Author: kannadanewsnow09

ಬೆಂಗಳೂರು: ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಜೀ ಅವರು ರಾತ್ರಿ 2.45ಕ್ಕೆ ತಲುಪಿದ್ದು, ಬೆಳಿಗ್ಗೆ ಕಾರ್ಯಕ್ರಮದಲ್ಲಿ ಕೊಂಚ ಬದಲಾವಣೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಲ್ಲಿಂದ ನೇರವಾಗಿ ಅವರು ಸುತ್ತೂರಿಗೆ ತೆರಳಿ ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಯ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನ ಇಲ್ಲಿ ಕೋರ್ ಕಮಿಟಿ ಮೀಟಿಂಗ್ ಇದೆ. ಅದಾದ ನಂತರ ರ್ಯಾಡಿಸನ್ ಹೋಟೆಲ್‍ನಲ್ಲಿ ನಡೆಯುವ 4 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮೈಸೂರು ಕ್ಲಸ್ಟರ್‍ನ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಇವತ್ತು ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಪ್ರಮುಖರ ಸಭೆ ಕರೆದಿದ್ದೇವೆ. 4 ಲೋಕಸಭಾ ಕ್ಷೇತ್ರಗಳ 100-120 ಪ್ರಮುಖರು ಆ ಸಭೆಯಲ್ಲಿ ಭಾಗವಹಿಸುತ್ತಾರೆ. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯತಂತ್ರ ಹೇಗಿರಬೇಕು, ಬಿಜೆಪಿ- ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದು, ತಳಹಂತದಲ್ಲಿ…

Read More

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಅಭಿವೃದ್ಧಿಶೂನ್ಯ ಸರಕಾರವನ್ನು ನಾವು ನೋಡುತ್ತಿದ್ದೇವೆ; ಇದು ನಿಜಕ್ಕೂ ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ವೈಫಲ್ಯಗಳನ್ನು ಮುಚ್ಚಿಹಾಕಲು ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಹೊಸ ನಾಟಕವನ್ನು ರಾಜ್ಯದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ವಿಶ್ಲೇಷಿಸಿದರು. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಘೋಷಣೆಯೊಂದಿಗೆ ಹೊರಟ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರಕಾರವು ಕಳೆದ 10 ವರ್ಷಗಳಲ್ಲಿ ನರೇಂದ್ರ ಮೋದಿಜೀ ಅವರು ಕೊಟ್ಟ ಕೊಡುಗೆಗಳು, ಯೋಜನೆಗಳನ್ನು ಒಂದು ಸಲ ಮೆಲುಕು ಹಾಕಿ ನೋಡಲಿ ಎಂದು ಆಗ್ರಹಿಸಿದರು. ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ- ಮುಖಂಡರು ಸಾಕಷ್ಟು ಭರವಸೆಗಳನ್ನು ಚುನಾವಣೆ ಸಂದರ್ಭದಲ್ಲಿ ಕೊಟ್ಟಿದ್ದರು. ಅಭೂತಪೂರ್ವ ಬೆಂಬಲದೊಂದಿಗೆ ಸರಕಾರ ಅಧಿಕಾರಕ್ಕೆ ಬಂದಾಗ ಸಹಜವಾಗಿ ರಾಜ್ಯದ ಜನರಲ್ಲಿ ಅಪೇಕ್ಷೆ, ನಿರೀಕ್ಷೆಗಳು ಸಾಕಷ್ಟಿದ್ದವು. ಆದರೆ, ಅವೆಲ್ಲವೂ ಮಣ್ಣುಪಾಲಾಗಿದೆ. ಮತದಾರರಲ್ಲಿ ತಾವು ಮೋಸಹೋಗಿದ್ದೇವೆ ಎಂಬ ಭಾವನೆ…

Read More

ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಬೆಂಗಳೂರು: ಗುತ್ತಿಗೆದಾರರಿಂದ ಕಮೀಷನ್ ಆರೋಪ ಎದುರಿಸುತ್ತಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯಲು ಒಂದು ಕ್ಷಣವೂ ಅರ್ಹರಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂಬುದಾಗಿ ಆರ್ ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಗುತ್ತಿಗೆದಾರರಿಗೆ ಹಣ ಪಾವತಿ ಮಾಡುವುದರಿಂದ ಬಚಾವಾಗಲು ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ನೇತೃತ್ವದ ಆಯೋಗ ರಚಿಸಿದೆ ಎಂಬ ಗುತ್ತಿಗೆದಾರರ ಆಪಾದನೆ ಸರಿ ಇದ್ದಂತಿದೆ” ಎಂದು ಮಾನ್ಯ ಹೈಕೋರ್ಟ್ ಕಾಂಗ್ರೆಸ್ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದಿದ್ದಾರೆ. ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆಪಾದನೆ ಮಾಡಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯಸರ್ಕಾರ ಈಗ ಕಮಿಷನ್ ಕೊಟ್ಟವರಿಗೆ ಮಾತ್ರ ಬಿಲ್ ಕೊಟ್ಟು, ಕಮಿಷನ್ ಕೊಡದವರಿಗೆ ಹಣ ಬಿಡುಗಡೆ ಮಾಡದೆ ತನಿಖಾ ಆಯೋಗದ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಯನ್ನ ದುರ್ಬಲಗೊಳಿಸುವ ಮೂಲಕ ಭ್ರಷ್ಟರನ್ನು ರಕ್ಷಿಸಲು ಹೋಗಿ ಹೈಕೋರ್ಟ್ ನಿಂದ ಛೀಮಾರಿ…

Read More

ರಾಯಚೂರು: ಜಿಲ್ಲೆಯಲ್ಲಿ ಒಂದೇ ಶಾಲೆ 100ಕ್ಕೂ ಹೆಚ್ಚು ಮಕ್ಕಳಿಗೆ ಮಂಗನ ಬಾವು ರೋಗ ತಗುಲಿರೋದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ದಿನೇ ದಿನೇ ಮತ್ತಷ್ಟು ಮಕ್ಕಳಿಗೆ ರೋಗ ವ್ಯಾಪಿಸುತ್ತಿರೋದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟಿಸಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನೀರಲಕೇರಿ ಗ್ರಾಮದಲ್ಲಿರುವಂತ ಸರ್ಕಾರಿ ಶಾಲೆಯ ಮಕ್ಕಳಿಗೆ ಮಂಗನ ಬಾವು ಖಾಯಿಲೆ ಶಾಕ್ ನೀಡಿದೆ. ಶಾಲೆಯ 100ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ದೃಢಪಟ್ಟಿರೋದಾಗಿ ತಿಳಿದು ಬಂದಿದೆ. ನೀರಲಕೇರಿ ಸರ್ಕಾರಿ ಶಾಲೆಯ ಮಕ್ಕಳಲ್ಲಿ ಒಬ್ಬರಿಂದ ಒಬ್ಬರಿಗೆ ಮಂಗನ ಬಾವು ಹರಡಿದೆ. ಗಂಟಲು ಭಾಗದಲ್ಲಿ ಬಾವು, ತಲೆ ನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿರೋದಾಗಿ ತಿಳಿದು ಬಂದಿದೆ. ಮಂಗನ ಬಾವಿನಿಂದ ಬಳಲುತ್ತಿರೋ ಮಕ್ಕಳು ಶಾಲೆ ತಪ್ಪಿಸಿ, ಗೈರಾಗುತ್ತಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಗ್ರಾಮದಲ್ಲೇ ಆರೋಗ್ಯ ಅಧಿಕಾರಿಗಳು ಮೊಕ್ಕಾಂ ಹೂಡಿ, ಪರೀಕ್ಷೆ, ಚಿಕಿತ್ಸೆಯಲ್ಲಿ ತೊಡಗಿದ್ದಾರೆ. https://kannadanewsnow.com/kannada/breaking-son-in-law-kills-mother-in-law-who-went-to-settle-a-dispute-between-husband-and-wife-in-tumkur/ https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/

Read More

ಮೈಸೂರು: ಕ್ಲಸ್ಟರ್ ಮಟ್ಟದ ನಾಯಕರ ಲೈನ್ ಅಪ್ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತದ ವೇಳೆಯಲ್ಲೇ ಬಿಜೆಪಿಯ ಮಾಜಿ ಶಾಸಕ, ಹಾಲಿ ಸಂಸದರು ಕಿತ್ತಾಡಿಕೊಂಡ ಘಟನೆ ನಡೆದಿರೋದಾಗಿ ತಿಳಿದು ಬಂದಿದೆ. ಇಂದು ಮೈಸೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳ ನಿಮಿತ್ತ ಆಗಮಿಸಿದ್ದಾರೆ. ಅವರನ್ನು ಸ್ವಾಗತ ಮಾಡೋದಕ್ಕೆ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಕ್ಲಸ್ಟರ್ ಮಟ್ಟದ ನಾಯಕರನ್ನು ಲೈನ್ ಅಪ್ ಮಾಡೋ ಹೊಣೆಗಾರಿಕೆಯನ್ನು ನೀಡಲಿಗ್ತುತ. ಬಿಜೆಪಿ ನಾಯಕರ ಲೈನ್ ಅಪ್ ಪಟ್ಟಿಯನ್ನು ಗಮನಿಸಿದಂತ ಸಂಸದ ಪ್ರತಾಪ್ ಸಿಂಹ ಅವರು, ಸ್ಥಳೀಯ ನಾಯಕರು ಪಟ್ಟಿಯಲ್ಲಿ ಇರದೇ ಇರೋದರಿಂದ ಸಿಟ್ಟಾಗಿದ್ದಾರೆ. ಇದನ್ನು ನೇರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಭೇಟಿಯಾಗೇ ಪ್ರಶ್ನಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಶ್ನೆಗೆ ತಾನು ಮಾಡಿದ್ದೇ ಸರಿ ಎನ್ನುವಂತೆ ಮಾಜಿ ಶಾಸಕ ಪ್ರೀತಂ ಗೌಡ ಉತ್ತರಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತ ಸಂದರ್ಭದಲ್ಲಿಯೇ…

Read More

ಹಾವೇರಿ: ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಹಾಲು, ಮೊಸರು ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳು ಗಗನಕ್ಕೇರುತ್ತಿವೆ. ಇದರ ನಡುವೆ ಸಕ್ಕರೆ ದರ ಕೂಡ ಹೆಚ್ಚಳ ಆಗೋ ಸಾಧ್ಯತೆ ಇದೆ ಎನ್ನಲಾಗುತ್ತಿತ್ತು. ಆದ್ರೇ ರಾಜ್ಯದ ಜನರಿಗೆ ನೆಮ್ಮದಿಯ ಸುದ್ದಿ ಎನ್ನುವಂತೆ ಸದ್ಯಕ್ಕೆ ಸಕ್ಕರೆ ಬೆಲೆ ಏರಿಕೆಯಿಲ್ಲ ಅಂತ ಸಚಿವ ಶಿವಾನಂದ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ಸದ್ಯದ ಪರಿಸ್ಥಿತಿಯಲ್ಲಿ ಸಕ್ಕರೆ ದರದಲ್ಲಿ ಏರಿಕೆ ಇಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲೂ 55 ರೂ ಇದೆ. ಲೋಕಸಭಾ ಚುನಾವಣೆ ಕಾರಣಕ್ಕೆ ದರ 34ಕ್ಕೆ ನಿಂತಿದೆ ಎಂದರು. ಕೇಂದ್ರ ಸರ್ಕಾರ ಏಕಾಏಕಿ ಎಥೆನಾಲ್ ನೀತಿ ಜಾರಿಗೊಳಿಸಿರುವ ಪರಿಣಾಮ ಸಕ್ಕರೆ ಧಾರಣೆ ಏರುತ್ತಿಲ್ಲ ಎನ್ನುವುದೇ ದೇಶದ ದುರ್ದೈವ ಎಂಬುದಾಗಿ ವಿಷಾದಿಸಿದರು. https://kannadanewsnow.com/kannada/three-employees-of-panchayati-raj-department-suspended-for-two-bills-for-same-work/ https://kannadanewsnow.com/kannada/lok-sabha-elections-2024-former-minister-v-somanna-becomes-fully-active-after-meeting-high-command/

Read More

ರಾಯಚೂರು: ಒಂದು ಕಾಮಗಾರಿಗೆ ಒಂದೇ ಬಿಲ್ ಪಡೆಯಬೇಕು. ಆದ್ರೇ ಇದನ್ನು ಮೀರಿ ಎರಡು ಬಿಲ್ ನೀಡಿದಂತ ಮೂವರು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಆರ್ ಡಿ ಪಿ ಆರ್ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಜಲ ಜೀವನ್ ಮಿಷನ್ ಅಡಿ ಒಂದೇ ಕಾಮಗಾರಿಗೆ ಎರಡು ಬಿಲ್ ನೀಡಿದ ಆರೋಪ ಆಧರಿಸಿ, ಜಿಲ್ಲಾ ಪಂಚಾಯ್ತಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇಇ ಸೈಯದ್ ಫಜಲ್ ಮೆಹಮೂದ್, ಲೆಕ್ಕಾಧಿಕಾರಿ ಅಬ್ದುಲ್ ರಹೀಮ್ ಹಾಗೂ ಪ್ರಥಮ ದರ್ಜೆ ಸಹಾಯ ಜಾಕೀರ್ ಹುಸೇನ್ ಎಂಬುವರನ್ನು ಅಮಾನತುಗೊಳಿಸಲಾಗಿದೆ. ಗುತ್ತಿಗೆದಾರರೊಬ್ಬರಿಗೆ 19,66,285 ರೂ ಬಿಲ್ ಅನ್ನು ಎರಡು ಬಾರಿ ಪಾವತಿಸಿ, ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆಯಲ್ಲಿ ಸಾಬೀತಾದ ಹಿನ್ನಲೆಯಲ್ಲಿ ಮೂವರನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/former-bcci-president-sourav-gangulys-phone-worth-rs-1-6-lakh-stolen-police-complaint-lodged/ https://kannadanewsnow.com/kannada/breaking-son-in-law-kills-mother-in-law-who-went-to-settle-a-dispute-between-husband-and-wife-in-tumkur/

Read More

ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಠಾಕೂರ್ ಪುರ ಪೊಲೀಸ್ ಠಾಣೆಯಲ್ಲಿ ಫೋನ್ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದಾರೆ. ಹಲವಾರು ವರದಿಗಳ ಪ್ರಕಾರ, ಗಂಗೂಲಿ ಅವರ ಫೋನ್ ಮೌಲ್ಯ 1.6 ಲಕ್ಷ ಮತ್ತು ಅದು ಕೋಲ್ಕತ್ತಾದ ಅವರ ಬೆಹಲಾ ನಿವಾಸದಿಂದ ಕಾಣೆಯಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ನ ಕ್ರಿಕೆಟ್ ನಿರ್ದೇಶಕರು ಅನುಮಾನಾಸ್ಪದ ಕಳ್ಳತನದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಅವರ ಫೋನ್ “ಬಹು ಸಂಪರ್ಕ ಸಂಖ್ಯೆಗಳು ಮತ್ತು ವೈಯಕ್ತಿಕ ಮಾಹಿತಿ ಮತ್ತು ಖಾತೆಗಳಿಗೆ ಪ್ರವೇಶವನ್ನು ಹೊಂದಿದೆ. ಕೋಲ್ಕತಾದ ರಾಜಕುಮಾರ ಪೊಲೀಸರಿಗೆ “ಸೂಕ್ತ ಕ್ರಮ” ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ. ನನ್ನ ಫೋನ್ ಅನ್ನು ಮನೆಯಿಂದ ಕಳವು ಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಕೊನೆಯ ಬಾರಿಗೆ ಜನವರಿ 19 ರಂದು ಬೆಳಿಗ್ಗೆ 11: 30 ರ ಸುಮಾರಿಗೆ ಫೋನ್ ನೋಡಿದೆ. ನಾನು ಫೋನ್ ಹುಡುಕಲು ಪ್ರಯತ್ನಿಸಿದೆ. ಆದರೆ ಅದನ್ನು ಪತ್ತೆ ಹಚ್ಚೋದಕ್ಕೆ ಸಾಧ್ಯವಾಗಲಿಲ್ಲ. ನನ್ನ ಫೋನ್ ಕಳೆದುಹೋದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ. ಏಕೆಂದರೆ…

Read More

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿ ಯೊಳಗೆ ಪೂರ್ಣ ಗೊಳಿಸಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತಿಂಗಳ ಅಂತ್ಯದಲ್ಲಿ 36 ಸಾವಿರ ಮನೆ ಹಂಚಿಕೆ ಮಾಡುವ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಯವರು ಏಕ ಕಾಲದಲ್ಲಿ ರಾಜ್ಯ ದೆಲ್ಲೆಡೆ ಮನೆಗಳ ಹಂಚಿಕೆ ಗೆ ಚಾಲನೆ ನೀಡಲಿದ್ದು ಅದೇ ದಿನ ಫಲಾನುಭವಿಗಳಿಗೆ ಕೀ ನೀಡಬೇಕು. ಕುಡಿಯುವ ನೀರು, ಒಳ ಚರಂಡಿ, ವಿದ್ಯುತ್ ಸಂಪರ್ಕ ಸಹಿತ ಮೂಲ ಸೌಕರ್ಯ ಕಾಮಗಾರಿ ಫೆ.20 ರೊಳಗೆ ಮುಗಿದಿರಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿ ಯೋಜನೆಯಲ್ಲಿ ಎಷ್ಟು ಮನೆ ನೀಡಲಾಗುವುದು ಎಂಬ ಗುರಿ ನೀಡಲಾಗಿದೆಯೋ ಅಷ್ಟು ಕೊಡಲೇಬೇಕು.…

Read More