Author: kannadanewsnow09

ಬೆಳಗಾವಿ: ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಎಂಬಾತ ಪಡೆದ ಹಣ ವಾಪಾಸ್ ಕೇಳಿದಂತ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಗುತ್ತಿಗೆದಾರ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಈಗಷ್ಟೇ ವಿಷಯ ತಿಳಿಯಿತು. ಯಾರೇ ಇರಲಿ, ನನ್ನ ಆಪ್ತನೇ ಆಗಿರಲಿ ತನಿಖೆ ಮಾಡಿಸುತ್ತೇವೆ ಎಂದರು. ಅದು ನನ್ನ ಇಲಾಖೆಗೆ ಬರುತ್ತೆ. ಇಲಾಖಾ ತನಿಖೆ ಕೂಡ ನಡೆಸಲಾಗುತ್ತದೆ. ನಾನು ಯಾವುದೇ ಮುಚ್ಚು ಮರೆ ಮಾಡೋದಿಲ್ಲ. ಸಮಗ್ರ ತನಿಖೆಯಾಗಲಿ ಅಂತ ಗೃಹ ಸಚಿವರಿಗೂ ಮನವಿ ಮಾಡುವುದಾಗಿ ಹೇಳಿದರು. ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿ. ನನ್ನ ಆಪ್ತ ಅಥವಾ ಯಾರು ಅಂತ ತನಿಖೆಯಿಂದ ಗೊತ್ತಾಗುತ್ತದೆ ಎಂಬುದಾಗಿ ಬೆಳಗಾವಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. https://kannadanewsnow.com/kannada/pm-modi-to-distribute-over-50-lakh-property-cards-to-property-owners-under-swamitva-yojana/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 27 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ 46,000 ಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ ಸ್ವಮಿತ್ವ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಆಸ್ತಿ ಕಾರ್ಡ್ ಗಳನ್ನು ವಿತರಿಸಲಿದ್ದಾರೆ. ಇತ್ತೀಚಿನ ಸಮೀಕ್ಷೆಯ ಡ್ರೋನ್ ತಂತ್ರಜ್ಞಾನದ ಮೂಲಕ ಹಳ್ಳಿಗಳಲ್ಲಿ ಜನವಸತಿ ಪ್ರದೇಶಗಳಲ್ಲಿ ಮನೆಗಳನ್ನು ಹೊಂದಿರುವ ಕುಟುಂಬಗಳಿಗೆ ‘ಹಕ್ಕುಗಳ ದಾಖಲೆ’ ಒದಗಿಸುವ ಮೂಲಕ ಗ್ರಾಮೀಣ ಭಾರತದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸುವ ದೃಷ್ಟಿಕೋನದೊಂದಿಗೆ ಪ್ರಧಾನಿಯವರು ಸ್ವಾಮಿತ್ವ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯು ಆಸ್ತಿಗಳ ನಗದೀಕರಣವನ್ನು ಸುಗಮಗೊಳಿಸಲು ಮತ್ತು ಬ್ಯಾಂಕ್ ಸಾಲಗಳ ಮೂಲಕ ಸಾಂಸ್ಥಿಕ ಸಾಲವನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತದೆ; ಆಸ್ತಿ ಸಂಬಂಧಿತ ವಿವಾದಗಳನ್ನು ಕಡಿಮೆ ಮಾಡುವುದು; ಗ್ರಾಮೀಣ ಪ್ರದೇಶಗಳಲ್ಲಿ ಆಸ್ತಿ ಮತ್ತು ಆಸ್ತಿ ತೆರಿಗೆಯ ಉತ್ತಮ ಮೌಲ್ಯಮಾಪನಕ್ಕೆ ಅನುಕೂಲ ಕಲ್ಪಿಸುವುದು ಮತ್ತು ಸಮಗ್ರ ಗ್ರಾಮ ಮಟ್ಟದ ಯೋಜನೆಯನ್ನು ಸಕ್ರಿಯಗೊಳಿಸುವುದು. ಡ್ರೋನ್ ಸಮೀಕ್ಷೆಯನ್ನು 3.1…

Read More

ಬೆಂಗಳೂರು: ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಎಂಬುದಾಗಿ ಜೆಡಿಎಸ್ ಆಗ್ರಹಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿದ ಕಾಂಗ್ರೆಸ್ ಸರ್ಕಾರ. ಬಾಕಿ ಉಳಿಸಿಕೊಂಡಿರುವ ಪಿಎಫ್‌ ಹಣ, 38 ತಿಂಗಳ ಆರಿಯರ್ಸ್‌ ಮತ್ತು ಗ್ಯಾಚ್ಯುಟಿ ಹಣವನ್ನ ಪಾವತಿಸುವಂತೆ ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ತಿರುಗಿಬಿದ್ದಿದ್ದಾರೆ ಎಂದಿದೆ. ಡಿಸೆಂಬರ್‌ 30ರ ಒಳಗೆ ತಮ್ಮ ಬೇಡಿಕೆ ಈಡೇರಿಸದಿದ್ದರೇ, ರಾಜ್ಯವ್ಯಾಪಿ ಸರ್ಕಾರಿ ಬಸ್‌ ಸೇವೆ ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೇ , ಸಾರಿಗೆ ನೌಕರರ ಬಾಕಿ ಹಣವನ್ನು ತಕ್ಷಣವೇ ಪಾವತಿಸಿ ಹಾಗೂ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಅಂತ ಒತ್ತಾಯಿಸಿದೆ. https://twitter.com/JanataDal_S/status/1872242759937003625 https://kannadanewsnow.com/kannada/continuous-series-of-maternal-deaths-in-the-state-one-more-pregnant-woman-dies-at-bims-hospital/ https://kannadanewsnow.com/kannada/bengaluru-power-outages-in-these-areas-from-10-am-to-3-pm-tomorrow/

Read More

ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕುಂದರಗಿ ಗ್ರಾಮ ಪೂಜಾ ಎಂಬುವರು ಡಿಸೆಂಬರ್.24ರಂದು ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಪೂಜಾ ಜನ್ಮ ನೀಡಿದ್ದರು. ಆ ಬಳಿಕ ಬಾಣಂತಿ ಪೂಜಾ ಸಾವನ್ನಪ್ಪಿರುವ ಘಟನೆ ನಡೆದಿದೆ. ಪೂಜಾ ಹೆರಿಗೆಯ ನಂತ್ರ ಫಿಟ್ಸ್ ಬಂದು ಸಾವನ್ನಪ್ಪಿರುವುದಾಗಿ ವೈದ್ಯರು ಕುಟುಂಬಸ್ಥರಿಗೆ ತಿಳಿಸಿ, ಪೋಸ್ಟ್ ಮಾರ್ಟಮ್ ನಡೆಸದೇ ತರಾತುರಿಯಲ್ಲಿ ಕುಟುಂಬಸ್ಥರಿಗೆ ಶವ ಕೊಟ್ಟು ಕಳುಹಿಸಿದ್ದಾಗಿ ತಿಳಿದು ಬಂದಿದೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/minister-priyank-kharges-close-aide-accuses-him-of-death-threats-contractor-commits-suicide-by-hanging-himself-from-train-2/ https://kannadanewsnow.com/kannada/breaking-big-relief-for-employees-aadhaar-linking-deadline-with-uan-extended-uan-aadhaar-linking/

Read More

ಬೆಂಗಳೂರು: ಸಾಹಿತ್ಯ, ಕಲೆ, ನುಡಿ, ಸಂಗೀತ, ಸಾಂಸ್ಕೃತಿಕ ಸೇರಿದಂತೆ ಬೆಂಗಳೂರಿನ ಪರಂಪರೆಯನ್ನು ಸಾರುವ “ಬಿಎಲ್‌ಆರ್‌ ಹಬ್ಬ” ಎರಡನೇ ಆವೃತ್ತಿಯು ಅದ್ಧೂರಿಯಾಗಿ ತೆರೆಕಂಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಮ್ಮ ಜಾತ್ರೆ ಮೂಲಕ ಆರಂಭಗೊಂಡ ಬಿಎಲ್‌ಆರ್‌ ಹಬ್ಬ 16 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಸಾರುವ ಹಾಗೂ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡಿತು. ಈ 16 ದಿನಗಳ ಬಿಎಲ್‌ಆರ್‌ ಹಬ್ಬದಲ್ಲಿ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದು ವಿಶೇಷ. ಫ್ರೀಡಂ ಪಾರ್ಕ್, ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ (BIC), ಮಲ್ಲೇಶ್ವರದ ಪಂಚವಟಿ, ಕಾಮರಾಜ್ ರಸ್ತೆಯಲ್ಲಿರುವ ಸಭಾ ಮತ್ತು ಎನ್‌ಜಿಎಂಎ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ಇದರಲ್ಲಿ ಹೆಸರಾಂತ ಕಲಾವಿದರ ಸಂಗೀತ ಕಚೇರಿಗಳು, ನಾಟಕ ಪ್ರದರ್ಶನ, ಜಾನಪದ ಕಲೆ ಪ್ರದರ್ಶನ, ಸಾಹಿತ್ಯ ಕಾರ್ಯಕ್ರಮಗಳು, ಕುವೆಂಪು ಅವರ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ ಗಲ-ಗಲ-ಗದ್ದಲ ಸೇರಿದಂತೆ 500ಕ್ಕೂ ಅಧಿಕ ಕಾರ್ಯಕ್ರಮಗಳು ಈ ಅವಧಿಯಲ್ಲಿ ಯಶಸ್ವಿಯಾಗಿ ನಡೆದಿವೆ. ಅಷ್ಟೆ…

Read More

ಬೀದರ್: ಜಿಲ್ಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ ಆರೋಪವನ್ನು ಮಾಡಿರುವಂತ ಗುತ್ತಿಗೆದಾರನೊಬ್ಬ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೀದರ್ ನಲ್ಲಿ ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು 7 ಪುಟಗಳ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಗುತ್ತಿಗೆದಾರ ಸಚಿನ್ ಬರೆದಿರುವಂತ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತರೊಬ್ಬರು ತಮಗೆ ಕೊಲೆ ಬೆದರಿಕೆ ಹಾಕಿರೋ ಆರೋಪ ಮಾಡಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೆ ಟೆಂಡರ್ ಕೊಡಿಸುವುದಾಗಿ ಹೇಳಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಗುತ್ತಿಗೆದಾರ ಸಚಿನ್ ಬಳಿಯಲ್ಲಿ ಲಕ್ಷಾಂತರ ಹಣ ಪಡೆದಿದ್ದನಂತೆ. ಆ ಬಳಿಕ ಮತ್ತೆ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನಂತೆ. ಅದರೇ ಟೆಂಡರ್ ಕೊಡಿಸದೇ, ಪಡೆದ ಹಣ ವಾಪಾಸು ಕೇಳಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ರೈಲಿಗೆ ತಲೆಕೊಟ್ಟು ಸಚಿನ್ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎನ್ನಲಾಗಿದೆ.…

Read More

ಮಂಡ್ಯ: ಬೆಳಗಾವಿಯಲ್ಲಿ ಜನರ ತೆರಿಗೆ ದುಡ್ಡಿನಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ ನಡೆಯುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಮಂಡ್ಯದಲ್ಲಿ ಗುರುವಾರ ದಿಶಾ ಸಭೆಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಕೇಂದ್ರ ಸಚಿವರು. ಬೆಳಗಾವಿಯಲ್ಲಿ ಕಾಂಗ್ರೆಸ್‌ನಿಂದ ಗಾಂಧಿ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಂದಿನ ವರ್ಷ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ಸರಕಾರ ಹೊರಟಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧೀಜಿ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದೆ ಸರಕಾರ. ಆದರೆ ಅಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋಗಳು ಇರುವ ಕಟೌಟ್‌ಗಳನ್ನು ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಅವರು ಪ್ರಹಾರ ನಡೆಸಿದರು. ಈಗ ಇರುವುದು ಅಸಲಿ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಅದೇ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಗಳಿಸಿದ ಮೇಲೆ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಿ ಎಂದು ಸ್ವತಃ ಮಹಾತ್ಮ ಗಾಂಧೀಜಿ ಅವರು ಆಗಲೇ ಹೇಳಿದ್ದರು.…

Read More

ಮಂಡ್ಯ: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ. ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣ ನಿರ್ವಹಿಸಿದ ಬಗ್ಗೆ ಕಿಡಿಕಾರಿದರು. ರಾಜ್ಯದಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಭೇಟಿ ಮಾಡಲು ಪೊಲೀಸ್ ಸ್ಟೇಷನ್‌ಗೆ ಬಂದ ಬಿಜೆಪಿ ನಾಯಕರಿಗೆ ಕೂತು ಮಾತನಾಡಲು ಅವಕಾಶ ಕೊಟ್ಟರು ಎಂದು ಪೊಲೀಸ್ ಅಧಿಕಾರಿಯನ್ನು ರಾಜ್ಯ ಸರಕಾರ ಸಸ್ಪೆಂಡ್ ಮಾಡಿದೆ. ಆದರೆ, ಸಿ.ಟಿ.ರವಿ ತಲೆ ಹೊಡೆದು ರಕ್ತ ಬರುವಂತೆ ಮಾಡಿದವರ ವಿರುದ್ಧ ಕ್ರಮ ಏನು? ಎಂದು ಪ್ರಶ್ನಿಸಿದರು. ರಾಜ್ಯದಲ್ಲಿರುವ ಗೃಹ ಸಚಿವ ಹೆಬ್ಬೆಟ್ಟು. ಅವರ ಇಲಾಖೆಯಲ್ಲಿ ಏನು ನಡೆಯುತ್ತಿದೆ ಸ್ವತಃ…

Read More

ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ಶುಕ್ರವಾರ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ನಂತರ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ನಕಲಿ ಗಾಂಧಿಗಳು ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಿ ಈಗ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಗಾಂಧೀಜಿ ಬಹಳ ಸರಳವಾಗಿದ್ದರು. ಆದರೆ ಕಾಂಗ್ರೆಸ್‌ ನಾಯಕರು ಆಡಂಬರದ ಬದುಕು ನಡೆಸುತ್ತಿದ್ದಾರೆ. ಪ್ರಧಾನಿ, ಗೃಹ ಸಚಿವರು, ಎಚ್‌.ಡಿ.ಕುಮಾರಸ್ವಾಮಿ, ಸಂಸದರು, ಯಾರನ್ನೂ ಆಹ್ವಾನಿಸದೆ ಕಾಂಗ್ರೆಸ್‌ ಪಕ್ಷದ ನಾಯಕರನ್ನು ಮಾತ್ರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಲ್ಲ, ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮ ಎಂದು ದೂರಿದರು. ಇದು ಕಾಂಗ್ರೆಸ್‌ನ ಕಾರ್ಯಕ್ರಮವಾಗಿರುವುದರಿಂದ ನಾವ್ಯಾರೂ ಹೋಗುವುದಿಲ್ಲ. ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆಗೆ ನಾವೆಲ್ಲರೂ ಪುಷ್ಪ ನಮನ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು. ಕಾಂಗ್ರೆಸ್‌ನವರು ಅಖಂಡ ಭಾರತವನ್ನು ಒಡೆದು ಹಾಕಿದ್ದರು. ನಾವು ಅಖಂಡ ಭಾರತದ ಚಿತ್ರ ತೋರಿಸಿದರೆ, ಕಾಂಗ್ರೆಸ್‌ನವರು…

Read More

ಭೋಪಾಲ್: ಮಧ್ಯಪ್ರದೇಶದ ಸಿಧಿಯಲ್ಲಿ ಜನರು ಟವರ್ ಸ್ಥಳಾಂತರಿಸುವಾಗ ವಿದ್ಯುತ್ ಗೋಪುರ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಎಸ್ಪಿ ರವೀಂದ್ರ ವರ್ಮಾ ಮಾತನಾಡಿ, ಗ್ರಾಮವೊಂದರಲ್ಲಿ ಟವರ್ ಬದಲಿ ಕಾರ್ಯ ನಡೆಯುತ್ತಿತ್ತು. ಗೋಪುರಗಳನ್ನು ಸ್ಥಳಾಂತರಿಸುವಾಗ, ಶಿಥಿಲಗೊಂಡ ಗೋಪುರವು ಇದ್ದಕ್ಕಿದ್ದಂತೆ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ. https://twitter.com/PTI_News/status/1872207214485926399 https://kannadanewsnow.com/kannada/bjp-to-stage-dharna-in-front-of-mahatma-gandhis-statue-tomorrow-against-fake-congress-policy/ https://kannadanewsnow.com/kannada/big-news-state-workers-note-applications-invited-for-marriage-subsidy/

Read More