Subscribe to Updates
Get the latest creative news from FooBar about art, design and business.
Author: kannadanewsnow09
ಚಿತ್ರದುರ್ಗ: 2023-24 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ನೊಂದಣಿ ಮಾಡಿಕೊಂಡ ರೈತರ ತಿರಸ್ಕೃತ ಪಟ್ಟಿ ಪ್ರಕಟ ಮಾಡಲಾಗಿದೆ. ರೈತರ ಪ್ರಸ್ತಾವನೆಗಳನ್ನು ಬೆಳೆ ಸಮಿಕ್ಷೆ ದತ್ತಾಂಶಗಳೊಂದಿಗೆ ಹೋಲಿಕೆ ಮಾಡಿದಾಗ ಮುಂಗಾರು ಹಂಗಾಮಿನಲ್ಲಿ 478 ಹಾಗೂ ಹಿಂಗಾರು ಹಂಗಾಮಿನಲ್ಲಿ 31 ಸೇರಿ ಒಟ್ಟು 509 ರೈತರ ಬೆಳೆ ವಿಮೆ ಪ್ರಸ್ತಾವನೆಗಳು ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡಿವೆ. ಈ ಪಟ್ಟಿಗಳನ್ನು ಎಲ್ಲ ರೈತರ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಕಚೇರಿ ನೋಟಿಸ್ ಬೋರ್ಡ್ಗಳಲ್ಲಿ ಪ್ರಕಟಿಸಲಾಗಿದೆ. ರೈತರು ಬೆಳೆ ನಮೂದಿಸಿರುವ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದ ರಶೀದಿ, ನೊಂದಾಯಿತ ಬೆಳೆಯನ್ನು ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ್ದಲ್ಲಿ ಸಂಬAದಪಟ್ಟ ದಾಖಲೆ ಹಾಗೂ ಆಧಾರ್ ಕಾರ್ಡುಗಳೊಂದಿಗೆ ಮಾರ್ಚ್ 4 ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದು. ಇಲ್ಲವಾದಲ್ಲಿ ಬೆಳೆ ವಿಮೆ ಪ್ರಸ್ತಾವನೆಗಳನ್ನು ತಿರಸ್ಕೃತಗೊಳಿಸಲಾಗುವುದು ಎಂದು ಚಿತ್ರದುರ್ಗ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ.ಹೆಚ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bescom-urges-farmers-not-to-use-single-face-at-night/ https://kannadanewsnow.com/kannada/two-killed-three-injured-in-another-road-accident-in-bengaluru/
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ಯಾಂಕರ್ ನಡುವೆ ನಡೆದಂತ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ದುರ್ಗಾ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಗೌರಿ ಬಿದನೂರಿನಿಂದ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದಂತ ಕಾರು ಮುಂದೆ ಹೋಗುತ್ತಿದ್ದ ವಾಹನ ಓವರ್ ಟೇಕ್ ಮಾಡುವ ಯತ್ನದಲ್ಲಿ ಎದುರಿನಿಂದ ಬರುತ್ತಿದ್ದಂತ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದಂತ ವಸಂತ್(30) ಹಾಗೂ ಚೇತನ್(29) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bescom-urges-farmers-not-to-use-single-face-at-night/ https://kannadanewsnow.com/kannada/breaking-gold-prices-rise-to-rs-550-per-10-grams-today-rise-gold-price-hike/
ಚಿತ್ರದುರ್ಗ: ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್ಗಳನ್ನು ಬಳಸದಂತೆ ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಮನವಿ ಮಾಡಿದ್ದಾರೆ. ರೈತರು ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ಅನ್ನು ಕೃಷಿ ಪಂಪ್ಸೆಟ್ಗಳಿಗೆ ಬಳಸುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಹೀಗಾಗಿ ರೈತರು ಸಂಜೆ 06 ರಿಂದ ಬೆಳಿಗ್ಗೆ 06 ರವರೆಗಿನ ಅವಧಿಯಲ್ಲಿ ಸಿಂಗಲ್ ಫೇಸ್ ಕೃಷಿ ಪಂಪ್ಗಳನ್ನು ಬಳಸಬಾರದು. ರೈತರ ಪಂಪ್ ಸೆಟ್ಗಳಿಗೆ ಹಗಲಿನ ವೇಳೆ 04 ಗಂಟೆ ಮತ್ತು ರಾತ್ರಿ ವೇಳೆ 03 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶದಲ್ಲಿನ ಮನೆಗಳಿಗೆ ನಿರಂತರ ಜ್ಯೋತಿ ಫೀಡರ್ ಮೂಲಕ ದಿನದ 24 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇದನ್ನು ಹೊರತುಪಡಿಸಿ, ನೀರಾವರಿ ಫೀಡರ್ಗಳ ಮೂಲಕ ತೋಟದ ಮನೆಗಳಿಗೆ ಗೃಹಪಯೋಗಿ ಬಳಕೆಗೆ ಮಾತ್ರ ಹಾಗೂ ಅಲ್ಲಿ ವಾಸಿಸುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಿಂಗಲ್ ಫೇಸ್ ವಿದ್ಯುತ್…
ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಭೀಕರ ಕಾಡ್ಗಿಚ್ಚು ಉಂಟಾಗಿದೆ. ಗಾಳಿಯಿಂದಾಗಿ ಬೆಂಕಿಯ ಕೆನ್ನಾಲಿಗೆ ಶರವೇಗದಲ್ಲಿ ಕಾಡಿಗೆ ಹರಡುತ್ತಿದ್ದು, ಅಪಾರ ಸಸ್ಯ ಸಂಪತ್ತು ಧಗ ಧಗಿಸಿ ಹೊತ್ತಿ ಉರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿ ಗಾಳಿಯ ವೇಗಕ್ಕೆ ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿಯುತ್ತಿದೆ. ಇದರಿಂದಾಗಿ ಚಂದ್ರದ್ರೋಣ ಪರ್ವತದ ನೂರಾರು ಎಕರೆ ಅರಣ್ಯ ಸುಟ್ಟು ಭಸ್ಮವಾಗಿದೆ. ಪಶ್ಟಿಮಘಟ್ಟ ಸಾಲಿನ ಶೋಲಾ ಅರಣ್ಯ ಸಂಪತ್ತು ಕಾಡ್ಗಿಚ್ಚಿನಿಂದ ಭಸ್ಮವಾಗಿದೆ. ಮುಳ್ಳಯ್ಯನ ಗಿರಿ, ಸೀತಾಳಯ್ಯನ ಗಿರಿಗೂ ಕಾಡ್ಗಿಚ್ಚು ವ್ಯಾಪಿಸಿದೆ. ಸಂಜೆಯಿಂದ ಹೊತ್ತಿ ಉರಿಯುತ್ತಿದ್ದು, ಬೆಂಕಿ ನಂದಿಸಲು ನೂರಾರು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿ ಭೇಟಿ ನೀಡಿದ್ದಾರೆ. ಖುದ್ದು ಸ್ಥಳದಲ್ಲಿ ಇದ್ದು ಕಾಡ್ಗಿಚ್ಚು ನಂದಿಸೋ ಕಾರ್ಯದಲ್ಲಿ ತೊಡಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/shivamogga-two-books-of-dr-g-prashanth-nayaka-released/ https://kannadanewsnow.com/kannada/champions-trophy-2025-no-indian-flag-in-pakistan-stadiums-says-pcb/
ನವದೆಹಲಿ: ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ಆಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದ್ದರಿಂದ ಭಾರತೀಯ ಧ್ವಜವನ್ನು ಹಾರಿಸದಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಪಾಕಿಸ್ತಾನದಲ್ಲಿ ಆಡುತ್ತಿರುವ ದೇಶಗಳ ಧ್ವಜಗಳನ್ನು ಕ್ರೀಡಾಂಗಣಗಳಲ್ಲಿ ಮಾತ್ರ ಹಾರಿಸಲಾಗಿದೆ ಎಂದು ಪಿಸಿಬಿ ಸ್ಪಷ್ಟ ಪಡಿಸಿದೆ. “ನಿಮಗೆ ತಿಳಿದಿರುವಂತೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ಸಮಯದಲ್ಲಿ ಭಾರತವು ತನ್ನ ಪಂದ್ಯಗಳನ್ನು ಆಡಲು ಪಾಕಿಸ್ತಾನಕ್ಕೆ ಬರುತ್ತಿಲ್ಲ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣ, ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣ ಮತ್ತು ಲಾಹೋರ್ನ ಗಡಾಫಿ ಕ್ರೀಡಾಂಗಣಗಳು ಈ ಸ್ಥಳಗಳಲ್ಲಿ ಆಡಲಿರುವ ದೇಶಗಳ ಧ್ವಜಗಳನ್ನು ಹಾರಿಸಿವೆ ಎಂದು ಪಿಸಿಬಿ ಮೂಲವನ್ನು ಉಲ್ಲೇಖಿಸಿ ಐಎಎನ್ಎಸ್ ವರದಿ ಮಾಡಿದೆ. ಕರಾಚಿ ಮತ್ತು ಲಾಹೋರ್ ಕ್ರೀಡಾಂಗಣಗಳಲ್ಲಿ ಭಾರತ, ಬಾಂಗ್ಲಾದೇಶ ಮತ್ತು ಇತರ ಭಾಗವಹಿಸುವ ದೇಶಗಳ ಧ್ವಜಗಳು ಏಕೆ ಇರಲಿಲ್ಲ ಎಂದು ಕೇಳಿದಾಗ, “ಭಾರತ ತಂಡವು ದುಬೈನಲ್ಲಿ ತನ್ನ ಪಂದ್ಯಗಳನ್ನು ಆಡಲಿದೆ. ಎರಡನೆಯದಾಗಿ, ಬಾಂಗ್ಲಾದೇಶ…
ಶಿವಮೊಗ್ಗ: ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ ಈ ಹೊತ್ತಿನ ತುರ್ತು ಎಂದು ಸಂಸ್ಕೃತಿ ಚಿಂತಕ ಡಾ. ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಡಾ. ಜಿ. ಪ್ರಶಾಂತ್ ನಾಯಕ್ ಅವರ ‘ಕನ್ನಡ ಸಿನಿಮಾ ಹಾಡುಗಳು: ಭಾವಾನುಬಂಧ’ ಮತ್ತು ‘ಬುದ್ಧ: ಬೆಳಕು ಮತ್ತು ಎಚ್ಚರ’ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜನಪ್ರಿಯ ಸಮೂಹ ಮಾಧ್ಯಮಗಳ ಸಂಕೀರ್ಣ ಸಂರಚನೆಯ ಸ್ವರೂಪವನ್ನು ಲೇಖಕರು ಸಶಕ್ತವಾಗಿ ತಮ್ಮ ಕೃತಿಗಳಲ್ಲಿ ಸೆರೆಹಿಡಿದಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ, ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಪೌರಾಣಿಕ ಕಥಾನಕಗಳು, ಕನ್ನಡ ಸೇರಿದಂತೆ ಭಾರತದ ವಿವಿಧ ಭಾಷೆಗಳ ಚಲನಚಿತ್ರಗಳು ಅದ್ಭುತವಾಗಿ ತೆರೆಯಮೇಲೆ ಅನಾವರಣಗೊಳಿಸಿದ್ದು, ಇವು ನಮ್ಮ ಒಟ್ಟಾರೆ ಸಂಸ್ಕೃತಿಯ ಅವಿಭಾಜ್ಯ ಅಂಗ ಎಂದು ಪ್ರತಿಪಾದಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ ಎಸ್ ಪ್ರಭಾಕರ್ ಮಾತನಾಡಿ, ಬುದ್ಧ ಎಂದರೆ, ಬೆಳಕು ಮತ್ತು ಎಚ್ಚರ. ಬೆಳಕೆನ್ನುವುದು ಕತ್ತಲೆಯ ವಿರುದ್ಧದ ಪದವಲ್ಲ.…
ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯ ದವರೆಗೆ ಹಾಸ್ಟೆಲ್ ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್ ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ…
ಬೆಂಗಳೂರು: ರೈಲು ಸಂಖ್ಯೆ 12509 ಎಸ್ಎಂವಿಟಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ಫೆಬ್ರವರಿ 19, 20, 21, 26, 27, 28 ರಂದು ಪ್ರಾರಂಭವಾಗುತ್ತದೆ. ಮತ್ತು ಮಾರ್ಚ್ 5, 6, 7, 12, 13, 14, 2025 ಅನ್ನು ಬರಂಗ್, ನಾರಾಜ್ ಮಾರ್ಥಾಪುರ್ ಮತ್ತು ಕಪಿಲಾಸ್ ರಸ್ತೆ ನಿಲ್ದಾಣಗಳ ಮೂಲಕ ಓಡಿಸಲು ತಿರುಗಿಸಲಾಗುವುದು. ನಾರಾಜ್ ಮಾರ್ಥಾಪುರದಲ್ಲಿ ಪರ್ಯಾಯ ನಿಲುಗಡೆಯೊಂದಿಗೆ ಕಟಕ್ ಸ್ಟೇಷನ್ ಯಾರ್ಡ್ನಲ್ಲಿ ಏರ್ ಕಾನ್ಕೋರ್ಸ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 18, 2025 ರಿಂದ ಮಾರ್ಚ್ 19, 2025 ರವರೆಗೆ ಟ್ರಾಫಿಕ್ ಬ್ಲಾಕ್ ಕಾರಣ ಕಟಕ್ ನಿಲ್ದಾಣದಲ್ಲಿ ಈ ರೈಲಿನ ನಿಲುಗಡೆಯನ್ನು ತಪ್ಪಿಸಲಾಗುವುದು. ಉತ್ತರ ರೈಲ್ವೆಯ ಸೂಚನೆಯಂತೆ, ಮಾರ್ಚ್ 3, 2025 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22683 ಯಶವಂತಪುರ-ಲಕ್ನೋ ಸಾಪ್ತಾಹಿಕ ಎಕ್ಸ್ಪ್ರೆಸ್ ಅನ್ನು ಫಫಾಮೌ, ಉಂಚಹಾರ್ ಮತ್ತು ರಾಯ್ ಬರೇಲಿ ಜಂಕ್ಷನ್ ಮೂಲಕ ಓಡಿಸಲು ತಿರುಗಿಸಲಾಗಿದೆ. ಲಕ್ನೋ ವಿಭಾಗದ ಮಾ ಬೆಲ್ಹಾ ದೇವಿ ಧಾಮ್-ಜಂಗೈ ವಿಭಾಗಗಳಲ್ಲಿ ಡಬ್ಲಿಂಗ್ ಕಾರ್ಯ ನಡೆಯುತ್ತಿರುವ ಕಾರಣ ಈ…
ಜೀವನದಲ್ಲಿ ಔದ್ಯೋಗಿಕ ಶತ್ರುಗಳ ಸಮಸ್ಯೆ, ಆಸ್ತಿ ಪ್ರಕರಣ ಬಹಳ ದಿನಗಳಿಂದ ನಡೆಯುತ್ತಿರುವುದು, ಪತಿ-ಪತ್ನಿಯರ ನಡುವೆ ಒಗ್ಗಟ್ಟು ಇಲ್ಲದ ಪರಿಸ್ಥಿತಿ ಉಂಟಾಗುವುದು ಅಥವಾ ಕುಟುಂಬದಲ್ಲಿ ಇರಬಹುದಾದ ಇತರ ಬಂಧುಗಳಿಂದ ಸಮಸ್ಯೆಗಳು ಉಂಟಾಗುವುದು. , ಮತ್ತು ಅನೇಕ ಜನರು ತಮ್ಮ ಸಮಸ್ಯೆಗಳನ್ನು ಅನೇಕ ರೀತಿಯಲ್ಲಿ ಪೇರಿಸುತ್ತಾ ಹೋಗುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಸಮಸ್ಯೆಯನ್ನು ಪರಿಹರಿಸಲು, ನಾವು 18 ನೇ ಹಂತದಲ್ಲಿರುವ ಕಪ್ಪು ಮನುಷ್ಯನನ್ನು ಪೂಜಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ,…
ಮಂಡ್ಯ: ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ಸಾಲ ವಸೂಲಾತಿ ಸಂದರ್ಭದಲ್ಲಿ ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿಯನ್ನು ತಪ್ಪಿಸಲು ಸರ್ಕಾರ ಕರ್ನಾಟಕ ( ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಅಧ್ಯಾದೇಶ 2025 ನ್ನು ಜಾರಿಗೊಳಿಸಿದ್ದು, ಜಿಲ್ಲಯಲ್ಲಿ ಈ ಅಧ್ಯಾದೇಶ ಕಟ್ಟುನಿಟ್ಟಾಗಿ ಅನುಷ್ಠಾನವಾಗಬೇಕು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು ಕರ್ನಾಟಕ ( ಮೈಕ್ರೋ) ಸಾಲ ಮತ್ತು ಸಣ್ಣ ಸಾಲ ಬಲವಂತದ ಕ್ರಮಗಳ ಪ್ರತಿಬಂಧಕ ಅಧ್ಯಾದೇಶ 2025 ದಡಿ ಆರ್.ಬಿ.ಐ ಯಡಿ ನೊಂದಣಿಯಾಗಿರುವ ಹಣಕಾಸು ಸಂಸ್ಥೆಗಳು ಹಾಬರುವುದಿಲ್ಲ. ನೊಂದಣಿಯಾಗಿರುವ ಸಂಸ್ಥೆಗಳು ಸಾಲ ವಸೂಲಾತಿಯನ್ನು ಆರ್.ಬಿ.ಐ ನಿಯಮದಂತೆ ವಸೂಲಿ ಮಾಡಬೇಕು. ಉಲ್ಲಂಘನೆ ಕಂಡುಬಂದಲ್ಲಿ ಬಿ,ಎನ್.ಎಸ್ ಕಾಯ್ದೆ ಅಡಿ ದೂರು ದಾಖಲಿಸಬಹುದು ಎಂದರು ನೊಂದಣಿಯಾಗಿರುವ ಅಥವಾ ನೊಂದಣಿಯಾಗದಿರುವ ಸಂಸ್ಥೆಗಳು ಸಾಲ ಅಥವಾ ಬಡ್ಡಿ ವಸೂಲಾತಿ ಸಂದರ್ಭದಲ್ಲಿ…