Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಸೇರಿದಂತೆ ವಿವಿಧ ಕೋರ್ಸ್ ಗಳ ವ್ಯಾಸಂಗಕ್ಕಾಗಿ ಸಿಇಟಿ 2025ರ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ನೀಡಿದ್ದು, 2025ನೇ ಸಾಲಿನ ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ್ ಮತ್ತು ಫಾರ್ಮ್-ಡಿ, ಕೃಷಿ ವಿಜ್ಞಾನ ಕೋರ್ಸುಗಳು, ವೆಟರಿನರಿ ಹಾಗೂ ಬಿಎಸ್ಸಿ ನರ್ಸಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲು ನಿಗದಿಪಡಿಸಲಾಗಿದೆ ಎಂಬುದಾಗಿ ತಿಳಿಸಿದೆ. ಹೀಗಿದೆ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ವೇಳಾಪಟ್ಟಿ ದಿನಾಂಕ 16-04-2025ರ ಬುಧವಾರ ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ರಾಸಾಯನಶಾಸ್ತ್ರ. ದಿನಾಂಕ 17-04-2025ರ ಗುರುವಾರದಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಗಣಿತ ಶಾಸ್ತ್ರ. ಮಧ್ಯಾಹ್ನ 2.30ರಿಂದ 3.50ರವರೆಗೆ ಜೀವಶಾಸ್ತ್ರ ಪರೀಕ್ಷೆ. ಇನ್ನೂ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ, ವಿಜಯಪುರ ಮತ್ತು ಮಂಗಳೂರು ಜಿಲ್ಲಾ ಕೇಂದ್ರಗಳಲ್ಲಿ…
ಶಿವಮೊಗ್ಗ: ಸಾಗರ ನಗರದ ಗಣಪತಿ ಬ್ಯಾಂಕ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಹಾಗೂ ಉಪಾಧ್ಯಕ್ಷರಾಗಿ ವಕೀಲರು, ನಗರಸಭಾ ಸದಸ್ಯರಾದಂತ ವಿ.ಶಂಕರ್ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಗೆ ಆಡಳಿತ ಮಂಡಳಿ ಸದಸ್ಯರ ನೇಮಕಾತಿಗಾಗಿ ಡಿಸೆಂಬರ್.29, 2024ರಂದು ಮತದಾನ ನಡೆದು, ಮತಏಣಿಕೆಯಲ್ಲಿ 13 ಪದಾಧಿಕಾರಿಗಳು ಆಯ್ಕೆಯಾಗಿದ್ದರು. ಸಾಮಾನ್ಯ ವರ್ಗದಿಂದ ಸ್ಪರ್ಧಿಸಿದ್ದಂತ ನಗರಸಭಾ ಸದಸ್ಯ ಶ್ರೀನಿವಾಸ್ ಮೇಸ್ತ್ರಿ ಅವರು ಅತೀ ಹೆಚ್ಚು 786 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಹಿಂದುಳಿದ ವರ್ಗ-ಎ ಕೆಟಗರಿಯಿಂದ ಸ್ಪರ್ಧಿಸಿದ್ದಂತ ನಗರಸಭಾ ಸದಸ್ಯ ಹಾಗೂ ವಕೀಲ ವಿ.ಶಂಕರ್ (ಮಾಸ್ಟರ್ ಶಂಕರ್) ಅವರು 622 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಇಂದು ಗಣಪತಿ ಬ್ಯಾಂಕ್ ಆಡಳಿತ ಮಂಡಳಿಗೆ ನಡೆದಂತ ಚುನಾವಣೆಯ ಬಳಿಕ, ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ…
ಬೆಂಗಳೂರು: ಎಚ್ಎಂಟಿ ಲಿಮಿಟೆಡ್ನ ಸ್ವಾಧಿನದಲ್ಲಿರುವ ರೂ.14300 ಕೋಟಿ ಮೌಲ್ಯದ ಅರಣ್ಯ ಭೂಮಿ ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು. ಎಚ್ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದು ಮತ್ತು ಸಚಿವ ಸಂಪುಟದ ಪೂರ್ವಾನುಮತಿ ಅಥವಾ ಉನ್ನತ ಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆಯದೇ ಸುಪ್ರಿಂ ಕೋರ್ಟ್ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಸಲ್ಲಿಸಲಾಗಿರುವ ರಾಜ್ಯ ಸರ್ಕಾರದ ಅರ್ಜಿ ಸಲ್ಲಿಕೆಗೆ ಅರಣ್ಯ ಸಚಿವರು ತೆಗೆದುಕೊಂಡಿರುವ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಮಂಜೂರಾತಿ ನೀಡಿದೆ ಎಂದು ತಿಳಿಸಿದರು. 20015ರಲ್ಲಿ ಅಂದಿನ…
ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಈ ಹಿಂದೆ ಮಾನ್ಯ ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು 1997ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸಂಪುಟ ಸಭೆಯ ನಂತರ ಸಂಪುಟದ ನಿರ್ಣಯದ ಕುರಿತು ವಿವರಿಸಿದರು. ಮಾನ್ಯ ಸರ್ವೋಚ್ಛ ನ್ಯಾಯಾಲಯವು ದಿನಾಂಕ: 10.02.2024ರ ತೀರ್ಪಿನಂತೆ ಬೆಂಗಳೂರು ಅರಮನೆ ಮೈದಾನಕ್ಕೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಉಪಯೋಗಿಸಿಕೊಳ್ಳುವುದಕ್ಕೆ ನಿಗಧಿಪಡಿಸಿದ ಟಿ.ಡಿ.ಆರ್ ದರದ ಬಗ್ಗೆ ಸಚಿವ ಸಂಪುಟವು ಇಂದು ಚರ್ಚಿಸಿತು.…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಇಂದು ನಡೆದ ರಾಜ್ಯ ಸಚಿವ ಸಂಪುಟ ತನ್ನ ಒಪ್ಪಿಗೆ ನೀಡಿದ್ದು ಇದಕ್ಕಾಗಿ ವಾರ್ಷಿಕ 8.34 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಅಂದಾಜು 2,514 ಲಕ್ಷ ರೂ ವೆಚ್ಚವಾಗಲಿದೆ. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ, ಜಿಲ್ಲೆ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇ.ಎಸ್.ಐ. ಸೌಲಭ್ಯ ಹೊಂದಿರುವ ಸಿಬ್ಬಂದಿಗಳನ್ನು ಹೊರತುಪಡಿಸಿದಂತೆ ಉಳಿದ ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ”ರಾಜ್ಯದಾದ್ಯಂತ ನರೇಗ ಯೋಜನೆಯನ್ನು…
GOOD NEWS: ರಾಜ್ಯ ಸರ್ಕಾರದಿಂದ ‘VA’ಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಲ್ಯಾಪ್ ಟಾಪ್’ ವಿತರಣೆಗೆ ಸಚಿವ ಸಂಪುಟ ಅನುಮೋದನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅನುದಾನಕ್ಕೆ ಒಪ್ಪಿಗೆಯನ್ನು ಸೂಚಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಕಂದಾಯ ಇಲಾಖೆಯ ಡಿಜಿ ಕಂದಾಯ ಅನುದಾನದಲ್ಲಿ ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ( ವಿಎ) ಲ್ಯಾಪ್ಟಾಪ್ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. 20 ಕೋಟಿ ವೆಚ್ಚದಲ್ಲಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆ ಅಡಿಯಲ್ಲಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಸ್ಕ್ಯಾನಿಂಗ್ ಮಾಡಿಸುವವರಿಗೆ ಪಿಎಚ್ ಎಚ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿದೆ. ಇತರರಿಗೆ ಶೇಕಡಾ 70% ಶುಲ್ಕ ವಿಧಿಸಲು ನಿರ್ಧಾರಿಸಲಾಗಿದೆ. ಇದಕ್ಕೆ ಸಂಪುಟದ ಒಪ್ಪಿಗೆ ನೀಡಿದೆ ಎಂದರು. https://kannadanewsnow.com/kannada/saif-ali-khan-stabbing-case-first-cctv-footage-of-accused-released/ https://kannadanewsnow.com/kannada/neet-ug-2025-exam-to-be-held-in-pen-paper-mode-nta-information/
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಅವರ ಮನೆಯಲ್ಲಿ ಇರಿದು ಪರಾರಿಯಾದಂತ ದಾಳಿಕೋರನ ಮೊದಲ ಫೋಟೋ ಹೊರಬಂದಿದೆ. ಅಪರಾಧ ಮಾಡಿದ ನಂತರ ಮೆಟ್ಟಿಲುಗಳಿಂದ ಇಳಿಯುವಾಗ ಶಂಕಿತನು ಸಿಸಿಟಿವಿ ಕ್ಯಾಮೆರಾವನ್ನು ನೋಡುತ್ತಿರುವುದನ್ನು ಕಾಣಬಹುದು. ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ 12 ನೇ ಮಹಡಿಯ ಅಪಾರ್ಟ್ಮೆಂಟ್ನಲ್ಲಿ ಒಳನುಗ್ಗುವವನು ಪದೇ ಪದೇ ಚಾಕುವಿನಿಂದ ಇರಿದಿದ್ದಾನೆ. https://twitter.com/PTI_News/status/1879858270510399860 ತುರ್ತು ಶಸ್ತ್ರಚಿಕಿತ್ಸೆಯ ನಂತರ 54 ವರ್ಷದ ಖಾನ್ ಅಪಾಯದಿಂದ ಪಾರಾಗಿದ್ದಾರೆ ಎಂದು ಲೀಲಾವತಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸದ್ಗುರು ಶರಣ್” ಕಟ್ಟಡದಲ್ಲಿರುವ ಅವರ ಅಪಾರ್ಟ್ಮೆಂಟ್ನಲ್ಲಿ ಮುಂಜಾನೆ 2.30 ರ ಸುಮಾರಿಗೆ ನಡೆದ ಘಟನೆಯ ನಂತರ ಅವರನ್ನು ಕರೆದೊಯ್ಯಲಾಯಿತು. ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಆರೋಪಿಯನ್ನು ತೋರಿಸುತ್ತವೆ. https://kannadanewsnow.com/kannada/neet-ug-2025-exam-to-be-held-in-pen-paper-mode-nta-information/ https://kannadanewsnow.com/kannada/gdp-growth-rate-rises-to-6-4-in-2024-25-ficci-economic-outlook-survey/
ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ (ಯುಜಿ) -2025 ಅನ್ನು ( NEET UG-2025 ) ಪೆನ್ ಮತ್ತು ಪೇಪರ್ ಮೋಡ್ (ಒಎಂಆರ್ ಆಧಾರಿತ) ನಲ್ಲಿ ಒಂದೇ ದಿನ ಮತ್ತು ಒಂದೇ ಪಾಳಿಯಲ್ಲಿ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ಪ್ರಕಟಿಸಿದೆ. ಈ ನಿರ್ಧಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಹೊಂದಿಕೆಯಾಗುತ್ತದೆ. ಈ ಕಾಯ್ದೆಯಡಿ ಬರುವ ಎಲ್ಲಾ ವೈದ್ಯಕೀಯ ಸಂಸ್ಥೆಗಳಲ್ಲಿ ಭಾರತೀಯ ವೈದ್ಯ ಪದ್ಧತಿಯ ಬಿಎಎಂಎಸ್, ಬಿಯುಎಂಎಸ್ ಮತ್ತು ಬಿಎಸ್ಎಂಎಸ್ ಕೋರ್ಸ್ಗಳು ಸೇರಿದಂತೆ ಪ್ರತಿಯೊಂದು ವಿಭಾಗಗಳಲ್ಲಿ ಪದವಿಪೂರ್ವ ಕೋರ್ಸ್ಗಳ ಪ್ರವೇಶಕ್ಕಾಗಿ ಏಕರೂಪದ ನೀಟ್ (ಯುಜಿ) ಇರುತ್ತದೆ ಎಂದು ಎನ್ಟಿಎ ಘೋಷಿಸಿದೆ. ಇದಲ್ಲದೆ, 2025 ನೇ ಸಾಲಿಗೆ ಸಶಸ್ತ್ರ ಪಡೆಗಳ ವೈದ್ಯಕೀಯ ಸೇವಾ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತಿರುವ B.Sc ನರ್ಸಿಂಗ್ ಕೋರ್ಸ್ಗಳಿಗೆ ಪ್ರವೇಶ ಬಯಸುವ ಎಂಎನ್ಎಸ್ (ಮಿಲಿಟರಿ ನರ್ಸಿಂಗ್ ಸರ್ವಿಸ್) ಆಕಾಂಕ್ಷಿಗಳು ನೀಟ್ (ಯುಜಿ) ಗೆ ಅರ್ಹತೆ ಪಡೆಯಬೇಕಾಗುತ್ತದೆ. ನೀಟ್ (ಯುಜಿ)…
ನವದೆಹಲಿ: ಮುಂಬರುವ ಭಾರತ ಮತ್ತು ಇಂಗ್ಲೆಂಡ್ ಸೀಮಿತ ಓವರ್ಗಳ ಸರಣಿಗೆ ಸೌರಾಷ್ಟ್ರದ ಮಾಜಿ ದಿಗ್ಗಜ ಸಿತಾಂಶು ಕೋಟಕ್ ( former Saurashtra stalwart Sitanshu Kotak ) ಅವರನ್ನು ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿ ನೇಮಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (Board of Control for Cricket in India – BCCI) ನಿರ್ಧರಿಸಿದೆ. ಭಾರತ ತಂಡವು ತವರಿನಲ್ಲಿ ಐದು ಟಿ 20 ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ನಂತರ ಭಾರತದ ಮೊದಲ ಕಾರ್ಯಯೋಜನೆ ಜನವರಿ 22 ರಂದು ಈಡನ್ ಗಾರ್ಡನ್ಸ್ನಲ್ಲಿ ಭಾರತ ಟಿ 20 ಐ ಪಂದ್ಯವನ್ನು ಆಡುವುದರೊಂದಿಗೆ ಪ್ರಾರಂಭವಾಗುತ್ತದೆ. ಭಾರತೀಯ ತಂಡವು ಜನವರಿ 18 ರಂದು ಕೋಲ್ಕತ್ತಾದಲ್ಲಿ ವರದಿ ಮಾಡಲಿದ್ದು, ಪೂರ್ವ ಮಹಾನಗರದಲ್ಲಿ ಮೂರು ದಿನಗಳ ಶಿಬಿರ ನಡೆಯಲಿದೆ ಎಂದು ತಿಳಿದುಬಂದಿದೆ. “ಕೋಟಕ್ ಅವರು ಬ್ಯಾಟಿಂಗ್ ಕೋಚ್ ಆಗಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಭಾರತ ತಂಡವು ಕೋಲ್ಕತ್ತಾದಲ್ಲಿ ಮೂರು ದಿನಗಳ…
ನವದೆಹಲಿ: ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ಪ್ಯಾಡ್ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ತಿಳಿಸಿದ್ದಾರೆ. ಇದನ್ನು 3,985 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. https://twitter.com/PTI_News/status/1879842470105653344 ಈ ಯೋಜನೆಯು ಇಸ್ರೋದ ‘ಮುಂದಿನ ಪೀಳಿಗೆಯ ಉಡಾವಣಾ ವಾಹನಗಳಿಗಾಗಿ’ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ಉಡಾವಣಾ ಮೂಲಸೌಕರ್ಯವನ್ನು ಸ್ಥಾಪಿಸಲು ಮತ್ತು ಶ್ರೀಹರಿಕೋಟಾದಲ್ಲಿ ಎರಡನೇ ಉಡಾವಣಾ ಪ್ಯಾಡ್ಗೆ ಸ್ಟ್ಯಾಂಡ್ಬೈ ಉಡಾವಣಾ ಪ್ಯಾಡ್ ಆಗಿ ಬೆಂಬಲಿಸಲು ಉದ್ದೇಶಿಸಿದೆ. ಇದು ಭವಿಷ್ಯದ ಭಾರತೀಯ ಮಾನವ ಬಾಹ್ಯಾಕಾಶ ಯಾನ ಕಾರ್ಯಾಚರಣೆಗಳಿಗೆ ಉಡಾವಣಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಮೂರನೇ ಉಡಾವಣಾ ಪ್ಯಾಡ್ ನ ಪ್ರಯೋಜನಗಳೇನು? ಮೂರನೇ ಉಡಾವಣಾ ಪ್ಯಾಡ್ ಅನ್ನು ಸಾರ್ವತ್ರಿಕ ಮತ್ತು ಹೊಂದಿಕೊಳ್ಳುವ ಸಂರಚನೆಯನ್ನು ಹೊಂದಲು ವಿನ್ಯಾಸಗೊಳಿಸಲಾಗುವುದು. ಲಾಂಚ್ಪ್ಯಾಡ್ ಎನ್ಜಿಎಲ್ವಿ ಮಾತ್ರವಲ್ಲದೆ ಸೆಮಿಕ್ರಿಯೋಜೆನಿಕ್ ಹಂತವನ್ನು ಹೊಂದಿರುವ ಎಲ್ವಿಎಂ 3 ವಾಹನಗಳನ್ನು ಬೆಂಬಲಿಸುತ್ತದೆ ಮತ್ತು ಎನ್ಜಿಎಲ್ವಿಯ ಸಂರಚನೆಗಳನ್ನು ಹೆಚ್ಚಿಸುತ್ತದೆ ಎಂದು ಅಧಿಕೃತ…