Author: kannadanewsnow09

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಕರ್ನಾಟಕ ಬಿಜೆಪಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸನ್ಮಾನ್ಯ TrollMinister ಪ್ರಿಯಾಂಕ್ ಖರ್ಗೆ ಅವರೆ, ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌, ಟೆಂಡರ್‌ ಕೆಲಸಕ್ಕಾಗಿ ಬೆಂಗಳೂರಿನಲ್ಲಿ ನಿಮ್ಮ ಆಪ್ತ ರಾಜು ಕಪನೂರ್‌ ಜೊತೆ ನಿಮ್ಮನ್ನು ಭೇಟಿಯಾಗಿದ್ದೇನೆ ಎಂದು ಡೆತ್‌ ನೋಟ್‌ ನಲ್ಲಿ ಬರೆದಿದ್ದಾರೆ ಎಂದಿದೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆಗೆ ನೀವೇ ನೇರ ಹೊಣೆ. ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂಬುದಾಗಿ ಆಗ್ರಹಿಸಿದೆ. https://twitter.com/BJP4Karnataka/status/1872310367306867103 https://kannadanewsnow.com/kannada/good-news-for-property-owners-in-bengaluru-upload-these-five-documents-get-e-khata/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More

ನವದೆಹಲಿ: ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಡಿಸೆಂಬರ್ 26, 2024) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಾಧಾರಣ ಹಾಗೂ ವಿಶೇಷ ಸಾಧನೆಗಳಿಗಾಗಿ ಏಳು ವಿಭಾಗಗಳಲ್ಲಿ ಒಟ್ಟು 17 ಮಕ್ಕಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು.  ಈ ಸಂದರ್ಭದಲ್ಲಿ, ಎಲ್ಲಾ ಪ್ರಶಸ್ತಿ ವಿಜೇತರನ್ನು ರಾಷ್ಟ್ರಪತಿಯವರು ಅಭಿನಂದಿಸಿದರು ಮತ್ತು ಸಾಧಕ ಮಕ್ಕಳ ಕುರಿತಾಗಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ “ಇಡೀ ದೇಶ ಮತ್ತು ಸಮಾಜವು ಇವರ ಬಗ್ಗೆ ಹೆಮ್ಮೆಪಡುತ್ತದೆ, ದೇಶದ ಇತರ ಬಾಲಕರುಗಳಿಗೆ ಇವರು ಮಾದರಿಯಾಗಿದ್ದಾರೆ. ಇವರು ಅಸಾಧಾರಣ ಕೆಲಸವನ್ನು ಮಾಡಿದ್ದಾರೆ, ಅದ್ಭುತ ಸಾಧನೆಗಳನ್ನು ಸಾಧಿಸಿದ್ದಾರೆ, ಅಪಾರ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಮತ್ತು ಅತುಲ್ಯ ಗುಣಗಳನ್ನು ಹೊಂದಿದ್ದಾರೆ” ಎಂದು ಹೇಳಿದರು. “ಮಕ್ಕಳ ಪ್ರತಿಭೆ ಗುರುತಿಸಿ ಅವಕಾಶ ಕಲ್ಪಿಸಿಕೊಡುವುದು ನಮ್ಮ ಪರಂಪರೆಯಲ್ಲಿಯೇ ಬಂದಿದೆ. ಈ ಸಂಪ್ರದಾಯವನ್ನು ಮತ್ತಷ್ಟು ಬಲಪಡಿಸಬೇಕು. 2047ರಲ್ಲಿ ನಾವು ಭಾರತದ ಸ್ವಾತಂತ್ರ್ಯದ ಶತಮಾನೋತ್ಸವವನ್ನು ಆಚರಿಸುತ್ತೇವೆ. ಈ ಪ್ರಶಸ್ತಿ ವಿಜೇತರು ಆ ಕಾಲಘಟ್ಟದಲ್ಲಿ ದೇಶದ ಪ್ರಬುದ್ಧ ನಾಗರಿಕರಾಗುತ್ತಾರೆ. ಅಂತಹ…

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.28 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು.…

Read More

ಧಾರವಾಡ : ಧಾರವಾಡ ತೇಜಸ್ವಿನಗರದ ಅನುದಾನಿತ ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಿಂದಕ್ಕೆ ಪಡೆದು, ಆದೇಶ ಹೋರಡಿಸಿದ್ದಾರೆ. ತೇಜಸ್ವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಾವದೇ ಮಕ್ಕಳು ಪ್ರವೇಶ ಪಡೆಯದಂತೆ ಹಾಗೂ ಈಗಿರುವ ಮಕ್ಕಳು ಬೇರೆ ಕಡೆಗೆ ಪ್ರವೇಶ ಪಡೆಯಲು ಸಂಬಂಧಪಟ್ಟವರಿಗೆ ತಿಳಿಸಲಾಗಿದೆ. ಒಂದು ವೇಳೆ ಈ ಶಾಲೆಯಲ್ಲಿ ಪ್ರವೇಶ ಪಡದಲ್ಲಿ ಅಥವಾ ಮಕ್ಕಳಿಗೆ ಅಲ್ಲಿಯೇ ಶಿಕ್ಷಣ ಮುಂದುವರಿಸಿದಲ್ಲಿ ಇಲಾಖೆಯು ಮುಂದಿನ ಆಗು ಹೋಗುವಗಳಿಗೆ ಜವಾಬ್ದದಾರರಾಗಿರುವುದಿಲ್ಲ. ಸಂಬಂಧಪಟ್ಟ ಪಾಲಕರೇ ಜವಾಬ್ದದಾರರು ಎಂದು ಧಾರವಾಡ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಿಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/applications-invited-from-differently-abled-persons-for-the-post-of-rural-rehabilitation-workers/ https://kannadanewsnow.com/kannada/bjp-mla-munirathna-egg-throwing-case-court-grants-bail-to-three-accused/

Read More

ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‍ಡಬ್ಲ್ಯೂ)ರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಅಥವಾ ಧಾರವಾಡ ತಾಲೂಕಾ ಪಂಚಾಯತಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ) ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/big-relief-for-income-tax-payers-up-to-rs-10-50-lakh-exemption-likely/ https://kannadanewsnow.com/kannada/bjp-mla-munirathna-egg-throwing-case-court-grants-bail-to-three-accused/

Read More

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಅವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ, ವಾಪಾಸ್ಸಾಗುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಹೀಗಾಗಿ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಸಂಬಂಧ ನಂದಿನಿ ಲೇಔಟ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದಂತ ಚಂದ್ರು, ವಿಶ್ವನಾಥ್ ಹಾಗೂ ಕೃಷ್ಣಮೂರ್ತಿ ಎಂಬುವರನ್ನು ಬಂಧಿಸಿದ್ದರು. ಇಂದು ಬಂಧಿತ ಮೂವರು ಆರೋಪಿಗಳು 32ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. https://kannadanewsnow.com/kannada/big-relief-for-income-tax-payers-up-to-rs-10-50-lakh-exemption-likely/ https://kannadanewsnow.com/kannada/former-pm-manmohan-singh-hospitalised-after-health-deteriorates/

Read More

ನವದೆಹಲಿ: ವಾರ್ಷಿಕ 10.5 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ವ್ಯಕ್ತಿಗಳಿಗೆ ತೆರಿಗೆ ಕಡಿತವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇದು ಮಧ್ಯಮ ವರ್ಗದ ತೆರಿಗೆದಾರರಿಗೆ ಗಮನಾರ್ಹ ಪರಿಹಾರವನ್ನು ನೀಡುತ್ತದೆ. ಫೆಬ್ರವರಿ 1 ರಂದು ಮುಂಬರುವ ಬಜೆಟ್ 2025 ರಲ್ಲಿ ಘೋಷಿಸುವ ಸಾಧ್ಯತೆಯಿರುವ ಈ ಕ್ರಮವು ಬಳಕೆಯನ್ನು ಹೆಚ್ಚಿಸುವ ಮತ್ತು ನಿಧಾನಗತಿಯ ಆರ್ಥಿಕತೆಯ ಮಧ್ಯೆ ಹೆಚ್ಚುತ್ತಿರುವ ಜೀವನ ವೆಚ್ಚಗಳ ಬಗ್ಗೆ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ರಾಯಿಟರ್ಸ್ ವರದಿಯಲ್ಲಿ ಉಲ್ಲೇಖಿಸಲಾದ ಸರ್ಕಾರಿ ಮೂಲಗಳು ತಿಳಿಸಿವೆ. ಈ ಕ್ರಮವು ಜಾರಿಗೆ ಬಂದರೆ, ಲಕ್ಷಾಂತರ ಜನರಿಗೆ, ವಿಶೇಷವಾಗಿ ಹೆಚ್ಚಿನ ವೆಚ್ಚವನ್ನು ಎದುರಿಸುತ್ತಿರುವ ನಗರ ತೆರಿಗೆದಾರರಿಗೆ ಪ್ರಯೋಜನವಾಗಬಹುದು. 2020 ರಲ್ಲಿ ಪರಿಚಯಿಸಲಾದ ಪ್ರಸ್ತುತ ಆಡಳಿತದ ಅಡಿಯಲ್ಲಿ, 3 ಲಕ್ಷ ರೂ.ಗಳಿಂದ 10.5 ಲಕ್ಷ ರೂ.ಗಳವರೆಗಿನ ಆದಾಯಕ್ಕೆ 5% ರಿಂದ 20% ದರದಲ್ಲಿ ತೆರಿಗೆ ವಿಧಿಸಲಾಗುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ, 10.5 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವು 30% ತೆರಿಗೆ ದರವನ್ನು ಎದುರಿಸುತ್ತದೆ. ಈಗಿನಂತೆ, ತೆರಿಗೆದಾರರು ಎರಡು ವ್ಯವಸ್ಥೆಗಳ…

Read More

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 92 ವರ್ಷದ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲು ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. https://twitter.com/PTI_News/status/1872298595787096496 https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More

ಧಾರವಾಡ : ಧಾರವಾಡ ತಾಲೂಕಿನ ಸಲಕಿನಕೊಪ್ಪ ಹದ್ದಿನ ಸಣ್ಣ ಸೋಮಾಪುರ ಜಮೀನಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುಮತಿ ಇಲ್ಲದೆ ಮೊರಂ ಗಣಿಗಾರಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹೇಶ ಗೌಡನಾಯ್ಕರ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಇಂದು (ಡಿ.26) ಸಂಜೆ ದಾಳಿ ನಡೆಸಲಾಯಿತು. ಈ ವೇಳೆ ನಾಗೇಶ ಅಣ್ಣಿಗೇರಿ ಹಾಗೂ ಪವನಗೌಡ ಹೊಸೂರ ಎಂಬುವರು ಇಲಾಖೆಯ ಅನುಮತಿ ಇಲ್ಲದೆ ಮೊರಂ ಅಗೆದು ಸಾಗಾಟ ಮಾಡಿರುವುದು ಕಂಡುಬಂದಿತ್ತು. ಮೊರಂ ಸಾಗಿಸಲು ಬಳಸುತ್ತಿದ್ದ 2 ಟಿಪ್ಪರ್ ಹಾಗೂ 3 ಟ್ರ್ಯಾಕ್ಟರ್‍ಗಳನ್ನು ಜಪ್ತಿ ಮಾಡಿ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ. ಮತ್ತು ಈ ಕುರಿತು ಭೂಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. https://kannadanewsnow.com/kannada/contractor-suicide-case-do-you-know-what-minister-priyank-kharge-said/ https://kannadanewsnow.com/kannada/bengaluru-property-owners-bbmp-urges-all-citizens-to-get-e-khata/

Read More

ಬೆಂಗಳೂರು: ಬಿಬಿಎಂಪಿ ಇ-ಖಾತಾ 22 ಲಕ್ಷ ಆಸ್ತಿಗಳು https://bbmpeaasthi.karnataka.gov.in ನಲ್ಲಿ ಲಭ್ಯವಿದೆ. ಬೆಂಗಳೂರಿನ ಆಸ್ತಿ ಮಾಲೀಕರು ತಪ್ಪದೇ ಇ-ಖಾತಾ ಪಡೆಯುವಂತೆ ಬಿಬಿಎಂಪಿ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ನಾಯಕತ್ವದಲ್ಲಿ ಬಿಬಿಎಂಪಿಯು ಎಲ್ಲಾ ಬೆಂಗಳೂರಿಗರಿಗೆ ತಮ್ಮ ಸ್ವತ್ತುಗಳ ಬಿಬಿಎಂಪಿ ಇ-ಖಾತಾಗಳನ್ನು ನೀಡಲು ಸುಮಾರು 22-ಲಕ್ಷ ಕರಡು ಇ-ಖಾತಾಗಳನ್ನು ಆನ್‌ಲೈನ್‌ನಲ್ಲಿ ಇರಿಸಲಾಗಿರುತ್ತದೆ. ಎಲ್ಲಾ ನಾಗರೀಕರು ತಮ್ಮ ಬಿಬಿಎಂಪಿ ಇ-ಖಾತಾ ಪಡೆಯಲು ವಿನಂತಿಸಲಾಗಿದೆ. ಬಿಬಿಎಂಪಿಯ ಇ-ಖಾತಾ ಈಗ ನಾಗರೀಕರ ನಿಯಂತ್ರಣದಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಬಿಬಿಎಂಪಿಯ ಇ-ಖಾತಾವನ್ನು ಪಾಲಿಕೆ ಜಾಲತಾಣ https://bbmpeaasthi.karnataka.gov.in ರಲ್ಲಿ ಪಡೆಯಲು ಪಾಲಿಕೆಯಲ್ಲಿ ಸಂಪರ್ಕರಹಿತ, ಫೇಸ್‌ಲೆಸ್, ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ನಿಮ್ಮ ಆಸ್ತಿ ಇ-ಖಾತಾ ಆನ್‌ಲೈನ್‌ನಲ್ಲಿದೆ ಮತ್ತು ಅದನ್ನು ಸರಾಗವಾಗಿ ಈ ಕೆಳಗಿನಂತೆ ಪಡೆಯಿರಿ: 1. ನಿಮ್ಮ ಕರಡು ಇ-ಖಾತಾವನ್ನು ವಾರ್ಡ್‌ ವಾರು ಪಟ್ಟಿಯಲ್ಲಿ ಹುಡುಕಿ. (ನಿಮ್ಮ ವಾರ್ಡ್‌ ಅನ್ನು ನಿಮ್ಮ ಆಸ್ತಿ ತೆರಿಗೆ ರಶೀದಿಯಿಂದ ತಿಳಿದುಕೊಳ್ಳಿ) 2.…

Read More