Author: kannadanewsnow09

ಬೆಳಗಾವಿ: ವಿಶ್ವಜ್ಯೋತಿ ಬಸವಣ್ಣನವರ ವಿಚಾರಗಳನ್ನು, ವಿಶ್ವಕ್ಕೆ ಅವರು ನೀಡಿರುವ ಆದರ್ಶಗಳನ್ನು ಇಂದಿನ-ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ನಿರ್ಮಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನ ಪರಿಷತ್‌ನಲ್ಲಿ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಕೂಡಲೇ ಸಂಗಮ ಅಭಿವೃದ್ಧಿ ಪ್ರಾಧಿಕಾರದ ಜೊತೆಯಲ್ಲೇ, ಬಸವನ ಬಾಗೇವಾಡಿಯ ಅಭಿವೃದ್ಧಿಯನ್ನೂ ಕೈಗೊಳ್ಳಲಾಗುತ್ತಿತ್ತು. ಆದರೆ, ನಾಡಿನ ಸಾಹಿತ್ಯ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅಚ್ಚಳಿಯದ ಕೊಡುಗೆ ನೀಡಿರುವ ಬಸವನ ಬಾಗೇವಾಡಿ ಇತಿಹಾಸವನ್ನು ಜನರಿಗೆ ತಿಳಿಸಲು ಹಾಗೂ ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸುವ ದೃಷ್ಠಿಯಿಂದ ಪ್ರತ್ಯೇಕ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿಧೇಯಕ ಮಂಡಿಸಲಾಗಿದೆ” ಎಂದರು. ಮುಂದುವರೆದು, “ಬಸವನ ಬಾಗೇವಾಡಿ ಐತಿಹಾಸಿಕ ಹಿನ್ನೆಲೆ ಇರುವ ಪ್ರದೇಶ. ಹೀಗಾಗಿ ಈ ಪ್ರದೇಶದ ಅಭಿವೃದ್ಧಿಗೂ ಒಂದು ಪ್ರಾಧಿಕಾರ ರಚಿಸಬೇಕು ಎಂದು ಸದನದ ಅನೇಕ ಸದಸ್ಯರು ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದಾರೆ. ಅವರ ಒತ್ತಾಯ ಹಾಗೂ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ನೂರಾರು ನಾಯಿಗಳಿಗೆ ವಿಷಪ್ರಾಶನ ಮಾಡಿ ಮಾರಣಹೋಮ ಮಾಡಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ತೂಕದಬೈಲ್ ಬಳಿಯ ಹೆದ್ದಾರಿಯಲ್ಲಿ ನಾಯಿಗಳ ಮಾರಣಹೋಮವನ್ನೇ ಮಾಡಲಾಗಿದೆ. ಟ್ರಕ್ ನಲ್ಲಿ ನೂರಾರು ನಾಯಿಗಳನ್ನು ಹಿಡಿದು ತಂದು ವಿಷಪ್ರಾಶನ ಮಾಡಿರುವುದಾಗಿ ಹೇಳಲಾಗುತ್ತಿದೆ. ನಲವತ್ತಕ್ಕೂ ಹೆಚ್ಚು ನಾಯಿಗಳಿಗೆ ವಿಷಪ್ರಾಶನವನ್ನು ದುರುಳರು ಮಾಡಿದ್ದಾರೆ. ಇನ್ನೂ ರೋಗ ಮತ್ತು ಗಾಯಗಳಿಂದ ಕೆಲವು ನಾಯಗಳು ನರಳಾಡುತ್ತಿರುವುದನ್ನು ಕಂಡರೇ ಇವರೆಂಥ ಅಮಾನವೀಯರು ಎನ್ನುವುದು ತಿಳಿದು ಬರುವಂತಿದೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/temple-and-farmers-land-not-included-in-waqf-minister-zameer-ahmed/ ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Read More

ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತಗೊಂಡ ರೂಪದಲ್ಲಿದ್ದ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕರಿಸಲಾಯಿತು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ವಿಧೇಯಕವನ್ನು ಮಂಡಿಸಿದರು. “ನಾನು ಬೆಂಗಳೂರಿನ ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆದಿದ್ದೆ. ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ವಿಚಾರವಾಗಿ ಒಟಿಎಸ್ ಅವಕಾಶ ಕಲ್ಪಿಸಬೇಕು ಎಂದು ಶಾಸಕರು ಸಲಹೆ ನೀಡಿದ್ದರು. ಒಟಿಎಸ್ ವ್ಯವಸ್ಥೆಯಿಂದ 3 ಲಕ್ಷ ಆಸ್ತಿಗಳು ಹೊಸದಾಗಿ ತೆರಿಗೆ ವ್ಯಾಪ್ತಿಯೊಳಗೆ ಸೇರ್ಪಡೆಯಾಗಿವೆ. ಇನ್ನೂ 2.26 ಲಕ್ಷ ಆಸ್ತಿಗಳು ಬಾಕಿ ಇವೆ. ಈ ಅವಕಾಶವನ್ನು 2024ರ ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದರಿಂದ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತರಲಾಗಿತ್ತು. ಈಗ ಇದನ್ನು ವಿಧಾನ ಪರಿಷತ್ತಿನಲ್ಲಿ ಮಂಡನೆ ಮಾಡಿದ್ದು ಅಂಗೀಕಾರ ಮಾಡಬೇಕು ಎಂದು…

Read More

ಮಂಡ್ಯ: ಡಿಸೆಂಬರ್ 20, 21ರಂದು ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( School and College Holiday ) ಎರಡು ದಿನ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕುಮಾರ ಅವರು ಆದೇಶ ಹೊರಡಿಸಿದ್ದು, ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಸದರಿ ಸಮ್ಮೇಳನ ಕಾರ್ಯಕ್ರಮಕ ಮುಖ್ಯಮಂತ್ರಿಯವರು, ಉಪಮುಖ್ಯಮಂತ್ರಿಯವರು, ಸಚಿವರುಗಳು, ನ್ಯಾಯಾಧೀಶರುಗಳು ಹಾಗೂ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಸದರಿ ಗಣ್ಯ ವ್ಯಕ್ತಿಗಳಿಗೆ ಮತ್ತು ನೋಂದಾಯಿತ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ವಾಸ್ತವ್ಯಕ್ಕೆ ಕೊಠಡಿ ವ್ಯವಸ್ಥೆ…

Read More

ಮುಂಬೈ: ಎಲಿಫೆಂಟಾ ಗುಹೆಗಳಿಗೆ ಪ್ರವಾಸಕ್ಕೆ ತೆರಳಿದ್ದ ಮುಂಬೈನ ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮಗುಚಿ ಕನಿಷ್ಠ 13 ಜನರು ಮುಳುಗಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಒಟ್ಟು 80 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. 101 ಮಂದಿಯನ್ನು ಈವರೆಗೆ ರಕ್ಷಿಸಲಾಗಿದೆ. ಭಾರತೀಯ ನೌಕಾಪಡೆ, ಭಾರತೀಯ ಕೋಸ್ಟ್ ಗಾರ್ಡ್, ಮುಂಬೈ ಪೊಲೀಸರು ಮತ್ತು ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ ಸೇರಿದಂತೆ ಅನೇಕ ಏಜೆನ್ಸಿಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. 11 ನೌಕಾಪಡೆಯ ದೋಣಿಗಳು, ಮೆರೈನ್ ಪೊಲೀಸ್ ನ ಮೂರು ದೋಣಿಗಳು ಮತ್ತು ಭಾರತೀಯ ಕೋಸ್ಟ್ ಗಾರ್ಡ್ ನ ಒಂದು ದೋಣಿ ಈ ಪ್ರದೇಶದಲ್ಲಿವೆ. ಇದಲ್ಲದೆ, ನಾಲ್ಕು ಹೆಲಿಕಾಪ್ಟರ್ಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿವೆ. https://twitter.com/MBTheGuide/status/1869354363078275211 https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/ https://kannadanewsnow.com/kannada/epfo-extends-deadline-for-employers-to-upload-pending-pension-applications-until-january-31-2025/

Read More

ಮಂಡ್ಯ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ’ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್‌ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದರು. ಕರುನಾಡು ಸೇವಕರ ಸಂಘಟನೆಯ ಎಂ.ಬಿ.ನಾಗಣ್ಣಗೌಡ, ಸಮ್ಮೇಳನಕ್ಕೆ ಹಾಕಿರುವ ಬ್ರಾಹ್ಮಣ್ಯದ ಜನಿವಾರವನ್ನು ಬಾಡೂಟದ ಮೂಲಕ ತೆರವುಗೊಳಿಸುವ ಪ್ರಯತ್ನ ಮಾಡುತ್ತೇವೆ ಎಂದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/kas-re-exam-scheduled-for-december-29-here-are-the-full-details/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/

Read More

ಬೆಳಗಾವಿ ಸುವರ್ಣಸೌಧ : ದೇವಸ್ಥಾನ ಹಾಗೂ ರೈತರ ಜಮೀನುಗಳನ್ನು ವಕ್ಫ್ಗೆ ಸೇರ್ಪಡೆ ಮಾಡುವುದಿಲ್ಲ. ಒಂದು ವೇಳೆ ವಕ್ಫ್ ಆಸ್ತಿ ಸಂಬಂಧವಾಗಿ ನೋಟಿಸು ನೀಡಿದ್ದರೆ, ಆ ನೋಟಿಸಗಳನ್ನು ಹಿಂಪಡೆಯುವುದಾಗಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮ 69 ಅಡಿ, ರೈತರ ಜಮೀನು, ಮಠ-ಮಂದಿರ ಜಾಗ, ಸಾರ್ವಜನಿಕರ ಆಸ್ತಿ, ಸರ್ಕಾರಿ ಕಟ್ಟಡಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವ ಕುರಿತು ಪ್ರಸ್ತಾಪಿಸಿದ್ದ ವಿಚಾರಗಳಿಗೆ, ಗುರುವಾರ ವಿಧಾನಸಭೆಯ ಕಲಾಪದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಉತ್ತರಿಸಿದರು. ಒಂದು ವೇಳೆ ವಕ್ಫ್ ಜಾಗದಲ್ಲಿಯೇ ದೇವಸ್ಥಾನ ನಿರ್ಮಿಸಿದ್ದರೂ ಕೂಡ, ಸರ್ಕಾರ ಅದನ್ನು ಮುಟ್ಟುವುದಿಲ್ಲ. ಬದಲಿಗೆ ದೇವಸ್ಥಾನಕ್ಕೆ ಮರಳಿ ಆ ಜಾಗವನ್ನು ನೀಡಲಾಗುವುದು. ರೈತರು ಉಳುಮೆ ಮಾಡುತ್ತಿರುವ ಜಮೀನುಗಳನ್ನು ಸಹ ವಕ್ಫ್ ಸೇರ್ಪಡೆ ಮಾಡುವುದಿಲ್ಲ. ವಕ್ಫ್ ತಿದ್ದುಪಡಿ ಕಾಯ್ದೆ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಕಳೆದ ಜೂನ್…

Read More

ಬೆಳಗಾವಿ ಸುವರ್ಣ ಸೌಧ : ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಹೊಸದಾಗಿ ರಚಿಸಲಾಗಿರುವ ಎಲ್ಲ 18 ತಾಲ್ಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲಿ ಬುಧವಾರ ಉತ್ತರ ಕರ್ನಾಟಕದ ವಿಷಯಗಳ ಬಗ್ಗೆ ನಡೆದ ಚರ್ಚೆ ಸಂದರ್ಭದಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ 18 ಹೊಸ ತಾಲ್ಲೂಕುಗಳಲ್ಲಿ ಕೆಕೆಆರ್‌ಡಿಬಿ ಅನುದಾನ ವಿನಿಯೋಗಿಸಿ ಹೊಸದಾಗಿ ಪ್ರಜಾಸೌಧ ನಿರ್ಮಾಣ ಮಾಡಲಾಗುತ್ತಿದ್ದು, ಬರುವ ತಿಂಗಳಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ಪ್ರಸಕ್ತ ವರ್ಷ ಕಲ್ಯಾಣ ಕರ್ನಾಟಕಕ್ಕೆ ಸರ್ಕಾರ 5000 ಕೋಟಿ ರೂ. ಅನುದಾನ ಒದಗಿಸಿದೆ ಎಂದರು. ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರ್ಗಿ ಜಿಲ್ಲೆಯಲ್ಲಿ ಶಿಕ್ಷಣದಲ್ಲಿ ಹಿಂದುಳಿದಿದ್ದು, ಈ ಭಾಗಕ್ಕೆ ನೀಡಲಾಗಿರುವ ಅನುದಾನದಲ್ಲಿ ಶೇ. 25 ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಖರ್ಚು ಮಾಡಲು ನಿರ್ಧರಿಸಲಾಗಿದೆ. ಗ್ರಾಮೀಣ…

Read More

ಬಹುಶಃ ಇಂದು ಅತ್ಯಂತ ಜನಪ್ರಿಯವಾದ ಸಿದ್ಧ ಈ ಕಲ್ಯಕ್ಯ ಸಿದ್ಧವಾಗಿದೆ. ಗೂಗಲ್‌ನಲ್ಲಿ ಹುಡುಕಿದರೆ ಅವರ ಹೆಸರು ಸಿಗುವುದಿಲ್ಲ. ಆದರೆ ಅವರು ಅನೇಕ ಜನರ ಜೀವನದಲ್ಲಿ ಪವಾಡಗಳನ್ನು ಮಾಡಿದರು ಎಂದು ಹೇಳಲಾಗುತ್ತದೆ. ಸತತ 3 ದಿನ ಕೇಳಕಿಯಾರ್ ಮಂತ್ರವನ್ನು ಪಠಿಸುವುದರಿಂದ 3 ದಿನಗಳಲ್ಲಿ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ…

Read More

ಬೆಂಗಳೂರು: ಕನ್ನಡ ಭಾಷಾಂತರ ಎಡವಟ್ಟಿನ ಕಾರಣದಿಂದ ರದ್ದುಗೊಂಡಿದ್ದಂತ 384 ಕೆಎಎಸ್ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಡಿಸೆಂಬರ್.29ರಂದು ದಿನಾಂಕ ನಿಗದಿ ಪಡಿಸಲಾಗಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು ಕನ್ನಡ ಭಾಷಾಂತರ ಪರೀಕ್ಷೆಯ ಸಮಸ್ಯೆಯಿಂದ ಕೆಎಎಸ್ ಪರೀಕ್ಷೆ ರದ್ದುಗೊಂಡಿತ್ತು. ಈ ಪರೀಕ್ಷೆಯನ್ನು ಡಿಸೆಂಬರ್.29ರಂದು ನಡೆಸಲು ನಿಗದಿ ಪಡಿಸಲಾಗಿದೆ ಎಂದಿದೆ. ಡಿಸೆಂಬರ್.29ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪೇಪರ್-1ರ ಪರೀಕ್ಷೆ ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ಗಂಟೆಯವರೆಗೆ ಪೇಪರ್-2 ಪರೀಕ್ಷೆಯನ್ನು ನಡೆಸುತ್ತಿರುವುದಾಗಿ ಕೆಪಿಎಸ್ಸಿ ತಿಳಿಸಿದೆ. https://kannadanewsnow.com/kannada/robotic-surgery-performed-on-a-man-suffering-from-gallstones-and-infected-gallbladder-by-doctors-at-fortis-hospital-in-bengaluru/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/

Read More