Author: kannadanewsnow09

ಶಿವಮೊಗ್ಗ: ಮುರಿದೋದ, ಕುಳಿತ್ರೆ ಮುರಿದೋಗುತ್ತೆ ಎನ್ನುವ ಭಯ, ಫ್ಯಾನ್, ಲೈಟ್ ಹಾಕೋದಕ್ಕೆ ಹೋದ್ರೆ ಕರೆಂಟ್ ಶಾಕ್, ತಲೆಯ ಮೇಲೆ ಮಣ್ಣು, ಡೆಸ್ಕ್ ಮೇಲಂತೂ ಧೂಳೋ ಧೂಳು. ಇದು ಸಾಗರ ನಗರದಲ್ಲಿರುವಂತ ಪ್ರತಿಷ್ಠಿತ ಕಾಲೇಜಿನ ದುಸ್ಥಿತಿ. ಇದನ್ನು ಖಂಡಿಸಿ ಇಂದು ವಿದ್ಯಾರ್ಥಿಗಳು ಆಡಳಿತ ಮಂಡಳಿಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಿದ್ದು ಕಂಡು ಬಂದಿತು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಜೋಗ ರಸ್ತೆಯಲ್ಲಿರುವಂತ ಎಲ್ ಬಿ ಕಾಲೇಜಿನ ಆಡಳಿತ ಮಂಡಳಿಯಾದಂತ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ(ರಿ) ವಿರುದ್ಧ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕಾಲೇಜಿನಲ್ಲಿ ಶುಚಿತ್ವಕ್ಕೆ ಒತ್ತು ನೀಡುತ್ತಿಲ್ಲ. ಗಲೀಜು ಪ್ರದೇಶದಲ್ಲೇ ಕುಳಿತು ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದಾಗಿ ವಿದ್ಯಾರ್ಥಿಗಳು ಆಕ್ರೋಶ ಹೊರ ಹಾಕಿದರು. https://youtu.be/RaFDU2mB5Vo ಪತ್ರಕರ್ತರನ್ನು ಬನ್ನಿ ಸಾರ್ ನೋಡಿ ಕಾಲೇಜಿನಲ್ಲಿನ ನಮ್ಮ ಕೊಠಡಿಗಳನ್ನು. ಕುಳಿತು ಪಾಠ ಕೇಳೋಕೆ ಮನಸ್ಸಾಗೋದು ಇರಲಿ, ಭಯವಾಗುತ್ತದೆ ಆ ಸ್ಥಿತಿಯಲ್ಲಿ ಇದೆ ಅಂತ ವಿದ್ಯಾರ್ಥಿಗಳು ಅಂದಾಗ, ಎಲ್ ಬಿ ಕಾಲೇಜಿನ ಕೊಠಡಿಗಳಿಗೆ ಭೇಟಿ ನೀಡಿದಾಗ ಕಂಡಿದ್ದೇ…

Read More

ಬಾಗಲಕೋಟೆ: ಜಿಲ್ಲೆಯಲ್ಲಿ ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡು ಕೈಗಳ ಬೆರಳುಗಳು ಛಿದ್ರಗೊಂಡಿದ್ದ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರೋಪಿಯೊಬ್ಬ ಶಶಿಕಲಾ ಎನ್ನುವವರ ಮೇಲಿನ ಸಿಟ್ಟಿನಿಂದ ಹೇರ್ ಡ್ರೈಯರ್ ನಲ್ಲಿ ಡಿಟನೇಟರ್ ಇಟ್ಟು ಕಳುಹಿಸಿದ್ದರ ಪರಿಣಾಮ, ಸ್ಪೋಟಗೊಂಡಿರೋ ವಿಷಯ ಬಹಿರಂಗವಾಗಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಆರೋಪಿ ಸಿದ್ದಪ್ಪ ಶೀಲವಂತ ಎಂಬಾತ ಮಾಜಿ ಯೋಧನ ಪತ್ನಿ ಬಸವರಾಜೇಶ್ವರಿ ಎಂಬಾಕೆಯನ್ನು ಪ್ರೀತಿಸುತ್ತಿದ್ದನು. ಈ ವಿಷಯ ತಿಳಿದಂತ ಶಶಿಕಲಾ ಹಡಪದ ಎಂಬಾಕೆಯು ಬಸವರಾಜೇಶ್ವರಿಗೆ ನೀನು ಸಿದ್ದಪ್ಪ ಶೀಲವಂತ ಸಹವಾಸ ಬಿಡುವಂತೆ ಬುದ್ಧಿವಾದ ಹೇಳಿದ್ದಳು. ಈ ವಿಚಾರ ಸಿದ್ದಪ್ಪನಿಗೆ ತಿಳಿದು ಶಶಿಕಲಾ ಹಡಪದ ಕೊಲೆಗೆ ಸಂಚು ರೂಪಿಸಿದ್ದನು. ಶಶಿಕಲಾ ಅವರ ಹೆಸರಿಗೆ ಹೇರ್ ಡ್ರೈಯರ್ ಕೋರಿಯರ್ ಮಾಡಿದ್ದಂತ ಸಿದ್ದಪ್ಪ ಶೀಲವಂತ, ಅದರಲ್ಲಿ ಡಿಟೋನೇಟರ್ ಇರಿಸಿ ಕಳುಹಿಸಿದ್ದನು. ಕರೆಂಟ್ ಗೆ ಪ್ಲಗ್ ಹಾಕಿ ಸ್ವಿಚ್ ಹಾಕಿದ ತಕ್ಷಣವೇ ಸ್ಪೋಟಗೊಂಡು ಶಶಿಕಲಾ ಹತ್ಯೆ ಮಾಡುವ ಸಂಚು ಇದಾಗಿತ್ತು. ನವೆಂಬರ್.20, 2024ರಂದು ಕೋರಿಯರ್ ಬಂದಾಗ ಶಶಿಕಲಾ ಹಡಪದ ಮನೆಯಲ್ಲಿ ಇರಲಿಲ್ಲ.…

Read More

ಬೆಂಗಳೂರು: ಭಾನುವಾರ ಪೀಣ್ಯ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ ಬೆಂಗಳೂರು: 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 24.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಮ್‌ಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್ ರಾಜೇಶ್ವರಿನಗರ, ಆಕಾಶ್ ಥೇಟರ್ ರಸ್ತೆ ಕರೆಂಟ್ ಇರಲ್ಲ. ಸ್ನೇಹಿತರು ವೃತ್ತ, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ…

Read More

ಬೆಂಗಳೂರು: ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೇ ಅವರ ಕಾರ್ಡ್ ಮಾತ್ರ ರದ್ದು ಮಾಡಲಾಗುತ್ತದೆ. ಇಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿ ಅವರಿಗೆ ವಿಷಯಾಂತರ ಮಾಡಿ ಜನರನ್ನು ದಾರಿತಪ್ಪಿಸಿ, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಕರಗತವಾಗಿದೆ. ಸರ್ಕಾರಿ ನೌಕರಿಯಲ್ಲಿದ್ದು ಬಿಪಿಎಲ್ ಕಾರ್ಡ್ ಪಡೆಯುವುದು ನ್ಯಾಯವೇ ಎಂಬುದಾಗಿ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ. ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು.  ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು ಮಾತ್ರ ರದ್ದು ಮಾಡಲಾಗುತ್ತದೆ ಎಂದಿದ್ದಾರೆ. ಷ್ಟು ಸ್ಪಷ್ಟವಾಗಿ ಹೇಳಿದ್ದಾಗ್ಯೂ ಸಹ ಬಿಜೆಪಿ  ಅವರಿಗೆ ವಿಷಯಾಂತರ ಮಾಡಿ ಜನರನ್ನು ದಾರಿತಪ್ಪಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಚಾಳಿ ಕರಗತವಾಗಿದೆ. ಸರ್ಕಾರಿ ನೌಕರಿಯಲ್ಲಿದ್ದು ಬಿಪಿ‌ಎಲ್ ಕಾರ್ಡ್ ಪಡೆಯುವುದು ನ್ಯಾಯವೇ? ಎಂದು ಪ್ರಶ್ನಿಸಿದ್ದಾರೆ. ಎಸ್.ಎಂ‌.ಕೃಷ್ಣ ರವರು ಮುಖ್ಯಮಂತ್ರಿಗಳಾಗಿದ್ದಾಗ…

Read More

ಬೆಂಗಳೂರು : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಉದ್ಯಮಿ ವಿಜಯ್ ಟಾಟಾಗೆ 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾದಂತ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿ.12ಕ್ಕೆ ಮುಂದೂಡಿಕೆ ಮಾಡಿದೆ. ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ಪೀಠದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಮ್ಮ ವಿರುದ್ಧ ಬೆದರಿಕೆ ಪ್ರಕರಣದಲ್ಲಿ ದಾಖಲಾಗಿದ್ದಂತ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹಿಂದೆ ಪ್ರಕರಣಕ್ಕೆ ನೀಡಿದ್ದಂತ ಮಧ್ಯಂತರ ಆದೇಶವನ್ನು ವಿಸ್ತರಿಸಿ ಆದೇಶಿ, ವಿಚಾರಣೆ ಮುಂದೂಡಿತು. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ. ಅಂದಹಾಗೇ ಉದ್ಯಮಿ ವಿಜಯ್ ಟಾಟಾ ಅವರು ನೀಡಿದ್ದಂತ ದೂರು ಆಧರಿಸಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್ಎಂ ರಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪದಡಿ ಎಫ್ಐಆರ್…

Read More

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( Former MP Prajwal Revanna) ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team – SIT) ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಮಾಜಿ ಶಾಸಕ ತನ್ನ ಕುಟುಂಬಕ್ಕೆ ಮನೆಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಜೆಡಿಎಸ್ ನಾಯಕನ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ. ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ. ಈಗ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕಾರಣ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದಂತೆ ಆಗಿದೆ. https://kannadanewsnow.com/kannada/exit-polls-will-be-turned-upside-down-congress-will-win-in-channapatna-deputy-cm-dk-shivakumar-shivakumars-confidence/ https://kannadanewsnow.com/kannada/big-news-state-royal-aspirants-stay-at-va-center-is-mandatory-state-govt/

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನು ಅತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಮತಾ ಎನ್ನುವಂತ ಸಾಹು ಎನ್ನುವಂತ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ. ಆ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದಂತ ಘಟನೆ ನಡೆದಿದೆ. ಶಂಭು (7) ಹಾಗೂ ಶಿಯಾ(3) ಎನ್ನುವಂತ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವುದಾಗಿ ಮಮತಾ ಸಾಹು ಅವರ ಪತಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. https://kannadanewsnow.com/kannada/electric-traffic-system-india-hopes-at-cop29-summit/ https://kannadanewsnow.com/kannada/exit-polls-will-be-turned-upside-down-congress-will-win-in-channapatna-deputy-cm-dk-shivakumar-shivakumars-confidence/

Read More

ಬೆಂಗಳೂರು: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳ ಜೊತೆಗಿನ ಕಾರ್ಯಕ್ರಮವೊಂದರಲ್ಲಿ, ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂಬುದಾಗಿ ಹೇಳಿದ್ದರು. ಅಂತಹ ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಕಾರ್ಯಕ್ರಮದಲ್ಲೇ ಸೂಚಿಸಿದ್ದು ಸಾರ್ವಜನಿಕರ ಆಕ್ರೋಶಕ್ಕೂ ಕಾರಣವಾಗಿತ್ತು. ಈಗ ನಾನು ಹಾಗೆ ವಿದ್ಯಾರ್ಥಿ ಮೇಲೆ ಕ್ರಮಕ್ಕೆ ಸೂಚಿಸಿಲ್ಲ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಉಲ್ಟಾ ಹೊಡೆದಿದ್ದಾರೆ. ಇಂದು ಸುದ್ದಿಗಾರರೊಂದಿಗೆ ವಿದ್ಯಾರ್ಥಿ ಮೇಲೆ ಕ್ರಮಕ್ಕೆ‌ಸೂಚನೆ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ನಾನು ಅಲ್ಲಿ ಕ್ರಮದ ಬಗ್ಗೆ ಎಲ್ಲು ಮಾತನಾಡಿಲ್ಲ. ಮಕ್ಕಳ ಮೇಲೆ ಪ್ರಾಂಶುಪಾಲರು ಹತೋಟಿ ಇರಬೇಕು. ಅದಕ್ಕೆ ಪ್ರಾಂಶುಪಾಲರಿಗೆ ನಾನು‌ ಹೇಳಿದ್ದು. ಮಕ್ಕಳನ್ನ ಹತೋಟಿಯಲ್ಲಿಡಬೇಕು. 50 ಸಾವಿರ ಮಕ್ಕಳು ಲೈವ್ ನೋಡ್ತಿದ್ದಾರೆ. ಅವರ ಭವಿಷ್ಯಕ್ಕೆ‌ಯೋಜನೆ ರೂಪಿಸ್ತಿದ್ದೇವೆ. ಕ್ಲಾಸ್ ನಲ್ಲಿ ಡಿಸಿಪ್ಲೀನ್ ಇರಬೇಕಲ್ಲ. ನಾನು ಒಬ್ಬ ತಂದೆಯಾಗಿ ಅದನ್ನ ಹೇಳ್ತೇನೆ. ನೀವು ಟ್ರೋಲ್‌ಮಾಡಿದ್ರೆ ನನಗೇನು. ಅದಕ್ಕೆಲ್ಲ ನಾನು‌ತಲೆ ಕೆಡಿಸಿಕೊಳ್ಳಲ್ಲ ಎಂದರು. ನಾಗೇಶ್ ನನ್ನನ್ನ ದಡ್ಡ ಅಂದ್ರು. ಈ ದಡ್ಡನನ್ನ ಜನ ಗೆಲ್ಲಿಸಿದ್ರು, ಬುದ್ಧಿವಂತರನ್ನ ಸೋಲಿಸಿದ್ರು. ನಿಮ್ಮ ಮಕ್ಕಳು ಈ ರೀತಿ ಮಾಡೋದು ಸರಿಯೇ. ನನ್ನ ಸ್ವಂತ ಮಕ್ಕಳಂಗೆ ಶಾಲಾ ಮಕ್ಕಳನ್ಮ‌ನೋಡ್ತೇನೆ. ಸಿಇಟಿ ಕಾರ್ಯಕ್ರಮ ಎಂತ ದೊಡ್ಡದು. ಅಂತದ್ದನ್ನ ನೀವು…

Read More

ಬಾಕು : 29 ನೇ ಕಾಪ್‌ ಶೃಂಗ ಸಭೆಯಲ್ಲಿ ಭಾರತವು ಇವಿ ಕಡೆಗಿನ ತನ್ನ ಪಯಾಣವನ್ನು ಜಾಗತಿಕ ವೇದಿಕೆಯ ಮುಂದೆ ಪ್ರಸ್ತುತಪಡಿಸಿತು. ಗ್ಲೋಬಲ್‌ ಸೌತ್‌ನಲ್ಲಿ ಭಾರತವು ಇವಿ ಸಾರಿಗೆ ಕ್ಷೇತ್ರದ ಕಡೆಗೆ ಹೊರಳುವ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಹವಾಮಾನ ಬದಲಾವಣೆಗೆ ಪ್ರೇರಣೆ ನೀಡಬೇಕಾದ ‘ಸಿಒಪಿ 29’ ಶೃಂಗಸಭೆಯು ನಿಧಾನಗತಿಯ ಮಾತುಕತೆ ಮತ್ತು ಕಡಿಮೆ ನಿರೀಕ್ಷೆಗಳಿಂದ ಸೊರಗುತ್ತಿರುವ ನಡುವೆಯೂ ಭಾರತದ ಉಪಕ್ರಮಗಳು ಆಶಾದಾಯಕ ಸಂಗತಿ ಎನಿಸಿತು. ಅಜೆರ್‌ಬೈಜಾನ್‌ ರಾಜಧಾನಿಯಲ್ಲಿ ಇತ್ತೀಚೆಗೆ ಹವಾಮಾಣ ಬದಲಾವಣೆ ಕುರಿತ ಚರ್ಚಗಾಗಿ ಸದಸ್ಯ ರಾಷ್ಟ್ರಗಳ ʼಕಾಪ್‌ 29ʼ ಶೃಂಗಸಭೆಯ ನಡೆಯಿತು. ಅಲ್ಲಿನ ʼವಿ ಮೀನ್ ಬಿಸಿನೆಸ್ ಪೆವಿಲಿಯನ್‌ನಲ್ಲಿ ನಡೆದ “ಇಂಡಿಯಾಸ್‌ ಎಲೆಕ್ಟ್ರಿಕ್ ಮೊಬಿಲಿಟಿ ಲೀಡರ್‌ಶಿಪ್‌ : ಸ್ಪಾಟ್‌ಲೈಟಿಂಗ್‌ ಇವಿ ಟ್ರಾನ್ಸಿಷನ್‌ ಪಾಥ್‌ವೇಸ್‌ ಫಾರ್‌ ದ ಗ್ಲೋಬಲ್‌ ಸೌತ್‌ʼ ಎಂಬ ಗೋಷ್ಠಿಯಲ್ಲಿ ಭಾರತದ ಸುಸ್ಥಿರ ಸಾರಿಗೆ ಹವಾಮಾನ ಬದಲಾವಣೆಯಲ್ಲಿ ಭಾರತದ ನೀತಿಗಳು, ಉಪಕ್ರಮಗಳು ಹಾಗೂ ಸಹಭಾಗಿತ್ವವನ್ನು ವಿವರಿಸಲಾಯಿತು. ಸಂವಾದ ಗೋಷ್ಠಿಯಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ (ಇವಿ) ಪರಿವರ್ತನೆಗೊಳ್ಳುವಲ್ಲಿ ಭಾರತದ ಪ್ರವರ್ತಕ ಪ್ರಯತ್ನಗಳನ್ನು…

Read More

ಮುರುಡೇಶ್ವರ : “ನಿಮ್ಮ ಎಕ್ಸಿಟ್ ಪೋಲ್ ಫಲಿತಾಂಶಗಳೆಲ್ಲಾ ತಲೆಕೆಳಗಾಗುತ್ತವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿಗೆ ಮರಳುವ ಮುನ್ನ ಮುರುಡೇಶ್ವರ ಗಾಲ್ಫ್ ಕ್ಲಬ್ ನ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಉಪಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದ್ದು, ಮಹಾರಾಷ್ಟ್ರದ ಚುನಾವಣೋತ್ತರ ಸಮೀಕ್ಷೆ ಕುರಿತು ಬಗ್ಗೆ ಕೇಳಿದಾಗ, “ನಾವು ಅಲ್ಲಿಯೂ ಗೆದ್ದೇ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸವಿದೆ. ನನಗೆ ಆ ರಾಜ್ಯದ ಬಗ್ಗೆ ಹೆಚ್ಚು ಚಿತ್ರಣವಿಲ್ಲ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ಸರಳ ಬಹುಮತ ಪಡೆದು ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನಾನು ಕೂಡ ಪ್ರಚಾರಕ್ಕೆ ಹೋಗಿದ್ದೆ, ಆಗ ಕಾಂಗ್ರೆಸ್ ಪರ ಅಲೆ ಕಂಡಿತು. ಆದರೆ ಮತ ಪೆಟ್ಟಿಗೆಯಲ್ಲಿ ಏನಿದೆ ಎಂಬುದು ಯಾರಿಗೂ ತಿಳಿಯುವುದಿಲ್ಲ. ಜಾರ್ಖಂಡ್ ಬಗ್ಗೆ ಗೊತ್ತಿಲ್ಲ” ಎಂದು ಹೇಳಿದರು. ಚನ್ನಪಟ್ಟಣದಲ್ಲಿ ಗೆಲುವು ಖಂಡಿತ ಎಲ್ಲಾ ಎಕ್ಸಿಟ್ ಪೋಲ್ ಗಳು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಸೋಲು ಹಾಗೂ ಜಮೀರ್ ಅವರ ಮೈ…

Read More