Author: kannadanewsnow09

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್ ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು. ಮೈಸೂರು ಲ್ಯಾಂಪ್ಸ್ ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್…

Read More

ಬೆಂಗಳೂರು: ಇಂದು ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಮೋದಿಯವರೇ ಮಾತುಕೊಟ್ಟ 20 ಕೋಟಿ ಉದ್ಯೋಗ ಎಲ್ಲಿ ಎಂಬುದಾಗಿ ಸರಣಿ ಎಕ್ಸ್ ಮಾಡಿ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರೇ, ನಿಮ್ಮದೇ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “ 2014-15 ಮತ್ತು 2021 -22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ…

Read More

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿದೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಚುರುಕುಗೊಳಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಮೂಲಕ ಮರು ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರು ಶುರು ಮಾಡಿದ್ದಾರೆ. ಇನ್ನೂ ಸಿಬಿಐಯಿಂದ ಲೋಕಾಯುಕ್ತ ಪೊಲೀಸರಿಗೆ ಈವರೆಗೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಯಾವುದೇ ದಾಖಲೆಗಳನ್ನು ಸಲ್ಲಿಸಲಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಮರು ತನಿಖೆ ನಡೆಸೋದಕ್ಕೆ ಈಗ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. https://kannadanewsnow.com/kannada/major-surgery-from-state-government-to-administrative-machinery-11-dysp-51-pi-transferred/ https://kannadanewsnow.com/kannada/kolar-congress-workers-clash-with-party-workers-over-allegations-of-discrimination-by-not-putting-up-pictures-of-leaders/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ ವಿಭಾಗ, ಕಲಬುರ್ಗಿ ನಗರ ಇಲ್ಲಿಗೆ ಮಾಡಲಾದ ಆದೇಶವನ್ನು ರದ್ದುಪಡಿಸಿ, ಸಿಐಡಿಯಲ್ಲೇ ಮುಂದುವರೆಸಲಾಗಿದೆ. ಮೊಹಮ್ಮದ್ ಶರೀಫ್ ರಾವುತರ್ ಎ ಅವರನ್ನು ಕಲಬುರ್ಗಿಯ ಅಳಂದ ಉಪ ವಿಭಾಗದ ಡಿವೈಎಸ್ಪಿಯಾಗಿ ವರ್ಗಾವಣೆ ಮಾಡಿದ್ದರೇ, ಗೋಪಿ ಬಿಆರ್ ಅವರನ್ನು ಸಿಐಡಿಗೆ ವರ್ಗಾವಣೆ ಮಾಡಿದೆ. ಹೀಗಿದೆ 11 ಡಿವೈಎಸ್ಪಿಗಳ ವರ್ಗಾವಣೆ ಪಟ್ಟಿ ಹೀಗಿದೆ 51 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಪಟ್ಟಿ https://kannadanewsnow.com/kannada/kolar-congress-workers-clash-with-party-workers-over-allegations-of-discrimination-by-not-putting-up-pictures-of-leaders/ https://kannadanewsnow.com/kannada/breaking-cm-instructs-all-government-offices-to-install-basavannas-portrait-on-feb-17/

Read More

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಕಾಂಗ್ರೆಸ್ ತೊರೆದು ಮಂಗಳವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕಿ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ತೊರೆದ ಮೂರನೇ ಪ್ರಮುಖ ರಾಜಕೀಯ ವ್ಯಕ್ತಿ ಚವಾಣ್. https://twitter.com/ANI/status/1757311531455222012 ಇದಕ್ಕೂ ಮುನ್ನ ಬಿಜೆಪಿ ಸೇರುವ ನಿರ್ಧಾರದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, “ಇಂದು ಇದು ನನ್ನ ರಾಜಕೀಯ ವೃತ್ತಿಜೀವನದ ಹೊಸ ಆರಂಭ. ನಾನು ಇಂದು ಅವರ ಕಚೇರಿಯಲ್ಲಿ ಔಪಚಾರಿಕವಾಗಿ ಬಿಜೆಪಿಗೆ ಸೇರುತ್ತಿದ್ದೇನೆ… ಮಹಾರಾಷ್ಟ್ರದ ರಚನಾತ್ಮಕ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು. ಅಶೋಕ್ ಚವಾಣ್ ಅವರಿಗೆ ಬಿಜೆಪಿ ರಾಜ್ಯಸಭಾ ಸ್ಥಾನವನ್ನು ನೀಡುತ್ತದೆ ಎಂಬದಾಗಿ ಹೇಳಲಾಗುತ್ತಿದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಬಿಜೆಪಿ ತನ್ನ ರಾಜ್ಯಸಭಾ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ನಂಬಲಾಗಿದೆ. ರಾಜ್ಯಸಭಾ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ-2024ರ ಅರ್ಜಿ ತಿದ್ದುಪಡಿಗೆ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸಿಇಟಿ-24ಕ್ಕೆ ಸಲ್ಲಿಸಿದ ಅರ್ಜಿಗಳ ತಿದ್ದುಪಡಿ ಸಂಬಂಧ ಕೆಲ ಮಾದರಿ ಹಾಗೂ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರು ಫೆಬ್ರವರಿ 10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ. ರಾಷ್ಟ್ರೀಯತೆ, ವಿಳಾಸ, ಬ್ಯಾಂಕ್‌ ಮಾಹಿತಿ, ಮೀಸಲಾತಿ, ಆರ್‌.ಡಿ.ಸಂಖ್ಯೆ, ಅಪ್‌ಲೋಡ್‌ ಮಾಡಿರುವ ದಾಖಲಾತಿಗಳು, ಆಯ್ಕೆ ಮಾಡಿರುವ ಕೋರ್ಸ್‌ಗಳು, ಪರೀಕ್ಷಾ ಕೇಂದ್ರಗಳು, ಪಿಯುಸಿ ರಿಜಿಸ್ಟರ್‌ ಸಂಖ್ಯೆಯನ್ನು ತಿದ್ದುಪಡಿ ಮಾಡಬಹುದಾಗಿದೆ. ಇನ್ನೂ ವಿಶೇಷ ಸೂಚನೆಯಾಗಿ ಹೆಚ್ಚುವರಿ ಸ್ಯಾಟ್ಸ್ ಸಂಖ್ಯೆ ನಮೂದಿಸಬಹುದು. ಆದರೇ ಹಾಲಿ ಸ್ಯಾಟ್ಸ್ ಬದಲಾಯಿಸಲು ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು. ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅದರಲ್ಲಿ ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು. ಮನುಧರ್ಮಶಾಸ್ತ್ರವು ಶ್ರೇಣೀಕೃತ ಸಮಾಜವನ್ನು ನಿರ್ಮಾಣ ಮಾಡಿ ಅಸಮಾನತೆಯನ್ನು ಸೃಷ್ಟಿ ಮಾಡಿತ್ತು. ಹುಟ್ಟಿನ ಆಧಾರದ ಮೇಲೆ ಮೇಲು-ಕೀಳು ಎಂದು ಸಮುದಾಯಗಳನ್ನು ಶಾಶ್ವತವಾಗಿ ವಿಭಜಿಸಿ ಕತ್ತಲ ಕೂಪಕ್ಕೆ ತಳ್ಳಲಾಗಿತ್ತು. ದುಡಿಯುವ ವರ್ಗಗಳು ಕ್ರಿಯಾಶೀಲ ಸಮಾಜಗಳ ಸೃಜನಶೀಲ ಶಕ್ತಿಗಳಾಗಿರುತ್ತವೆ. ಆದರೆ ಜಾತಿಯ ಹೆಸರಿನಲ್ಲಿ ಈ ಸಮುದಾಯಗಳ ಚೈತನ್ಯವನ್ನ ಕಿತ್ತುಕೊಳ್ಳಲಾಗಿತ್ತು ಎಂದಿದ್ದಾರೆ. ಇಂತಹ ಉಸಿರುಗಟ್ಟುವ ನಿಯಮಗಳ ವಿರುದ್ಧ ವಚನ ಚಳುವಳಿಯು ಅತ್ಯಂತ ಪ್ರಬುದ್ಧವಾದ ಹೋರಾಟವನ್ನು ರೂಪಿಸಿತ್ತು, 12ನೇ ಶತಮಾನದಲ್ಲಿ ದೇಶದ ಅನೇಕ ಭಾಗಗಳಿಂದ ಬಂದ ಚಿಂತಕರು, ಹೋರಾಟಗಾರರು ಒಟ್ಟುಗೂಡಿ ಸಮಾನತೆಯ ಚಳುವಳಿಯನ್ನು…

Read More

ಕೇರಳ: ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಕೊಡದೇ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಹುನ್ನಾರ ನಡೆಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ವಯನಾಡು ಕ್ಷೇತ್ರದ ಕಲ್ಪೆಟ್ಟಾದಲ್ಲಿ ಕಾಂಗ್ರೆಸ್ ಪರ ದಿನೇಶ್ ಗುಂಡೂರಾವ್ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಗ್ಯಾರಂಟಿ ಯೋಜನೆಗಳು ಭ್ರಷ್ಟರಹಿತವಾಗಿ ನೇರವಾಗಿ ಜನರಿಗೆ ಆರ್ಥಿಕ ನೆರವು ನೀಡುತ್ತಿರುವುದನ್ನ ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದರು. ಬಡಜನರಿಗೆ ಆರ್ಥಿಕವಾಗಿ ನೆರವು ಒದಗಿಸುತ್ತಿರುವ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ತನ್ನ ತೆರಿಗೆ ಪಾಲನ್ನ ನೀಡದೆ ಹುನ್ನಾರ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಪರ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವಯನಾಡಿನ ಕಲ್ಪೆಟ್ಟಾದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಪರ ಮತಯಾಚಿಸಿದ ಸಚಿವ ದಿನೇಶ್ ಗುಂಡೂರಾವ್, ಕೇರಳ…

Read More

ಬೆಂಗಳೂರು: ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಇಂದು ಒಂದೇ ದಿನ ಬರೋಬ್ಬರಿ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತಂತ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು ಮಂಗನ ಕಾಯಿಲೆ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 13 ಜನರಿಗೆ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದೆ. ಶಿವಮೊಗ್ಗದಲ್ಲಿ 42 ಮಂದಿಯನ್ನು ಕಳೆದ 24 ಗಂಟೆಯಲ್ಲಿ ಮಂಗನ ಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 6 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಚಿಕ್ಕಮಗಳೂರಲ್ಲಿ 21 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು 7 ಮಂದಿಗೆ ದೃಢಪಟ್ಟಿದೆ ಎಂದು ತಿಳಿಸಿದೆ. ಇದುವರೆಗೆ 3220 ಮಂದಿಯನ್ನು ಮಂಗನ ಖಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, 89 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಲ್ಲಿ 63 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ 24 ಸಕ್ರೀಯ ಪ್ರಕರಣಗಳು ಇದ್ದಾವೆ ಎಂದು ತಿಳಿಸಿದೆ. https://kannadanewsnow.com/kannada/class-10-student-commits-suicide-at-sdm-college-in-dharmasthala/ https://kannadanewsnow.com/kannada/this-is-a-guarantee-pro-people-government-dinesh-gooligowda/

Read More