Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ ಎರಡು ವರ್ಷಗಳಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಗಟ್ಟಿ ನಿರ್ಧಾರ ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪ್ರತಿಪಕ್ಷಗಳಿಗೆ ಮಾರುತ್ತರ ನೀಡಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ ಎಂದು ಆಕ್ಷೇಪಿಸಿದಾಗ ಎದ್ದು ನಿಂತ ಸಚಿವರು, ಈ ಹಿಂದೆ ಆರೇಳು ವರ್ಷಗಳಿಂದ ಅಧಿಕಾರ ನಡೆಸಿದ ಬಿಜೆಪಿ ಚುನಾವಣೆ ನಡೆಸದೇ ಕಾಲಹರಣ ಮಾಡುತ್ತಾ ಮತ್ತು ಈ ಬಗ್ಗೆ ಯಾವುದೇ ಧ್ವನಿ ಎತ್ತಿರಲಿಲ್ಲ. ಯಾವುದೇ ತಾಲೂಕು, ಜಿಲ್ಲಾ ಪಂಚಾಯ್ತಿ ಅಥವಾ ಪಾಲಿಕೆಗಳಿಗೆ ಚುನಾವಣೆಯನ್ನೇ ನಡೆಸುವ ಧೈರ್ಯ ತೋರಲಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯ್ತಿ ಮತ್ತು ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ ಎಂದು ತಿರುಗೇಟು ನೀಡಿದರು. ಬಡ, ಮಧ್ಯಮ…

Read More

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು. ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ…

Read More

ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3974 ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಬರೋಬ್ಬರಿ 7.61 ಲಕ್ಷ ದಂಡವನ್ನು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಂದ ವಸೂಲಿ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನವೆಂಬರ್-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40414 ವಾಹನಗಳನ್ನು ತನಿಖೆಗೊಳಪಡಿಸಿ 3961 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಎಂದಿದೆ. 3974 ಟಿಕೇಟ್ ರಹಿತ ಪ್ರಯಾಣಿಕರಿಂದ 7,61,334/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 99,143/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.

Read More

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನು ಪ್ರಿಯಕನೊಬ್ಬ ಆಕೆಯ ಗಂಡನಿಗೆ ಕಳುಹಿಸಿದ್ದಾನೆ. ಮುಂದೆ ಆಗಿದ್ದೇನು ಅಂತ ಮುಂದೆ ಸುದ್ದಿ ಓದಿ..  4 ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದಂತ ಆ ಇಬ್ಬರು ಮದುವೆಯಾಗೋದಕ್ಕೂ ನಿರ್ಧರಿಸಿದ್ದರು. ಆದರೇ ಇದಕ್ಕೆ ಜಾತಿ ಅಡ್ಡಬಂದು, ಪ್ರೀತಿ ಕೊನೆಗೊಂಡಿತ್ತು. ಯುವತಿ ತನ್ನ ಮನೆಯವರು ತೋರಿಸಿದಂತ ಯುವಕನನ್ನು ಮದುವೆಯಾಗಿ, ಗಂಡನ ಜೊತೆಗೆ ಸುಖವಾಗಿ ಸಂಸಾರ ನಡೆಸುತ್ತಿದ್ದಳು. ತನ್ನ ಪ್ರೇಯಸಿ ಬೇರೆಯ ಯುವಕನನ್ನು ಮದುವೆಯಾದಳು ಎಂಬ ಸಿಟ್ಟಿನಿಂದ ಪ್ರಿಯತಮ ಮಾತ್ರ ಮಾಡಿದ್ದು, ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನೇ ಗಂಡನಿಗೆ ಕಳುಹಿಸಿದ್ದಾಗಿದೆ. ಇದರಿಂದ ಕೆರಳಿ ಕೆಂಡವಾದಂತ ಆಕೆಯ ಗಂಡ, ತಾನು ಕಟ್ಟಿದಂತ ತಾಳಿ ಕಿತ್ತು ಮನೆಯಿಂದ ವಿವಾಹಿತೆಯನ್ನು ಹೊರ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಅಲ್ಲಿಂದ ನೇರವಾಗಿ ಇದಕ್ಕೆ ಕಾರಣವಾದಂತ ಪ್ರಿಯಕರನ ಮನೆಯ ಮುಂದೆ ನ್ಯಾಯ ಕೊಡಿಸುವಂತೆ ಧರಣಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಪಲಿಚೆರ್ಲು ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಪಲಿಚೆರ್ಲು ಗ್ರಾಮ ಅಂಬರೀಶ್ ಮನೆಯ ಮುಂದೆ ಕೆಂಚನಹಳ್ಳಿ ಗ್ರಾಮದ ವಿವಾಹಿತೆ ಧರಣಿ…

Read More

ಬೆಂಗಳೂರು; ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯ ಬಗ್ಗೆ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತ್ರ ಸೂಕ್ತ ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. https://twitter.com/KarnatakaVarthe/status/2000530076887384522 https://kannadanewsnow.com/kannada/golden-jubilee-celebration-for-sagar-government-pre-university-college-on-december-23rd-and-24th-invitation-letter-released/ https://kannadanewsnow.com/kannada/are-you-making-this-mistake-beware-your-irctc-account-will-be-banned-more-than-3-crore-accounts-have-already-been-banned/

Read More

ಬೆಂಗಳೂರು : ಬೆಂಗಳೂರಿಗರು ಈ ಚಳಿಗಾಲದಲ್ಲಿಯೂ ಕ್ರಿಸ್ ಮಸ್ ಸಂಭ್ರಮದ ಬೆಚ್ಚನೆಯ ಅನುಭವವನ್ನು ಪಡೆದುಕೊಳ್ಳಲಿ ಎಂಬ ಕಾರಣಕ್ಕೆ ‘ಟಿರಾ’ದಿಂದ ಸೌಂದರ್ಯ, ಆಹಾರ, ಸಂಗೀತ ಮತ್ತು ಕ್ರಿಯೇಟಿವ್ ಕಾರ್ಯಾಗಾರವನ್ನು ಒಟ್ಟಾಗಿ ತರಲಾಗಿದೆ. ಆರಂಭದ ವಾರಾಂತ್ಯಕ್ಕೆ ಹಬ್ಬದ ಸಂಭ್ರಮ, ಔತಣ, ನೇರ ಪ್ರದರ್ಶನಗಳು, ಸುಂದರ ಕ್ಷಣಗಳು ಮತ್ತು ಖುಷಿ ತರುವ ಕ್ರಿಸ್ ಮಸ್ ಟ್ರೀ ಲೈಟಿಂಗ್ ಜೊತೆಗೆ ಅತಿಥಿಗಳು ಆನಂದವನ್ನು ಅನುಭವಿಸುವ ಕ್ಷಣಗಳನ್ನು ಉಣಬಡಿಸಲಾಯಿತು. ಈ ಸಂಭ್ರಮಾಚರಣೆಯು ಹಬ್ಬದ ಅನುಭವನ್ನು ವಿಸ್ತರಿಸಿದೆ. ಇದರೊಂದಿಗೆ ಯಾರೆಲ್ಲ ಮಾಲ್ ಗೆ ಭೇಟಿ ನೀಡುತ್ತಾರೋ ಅವರೆಲ್ಲರೂ ಜನವರಿಯ ಮೊದಲ ವಾರದ ತನಕ ಈ ಹಬ್ಬದ ಸಂಭ್ರಮವನ್ನು ಆನಂದಿಸುತ್ತಾರೆ. ಟಿರಾ ಕೆಫೆಗಳಲ್ಲಿಯ ಆಕ್ಟಿವಿಟಿ ಝೋನ್ ಮತ್ತು ಟಿರಾ ಸ್ಟೋರ್ ನಲ್ಲಿ ಈ ಹಬ್ಬದ ಋತುವಿನ ಪೂರ್ತಿಯಾಗಿ ಇಂಟರಾಕ್ಟಿವ್ ಹಾಗೂ ರಿವಾರ್ಡ್ ದೊರೆಯುವಂಥ ಚಟುವಟಿಕೆಗಳನ್ನು ಟಿರಾದಿಂದ ಆಯೋಜಿಸಲಾಗಿದೆ. ಕೇವಲ 150 ರೂಪಾಯಿಗೆ ಕ್ರಿಸ್ ಮಸ್ ಥೀಮ್ ಇರುವಂಥ ಆಹಾರ ಹಾಗೂ ಪಾನೀಯವನ್ನು ಟಿರಾ ಕೆಫೆಯಿಂದ ನೀಡಲಾಗುತ್ತದೆ. ಹೀಗೆ ಪ್ರತಿ ಖರೀದಿಗೆ ಅದೇ…

Read More

ಡಿಸೆಂಬರ್ 14 ರಂದು ಲಾಸ್ ಏಂಜಲೀಸ್‌ನಲ್ಲಿರುವ ಬ್ರೆಂಟ್‌ವುಡ್ ಮನೆಯೊಳಗೆ ಪ್ರಸಿದ್ಧ ನಿರ್ದೇಶಕ ರಾಬ್ ರೀನರ್ ಮತ್ತು ಅವರ ಪತ್ನಿ ಮೈಕೆಲ್ ಸಿಂಗರ್ ರೀನರ್ ಮೃತಪಟ್ಟಿರುವುದು ಪತ್ತೆಯಾಗಿದೆ. ಇತ್ತೀಚಿನ ಬೆಳವಣಿಗೆಯ ಪ್ರಕಾರ, ಅವರ ಮಗ ನಿಕ್ ರೀನರ್ ಅವರನ್ನು ಅವರ ಹೆತ್ತವರ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. TMZ ವರದಿಯ ಪ್ರಕಾರ, ಅವರನ್ನು USD 4 ಮಿಲಿಯನ್ ಜಾಮೀನಿನ ಮೇಲೆ ಇರಿಸಲಾಗಿದ್ದು, ಲಾಸ್ ಏಂಜಲೀಸ್ ಕೌಂಟಿ ಶೆರಿಫ್ ಇಲಾಖೆಯ ವಶದಲ್ಲಿ ಇರಿಸಲಾಗಿದೆ.

Read More

ಹಾಸನ; ಗದಗ, ಮಂಗಳೂರು ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿರುವುದಾಗಿ ತಿಳಿದು ಬಂದಿದೆ. ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮಾಡಲಾಗಿದೆ. ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುವ ಸಮಯದಲ್ಲೇ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. https://kannadanewsnow.com/kannada/test-to-detect-cancer-in-eggs-health-minister-dinesh-gundu-rao/ https://kannadanewsnow.com/kannada/shamanur-shivashankarappa-cremated-with-full-government-honors-only-the-memory-of-the-generous-donor-remains/

Read More

ಬೆಂಗಳೂರು: ಕಲಾರಸಿಕರಿಗೆ ರಸದೌತಣ ಬಡಿಸಲು ಪರಮ್ ಫೌಂಡೇಶನ್ ಸಜ್ಜಾಗಿದೆ. ಇದೇ ಡಿಸೆಂಬರ್ 18ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್‌ ಹಾಲ್‌ನಲ್ಲಿ ಸಂಜೆ 6.30ಕ್ಕೆ ಅಂತಾರಾಷ್ಟ್ರೀಯ ನೃತ್ಯ ಪ್ರದರ್ಶನ ಕಿಂಟ್ಸುಗಿ ನಡೆಯಲಿದೆ. ʻʻಕಿಂಟ್ಸುಗಿ” (Kintsugi) ಜಪಾನಿನ ಒಂದು ವಿಶೇಷ ಕಲೆಯಾಗಿದ್ದು, ಬಿರುಕುಗೊಂಡ ಪಿಂಗಾಣಿಗೆ ಬಂಗಾರದ ಬೆಸುಗೆ ಹಾಕಿ ಆ ಮೂಲಕ ನ್ಯೂನತೆ ಬದಲು ಸೌಂದರ್ಯದ ಭಾಗವಾಗಿ ಕಾಣುವಂತೆ ಮಾಡಲಾಗುತ್ತದೆ. ಅಂದರೆ ಒಡೆದ ಪಿಂಗಾಣಿಗೆ ಚಿನ್ನದ ಪುಡಿಯ ಮಿಶ್ರಣದಿಂದ ಕೂಡಿಸಿ ಚೆಂದ ಗಾಣಿಸುವ ಕಲೆಗೆ ‘ಕಿಂಟ್ಸುಗಿ’ ಎಂದು ಕರೆಯಲಾಗುತ್ತದೆ. ಹೀಗೆ ಮಿಶ್ರಣ ಮಾಡುವುದರಿಂದ ಆ ಪಿಂಗಾಣಿಯು ಸುಂದರವಾಗಿ ಕಾಣುವುದಲ್ಲದೆ, ಅದು ಮತ್ತಷ್ಟು ಮೌಲ್ಯವರ್ಧಿತವಾಗಿ ಕಾಣಿಸುತ್ತದೆ. ಜೊತೆಗೆ ಇನ್ನಷ್ಟು ಬಲಶಾಲಿಯೂ ಆಗುತ್ತದೆ ಎಂಬ ನಂಬಿಕೆಯನ್ನು ಜಪಾನ್‌ನಲ್ಲಿ ಹೊಂದಲಾಗಿದೆ. ಇದರ ಮೂಲ ಆಶಯವನ್ನು ಇಟ್ಟುಕೊಂಡು ನೃತ್ಯದ ರೂಪ ಪಡೆದಿರುವುದೇ ಈ ‘ಕಿಂಟ್ಸುಗಿ’. ಇಲ್ಲಿ ನೃತ್ಯದ ಮೂಲಕ ಒಡೆದ ಮನಸುಗಳನ್ನು ಬೆಸೆಯುವ ಕಾರ್ಯವನ್ನು ಮಾಡಲಾಗುತ್ತದೆ ಎಂಬ ಆಶಯವನ್ನೇ ಈ ‘ಕಿಂಟ್ಸುಗಿ’ ಡಾನ್ಸ್‌ ಹೊಂದಿದೆ. ಈ ಕಿಂಟ್ಸುಗಿ ತತ್ವವನ್ನು ಬಳಸಿಕೊಂಡು ಪರಮ್‌…

Read More

ಶಿವಮೊಗ್ಗ : ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಶಾಶ್ವತ ನೆನಪಿನ ಕಾರ್ಯಕ್ರಮವಾಗಬೇಕು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೇಯ ವಿದ್ಯಾರ್ಥಿಗಳು ಸಹಸ್ರ ಸಂಖ್ಯೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಸುವರ್ಣ ಮಹೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಕಾಲೇಜು ಒಂದರ ಸುವರ್ಣ ಮಹೋತ್ಸವ ಎಂದರೆ ಅಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ದೊಡ್ಡ ಹಬ್ಬ ಇದ್ದಂತೆ. ಹಬ್ಬದ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಪೂರ್ಣ ನೆಹರೂ ಮೈದಾನವನ್ನು ಸುವರ್ಣ ಸಂಭ್ರಮಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ. ಸುಮಾರು ೫೩ ವರ್ಷದಲ್ಲಿ ೬೦ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಓದಿ ಉನ್ನತ ಸ್ಥಾನದಲ್ಲಿದ್ದಾರೆ. ಅವರನ್ನು ಎದುರುಗೊಳ್ಳುವುದೇ ಒಂದು ಸಂಭ್ರಮ ಎಂದರು. ಇದೇ ಡಿಸೆಂಬರ್ 23 ಮತ್ತು 24೪ರಂದು ಎರಡು ದಿನ ಸುವರ್ಣ ಮಹೋತ್ಸವ ನಡೆಯಲಿದೆ. ಡಿ.23ಕ್ಕೆ 95 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ…

Read More