Author: kannadanewsnow09

ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ ಮನೆಗಳ ಗುಣಮಟ್ಟ ಉತ್ತಮ ವಾಗಿರಬೇಕು. ಜತೆಗೆ ಮೂಲ ಸೌಕರ್ಯ ಸಹಿತ ಎಲ್ಲ ಕಾಮಗಾರಿ ನಿಗದಿತ ಅವಧಿ ಯೊಳಗೆ ಪೂರ್ಣ ಗೊಳಿಸಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ತಿಂಗಳ ಅಂತ್ಯದಲ್ಲಿ 36 ಸಾವಿರ ಮನೆ ಹಂಚಿಕೆ ಮಾಡುವ ಹಿನ್ನಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಖ್ಯಮಂತ್ರಿ ಯವರು ಏಕ ಕಾಲದಲ್ಲಿ ರಾಜ್ಯ ದೆಲ್ಲೆಡೆ ಮನೆಗಳ ಹಂಚಿಕೆ ಗೆ ಚಾಲನೆ ನೀಡಲಿದ್ದು ಅದೇ ದಿನ ಫಲಾನುಭವಿಗಳಿಗೆ ಕೀ ನೀಡಬೇಕು. ಕುಡಿಯುವ ನೀರು, ಒಳ ಚರಂಡಿ, ವಿದ್ಯುತ್ ಸಂಪರ್ಕ ಸಹಿತ ಮೂಲ ಸೌಕರ್ಯ ಕಾಮಗಾರಿ ಫೆ.20 ರೊಳಗೆ ಮುಗಿದಿರಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿ ಯೋಜನೆಯಲ್ಲಿ ಎಷ್ಟು ಮನೆ ನೀಡಲಾಗುವುದು ಎಂಬ ಗುರಿ ನೀಡಲಾಗಿದೆಯೋ ಅಷ್ಟು ಕೊಡಲೇಬೇಕು.…

Read More

ನವದೆಹಲಿ: ಈ ಬಾರಿ ಸಂಸತ್ತಿನ ಬಜೆಟ್ ಅಧಿವೇಶನವನ್ನು 9 ದಿನಗಳ ಕಾಲ ನಿಗದಿ ಪಡಿಸಲಾಗಿತ್ತು. ಆದರೂ ಮತ್ತೊಂದು ದಿನ ವಿಸ್ತರಿಸಲಾಗಿತ್ತು. ಲೋಕಸಭೆಯಲ್ಲಿ 228, ರಾಜ್ಯಸಭೆಯಲ್ಲಿ 220 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಸಂಸತ್ತಿನ ಕೇಂದ್ರ ಮಧ್ಯಂತರ ಬಜೆಟ್ ಅಧಿವೇಶನವನ್ನು 9 ದಿನಗಳ ಕಾಲ ಮೊದಲು ನಿಗದಿ ಪಡಿಸಲಾಗಿತ್ತು. ಆ ಬಳಿಕ ಮತ್ತೊಂದು ದಿನ ಅಧಿವೇಶನ ವಿಸ್ತರಣೆ ಮಾಡಲಾಯಿತು ಎಂದರು. ಬಜೆಟ್ ಅಧಿವೇಶದನದ ವೇಳೆ 12 ಬಿಲ್ ಮಂಡಿಸಿ ಅಂಗೀಕರಿಸಲಾಗಿದೆ. ಸಂಸದೀಯ ಕಲಾಪಗಳ ಉತ್ಪದಕತೆ 148 ಪರ್ಸೆಂಟ್ ನಷ್ಟು ಇದೆ ಎಂದರು. 17ನೇ ಲೋಕಸಭಾಯಲ್ಲಿ 274 ಕಲಾಪಗಳು ನಡೆದಿವೆ. ಲೋಕಸಭೆಯಲ್ಲಿ 228 ವಿಧೇಯಕ ಮಂಡಿಸಿ ಅಂಗೀಕರಿಸಲಾಗಿದೆ. ರಾಜ್ಯಸಭೆಯಲ್ಲಿ 271 ಕಲಾಪ ನಡೆಸಲಾಗಿದೆ. ರಾಜ್ಯಸಭೆಯಲ್ಲಿ ಒಟ್ಟು 220 ವಿಧೇಯಕ ಅಂಗೀಕರಿಸಲಾಗಿದೆ ಎಂದು ತಿಳಿಸಿದರು. https://kannadanewsnow.com/kannada/non-bailable-warrant-issued-against-transport-minister-ramalinga-reddy/ https://kannadanewsnow.com/kannada/good-news-for-state-contractual-outsourced-employees-equal-work-equal-pay-to-be-implemented/

Read More

ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ 7500 ಎಕರೆ ಅರಣ್ಯ ಭೂಮಿಯನ್ನು ಬ್ರಿಟಿಷರು ಕೆಲವು ಎಸ್ಟೇಟ್ ಕಂಪನಿಗಳಿಗೆ ದೀರ್ಘ ಕಾಲದ ಅವಧಿಗೆ ಗುತ್ತಿಗೆ ನೀಡಿರುತ್ತಾರೆ. ಇದರಿಂದಾಗಿ ಪ್ರಾಣಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆದು ಅರಣ್ಯ ವಿಸ್ತರಿಸಲು ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಎಸ್ಟೇಟ್ ಗಳಿಗೆ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಗೆದಾರರಿಂದ ಬರಬೇಕಾದ ಬಾಕಿ ಮತ್ತು ಅವಧಿ ಮುಗಿದ ಅರಣ್ಯ ಭೂಮಿ ಮರುಪಡೆಯಲು ವಿಶೇಷ ತಂಡ ಮತ್ತು ಕಾನೂನು ಕೋಶವನ್ನು ರಚಿಸಲಾಗಿದೆ. ಈ ವಿಶೇಷ ತಂಡ ಗುತ್ತಿಗೆ ನೀಡಿದ ಅರಣ್ಯ ಭೂಮಿಯನ್ನು ಮರು ಪಡೆಯಲು ಕಾರ್ಯೋನ್ಮುಖವಾಗುತ್ತದೆ ಎಂದರು. ಕೆಲವು ವರ್ಷಗಳ ಹಿಂದೆ ಹಾಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿರುವ ಬಿ.ಪಿ. ರವಿ ಅವರು, ಚಾಮರಾಜನಗರದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದಾಗ ಕೆಲವು ಕಂಪನಿಗಳು ಗುತ್ತಿಗೆ ಹಣವನ್ನು ಅರಣ್ಯ ಇಲಾಖೆಗೆ ಪಾವತಿಸಿಲ್ಲ ಎಂದು ನೋಟಿಸ್ ನೀಡಿದ್ದರು, ಈಗ ಎಸ್ಟೇಟ್ ನವರು ನ್ಯಾಯಾಲಯಕ್ಕೆ ಹೋಗಿದ್ದಾರೆ.…

Read More

ಮೈಸೂರು : ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಡೀಪುರ ಅರಣ್ಯದೊಳಗೆ ಇರುವ ರಸ್ತೆ ಮಾರ್ಗವಾಗಿ ಕೇರಳಕ್ಕೆ ಹೋಗಲು ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಅವಕಾಶ ನೀಡಲಾಗಿದೆ. ರಾತ್ರಿ ಸಂಚಾರಕ್ಕೆ ಅವಕಾಶ ನಿರ್ಬಂಧಿಸಲಾಗಿದೆ. ಇದು ಮುಂದುವರಿಯುತ್ತದೆ ಎಂದರು. ಆದಾಗ್ಯೂ ಕೆಲವು ವಿಶೇಷ ಸಂದರ್ಭ ಅಂದರೆ ವೈದ್ಯಕೀಯ ತುರ್ತು ಇತ್ಯಾದಿ ಸಂದರ್ಭದಲ್ಲಿ ಪರಿಶೀಲಿಸಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು. ಬಂಡಿಪುರದಲ್ಲಿ ರೈಲು ಮಾರ್ಗ ಅಥವಾ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಸಮೀಕ್ಷೆ ಆಗಿಲ್ಲ ಎಂದು ತಿಳಿಸಿದರು. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅತ್ಯಗತ್ಯವಾಗಿದೆ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ಹೀಗಾಗಿ ಬೆಳೆ ಹಾನಿ ಆಗದಂತೆ ಮತ್ತು ಜೀವ ಹಾನಿ ಆಗದ ರೀತಿಯಲ್ಲಿ ರೈಲ್ವೆ ಬ್ಯಾರಿಕೇಡ್…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಮಂಗಳವಾರದಿಂದ ಎರಡು ದಿನಗಳ ಯುನೈಟೆಡ್ ಅರಬ್ ಎಮಿರೇಟ್ಸ್ (United Arab Emirates -UAE) ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ( President Sheikh Mohamed bin Zayed Al Nahyan ) ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಮತ್ತು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. 2015ರ ಬಳಿಕ ಯುಎಇಗೆ ಪ್ರಧಾನಿ ನೀಡುತ್ತಿರುವ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ. ಮೋದಿ ಮತ್ತು ಅಲ್ ನಹ್ಯಾನ್ ಅವರು ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸೋದಕ್ಕೆ, ವಿಸ್ತರಿಸುವ ಮತ್ತು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ. ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ಯುಎಇಯ ಉಪಾಧ್ಯಕ್ಷ, ಪ್ರಧಾನಿ ಮತ್ತು ರಕ್ಷಣಾ ಸಚಿವ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಖಾಸಗಿ ಶಾಲೆಯೊಂದರಲ್ಲಿ ಶಾಲಾ ಕ್ರೀಡಾಕೂಟದ ವೇಳೆಯಲ್ಲಿ ವಿದ್ಯುತ್ ಶಾಕ್ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದರೇ, 13 ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ದಿನಾಂಕ: 10.022024ರ ಇಂದು ಮಧ್ಯಾಹ್ನ ಸುಮಾರು 2.00 ಗಂಟೆ ಸಮಯದಲ್ಲಿ ಗೌರಿಬಿದನೂರು ನಗರದ ಶ್ರೀ ರಾಮಕೃಷ್ಣ ಶಾರದದೇವಿ ವಿದ್ಯಾಮಂದಿರ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳ ಪೋಷಕರಿಗೆ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮೈದಾನದಲ್ಲಿ ಪೆಂಡಾಲ್ ಹಾಕಿ ಚೇರ್ ಹಾಕಿದ್ದು ಮಧ್ಯಾಹ್ನ ಕ್ರೀಡೆಗಳು ನಡೆಯುತ್ತಿದ್ದಾಗ ಏಕಾ ಏಕಿ ಸುಂಟರ ಗಾಳಿ ಬೀಸಿದ್ದ ಕಾರಣ ಶಾಲೆಯ ಆವರಣದ ಮೇಲ್ಬಾಗದಲ್ಲಿ ಹಾದು ಹೋಗಿದ್ದು 66 ಕೆ.ವಿ ವಿದ್ಯುತ್ ಲೈನ್ ಗೆ ಪೆಂಡಾಲ್ ಟಚ್ ಆಗಿದೆ. ಹಾರಿಹೋಗುತ್ತಿದ್ದ ಪೆಂಡಾಲ್ ಹಿಡಿಯಲು ಹೋದ ಶಿಕ್ಷಕರು, ಮಕ್ಕಳು, ಪೋಷಕರು ಸೇರಿ 18 ಜನರಿಗೆ ವಿದ್ಯುತ್ ಶಾಕ್ ನಿಂದ ಗಾಯಗಳಾಗಿರುತ್ತದೆ ಎಂಬುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸರ್ಕಾರಿ ಆಸ್ಪತ್ರೆ ಹಾಗೂ…

Read More

ಶಿವಮೊಗ್ಗ: ಯಕ್ಷಗಾನ ಪ್ರಿಯರಿಗೆ ಸಂತಸದ ಸುದ್ದಿ ಎನ್ನುವಂತೆ ನಾಳೆ ಸಂಜೆ 7 ಗಂಟೆಗೆ ಸಾಗರದ ಗಾಂಧಿ ಮೈದಾನದಲ್ಲಿ ಮಾಗಧ ಕೃಷ್ಣ ಅಭಿಮನ್ಯು ಎಂಬಂತ ಪೌರಾಣಿಕ ಯಕ್ಷಗಾನ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಘಟಕರಾದಂತ ಸುದ್ದಿಸಾಗರ ಉಮೇಶ್ ಮೊಗವೀರ ಅವರು, ನಾಳೆ ಮೆಕ್ಕೆಕಟ್ಟು ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಾಗಧ ಕೃಷ್ಣ ಅಭಿಮನ್ಯು ಎಂಬ ಪೌರಾಣಿಕ ಯಕ್ಷಗಾನವನ್ನು ಸಾಗರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ನಾಳೆ ಸಂಜೆ 7 ಗಂಟೆಯಿಂದ ಯಕ್ಷಗಾನ ಪ್ರಾರಂಭವಾಗಲಿದೆ. ಈ ಯಕ್ಷಗಾನದಲ್ಲಿ ಅತಿಥಿ ಕಲಾವಿದರಾಗಿ ಗಾನ ಕೋಗಿಲಿ ಸುಬ್ರಹ್ಮಣ್ಯ ಧಾರೇಶ್ವರ, ಗೋಪಾಲ ಆಚಾರ್ಯ ತೀರ್ಥಹಳ್ಳಿ, ಮಲೆನಾಡಿನ ಕುವರ ಭಾಸ್ಕರ್ ತುಂಬ್ರಿಯವರು ಭಾಗಿಯಾಗಲಿದ್ದಾರೆ. ಇವರಿಗೆ ಸನ್ಮಾನ ಕಾರ್ಯಕ್ರಮ ಕೂಡ ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಈ ಯಕ್ಷಗಾನ ಕಾರ್ಯಕ್ರಮಕ್ಕೆ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಮೇಶ್ ಮೊಗವೀರ -8317369016, ನಾಗರಾಜ್ ಹೊಳೆಕೊಪ್ಪ -9449147023 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. https://kannadanewsnow.com/kannada/note-deputy-cm-dk-shivakumar-will-not-be-available-for-public-interview-from-tomorrow-till-february-23/ https://kannadanewsnow.com/kannada/good-news-for-state-contractual-outsourced-employees-equal-work-equal-pay-to-be-implemented/

Read More

ಬೆಂಗಳೂರು : ಬಜೆಟ್ ಅಧಿವೇಶನ, ಪಕ್ಷದ ಸಮಾವೇಶ, ಕುಟುಂಬ ಕಾರ್ಯಕ್ರಮ ನಿಮಿತ್ತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಫೆಬ್ರವರಿ 11 ರಿಂದ ಫೆ. 23 ರವರೆಗೆ ಸಾರ್ವಜನಿಕರ ಸಂದರ್ಶನಕ್ಕೆ ಲಭ್ಯವಿರುವುದಿಲ್ಲ. ಫೆ. 11ರಂದು ಕುಟುಂಬದಲ್ಲಿ ಮದುವೆ ಕಾರ್ಯಕ್ರಮ, 12 ರಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ, ಫೆ. 13 ಅಧಿವೇಶನ, ಫೆ. 14 ರಂದು ಲೋಕಸಭೆ ಚುನಾವಣೆ ತಯಾರಿ ಸಭೆ, ಫೆ. 15 ರಂದು ರಾಜ್ಯಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಮತ್ತು ಕುಟುಂಬದಲ್ಲಿ ವಿವಾಹ ಕಾರ್ಯಕ್ರಮ, ಫೆ. 16 ರಂದು ಲೂನವಾಲದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಸಮಿತಿ ಸಭೆ, ಫೆ. 17 ಮಂಗಳೂರಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, ಫೆ. 18 ರಂದು “ಬಾಗಿಲಿಗೆ ಬಂತು ಸರಕಾರ” ಕಾರ್ಯಕ್ರಮ ಹಾಗೂ ಮಂಗಳೂರಲ್ಲಿ ಕರ್ನಾಟಕ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮ, ಫೆ. 23 ರವರೆಗೆ ವಿಧಾನ ಮಂಡಲ ಅಧಿವೇಶನ ಇರುವುದರಿಂದ ಈ ದಿನಗಳಲ್ಲಿ ಸಾರ್ವಜನಿಕರ ಸಂದರ್ಶನಕ್ಕೆ ಲಭ್ಯ ಇರುವುದಿಲ್ಲ. ಹೀಗಾಗಿ ಸಾರ್ವಜನಿಕರು ಈ…

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಾರಿಗೆ ಸಂಸ್ಥೆಗಳಲ್ಲಿ ಒಂದು ಕೆಎಸ್ಆರ್ ಟಿಸಿಯಾಗಿದೆ. ಈಗಾಗಲೇ ಪ್ರಯಾಣಿಕ ಸ್ನೇಹಿಯಾದಂತ ಸೇವೆಗೆ ಹಲವು ರಾಷ್ಟ್ರೀಯ, ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಇಂತಹ ಕೆಎಸ್ಆರ್ ಟಿಸಿಗೆ ಈಗ ಸ್ಕಾಚ್ನ 2 ರಾಷ್ಟ್ರೀಯ ಪ್ರಶಸ್ತಿಯ ಗರಿಮೆ ಲಭಿಸಿದೆ. ಈ ಕುರಿತಂತೆ ನಿಗಮದಿಂದ ಮಾಹಿತಿ ಹಂಚಿಕೊಂಡಿದ್ದು,  ಕರಾರಸಾ ನಿಗಮಕ್ಕೆ ಕಾರ್ಮಿಕ ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ ಸ್ಕಾಚ್‌ ನ 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ ಎಂದಿದೆ. ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ ಎಂದು ತಿಳಿಸಿದೆ. ಇಂದು ಸ್ಕಾಚ್ ಸಂಸ್ಥೆಯು…

Read More

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಕೋರ್ಟ್ ಗೆ ನಿರಂತರವಾಗಿ ಗೈರಾಗಿದ್ದರ ಹಿನ್ನಲೆಯಲ್ಲಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಇದೇ ರೀತಿಯಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಅವರು ಹಾಜರಾಗದೇ ನಿರಂತರವಾಗಿ ಗೈರಾಗಿದ್ದರು. ಪೊಲೀಸರ ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ರಾಮಲಿಂಗಾರೆಡ್ಡಿ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ಜೆ.ಪ್ರೀತಂ ಅವರು ಜಾಮೀನು ರಹಿತ…

Read More