Author: kannadanewsnow09

ದಾವಣಗೆರೆ : ಮುಂದಿನ ಬಾರಿಯೂ ನರೇಂದ್ರ‌ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.‌ ಅವರು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಯಕ ಸಮುದಾಯವನ್ನು ಎಸ್ಟಿಗೆ ಸೇರಿಸಲು ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿ ಯಾಗಿದ್ದಾಗಿದ್ದಾಗ ಶಿಫಾರಸ್ಸು ಮಾಡಿದ್ದರು, ಕೇಂದ್ರದಲ್ಲಿ ಚಂದ್ರಶೇಖರ ನೇತೃತ್ವದ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಮಾಜಿ ಪ್ರಧಾನಿ ದೇವೇಗೌಡರು ಎಸ್ಟಿಗೆ ಸೇರಿಸಲು ಶ್ರಮ ವಹಿಸಿದ್ದರು ಎಂದು ಹೇಳಿದರು. ನಾಯಕ ಸಮುದಾಯಕ್ಕೆ ಎಸ್ಟಿಗೆ ಸೇರ್ಪಡೆ ಮಾಡಿದ ನಂತರ ಮೂವತ್ತೈದು ವರ್ಷಗಳ ನಂತರ ಈ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಆಶೋತ್ತರಗಳು ಹೆಚ್ಚಾಗಿವೆ. ನಮ್ಮ ಸಂವಿಧಾನ ಜೀವಂತಿಕೆ ಇರುವ ಸಂವಿಧಾನ, ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಅವಕಾಶ ಇದೆ. ಕೆಲವು ದೇಶದ ಸಂವಿಧಾನಗಳನ್ನು ಬರೆದು ಇಟ್ಟಿದ್ದಾರೆ. ಅವು…

Read More

ಚಿತ್ರದುರ್ಗ : ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ನೀಡಿರುವ ದೇಶ ವಿಭಜನೆಗೆ ಕರೆ ನೀಡಿದವರನ್ನು ಮಾಡುವವರನ್ನು ಗುಂಡಿಟ್ಟು ಕೊಲ್ಲಬೇಕು ಹೇಳಿಕೆಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮುಖ್ಯಮಂತ್ರಿಗಳು ಮಾತನಾಡಿದರು. ಈಶ್ವರಪ್ಪನವರಿಗೆ ಕಡಿ, ಬಡಿ, ಕತ್ತರಿಸು, ಕೊಲ್ಲು ಇದು ಬಿಟ್ಟರೆ ಬೇರೆ ಭಾಷೆ ಗೊತ್ತಿಲ್ಲ. ನನಗೆ ಆರ್.ಎಸ್.ಎಸ್ ನಲ್ಲಿ ತರಬೇತಿಯಾಗಿದೆ ಎನ್ನುತ್ತಾರೆ. ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಡಿ.ಕೆ.ಸುರೇಶ್ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳುವುದು ಒಂದು ರಾಜಕೀಯ ಪಕ್ಷದ ಮುಖಂಡರಾಗಿ ಹೇಳುವ ಮಾತೇ ಎಂದು ಪ್ರಶ್ನಿಸಿದರು. ಇವರನ್ನು ರಾಜಕೀಯ ಧುರೀಣರು ಎಂದು ಕರೆಯಬೇಕೇ ಎಂದರು. ಪ್ರತಿಭಟನೆಯಲ್ಲ , ತೆರಿಗೆಯಲ್ಲಿ ರಾಜ್ಯದ ಪಾಲು ಪಡೆಯುವ ಬೇಡಿಕೆ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಆಗಿರುವ ವಿಚಾರಕ್ಕೆ ಸರ್ವೋಚ್ಛ ನ್ಯಾಯಾಲಯದ ಮೊರೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಮಹಿಳೆಯರಿಗಾಗಿ ಗೃಹಲಕ್ಷ್ಮಿ, ಶಕ್ತಿ ಯೋಜನೆ ಜಾರಿಗೊಳಿಸಿದ ನಂತ್ರ, ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ರಾಮನಗರ ಬಿಡದಿಯ ಬಳಿಯಲ್ಲಿ ಮಹಿಳೆಯರಿಗಾಗಿಯೇ ವಾಹನ ಚಾಲನೆ ತರಬೇತಿ ನೀಡೋದಕ್ಕಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸೋದಾಗಿದೆ. ಈ ಕುರಿತಂತೆ ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ, ಅನುದಾವನಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಹೀಗಾಗಿ ರಾಮನಗರ ತಾಲ್ಲೂಕು ಬಿಡದಿಯಲ್ಲಿ ಮಹಿಳೆಯರಿಗಾಗಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಅಂದಹಾಗೇ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಸಾರಿಗೆ ಇಲಾಖೆ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಈ ಯೋಜನೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ. AWAKE ಸಂಸ್ಥೆ, ರಾಜಾಜಿನಗರ, ಬೆಂಗಳೂರು ಮತ್ತು ಸಾರಿಗೆ ಇಲಾಖೆಯ ಜಂಟಿ ಸಹಭಾಗಿತ್ವದಲ್ಲಿ ರೂ.10.50 ಕೋಟಿಗಳ ಅಂದಾಜು ಮೊತ್ತದಲ್ಲಿ ಬಿಡದಿಯಲ್ಲಿ ಪ್ರಾದೇಶಿಕ ವಾಹನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಗೆ ಯೋಜಿಸಲಾಗಿದೆ.…

Read More

ಬೆಂಗಳೂರು: ಇವತ್ತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾಜೀ ಅವರನ್ನು ಭೇಟಿ ಮಾಡಿ ಮುಂದೆ ಬರುವ ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇರೆ ಬೇರೆ ವಿಷಯಗಳ ಚರ್ಚೆ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯÀಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ನಡ್ಡಾಜೀ ಅವರು ಸಂತಸ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹೊಸ ದಾಖಲೆ ಬರೆಯಲಿದೆ; ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಾನು ಭರವಸೆ ನೀಡಿದ್ದೇನೆ ಎಂದು ಪ್ರಶ್ನೆಗೆ ಉತ್ತರಿಸಿದರು. ರಾಧಾಮೋಹನ್‍ದಾಸ್ ಜೀ ಅವರು ನಮ್ಮ ರಾಜ್ಯದ ಉಸ್ತುವಾರಿಗಳು. ನಿನ್ನೆ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವತಯಾರಿ ಕುರಿತು ಚರ್ಚೆ ಮಾಡಿದ್ದೇನೆ ಎಂದು ಪ್ರಶ್ನೆಗೆ ಉತ್ತರ…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ (  Lok Sabha Elections 2024 ) ಮತ ಚಲಾಯಿಸಲು 96.88 ಕೋಟಿ ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಚುನಾವಣಾ ಆಯೋಗ (Election Commission of India -ECI) ಶುಕ್ರವಾರ ಪ್ರಕಟಿಸಿದೆ. ಭಾರತದಲ್ಲಿ 2024 ರ ಚುನಾವಣೆಯ ಅಂಕಿಅಂಶಗಳು ಮತದಾರರ ಜನಸಂಖ್ಯಾಶಾಸ್ತ್ರ ಮತ್ತು ಭಾಗವಹಿಸುವಿಕೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಬಹಿರಂಗಪಡಿಸುತ್ತವೆ. ದೇಶಾದ್ಯಂತ ದಾಖಲೆಯ 96.88 ಕೋಟಿ ಮತದಾರರು ನೋಂದಾಯಿಸಲ್ಪಟ್ಟಿದ್ದು, 2019 ಕ್ಕೆ ಹೋಲಿಸಿದರೆ ಗಮನಾರ್ಹವಾಗಿ 6% ಹೆಚ್ಚಳವನ್ನು ಸೂಚಿಸುತ್ತದೆ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಾಗಿದೆ. https://twitter.com/rishibagree/status/1755895871823368405 ಎಸ್ಎಸ್ಆರ್ 2024 ರ ಸಮಯದಲ್ಲಿ ಮಹಿಳಾ ಮತದಾರರ ನೋಂದಣಿಯು ಪುರುಷ ಮತದಾರರನ್ನು ಮೀರಿಸಿದ ಮೈಲಿಗಲ್ಲು ವಿಶೇಷವಾಗಿ ಗಮನಾರ್ಹವಾಗಿದೆ. ಇದು ರಾಜಕೀಯ ಭಾಗವಹಿಸುವಿಕೆಯಲ್ಲಿ ಲಿಂಗ ಸಮಾನತೆಯ ಸಕಾರಾತ್ಮಕ ಪ್ರವೃತ್ತಿಯನ್ನು ಸೂಚಿಸುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹೆಚ್ಚುವರಿಯಾಗಿ, 18-29 ವರ್ಷ ವಯಸ್ಸಿನ 2 ಕೋಟಿಗೂ ಹೆಚ್ಚು ಯುವ ಮತದಾರರ ಸೇರ್ಪಡೆಯು ಚುನಾವಣಾ ಪ್ರಕ್ರಿಯೆಯ ಮೂಲಕ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಯುವಕರ…

Read More

ದಾವಣಗೆರೆ : ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ. ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನ ಸ್ಥಗಿತಗೊಳಿಸೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು’ ಇವನಾರವ, ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು. ಆರ್ಥಿಕ, ಸಮಾಜಿಕ ಅಸಮಾನತೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ ಉಪ್ಪಾರರು ಆರ್ಥಿಕವಾಗಿ , ಸಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ,…

Read More

ದಾವಣಗೆರೆ : ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ಪ್ರತಿಕ್ರಯಿಸಿ, ರಾಜ್ಯಕ್ಕೆ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿರೋದು ಸತ್ಯ. ಒಂದು ವೇಳೆ ಸುಳ್ಳು ಅಂತ ಸಾಭೀತು ಪಡಿಸಿದ್ರೇ, ತಾನು ರಾಜಕೀಯ ನಿವೃತ್ತಿ ಆಗೋದಾಗಿಯೂ ಸವಾಲು ಹಾಕಿದರು. ಅವರು ಇಂದು ಹರಿಹರದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ಕರ್ನಾಟಕದಿಂದ ನೀಡಲಾಗಿರುವ ತೆರಿಗೆಯನ್ನು ನಮಗೆ ನೀಡುತ್ತಿಲ್ಲ. 100 ರೂ.ಗೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ 4,30,000 ಕೋಟಿ ತೆರಿಗೆ ಬರುತ್ತಿದ್ದರೆ, ನಮಗೆ ಕೇವಲ 50,257 ಕೋಟಿ ರೂ.ಮಾತ್ರ ರಾಜ್ಯಕ್ಕೆ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ ಎಂದರು. ರಾಜ್ಯಸರ್ಕಾರದಿಂದ 34 ಲಕ್ಷ ರೈತರಿಗೆ 650 ಕೋಟಿ ರೂ. ತಾತ್ಕಾಲಿಕ ಬರ ಪರಿಹಾರ ಬರನಿರ್ವಹಣೆಗೆ ಸರ್ಕಾರದ ಕ್ರಮಗಳ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದು ಗೃಹಲಕ್ಷ್ಮಿ ಯೋಜನೆಯಾಗಿದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಯರಿಗೆ 2000 ಪ್ರತಿ ತಿಂಗಳು ಸಹಾಯಧನವನ್ನು ಸರ್ಕಾರ ನೀಡಲಾಗುತ್ತದೆ. ಆದ್ರೇ ಈವರೆಗೆ ಕೆಲವರಿಗೆ ಹಣ ಬಂದಿಲ್ಲ. ಹಾಗಾದ್ರೇ ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರದೇ ಇಲ್ಲದಿರುವಂತ ಅನರ್ಹರ ಲೀಸ್ಟ್ ಇಲ್ಲಿದೆ. ಚೆಕ್ ಮಾಡೋದು ಹೇಗೆ ಅಂತ ಮುಂದೆ ಓದಿ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರೋ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೀಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆಯಾದ ನಂತ್ರ, ಅನೇಕರು ಅರ್ಹರಿದ್ದು, 2000 ಹಣ ಕೂಡ ಪಡೆಯುತ್ತಿದ್ದಾರೆ. ಆದ್ರೇ ಕೆಲವರಿಗೆ ಹಣ ಬಂದಿಲ್ಲ. ಇನ್ನೂ ಯಾರು ಬಿಪಿಎಲ್ ಕಾರ್ಡ್ ಅರ್ಹರು, ಯಾರು ಅಲ್ಲ ಎನ್ನುವ ಬಗ್ಗೆಯೂ ಆಹಾರ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಅನರ್ಹರ ವಿರುದ್ಧ ಕಾನೂನು ಕ್ರಮವನ್ನು ಕೂಡ ಕೈಗೊಳ್ಳಲಾಗುತ್ತಿದೆ. ಇದರ ನಡುವೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರಲ್ಲದವರ ಪಟ್ಟಿಯನ್ನು ಕೂಡ ಆಹಾರ ಇಲಾಖೆ ತಯಾರಿಸಿದೆ.…

Read More

ಉತ್ತರಾಖಂಡ: ರಾಜ್ಯದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮದರಸಾ ಮತ್ತು ಪಕ್ಕದ ಮಸೀದಿಯನ್ನು ನೆಲಸಮಗೊಳಿಸಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಘರ್ಷಣೆಗಳನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಹಿಂದೆ, ಗಲಭೆಯ ಸಮಯದಲ್ಲಿ ನಿವಾಸಿಗಳು ವಾಹನಗಳು ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಕಲ್ಲುಗಳನ್ನು ಎಸೆದ ನಂತರ ಅಧಿಕಾರಿಗಳು ಕರ್ಫ್ಯೂ ವಿಧಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಪೊಲೀಸ್ ಸಿಬ್ಬಂದಿ. ಉಳಿದವರು ಸ್ಥಳೀಯ ಮದರಸಾ ಮತ್ತು ಅದರ ಸಂಕೀರ್ಣದಲ್ಲಿರುವ ಮಸೀದಿಯನ್ನು ನೆಲಸಮಗೊಳಿಸುವಲ್ಲಿ ಭಾಗಿಯಾಗಿದ್ದ ಪುರಸಭೆಯ ಕಾರ್ಮಿಕರು ಆಗಿದ್ದಾರೆ. ಸದ್ಯ ಪರಿಸ್ಥಿತಿ ಉತ್ತರಾಖಂಡದಲ್ಲಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿಂಸಾಚಾರವನ್ನು ನಿಯಂತ್ರಿಸೋ ಕೆಲಸದಲ್ಲಿ ಪೊಲೀಸರು ನಿರತರಾಗಿದ್ದಾರೆ. ಎಲ್ಲೆಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/india-snapchat-server-down/ https://kannadanewsnow.com/kannada/pratap-reddy-resigns-from-ips-post-says-goodbye-with-2-months-to-go-for-retirement/

Read More

ಶಿವಮೊಗ್ಗ : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10ರ ನಾಳೆ ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುಚ್ಛಕ್ತಿ ದರ ಪರಿಷ್ಕರಣೆ- ಸಾರ್ವಜನಿಕ ಸಭೆ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ‘ಸಾರ್ವಜನಿಕ ವಿಚಾರಣೆ’ಯನ್ನು ದಿನಾಂಕ 12.02.2024ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಮೆಸ್ಕಾಂ ಕಾರ್ಪೊರೇಟ್ ಕಛೇರಿ ಸಭಾಂಗಣ, ಮೆಸ್ಕಾಂ ಭವನ, ಬಿಜೈ, ಮಂಗಳೂರು ಇಲ್ಲಿನಡೆಸಲಿರುವುದು. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಾಗರದ ಪಡವಗೋಡಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾ.ಪಂ ಯಲ್ಲಿ ಇಂದು ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಸಂವಿಧಾನ ಜಾಗೃತಿ ಜಾಥಾ ರಥವನ್ನು…

Read More