Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಕಾರಣ ಅಮೇರಿಕಾಕ್ಕೆ ಶಸ್ತ್ರ ಚಿಕಿತ್ಸೆಗೆ ತೆರಳಿದ್ದಾರೆ. ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಇಂತಹ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್, ದೇವರ ಕೃಪೆಯಿಂದ ನನ್ನ ತ೦ದೆಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ, ಮಿಯಾಮಿ ಹೆಲ್ತ್ ಕೇರ್ ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ. ಮುರುಗೇಸನ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ತೂರ್ವಕ ಧನ್ಯಾದಗಳನ್ನು ಅರ್ಪಿಸುತ್ತೇವೆ ಎಂದಿದ್ದಾರೆ. ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಸೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ…
ಬೆಂಗಳೂರು: ಸಿ.ಟಿ ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು. ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನಿಡಿ, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಠಾಣೆಯೊಳಗೆ ಬಿಜೆಪಿ ಸಭೆಗೆ ಅವಕಾಶ ನೀಡಿದ್ದು ತಪ್ಪು ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು…
ಬೆಳಗಾವಿ : 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣ ಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು. ಬದಲಾವಣೆ ನಿರಂತರವಾದ ಪ್ರಕ್ರಿಯೆ ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು. ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು…
ಬೆಂಗಳೂರು: ಡಿಸೆಂಬರ್.27ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಗುತ್ತಿದೆ. ಅಲ್ಲವೇ ವರ್ಷವಿಡೀ ಗಾಂಧಿ ಭಾರತ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಲಾಗಿದ್ದು, ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದಿದೆ. ಡಿಸೆಂಬರ್ 27 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬೃಹತ್ ಗಾಂಧಿ ಪ್ರತಿಮೆ ಅನಾವರಣಗೊಳ್ಳಲಿದೆ. ವರ್ಷವಿಡೀ ʼಗಾಂಧಿ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದೆ. https://twitter.com/KarnatakaVarthe/status/1871920091140636698 https://kannadanewsnow.com/kannada/good-news-for-the-people-of-bengaluru-new-metro-feeder-bmtc-buses-to-ply-on-this-route/ https://kannadanewsnow.com/kannada/pakistani-airstrikes-kill-46-including-children-taliban-vows-retaliation/
ಪಣಜಿ: ಗೋವಾದ ಕಲಂಗುಟ್ ಬೀಚ್ನಲ್ಲಿ ದೋಣಿ ಮಗುಚಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 13 ಜನರನ್ನು ರಕ್ಷಿಸಲಾಗಿದೆ. ಕಾರ್ಯಾಚರಣೆಯಲ್ಲಿ 13 ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. “ಕಲಂಗುಟ್ ಬೀಚ್ನಲ್ಲಿ ದೋಣಿ ಮಗುಚಿ ಬಿದ್ದಿದೆ… ಘಟನೆಯಲ್ಲಿ ನಾವು 13 ಜನರನ್ನು ರಕ್ಷಿಸಿದ್ದೇವೆ. ನಿಖರವಾದ ಜನರ ಸಂಖ್ಯೆ ನಮಗೆ ತಿಳಿದಿಲ್ಲ. ಆದರೆ ದೋಣಿಯ ಅಡಿಯಲ್ಲಿ ಸಿಲುಕಿದ್ದ ಒಂದೇ ಕುಟುಂಬದ ಸುಮಾರು 6 ಜನರು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ… ಘಟನೆಗೆ ಕಾರಣವೇನೆಂದು ನಮಗೆ ತಿಳಿದಿಲ್ಲ. ಆ 6 ಜನರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ” ಎಂದು ಲೈಫ್ ಗಾರ್ಡ್ ಉಸ್ತುವಾರಿ ಸಂಜಯ್ ಯಾದವ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಕೆಲವು ತಿಂಗಳ ಹಿಂದೆ ಗೋವಾದ ಬಾಗಾ ಬೀಚ್ನಲ್ಲಿ ನೋಂದಣಿಯಾಗದ ಜಾಯ್ರೈಡ್ ದೋಣಿ ಮಗುಚಿದ ಪರಿಣಾಮ 12 ಪ್ರವಾಸಿಗರನ್ನು ಜೀವರಕ್ಷಕರು ರಕ್ಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. https://kannadanewsnow.com/kannada/good-news-for-the-people-of-bengaluru-new-metro-feeder-bmtc-buses-to-ply-on-this-route/ https://kannadanewsnow.com/kannada/pakistani-airstrikes-kill-46-including-children-taliban-vows-retaliation/
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ ಮೆಟ್ರೋ ಫೀಡರ್ ಮಾರ್ಗದಲ್ಲಿ ಬಿಎಂಟಿಸಿ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮೆಟ್ರೋ ಫೀಡರ್ ಮಾರ್ಗವನ್ನು ದಿನಾಂಕ 01.01.2025 ರಿಂದ ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸು/ ಸುತ್ತುವಳಿಗಳ ಸಂಖ್ಯೆ ಎಂಎಫ್-49 ಚಿಕ್ಕಬಿದರಕಲ್ಲು ಮೆಟ್ರೋ ನಿಲ್ದಾಣ ಆಚಾರ್ಯ ಇನ್ಸ್ಟಿಟ್ಯೂಟ್ ತೋಟದಗುಡ್ಡದಹಳ್ಳಿ, ತಮ್ಮೇನಹಳ್ಳಿ. 1 ಬಸ್ಸು 26 ಸುತ್ತುವಳಿಗಳು ಎಂಎಫ್-50 ಚಿಕ್ಕಬಿದರಕಲ್ಲು ಮೆಟ್ರೋ ನಿಲ್ದಾಣ ಚಿಕ್ಕಬಿದರಕಲ್ಲು ಮೆಟ್ರೋ ನಿಲ್ದಾಣ ತೋಟದಗುಡ್ಡದಹಳ್ಳಿ, ಕುದುರೆಗೆರೆ ಕಾಲೋನಿ, ಮಾದನಾಯಕನಹಳ್ಳಿ, 2 ಬಸ್ಸು 26 ಸುತ್ತುವಳಿಗಳು ಎಂಎಫ್-51 ಮಾದಾವರ ಮೆಟ್ರೋ ನಿಲ್ದಾಣ …
ಕಲಬುರ್ಗಿ: ರಾಜ್ಯದಲ್ಲಿ ಅಪಘಾತಗಳ ಸರಣಿ ಮುಂದುವರೆದಿದ್ದು, ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಂದು ಟಿಟಿ, ಲಾರಿ, ಬೈಕ್ ನಡುವಿನ ಸರಣಿ ಅಪಘಾತದಲ್ಲಿ ಮೂವರು ದುರ್ಮರಣಹೊಂದಿರುವಂತ ಘಟನೆ ಅಫಜಲಪುರದಲ್ಲಿ ನಡೆದಿದೆ. ಇಂದು ಸೋಲಾಪುರ ಹಾಗೂ ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ 151ರ ಗೊಬ್ಬರ ಬಿ ಗ್ರಾಮದ ಸಮೀಪದಲ್ಲಿ ಉಂಟಾದಂತ ಟಿಟಿ, ಬೈಕ್, ಲಾರಿ ನಡುವಿನ ಸರಣಿ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಮೃತರನ್ನು ಕಲಬುರ್ಗಿ ನಗರದ ವಿನಿತಾ, ಅನುಪ್ ಬೆಂಗೇರಿ ಹಾಗೂ ಗೊಬ್ಬುರ ಬಿ ಗ್ರಾಮದ ಬಸವರಾಜ ಎಂಬುದಾಗಿ ಗುರುತಿಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲಬುರಗಿ ನಗರ ಮೂಲದ ವಿನಿತಾ, ಅನುಪ್ ಸೇರಿ ಸುಮಾರು 8 ಮಂದಿ ಟೆಂಪೋ ಟ್ರಾವಲ್ (ಟಿಟಿ) ವಾಹನದಲ್ಲಿ ದೇವಲ ಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಹೋಗಿದ್ದರು. ದೇವರ ದರ್ಶನ ಮಾಡಿಕೊಂಡು ಸಂಜೆ ಮನೆಗೆ ವಾಪಸ್ ಆಗುತ್ತಿದ್ದರು. ಗೊಬ್ಬರ (ಬಿ) ಸಮೀಪ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಟಿಟಿ ಚಾಲಕ ಎದುರಿನಿಂದ ಬರುತ್ತಿದ್ದ ಕಬ್ಬಿನ…
ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲಿನ “ಮೊಟ್ಟೆ ಅಟ್ಯಾಕ್” ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ, ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ ಎಂಬುದಾಗಿ ಕಾಂಗ್ರೆಸ್ ಮುಖಂಡೆ ಕುಸುಮಾ ಹನುಮಂತರಾಯಪ್ಪ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು “ಇಮೇಜ್ ಬಿಲ್ಡಿಂಗ್” ಆಕ್ಟಿವಿಟಿಯ ಒಂದು ಭಾಗವೇ ಇಂದಿನ ಪ್ರಹಸನಗಳು. ಈತನ ಸ್ಕ್ರಿಪ್ಟೆಡ್ ಸ್ಟೋರಿಗಳು ಅಲ್ಪ ವಿರಾಮದ ಬಳಿಕ ಮತ್ತೆ ಚಾಲ್ತಿಗೆ ಬಂದಿವೆ ಎಂದಿದ್ದಾರೆ. ಮಹಿಳೆಯರಿಗೆ ರಾಜಕೀಯದಲ್ಲಿ ಆದ್ಯತೆಯೇ ಕಡಿಮೆ ಇಂತಹ ಸನ್ನಿವೇಶದಲ್ಲಿ ಸ್ವಚ್ಚ ರಾಜಕಾರಣದ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣದ ಕನಸುಗಳಿಗೆ ಬೆಲೆಯಿಲ್ಲವೆನಿಸುತ್ತದೆ. ಈ ನಾಟಕಗಳನ್ನು ಗಮನಿಸಿದರೆ ಕೊಚ್ಚೆಯಲ್ಲಿ ಹೊರಳಾಡುವ ಹಂದಿಯ ಜೊತೆ ಹಂದಿಗಳಾಗಿಯೇ ಇರಬೇಕಾ ಎಂಬ ಪ್ರಶ್ನೆಯ ಜೊತೆ ಅಸಹ್ಯ ಮೂಡುತ್ತಿದೆ ಎಂಬುದಾಗಿ…
ಕಾಬೂಲ್: ಅಫ್ಘಾನಿಸ್ತಾನದ ಪೂರ್ವ ಗಡಿ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 46 ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ಬುಧವಾರ ಎಎಫ್ಪಿಗೆ ತಿಳಿಸಿದ್ದಾರೆ. ಕಳೆದ ರಾತ್ರಿ (ಮಂಗಳವಾರ) ಪಾಕಿಸ್ತಾನವು ಪಕ್ತಿಕಾ ಪ್ರಾಂತ್ಯದ ಬರ್ಮಲ್ ಜಿಲ್ಲೆಯ ನಾಲ್ಕು ಪಾಯಿಂಟ್ಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಮೃತರಲ್ಲಿ 46 ಮಂದಿ ಮಕ್ಕಳು ಮತ್ತು ಮಹಿಳೆಯರು ಎಂದು ವಕ್ತಾರ ಜಬಿಹುಲ್ಲಾ ಮುಜಾಹಿದ್ ತಿಳಿಸಿದ್ದಾರೆ. ಇನ್ನೂ ಆರು ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು ಮಕ್ಕಳು ಎಂದು ಅವರು ಹೇಳಿದರು. ಅಫ್ಘಾನ್ ಭೂಪ್ರದೇಶದ ಮೇಲೆ ಪಾಕಿಸ್ತಾನದ ಇತ್ತೀಚಿನ ದಾಳಿಯನ್ನು ಮಂಗಳವಾರ ತಡರಾತ್ರಿ ರಕ್ಷಣಾ ಸಚಿವಾಲಯದ ಹೇಳಿಕೆ ಖಂಡಿಸಿದ್ದು, ಅವುಗಳನ್ನು “ಅನಾಗರಿಕ” ಮತ್ತು “ಸ್ಪಷ್ಟ ಆಕ್ರಮಣ” ಎಂದು ಕರೆದಿದೆ. “ಇಸ್ಲಾಮಿಕ್ ಎಮಿರೇಟ್ ಈ ಹೇಡಿತನದ ಕೃತ್ಯವನ್ನು ಉತ್ತರಿಸದೆ ಬಿಡುವುದಿಲ್ಲ, ಬದಲಿಗೆ ತನ್ನ ಭೂಪ್ರದೇಶ ಮತ್ತು ಸಾರ್ವಭೌಮತ್ವದ ರಕ್ಷಣೆಯನ್ನು ತನ್ನ ಅವಿಭಾಜ್ಯ ಹಕ್ಕು ಎಂದು ಪರಿಗಣಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಾರ್ಚ್ನಲ್ಲಿ ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಮಿಲಿಟರಿ…
ಬೆಂಗಳೂರು: ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29 ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು…