Author: kannadanewsnow09

ವಿಜಯಪುರ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಲಗಿದ್ದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ವಿಜಯಪುರ ತಾಲ್ಲೂಕಿನ ಶಿವಣಗಿ ಗ್ರಾಮದಲ್ಲಿ ಹೃದಯಾಘಾತಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಲಿಯಾಗಿದ್ದಾನೆ. ಹೃದಯಾಘಾತದಿಂದ ಸಿದ್ಧಾರ್ಥ ಬಡಿಗೇರ(18) ಸಾವನ್ನಪ್ಪಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಿದ್ಧಾರ್ಥಗೆ ಹೃದಯಾಘಾತ ಉಂಟಾಗಿದೆ. ಹೀಗಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾನೆ. https://kannadanewsnow.com/kannada/extend-the-media-sanjeevini-scheme-to-all-journalists-kuwj-president-shivananda-tagadurs-plea-to-the-cm/ https://kannadanewsnow.com/kannada/special-digi-locker-technology-for-registration-of-healthcare-providers-in-the-state-cm-siddaramaiah-inaugurates/

Read More

ಮಂಡ್ಯ : ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಬೋರನದೊಡ್ಡಿ ಗ್ರಾಮದ ತೆಂಗಿನ ಕಾಯಿ ವ್ಯಾಪಾರಿಯಾದ ರಾಜಣ್ಣ (ಲಿಂಗರಾಜು) ಅವರು ಸೋಮವಾರದಂದು ವೇಳೆಯಲ್ಲಿ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಸ್ಥಳೀಯ ಶ್ರೀ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾದಂತೆ ಆಗಿದೆ. https://kannadanewsnow.com/kannada/reliance-logo-brand-cannot-be-used-for-online-products-delhi-high-court-order/ https://kannadanewsnow.com/kannada/the-government-has-ordered-the-implementation-of-uniform-rates-in-all-multiplexes-and-cinema-halls-in-the-state/

Read More

ದೆಹಲಿ : ದೆಹಲಿ ಹೈ ಕೋರ್ಟ್ ನಿಂದ ಮಂಗಳವಾರದಂದು ರಿಲಯನ್ಸ್ ಪರವಾಗಿ ಮಹತ್ವದ ಆದೇಶವೊಂದು ಬಂದಿದೆ. ಇದರಿಂದಾಗಿ ಭಾರತದಲ್ಲಿ ಪ್ರಬಲವಾಗಿ ಬೆಳವಣಿಗೆ ಕಾಣುತ್ತಿರುವ ಎಫ್ಎಂಸಿಜಿ ಹಾಗೂ ಇ-ಕಾಮರ್ಸ್ ವಲಯಗಳಿಗೆ ಬ್ರ್ಯಾಂಡ್ ರಕ್ಷಣೆ ದೊರೆತಂತಾಗಿದೆ. ಆನ್ ಲೈನ್ ರೀಟೇಲ್ ಅಂತ ಬಂದರೆ ಅಲ್ಲಿ “ಲೋಗೋ”ಗಳು ಹಾಗೂ ಬ್ರ್ಯಾಂಡ್ ಹೆಸರೇ ಮೂಲಭೂತವಾಗಿ ಗ್ರಾಹಕರು ತಮಗೆ ಬೇಕಾದ ಉತ್ಪನ್ನಗಳನ್ನು ಗುರುತಿಸುವ ಸುಳುಹುಗಳಾಗಿರುತ್ತವೆ. ಇಲ್ಲದಿದ್ದರೆ ಇದರಿಂದ ಗೊಂದಲ ಆಗುವ ಸಾಧ್ಯತೆ ಬಹಳ ಹೆಚ್ಚಿರುತ್ತದೆ ಎಂದು ಹೇಳಲಾಗಿದೆ. ರಿಲಯನ್ಸ್ ಮತ್ತು ಜಿಯೋ ಟ್ರೇಡ್ ಮಾರ್ಕ್ ಗಳನ್ನು ಉಲ್ಲಂಘನೆ ಮಾಡಿರುವಂಥ ಉತ್ಪನ್ನಗಳನ್ನು ಅಮೆಜಾನ್, ಫ್ಲಿಪ್ ಕಾರ್ಟ್ ಸೇರಿದಂತೆ ಎಲ್ಲ ಪ್ರಮುಖ ಆನ್ ಲೈನ್ ಮಾರ್ಕೆಟ್ ಪ್ಲೇಸ್ ಗಳು “ಡೀಲಿಸ್ಟ್” ಮಾಡಬೇಕು, ಅಂದರೆ ಆ ಉತ್ಪನ್ನಗಳನ್ನು ಮಾರಾಟ ಮಾಡುವುದರಿಂದ ತೆಗೆಯಬೇಕು ಎಂದು ಆದೇಶಿಸಲಾಗಿದೆ. ನ್ಯಾಯಮೂರ್ತಿಗಳಾದ ಸೌರಭ್ ಬ್ಯಾನರ್ಜಿ ಅವರು ಈ ಸಂಬಂಧವಾಗಿ ಮಧ್ಯಂತರ ಆದೇಶವನ್ನು ಹೊರಡಿಸಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಟ್ರೇಡ್ ಮಾರ್ಕ್ಸ್ ತಪ್ಪಾಗಿ ಬಳಸಿಕೊಂಡು ಗ್ರಾಹಕ ಉತ್ಪನ್ನಗಳನ್ನು ಉತ್ಪಾದಿಸುವುದು, ಮಾರಾಟ…

Read More

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯಲ್ಲಿನ ಕಠಿಣ ಷರತ್ತಗಳನ್ನು ಸರಳೀಕರಣ ಮಾಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮುಖ್ಯಮಂತ್ರಿಗಳನ್ನು ಒತ್ತಾಯಿಸಿದೆ. ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಈ ಯೋಜನೆಯನ್ನು ಸೀಮಿತ ಮಾಡಿರುವುದರಿಂದ ಬಹಳ ಜನ ಪತ್ರಕರ್ತರು ಯೋಜನೆಯಿಂದ ವಂಚಿತರಾಗುತ್ತಾರೆ. ಆದುದರಿಂದ ವಾರ್ತಾ ಇಲಾಖೆಯಲ್ಲಿ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಮತ್ತು ಸುದ್ದಿಮಾಧ್ಯಮಗಳಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ಯೋಜನೆಯನ್ನು ವಿಸ್ತಾರ ಮಾಡಬೇಕು ಎಂದು ಕೆಯುಡಬ್ಲೂೃಜೆ ಆಗ್ರಹಿಸಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿಯೇ ಜಾರಿಗೆ ನೀಡಿರುವುದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದಿಸುವುದಾಗಿ ತಿಳಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಯೋಜನೆ ಎಲ್ಲಾ ಪತ್ರಕರ್ತರಿಗೂ ಸಿಗುವಂತೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ. ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಯೋಜನೆಯನ್ನು ಜಾರಿಗೆ ತರಬೇಕು ಎನ್ನುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಹಕ್ಕೊತ್ತಾಯಕ್ಕೆ ಸ್ಪಂಧಿಸಿದ್ದ…

Read More

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿ ಇರಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ರಾಜ್ಯದಲ್ಲಿರುವ ಎಲ್ಲಾ ಮಲ್ಟಿಫ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಿ ಆದೇಶಿಸಿದೆ. ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿಗೊಳಿಸಲಾಗಿದೆ. ರೂ.200 ಮೀರದಂತೆ ಆದೇಶ ಹೊರಡಿಸಿದೆ. ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿನ ಎಲ್ಲಾ ಭಾಷೆಯ ಸಿನಿಮಾಗಳಿಗೂ ಏಕರೂಪದ ದರವನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. https://kannadanewsnow.com/kannada/special-digi-locker-technology-for-registration-of-healthcare-providers-in-the-state-cm-siddaramaiah-inaugurates/ https://kannadanewsnow.com/kannada/dheeraj-kumar-death-news-veteran-bollywood-actor-and-filmmaker-dies-at-79-in-mumbai/

Read More

ಬೆಂಗಳೂರು: ಆಧಾರ್ ಆಧಾರಿತ ಡಿಜಿಲಾಕರ್ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣಪತ್ರಗಳನ್ನು ನೀಡಲು ಅನುಕೂಲವಾಗುವ ಹೊಸ ತಂತ್ರಜ್ಞಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದೊಡ್ಡ ವಿದ್ಯಾರ್ಥಿ ಸಮುದಾಯದ ಸಮ್ಮುಖದಲ್ಲಿ ಈ ತಂತ್ರಜ್ಞಾನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. ಈ ತಂತ್ರಜ್ಞಾನವನ್ನು ದೇಶದಲ್ಲಿಯೇ ಮೊದಲ ಬಾರಿಗೆ ಇಲ್ಲಿ ಆರಂಭಿಸಲಾಗಿದೆ. ಈ ವ್ಯವಸ್ಥೆಯನ್ನು ಯುಐಡಿಎಐ, ಸಿ-ಇಜಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ಮತ್ತು ಕರ್ನಾಟಕ ರಾಜ್ಯ ನರ್ಸಿಂಗ್ ಪರೀಕ್ಷಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಈ ತಂತ್ರಜ್ಞಾನದೊಂದಿಗೆ, ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಇ-ಕೆವೈಸಿ ಮೂಲಕ ಆಧಾರ್ ಸರ್ವರ್‌ನಿಂದ ದಾದಿಯರ ವೈಯಕ್ತಿಕ ಡೇಟಾ, ವಿಳಾಸ, ಫೋಟೋ ಮತ್ತು ಇತರ ವಿವರಗಳನ್ನು ನೇರವಾಗಿ ಪಡೆಯಬಹುದು. ಈ ಹಿಂದೆ ವಿವಿಧ ಜಿಲ್ಲೆಗಳ ನರ್ಸಿಂಗ್ ಅಭ್ಯರ್ಥಿಗಳು ನೋಂದಣಿಗಾಗಿ ಬೆಂಗಳೂರಿನಲ್ಲಿರುವ ಕೌನ್ಸಿಲ್‌ನ ಕೇಂದ್ರ ಕಚೇರಿಗೆ ಆಗಮಿಸಬೇಕಾಗಿತ್ತು. ಹೊಸ ಡಿಜಿಲಾಕರ್-ರಿಕ್ವೆಸ್ಟರ್ ತಂತ್ರಜ್ಞಾನವು ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ಗೆ ಆಧಾರ್ ಕಾರ್ಡ್‌ಗಳು, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಅಂಕಪಟ್ಟಿಗಳು ಮತ್ತು…

Read More

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ ಬಳಸಲು ತೀರ್ಮಾನಿಸಲಾಗಿದ್ದು, ಐಐಎಸ್.ಸಿ.ಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಐ.ಐ.ಎಸ್.ಸಿ.ಯ ಪ್ರೊ. ರಮನ್ ಸುಕುಮಾರ್ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಸಹಿ ಹಾಕಿ ಒಡಂಬಡಿಕೆ ವಿನಿಮಯ ಮಾಡಿಕೊಂಡ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಹಾಸನ, ಕೊಡಗು ಭಾಗದಲ್ಲಿ ಹೆಚ್ಚಾಗಿ ಆನೆ-ಮಾನವ ಸಂಘರ್ಷವಿದ್ದು, ಜೀವಹಾನಿ, ಬೆಳೆ ಹಾನಿ ಸಂಭವಿಸುತ್ತಿದೆ ಇದರ ನಿಯಂತ್ರಣಕ್ಕೆ ಎಲ್ಲ ಸಾಧ್ಯ ಕ್ರಮಗಳನ್ನು ಇಲಾಖೆ ಕೈಗೊಳ್ಳುತ್ತಿದೆ ಎಂದರು. ಪ್ರಸ್ತುತ ಮಾನವ-ಆನೆ ಸಂಘರ್ಷ ಇತರ ಪ್ರದೇಶಕ್ಕೂ ವಿಸ್ತರಿಸುತ್ತಿದ್ದು, ಪರಿಸರ ಸಂಶೋಧನೆ ಮತ್ತು ಕ್ಷೇತ್ರ ಅನುಷ್ಠಾನವನ್ನು ಸಮನ್ವಯಗೊಳಿಸುವ ಮೂಲಕ, ಆನೆಪಥ, ಆವಾಸಸ್ಥಾನಗಳ ಸಂರಕ್ಷಣೆಗೆ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಏಷ್ಯನ್ ಆನೆಗಳ ಭೂಪ್ರದೇಶ ನಿರ್ವಹಣೆ”ಗಾಗಿ ಐದು…

Read More

ನವದೆಹಲಿ: ವಿಶ್ವದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾದ ಭಾರತೀಯ ರೈಲ್ವೆ ಪ್ರತಿದಿನ ಲಕ್ಷಾಂತರ ಪ್ರಯಾಣಿಕರನ್ನು ಹೊತ್ತೊಯ್ಯುತ್ತದೆ. ಸೇವೆಗಳನ್ನು ಸುಧಾರಿಸಲು, ರೈಲ್ವೆ ಆಗಾಗ್ಗೆ ತನ್ನ ನಿಯಮಗಳನ್ನು ನವೀಕರಿಸುತ್ತದೆ. ಜುಲೈ 1 ರಂದು ಇತ್ತೀಚಿನ ಬದಲಾವಣೆಗಳ ನಂತರ, ಜುಲೈ 15, 2025 ರಿಂದ ಮತ್ತೊಂದು ಹೊಸ ನಿಯಮ ಜಾರಿಗೆ ಬಂದಿದೆ. ಇದು ತತ್ಕಾಲ್ ಟಿಕೆಟ್ ಬುಕಿಂಗ್ ಅನ್ನು ಹೆಚ್ಚು ಪಾರದರ್ಶಕ ಮತ್ತು ಪ್ರಯಾಣಿಕರ ಸ್ನೇಹಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದೆ. ತತ್ಕಾಲ್ ಬುಕಿಂಗ್‌ಗೆ ಆಧಾರ್ OTP ಪರಿಶೀಲನೆ ಈಗ ಕಡ್ಡಾಯ ಹೊಸ ನಿಯಮದ ಪ್ರಕಾರ, IRCTC ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡುವ ಪ್ರಯಾಣಿಕರು ಈಗ ಆಧಾರ್ OTP ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಇದರರ್ಥ ಪ್ರಯಾಣಿಕರು ತಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ OTP ಬಳಸಿಕೊಂಡು ತಮ್ಮ ಗುರುತನ್ನು ಪರಿಶೀಲಿಸಬೇಕು. ಈ ಬದಲಾವಣೆಯು ಟಿಕೆಟ್ ಬುಕಿಂಗ್ ಪ್ರಕ್ರಿಯೆಗೆ ಪಾರದರ್ಶಕತೆಯನ್ನು ತರುತ್ತದೆ ಮತ್ತು ಸಾಮಾನ್ಯ ಪ್ರಯಾಣಿಕರು ತತ್ಕಾಲ್ ಟಿಕೆಟ್‌ಗಳನ್ನು…

Read More

ನೀವು ಎಂದಾದರೂ ವಡಾ ತಿಂದು ಮಧ್ಯದಲ್ಲಿ ರಂಧ್ರ ಏಕೆ ಇದೆ ಎಂದು ಯೋಚಿಸಿದ್ದರೆ?. ನಮ್ಮಲ್ಲಿ ಹಲವರು ಈ ರುಚಿಕರವಾದ ತಿಂಡಿಯನ್ನು ಅದರ ವಿಶಿಷ್ಟ ಆಕಾರದ ಹಿಂದಿನ ಕಾರಣವನ್ನು ತಿಳಿಯದೆ ಆನಂದಿಸುತ್ತಾರೆ. ಇದು ಶೈಲಿಯ ಆಯ್ಕೆಯಂತೆ ಕಂಡರೂ, ವಡಾವನ್ನು ಹೇಗೆ ಬೇಯಿಸಲಾಗುತ್ತದೆ ಎಂಬುದರಲ್ಲಿ ರಂಧ್ರವು ವಾಸ್ತವವಾಗಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾದ್ರೆ ವಡೆಯ ಮಧ್ಯದಲ್ಲಿ ರಂದ್ರ ಏಕೆ ಇರುತ್ತದೆ ಎನ್ನುವ ಬಗ್ಗೆ ಮುಂದೆ ಓದಿ. ಇದು ರಂಧ್ರದ ಹಿಂದಿನ ನಿಜವಾದ ಕಾರಣ ವಡೆಗಳು, ವಿಶೇಷವಾಗಿ ದಕ್ಷಿಣ ಭಾರತದ ಮಿನಪ ವಡೆಗಳು (ಉದ್ದಿನ ದಾಲ್ ವಡೆಗಳು), ಸಾಮಾನ್ಯವಾಗಿ ಸಾಕಷ್ಟು ದಪ್ಪವಾಗಿರುತ್ತವೆ. ಅವುಗಳನ್ನು ರಂಧ್ರವಿಲ್ಲದೆ ಹುರಿದರೆ, ಹೊರಭಾಗವು ಬೇಗನೆ ಬೇಯುತ್ತದೆ. ಆದರೆ ಒಳಭಾಗವು ಹೆಚ್ಚಾಗಿ ಹಸಿಯಾಗಿರುತ್ತದೆ. ಈ ರಂಧ್ರವು ಬಿಸಿ ಎಣ್ಣೆಯನ್ನು ಹೊರ ಮತ್ತು ಒಳ ಮೇಲ್ಮೈಗಳನ್ನು ತಲುಪಲು ಅನುವು ಮಾಡಿಕೊಡುತ್ತದೆ. ವಡೆಯನ್ನು ಸಂಪೂರ್ಣವಾಗಿ ಮತ್ತು ಸಮವಾಗಿ ಬೇಯಿಸಲಾಗುತ್ತದೆ. ಹೊರಗೆ ಗರಿಗರಿಯಾಗಿರುತ್ತದೆ ಮತ್ತು ಒಳಗೆ ಮೃದುವಾಗಿರುತ್ತದೆ. ಈ ಅಡುಗೆ ತಂತ್ರವು ಡೋನಟ್‌ಗಳಿಗೆ ಬಳಸುವಂತೆಯೇ ಇರುತ್ತದೆ. ರಂಧ್ರವನ್ನು…

Read More

ಹಾವೇರಿ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಬೇಸರದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ನೇಣು ಬಿಗಿದುಕೊಂಡು ರುದ್ರೇಶ್ ಗಂಜಿಗಟ್ಟಿ(15) ಎಂಬ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಬಿಟ್ಟು ಓದಿನ ಕಡೆ ಗಮನ ಹರಿಸುವಂತೆ ಪೋಷಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯಾಗಿದ್ದಂತ ರುದ್ರೇಶ್ ಗಂಜಿಗಟ್ಟಿಗೆ ಬುದ್ಧಿವಾದ ಹೇಳಿದ್ದರು. ಇಷ್ಟಕ್ಕೇ ಬೇಜಾರು ಮಾಡಿಕೊಂಡು, ಇಂದು ಮನೆಯಲ್ಲಿ ಯಾರು ಇಲ್ಲದಂತ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. https://kannadanewsnow.com/kannada/raid-by-agricultural-officers-on-fertilizer-sale-shop-76-quintals-of-fake-fertilizer-seized/ https://kannadanewsnow.com/kannada/eo-shocks-gram-panchayat-pdo-for-hoisting-tarnished-national-flag-notice-sought-for-explanation/

Read More