Author: kannadanewsnow09

ಶಿವಮೊಗ್ಗ : ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ (ಕೆಎಫ್‍ಡಿ) ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗನ ಕಾಯಿಲೆ ಬಗ್ಗೆ ಗಾಬರಿಯಾಗುವುದು ಬೇಡ. ಆದರೆ ಜ್ವರ, ತಲೆನೋವು, ಸ್ನಾಯುಗಳ ನೋವು ಇತ್ಯಾದಿ ಲಕ್ಷಣ ಕಾಣಿಸಿಕೊಂಡಾಗ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಆರಂಭದಲ್ಲೇ ರೋಗ ಲಕ್ಷಣಗಳಿಗೆ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದರು. ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಮಂಗನ ಕಾಯಿಲೆ ವೈರಾಣು ಸೋಂಕಿನ ನಿಂಫ್ ಹಂತದಲ್ಲಿರುವ ಉಣ್ಣಿಗಳು ಕಚ್ಚುವುದರಿಂದ ಹರಡುತ್ತದೆ. ಮಂಗನ ಅಸ್ವಾಭಾವಿಕ ಸಾವು ಮಂಗನ ಕಾಯಿಲೆಯ ಕುರಿತಾದ ಎಚ್ಚರಿಕೆ ಗಂಟೆ. ನಂತರ ಮನುಷ್ಯರಿಗೆ ಬರುತ್ತದೆ. ಜ್ವರ, ತಲೆನೋವು ಇತರೆ ಲಕ್ಷಣಗಳು ಕಂಡು ಬಂದ…

Read More

ಇಸ್ಲಮಾಬಾದ್: ಇಂದು ನಡೆದಂತ ಪಾಕಿಸ್ತಾನ ಚುನಾವಣೆಯಲ್ಲಿ ನವಾಜ್ ಷರೀಫ್ ಅವರ ಪಿಎಂಎಲ್-ಎನ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪಾಕ್ ಚುನಾವಣೆಯಲ್ಲಿ ಗೆಲುವಿನ ನಗೆಯನ್ನು ಬೀರಿರೋದಾಗಿ ವರದಿಗಳಿಂದ ತಿಳಿದು ಬಂದಿದೆ. ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ನಾಯಕ ನವಾಜ್ ಷರೀಫ್, “ನಾವು ನಿಮ್ಮೆಲ್ಲರನ್ನೂ ಅಭಿನಂದಿಸುತ್ತೇವೆ ಏಕೆಂದರೆ, ದೇವರ ಆಶೀರ್ವಾದದಿಂದ, ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತಿಯೊಂದು ಪಕ್ಷಕ್ಕೂ ನೀಡಿದ ಜನಾದೇಶವನ್ನು ನಾವು ಗೌರವಿಸುತ್ತೇವೆ. ಗಾಯಗೊಂಡ ಪಾಕಿಸ್ತಾನವನ್ನು ಬಿಕ್ಕಟ್ಟಿನಿಂದ ಹೊರತರಲು ನಮ್ಮೊಂದಿಗೆ ಕುಳಿತುಕೊಳ್ಳಲು ನಾವು ಅವರನ್ನು ಆಹ್ವಾನಿಸುತ್ತೇವೆ” ಎಂದು ಅವರು ಹೇಳಿದರು. ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ವರದಿಯಾಗಿದೆ. ಲಾಹೋರ್ನ ಪಕ್ಷದ ಕಚೇರಿಯಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿರುವುದನ್ನು ಕಾಣಬಹುದು. ನವಾಜ್ ಷರೀಫ್ 1,71,024 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

Read More

ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಹಿಂದೂ ಪುರಾಣಗಳಲ್ಲೂ ಕಣ್ಣದೃಷ್ಟಿಯ ಬಗ್ಗೆ ಉಲ್ಲೇಖವಿದೆ. ಮಾನಸಿಕ ಶಕ್ತಿಯು ಆಲೋಚನೆ, ಏಕಾಗ್ರತೆ, ದೃಷ್ಟಿ, ಹೊಟ್ಟೆಯುರಿ ಮತ್ತು ಮಾತಿನ ಮೂಲಕ ಹೊರಬರುವುದು. ಇದು ಇನ್ನೊಬ್ಬನ ಅಭಿವೃದ್ಧಿ, ಏಳಿಗೆ ಮತ್ತು ಸೌಂದರ್ಯದ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಪರಿಣಾಮ ಬೀರುವುದೇ ಕಣ್ಣ ದೃಷ್ಟಿ ಎನ್ನುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 8 ಎಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಐಎಫ್ಎಸ್ ಅಧಿಕಾರಿ ವಿಜಯ್ ಶರ್ಮಾ ಅವರನ್ನು ಬೆಂಗಳೂರಿನ ಲೀಗಲ್ ಸೆಲ್ ನ ಪ್ರಿನ್ಸಿಪಲ್ ಚೀಪ್ ಕಂಸರ್ವೇಟಿವ್ ಆಫ್ ಫಾರ್ಸೆಟ್ ಗೆ ವರ್ಗಾವಣೆ ಮಾಡಲಾಗಿದೆ. ಬ್ರಿಜೇಶ್ ಕುಮಾರ್ ಅವರನ್ನು ವಿಜಯ್ ಶರ್ಮಾ ಅವರ ಜಾಗಕ್ಕೆ ಹೆಚ್ಚುವರಿ ಪ್ರಿನ್ಸಿಪಲ್ ಕನ್ಸರ್ವೇಟಿವ್ ಆಫ್ ಫಾರೆಸ್ಟ್ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಪ್ರಹ್ಲಾದ್ ಚಂದ್ರ ರಾಜ್ಯ ಅವರನ್ನು ಬೆಂಗಳೂರಿನ ಅಡಿಯನಲ್ ಚೀಪ್ ಕನ್ಸರ್ವೇಟಿವ್ ಆಫ್ ಫಾರ್ಸೆಟ್ ಅಂಡ್ ಪ್ರಿನ್ಸಿಪಲ್ ಸೆಕ್ರೇಟರಿಗೆ ವರ್ಗಾವಣೆ ಮಾಡಿದ್ದರೇ, ಡಾ.ಸಂಜಯ್ ಎಸ್ ಬಿಜ್ಜರ್ ಅವರನ್ನು ಅಡಿಷನಲ್ ಪ್ರಿನ್ಸಿಪರ್ ಚೀಪ್ ಕನ್ಸರ್ವೇಟಿವ್ ಆಫ್ ಫಾರೆಸ್ಟ್ ಬೆಂಗಳೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 8 IFS ಅಧಿಕಾರಿಗಳ ವರ್ಗಾವಣೆ ಪಟ್ಟಿ https://kannadanewsnow.com/kannada/i-will-give-you-a-punishment-pm-modi-dines-with-8-mps-of-different-parties-at-canteen/

Read More

ಬನ್ನೇರುಘಟ್ಟ : ಬೆಂಗಳೂರು ನಗರದ ಬೊಮ್ಮನಹಳ್ಳಿ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಆದೇಶದ ಮೇಲೆ ರಚಿಸಲಾದ ಬೆಂಗಳೂರು ನಗರಕ್ಕೆ ಸಮರ್ಪಿತವಾದ ಕ್ಷಿಪ್ರ ಚಿರತೆ ಕಾರ್ಯಪಡೆಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬೆಂಗಳೂರು ನಗರದ ಚಿರತೆ ಕಾರ್ಯಪಡೆಯ 100ಕ್ಕೂ ಹೆಚ್ಚು ಸಿಬ್ಬಂದಿಗೆ ಕಾರ್ಯಾಚರಣೆಯ ಕಾರ್ಯ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಲಾಯಿತು. ಹೊಳೆಮತ್ತಿ ಪ್ರತಿಷ್ಠಾನದ ವನ್ಯಜೀವಿ ಸಂರಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ ಸಂಜಯ್ ಗುಬ್ಬಿ ಮತ್ತು ಡೆಹರಾಡೂನ್ ನಲ್ಲಿ ವನ್ಯಜೀವಿ ಕಾರ್ಯಾಚರಣೆಯ ತರಬೇತಿ ಪಡೆದಿರುವ ಹಿರಿಯ ಅಧಿಕಾರಿಗಳು ಕಾರ್ಯಪಡೆ ಸಿಬ್ಬಂದಿಗೆ ಕೌಶಲ್ಯಗಳ ಬಗ್ಗೆ ತಿಳಿಸಿಕೊಟ್ಟರು. ಕಾಡಿನಂಚಿನ ಹೊಲಗದ್ದೆ, ತೋಟಗಳಲ್ಲಿ ಉರುಳಿಗೆ ಸಿಲುಕುವ ಚಿರತೆ ಮತ್ತು ವನ್ಯ ಜೀವಿಗಳ ಪ್ರಾಣ ರಕ್ಷಣೆ ಮಾಡುವ ವಿಧಾನ, ಚಿರತೆಗಳು ನಾಡಿಗೆ ಬಂದಾಗ ಅವುಗಳ ಚಲನವಲನದ ಬಗ್ಗೆ ನಿಗಾ ಹೇಗೆ ಇಡಬೇಕು, ಚಿರತೆ ಹೆಜ್ಜೆ ಗುರುತಿಸುವುದು ಹೇಗೆ, ಚಿರತೆ ಸೆರೆ ಹಿಡಿಯಲು ಬೋನುಗಳನ್ನು ಹೇಗೆ…

Read More

ಹರಿಹರ : ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ ಎಂದರು ಬುದ್ಧಿವಂತಿಕೆ ಯಾರ ಸ್ವತ್ತಲ್ಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾದಾಗ ಸಾಮಾಜಿಕ ಆರ್ಥಿಕ ಅಸಮಾನತೆ ನಿರ್ಮಾಣವಾಗಿರುವುದು. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ ಎಂದರು. ಸಮಸಮಾಜ ನಿರ್ಮಾಣವಾದಾಗಲೇ ರಾಮರಾಜ್ಯದ ಸ್ಥಾಪನೆ ಬೇಡ…

Read More

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಫೆಬ್ರವರಿ.25ರಂದು ಲಿಖಿತ ಪರೀಕ್ಷೆ ನಿಗದಿ ಪಡಿಸಲಾಗಿದೆ. ಅಲ್ಲದೇ ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‌ ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು ಎಂದಿದೆ. ಸದರಿ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ…

Read More

ದಾವಣಗೆರೆ: ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ ಎಂಬುದಾಗಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಹರಿಹಾಯ್ದಿದ್ದರು. ಇಂತಹ ಅವರ ವಿರುದ್ಧ ಈಗ ಎಫ್ಐಅರ್ ದಾಖಲಾಗಿದೆ. ಈ ಕುರಿತಂತೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ದೇಶವಿಭಜನೆಯ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದಂತ ಕೆ.ಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ‘ದೇಶ ವಿಭಜನೆ’ಯ ಹೇಳಿಕೆ ಕೊಡುವವರನ್ನು ‘ಗುಂಡಿಕ್ಕಿ ಕೊಲ್ಲಬೇಕು’ – ಮಾಜಿ ಸಚಿವ ‘ಕೆಎಸ್ ಈಶ್ವರಪ್ಪ’ ದಾವಣಗೆರೆ: ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ಗುಂಡಿಕ್ಕಿ ಕೊಲ್ಲಬೇಕು ಎಂಬುದಾಗಿ ಹೇಳಿಕೆ ನೀಡಿದ್ದಾರೆ. ದಾವಣಗೆರೆಯಲ್ಲಿ ನಡೆದಂತ ಬಿಜೆಪಿ…

Read More

ಚಿತ್ರದುರ್ಗ: ಆಸ್ಪತ್ರೆಯಲ್ಲೇ ಆಪರೇಷನ್ ಮಾಡೋ ತರ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡಿ, ಕರ್ತವ್ಯ ಲೋಪ ಎಸಗಿದ್ದಂತ ವೈದ್ಯ ಡಾ.ಅಭಿಷೇಕ್ ಅವರನ್ನು ಕೆಲಸದಿಂದ ವಜಾಗೊಳಿಸಿ, ಜಿಲ್ಲಾಧಿಕಾರಿ ವೆಂಕಟೇಶ್ ಆದೇಶಿಸಿದ್ದಾರೆ. ಚಿತ್ರದುರ್ಗದ (Chitradurga) ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಈ ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಕೇಳಿ ಬಂದಿತ್ತು. ಭರಮಸಾಗರ ಮೂಲದ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ , ರೋಗಿಯೊಬ್ಬರನ್ನು ಬೆಡ್‌ ಮೇಲೆ ಮಲಗಿಸಿ, ಆಪರೇಷನ್‌ ಮಾಡುವಂತೆ, ಇನ್ನೊಂದೆಡೆ ಭಾವಿ ಪತ್ನಿ ಅಭಿಷೇಕ್‌ಗೆ ಸಹಾಯ ಮಾಡುವಂತೆ ಚಿತ್ರೀಕರಿಸಿದ್ದರು. ಅಂತಿಮವಾಗಿ ಆಪರೇಷನ್‌ ಮುಗಿಯಿತು ಅಂದ ಬಳಿಕ ರೋಗಿ ಎದ್ದು ಕುಳಿತುಕೊಳ್ಳುವ ವಿಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆಗುತ್ತಿದ್ದಂತೇ, ಗುತ್ತಿಗೆ ವೈದ್ಯರ ಪ್ರೀ ವೆಡ್ಡಿಂಗ್ ಶೂಟಿಂಗ್ ಬಗ್ಗೆ ವೈದ್ಯರೇ ಹೀಗೆ ಮಾಡಿದ್ದು ಸರಿಯಲ್ಲ ಎಂಬುದಾಗಿ ಆಕ್ಷೇಪ, ಆಕ್ರೋಶ ಹೊರಬಿದ್ದಿತ್ತು. ಈ…

Read More

ಬೆಂಗಳೂರು: ಬಿಬಿಎಂಪಿ ವತೊಯಿಂದ ಪೌರಕಾರ್ಮಿಕರಿಗೆ ನಿವೇಶನ ನೀಡಲಾಗುವುದೆಂದು ಸುದ್ದಿ ಹರಿದಾಡುತ್ತಿತ್ತು. ಅದು ಎಷ್ಟು ನಿಜ.? ಎಷ್ಟು ಸುಳ್ಳು ಎನ್ನುವ ಬಗ್ಗೆ ಬಿಬಿಎಂಪಿಯ ಸ್ಪಷ್ಟೀಕರಣ ಮುಂದೆ ಓದಿ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ನಿವೇಶನ ದೊರಕಿಸಿಕೊಡುವುದಾಗಿ ಅನಾಮಧೇಯ ವ್ಯಕ್ತಿಗಳು ಅಪಪ್ರಚಾರ ಮಾಡಿ ಮುಗ್ಧ ವ್ಯಕ್ತಿಗಳಿಂದ ಹಣವನ್ನು ವಸೂಲಿ ಮಾಡುತ್ತಿರುವುದು ಹಾಗೂ ಪಾಲಿಕೆಯ ಹೆಸರನ್ನು ಬಳಸಿ ದುರ್ಬಳಕೆ ಮಾಡಿರುವ ಬಗ್ಗೆ ಪಾಲಿಕೆಗೆ ದೂರುಗಳು ಬರುತ್ತಿರುತ್ತವೆ. ಈ ವಿಷಯದ ಕುರಿತು ಬಿಬಿಎಂಪಿಯು ಸ್ಪಷ್ಟ ಪಡಿಸುವುದೇನೆಂದರೆ, ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಯಾವುದೇ ನಿವೇಶನಗಳನ್ನು ನೀಡುವ ಯೋಜನೆಯನ್ನು ಪ್ರಸ್ತುತ ಕೈಗೆತ್ತಿಕೊಂಡಿರುವುದಿಲ್ಲ ಹಾಗೂ ನಿವೇಶನ ಹಂಚಿಕೆ ಕುರಿತು ಯಾವುದೇ ಅಧಿಕೃತವಾಗಿ ಪಾಲಿಕೆಯಿಂದ ಅಧಿಸೂಚನೆ ಹೊರಡಿಸಲಾಗಿರುವುದಿಲ್ಲ ಅಥವಾ ಕ್ರಮವಹಿಸಿರುವುದಿಲ್ಲ. ಆದ್ದರಿಂದ ಇಂತಹ ಯಾವುದೇ ಆಮಿಷಗಳಿಗೆ/ಸುಳ್ಳು ವದಂತಿಗಳಿಗೆ ಮೋಸ ಹೋಗಬಾರದೆಂದು ಪೌರಕಾರ್ಮಿಕರು/ಸಾರ್ವಜನಿಕರಲ್ಲಿ ವಿನಂತಿಸಿದೆ. ಮುಂದುವರಿದು, ಒಂದು ವೇಳೆ ಅನಾಮಧೇಯ ವ್ಯಕ್ತಿಗಳ ಮಾತುಗಳು ಕೇಳಿ ಮೋಸ ಹೋದರೆ ಪಾಲಿಕೆಯು ಜವಾಬ್ದಾರಿಯಾಗಿರುವುದಿಲ್ಲವೆಂದು ಜಂಟಿ ಆಯುಕ್ತರು(ಘತ್ಯಾನಿ) ರವರು…

Read More