Author: kannadanewsnow09

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. https://kannadanewsnow.com/kannada/state-government-orders-fixing-prices-for-snakebite-treatment/ https://kannadanewsnow.com/kannada/alert-those-who-use-unwashed-pillows-beware-they-contain-more-dangerous-bacteria-than-toilet-seats/

Read More

ಬೆಂಗಳೂರು: ನಾಳೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷಡ್ಯಂತ್ರ ರೂಪಿಸಿದವರ ವಿರುದ್ಧ ತನಿಖೆ ನಡೆಸುತ್ತಿರುವಂತ ವಿಶೇಷ ತನಿಖಾ ತಂಡ(SIT) ಚಾರ್ಜ್ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ನಾಳೆ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ. ತನಿಖಾಧಿಕಾರಿ ಜೀತೇಂದ್ರ ದಯಾಮಾ ಅವರು ಬರೋಬ್ಬರಿ 4,000 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಚಿನ್ನಯ್ಯನನ್ನು ಬಂಧನ ಮಾಡಲಾಗಿದ್ದು, ಉಳಿದವರ ವಿಚಾರಣೆ ನಡೆಸಲಾಗಿತ್ತು. ಇನ್ನೂ ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡಿರುವು ದೋಷಾರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಸೋದಕ್ಕೆ ಎಸ್ಐಟಿ ತಯಾರಿ ನಡೆಸಿದೆ. https://kannadanewsnow.com/kannada/mahesh-hegde-elected-unopposed-as-the-president-of-sagar-taluk-kuwj-association/ https://kannadanewsnow.com/kannada/government-to-provide-quick-loan-facility-to-women-entrepreneurs-minister-lakshmi-hebbalkar/ https://kannadanewsnow.com/kannada/state-government-orders-fixing-prices-for-snakebite-treatment/

Read More

ಬೆಂಗಳೂರು: ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5 ಕೋಟಿ ರೂಪಾಯಿಗಳವರೆಗೆ ಸಾಲ ಸೌಲಭ್ಯ ನೀಡುತ್ತದೆ ಎಂದರು. ಹೆಚ್ಚಿನ ಮಹಿಳೆಯರು ಸ್ವಂತ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಮತ್ತು ಉದ್ಯೋಗಗಳನ್ನು ಬೇರೆಯವರಿಗೆ ಒದಗಿಸುವ ಮೂಲಕ ಆರ್ಥಿಕವಾಗಿ ಸ್ವತಂತ್ರರಾಗಿ ಸ್ವಾವಲಂಬಿಗಳಾಗಲು ಮುಂದೆ ಬರುತ್ತಿರುವುದರಿಂದ ಸರ್ಕಾರವು ಅಂತಹ ಚಿಂತನೆಯನ್ನು ಮತ್ತಷ್ಟು ಉತ್ತೇಜಿಸುತ್ತದೆ ಎಂದು ಹೇಳಿದರು. ಮಹಿಳೆಯರನ್ನು ಸಬಲೀಕರಣಗೊಳಿಸುವ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರವು 32,000 ಕೋಟಿ ರೂಪಾಯಿಗಳನ್ನು ನೀಡಿದೆ. ಮಹಿಳೆಯರ ಅಭಿವೃದ್ಧಿಗಾಗಿ ಸರ್ಕಾರ ವಾರ್ಷಿಕ 52 ಸಾವಿರ ಕೋಟಿ‌…

Read More

ಬೆಂಗಳೂರು : ಮೃಗಾಲಯ ಮತ್ತು ಆನೆ ಶಿಬಿರಗಳಲ್ಲಿ ವನ್ಯಜೀವಿ ವೈದ್ಯರ ಕೊರತೆ ಇದ್ದು, ಪ್ರತ್ಯೇಕ ಕೇಡರ್ ಸೃಷ್ಟಿಸಿ, ಶೀಘ್ರವೇ 15 ವನ್ಯಜೀವಿ ವೈದ್ಯರ ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಳಗಾವಿ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಅಸಹಜವಾಗಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಒಂಬತ್ತೂ ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ವನ್ಯಜೀವಿ ವೈದ್ಯರ ನೇಮಕ ಆಗುವವರೆಗೂ ಇರುವ ಪಶುವೈದ್ಯರಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ಗಳಲೆ (Hemorrhagic Septicemia)ರೋಗ- ಬ್ಯಾಕ್ಟೀರಿಯಾ ಸೋಂಕು ಕಾರಣವಾಗಿದೆ ಎಂದು ವೈದ್ಯರು ದೃಢಪಡಿಸಿದ್ದು, ಈ ಸೋಂಕು ಗಾಳಿಯಿಂದ, ನೀರಿನಿಂದ, ಆಹಾರದಿಂದ ಅಥವಾ ಪ್ರಾಣಿ ಪಾಲಕರಿಂದ ಪಸರಿಸಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸುವಂತೆ ಮತ್ತು ಬೇರೆ ಪ್ರಾಣಿಗಳಿಗೆ ಪಸರಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಮಾಣಿತ ಮಾನದಂಡ…

Read More

ಬೆಂಗಳೂರು : ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳಿವು ಸಿಕ್ಕಿದ್ದು, ಆರೋಪಿಗಳನ್ನು ಹಿಡಿಯುತ್ತೇವೆ ಬಿಡುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದಾರೆ. ಇದಕ್ಕೆ ಕಾರಣೀಕರ್ತರು ಏನು? ಎಟಿಎಂಗೆ ಹಣ ತಂದು ಹಾಕುವ ಮಾಹಿತಿ ಕೊಟ್ಟಿದ್ದು ಯಾರು? ಹಣ ಹಾಕುವವರಲ್ಲಿ ಯಾರಾದರೂ ಇದ್ದರೋ ಎಂಬುದರ ಬಗ್ಗೆ ಈವಾಗಷ್ಟೇ ಲೀಡ್ ಸಿಕ್ಕಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ‌ ಎಂದರು. ಬೆಂಗಳೂರಿನಲ್ಲಿ ಹಾಡುಹಗಲಲ್ಲೇ ಇಂತಹ ಘಟನೆ ನಡೆದಿಲ್ಲ. ಏಳು‌ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹಣ ರಾಬರಿಯಾಗಿದೆ. ವಾಹನ ಸಂಖ್ಯೆ ಎಲ್ಲ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಿದವರು ಇಲ್ಲಿಯವರಾ? ಹೊರ ರಾಜ್ಯದಲ್ಲಿಯವರಾ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿ ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವುದರಿಂದ ಎಲ್ಲ ಮಾಹಿತಿಯನ್ನು ಹಂಚಿಕೊಳ್ಳಲಾಗುವುದಿಲ್ಲ. ಖಂಡಿತವಾಗಿ ಅವರನ್ನು ಹಿಡಿದು ಹಾಕುತ್ತೇವೆ ಎಂದು ಪ್ರತಿಕ್ರಿಯಿಸಿದರು. https://kannadanewsnow.com/kannada/attempt-to-rob-a-bank-in-mandya-fails/ https://kannadanewsnow.com/kannada/alert-those-who-use-unwashed-pillows-beware-they-contain-more-dangerous-bacteria-than-toilet-seats/

Read More

ಮಂಡ್ಯ : ದುಷ್ಕರ್ಮಿಗಳು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್​ನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ಮದ್ದೂರು ತಾಲೂಕಿನ ಬಿದರಕೋಟೆ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಮಂಗಳವಾರ ತಡರಾತ್ರಿ ಬ್ಯಾಂಕ್‌ ಆಫ್‌ ಬರೋಡಾ ಬ್ಯಾಂಕ್‌ನ ಸಿಸಿ ಕ್ಯಾಮರಾ ಹೊಡೆದು ಹಾಕಿ ನಂತರ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಒಳಗೆ ನುಗ್ಗಿ ಲಾಕರ್​ ಒಡೆಯಲು ಯತ್ನ ಮಾಡಿದ್ದಾರೆ. ಆದರೆ ಲಾಕರ್‌ ಒಡೆಯಲು ಸಾಧ್ಯವಾಗದೇ ದುಷ್ಕರ್ಮಿಗಳು ಬರಿಗೈಯಲ್ಲಿ ವಾಪಸಾಗಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮದ್ದೂರು ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಿಣಿ ಹಾಗೂ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಶ್ವಾನ ದಳ, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಫೆ.25 ರಂದು ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದ ಬ್ಯಾಂಕ್ ಆಫ್ ಬರೋಡಾ ದಲ್ಲೂ ಕಳ್ಳರು ದರೋಡೆಗೆ ಯತ್ನಿಸಿದ್ದು, ಕಂಡು ಬಂದಿತು. ವರದಿ : ಗಿರೀಶ್ ರಾಜ್, ಮಂಡ್ಯ…

Read More

ನವದೆಹಲಿ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಿದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದ್ದರು. ಬಂಧಿತ ಆರೋಪಿಯನ್ನು ದೆಹಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂತಹ ಆರೋಪಿಯನ್ನು 11 ದಿನಗಳ ಕಾಲ ಎನ್ಐಎ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. 2022 ರಿಂದ ತಲೆಮರೆಸಿಕೊಂಡಿರುವ ಅಮೆರಿಕ ಮೂಲದ ಅನ್ಮೋಲ್ ಬಿಷ್ಣೋಯ್, ಜೈಲಿನಲ್ಲಿರುವ ತನ್ನ ಸಹೋದರ ಲಾರೆನ್ಸ್ ಬಿಷ್ಣೋಯ್ ನೇತೃತ್ವದ ಭಯೋತ್ಪಾದನಾ ಸಿಂಡಿಕೇಟ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಬಂಧಿಸಲ್ಪಟ್ಟ 19 ನೇ ಆರೋಪಿ ಎಂದು ಎನ್‌ಐಎ ಹೇಳಿಕೆಯಲ್ಲಿ ತಿಳಿಸಿತ್ತು. ಪ್ರಕರಣದ ತನಿಖೆಯಲ್ಲಿ 2020-2023 ರ ಅವಧಿಯಲ್ಲಿ ದೇಶದಲ್ಲಿ ನಡೆದ ವಿವಿಧ ಭಯೋತ್ಪಾದನಾ ಕೃತ್ಯಗಳಲ್ಲಿ ಗೊತ್ತುಪಡಿಸಿದ ವೈಯಕ್ತಿಕ ಭಯೋತ್ಪಾದಕ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಅವರಿಗೆ ಸಕ್ರಿಯವಾಗಿ ಸಹಾಯ ಮಾಡಿದ್ದಾನೆ ಎಂದು ದೃಢಪಟ್ಟ ನಂತರ ಮಾರ್ಚ್ 2023 ರಲ್ಲಿ ಎನ್‌ಐಎ ಅನ್ಮೋಲ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ ಎಂದು ಅದು ಹೇಳಿತ್ತು. ಇಂದು ಅಮೇರಿಕಾದಿಂದ ಗಡಿಪಾರಾಗಿ ಭಾರತಕ್ಕೆ ಬಂದಂತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್…

Read More

ಬೆಂಗಳೂರು: ನಗರದಲ್ಲಿ ನೀರು ಸೋರಿಕೆ ತಡೆಯೋದಕ್ಕೆ ಜಲಮಂಡಳಿಯಿಂದ ಕ್ರಾಂತಿಕಾರಕ ಹಜ್ಜೆ ಇರಿಸಲಾಗಿದೆ.ಬ್ಲೂ ಪ್ರೋರ್ಸ್ ವಿಶೇಷ ದಳ ಆರಂಭ ಮಾಡಲಾಗುತ್ತಿದೆ. ಅಲ್ಲದೇ ರೋಬೋಟಿಕ್ ಮತ್ತು ಎಐ ತಂತ್ರಜ್ಞಾನ ಅಳವಡಿಸಲು ಮುಂದಾಗಿದೆ. ನೀರಿನ ಸೋರಿಕೆ ತಡೆಯಲು ಮತ್ತು ಅನಧಿಕೃತ ನೀರು ಹಾಗೂ ಒಳಚರಂಡಿ (ಸೀವೇಜ್) ಸಂಪರ್ಕಗಳನ್ನು ಪತ್ತೆ ಹಚ್ಚಲು ಬೆಂಗಳೂರು ಜಲಮಂಡಳಿ ವಿನೂತನ ಕಾರ್ಯಕ್ರಮ ರೂಪಿಸಿದೆ. ಬಿಡಬ್ಲ್ಯೂಎಸ್‌ಎಸ್‌ಬಿ ತನ್ನ ಪ್ರತಿಯೊಂದು ಉಪವಿಭಾಗಕ್ಕೆ ಒಂದು ವಿಶೇಷ ‘ಬ್ಲೂ ಫೋರ್ಸ್’ ತಂಡವನ್ನು ರಚಿಸಿದೆ. ಈ ವಿಶೇಷ ದಳವು ಈ ವಾರದಿಂದಲೇ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಅಕ್ರಮ ನೀರು ಮತ್ತು ಒಳಚರಂಡಿ ಸಂಪರ್ಕಗಳನ್ನು ಪತ್ತೆಹಚ್ಚುವುದು, ಅನಧಿಕೃತವಾಗಿ ನೀರು ಸೋರುವಿಕೆ ಮತ್ತು ಬೈಪಾಸ್ ಸಂಪರ್ಕಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು, ನೀರಿನ ಸೋರಿಕೆಯಿಂದ ಉಂಟಾಗುತ್ತಿರುವ ಆರ್ಥಿಕ ನಷ್ಟವನ್ನು ತಡೆಗಟ್ಟುವುದು ಮತ್ತು ನೀರಿನ ನ್ಯಾಯಯುತ ವಿತರಣೆ ಖಚಿತಪಡಿಸುವುದು ಈ ವಿಶೇಷ ದಳದ ಉದ್ದೇಶವಾಗಿದೆ. ಸೋರಿಕೆಯ ನಿಖರ ಸ್ಥಳವನ್ನು ಪತ್ತೆಹಚ್ಚಲು ಮತ್ತು ಅನಗತ್ಯ ರಸ್ತೆ ತೋಡುವಿಕೆಗೆ ಕಡಿವಾಣ ಹಾಕಲು ರೋಬೋಟಿಕ್ ತಂತ್ರಜ್ಞಾನ ಸಂಸ್ಥೆಯೊಂದಿಗೆ…

Read More

ಬೆಳಗಾವಿ: ಜಿಲ್ಲೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಯ ಎದುರೇ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲು ಆರೋಪಿಯೊಬ್ಬ ಯತ್ನಿಸಿದ್ದಾನೆ. ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರದಂದು ಬೆಳಗಾವಿ ಜಿಲ್ಲೆಯ ಅಥಣಿ ನ್ಯಾಯಾಲಯಕ್ಕೆ ಆಸ್ತಿ ವಿಚಾರಕ್ಕಾಗಿ ಮೀನಾಕ್ಷಿ ರಾಮಚಂದ್ರ ಶಿಂಧೆ ಎಂಬುವರು ಆಗಮಿಸಿದ್ದರು. ಇದೇ ಕೇಸ್ ಸಂಬಂಧ ಕೋತನಟ್ಟಿ ಗ್ರಾಮದ ಬಾಬಾ ಸಾಹೇಬ್ ಚೌಹಾಣ್ ಕೂಡ ಹಾಜರಾಗಿದ್ದರು. ಆಸ್ತಿ ವಿಚಾರಕ್ಕಾಗಿ ಸೋದರತ್ತೆಯ ಜೊತೆಗೆ ಬಾಬು ಸಾಹೇಬ್ ಅನೇಕ ಬಾರಿ ಜಗಳ ಕೂಡ ಆಡಿದ್ದರಂತೆ. ಮಂಗಳವಾರದಂದು ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಂತ ಬಾಬಾ ಸಾಹೇಬ್ ಸಿಟ್ಟಿನಿಂದ ಕುಡುಗೋಲಿನಿಂದ ಮೀನಾಕ್ಷಿ ಮೇಲೆ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದಂತ ಪೊಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಕ್ಷಣಕಾಲ ನಡೆದಂತ ಈ ಘಟನೆಯಿಂದ ಕೋರ್ಟ್ ಆವರಣದಲ್ಲಿ ಆತಂಕವನ್ನೂ ಮೂಡಿಸಿತ್ತು. ಮಹಿಳೆಯ ಮೇಲೆ ಹಲ್ಲೆಗೆ ಯತ್ನಿಸಿದಂತ ಆರೋಪಿ ಬಾಬಾ ಸಾಹೇಬ್ ಬಂಧಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/mahesh-hegde-elected-unopposed-as-the-president-of-sagar-taluk-kuwj-association/ https://kannadanewsnow.com/kannada/cm-siddaramaiahs-bumper-gift-to-sagar-again-green-signal-to-undertake-development-work-worth-rs-50-crore/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿನ ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಕಾರಣ, ಜನರ ಹೃದಯಗಳನ್ನು ಹಾಗೂ ಅವರ ನಾಯಕತ್ವದ ಮೇಲಿನ ನಂಬಿಕೆಯನ್ನು ಗೆಲ್ಲುವುದನ್ನು ಮುಂದುವರಿಸಿದ್ದಾರೆ. ಮಾರ್ನಿಂಗ್ ಕನ್ಸಲ್ಟ್‌ನ ಪಟ್ಟಿಯು ನವೆಂಬರ್ 6 ರಿಂದ 12, 2025 ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿದೆ. “ರೇಟಿಂಗ್‌ಗಳು ಸಮೀಕ್ಷೆ ಮಾಡಿದ ಪ್ರತಿ ದೇಶದ ವಯಸ್ಕರಲ್ಲಿ ಏಳು ದಿನಗಳ ಸರಳ ಚಲಿಸುವ ಸರಾಸರಿ ವೀಕ್ಷಣೆಗಳನ್ನು ಪ್ರತಿಬಿಂಬಿಸುತ್ತವೆ” ಎಂದು ಮಾರ್ನಿಂಗ್ ಕನ್ಸಲ್ಟ್ ವರದಿ ತಿಳಿಸಿದೆ. ಶೇ. 71 ರಷ್ಟು ಅನುಮೋದನೆ ರೇಟಿಂಗ್ ಹೊಂದಿರುವ ಮೋದಿ ನಂತರ, ಜಪಾನಿನ ಪ್ರಧಾನಿ ಸನೇ ತಕೈಚಿ ಅವರು ಸಮೀಕ್ಷೆಯಲ್ಲಿ ಭಾಗವಹಿಸುವವರ ಶೇಕಡಾ 63 ರಷ್ಟು ಅನುಮೋದನೆಯನ್ನು ಪಡೆದಿದ್ದಾರೆ, ಆದರೆ ದಕ್ಷಿಣ ಕೊರಿಯಾದ ಲೀ ಜೇ ಮ್ಯುಂಗ್ ಶೇ. 58 ರಷ್ಟು ರೇಟಿಂಗ್‌ನೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ನಾಲ್ಕನೇ ಸ್ಥಾನದಲ್ಲಿದ್ದರೆ, ಅರ್ಜೆಂಟೀನಾದ ಜೇವಿಯರ್ ಮಿಲಿ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ. ಗಮನಾರ್ಹವಾಗಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್…

Read More