ ಎಷ್ಟೇ ದೊಡ್ಡ ಕಷ್ಟ ಬಂದರೂ, ಆ ಕಷ್ಟ ಕೇವಲ ಮೂರು ದಿನಗಳಲ್ಲಿ ನಿಮ್ಮನ್ನು ಬಿಟ್ಟು ಹೋಗುವ ಪವಾಡ ಸಂಭವಿಸುತ್ತದೆ. ಇದು ಸತ್ಯ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.…

Read More

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 13 ಮತ್ತು 14 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿರುವ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು 06520 ಕಲಬುರಗಿಯಿಂದ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ ಅದೇ ದಿನ ರಾತ್ರಿ 8 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲಿನಲ್ಲಿ…

Read More