Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದಲ್ಲಿ ಮಳೆಯಿಂದಾಗಿ ಹಾನಿಯಾದಂತ ಅತಿವೃಷ್ಠಿಗೆ ಕೇಂದ್ರ ಸರ್ಕಾರದಿಂದ ಎಸ್ ಡಿ ಆರ್ ಎಫ್ ನಿಧಿಯಿಂದ 384 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯವು ಅನುಮೋದಿಸಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರಿನಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ವಿವಿಧೆಡೆ ಅತಿವೃಷ್ಠಿ ಉಂಟಾಗಿತ್ತು. ಅತ್ತ ಮಹಾರಾಷ್ಟ್ರದಲ್ಲೂ ಇದೇ ಪರಿಸ್ಥಿತಿ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಒಟ್ಟು 1,950 ಕೋಟಿಯನ್ನು ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಡಿಯಲ್ಲಿ ಮುಂಗಡವಾಗಿ ಬಿಡುಗಡೆ ಮಾಡೋದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮತಿ ನೀಡಿದ್ದಾರೆ. ಅಂದಹಾಗೇ ಕೇಂದ್ರ ಸರ್ಕಾರದಿಂದ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮಹಾರಾಷ್ಟ್ರಕ್ಕೆ 1,566.40 ಕೋಟಿ ಹಾಗೂ ಕರ್ನಾಟಕಕ್ಕೆ 384 ಕೋಟಿ ಅತಿವೃಷ್ಠಿ ಹಾನಿಗೆ ಪರಿಹಾರವನ್ನು ಮಂಜೂರು ಮಾಡಲು ಅನುಮೋದಿಸಲಾಗಿದೆ.
ಅಯೋಧ್ಯೆ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಒಂಬತ್ತನೇ ಆವೃತ್ತಿಯ ದೀಪೋತ್ಸವ ನಡೆಯಿತು. 56 ಘಾಟ್ಗಳಲ್ಲಿ 26,17,215 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಇದು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದಿದೆ. ಈ ಕಾರ್ಯಕ್ರಮವು ಅಯೋಧ್ಯೆಯ ಸಾಂಸ್ಕೃತಿಕ ಭವ್ಯತೆ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಪ್ರದರ್ಶಿಸಿತು, ಸಾವಿರಾರು ಭಕ್ತರು ಮತ್ತು ಸ್ವಯಂಸೇವಕರನ್ನು ಆಕರ್ಷಿಸಿತು. https://twitter.com/ANI/status/1979888195358937318 ಅಯೋಧ್ಯೆ ದೀಪೋತ್ಸವದಲ್ಲಿ ಉತ್ತರ ಪ್ರದೇಶವು ಹೊಸ ‘ಗಿನ್ನೆಸ್ ವಿಶ್ವ ದಾಖಲೆ’ ಸ್ಥಾಪಿಸಿತು ಅಯೋಧ್ಯೆಯಲ್ಲಿ ನಡೆದ ಭವ್ಯ ದೀಪೋತ್ಸವ ಆಚರಣೆಯ ಸಂದರ್ಭದಲ್ಲಿ ಏಕಕಾಲದಲ್ಲಿ ಅಭೂತಪೂರ್ವ 26,17,215 ‘ದೀಪಗಳು’ (ಮಣ್ಣಿನ ದೀಪಗಳು) ಬೆಳಗಿಸುವ ಮೂಲಕ ಉತ್ತರ ಪ್ರದೇಶವು ಗಿನ್ನೆಸ್ ವಿಶ್ವ ದಾಖಲೆ ಪುಸ್ತಕದಲ್ಲಿ ತನ್ನ ಹೆಸರನ್ನು ದಾಖಲಿಸಿದೆ. ಡ್ರೋನ್ ನೆರವಿನ ಎಣಿಕೆಯ ಮೂಲಕ ಗಿನ್ನೆಸ್ ಪ್ರತಿನಿಧಿಗಳು ಈ ದಾಖಲೆಯನ್ನು ಅಧಿಕೃತವಾಗಿ ದೃಢಪಡಿಸಿದರು. ಘೋಷಣೆಯ ನಂತರ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜೈವೀರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ (ಪ್ರವಾಸೋದ್ಯಮ ಮತ್ತು ಸಂಸ್ಕೃತಿ) ಅಮೃತ್ ಅಭಿಜತ್ ಅವರು ಮುಖ್ಯಮಂತ್ರಿ ಯೋಗಿ…
ಬೆಳಗಾವಿ: ನಗರದಲ್ಲಿ ನಡೆದಂತ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆದಂತ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ರಾಜಶೇಖರ ತಳವಾರ ಎಂಬುವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ರಮೇಶ್ ಕತ್ತಿ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ಅವರು ನಾಯಕ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಬೆಳಗಾವಿಯ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿ.ಕೆ ಮಾಡೆಲ್ ಶಾಲೆಯ ಆವರಣದಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಅವರ ವಿರುದ್ಧ…
ಶಿವಮೊಗ್ಗ: ಮಕ್ಕಳ ದೈಹಿಕ ಶಕ್ತಿ ಹೆಚ್ಚಲು ಹಾಗೂ ಚುರುಕುತನ ಅಳವಡಿಸಿಕೊಳ್ಳಲು ಈಜು ಪೂರಕವಾಗಿದೆ. ಈಜು ಕಲಿಯುವುದರಿಂದ ಹೆಚ್ಚು ಅನುಕೂಲವಿದೆ ಎಂದು ಸಾಗರ ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ವಿಜಯ ನಗರ ಬಡಾವಣೆಯಲ್ಲಿ ವಿಜಯನಗರ ಅಕ್ವೇಟಿಕ್ಸ್ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಗರ ಸಿದ್ದಾಪುರ ತಾಲ್ಲೂಕು ಮಟ್ಟದ ಈಜು ಸ್ಪರ್ಧೆಯಲ್ಲಿ ಅವರು ತರಬೇತುದಾರರನ್ನು ಅಭಿನಂದಿಸಿ ಮಾತನಾಡಿದಂತ ಅವರು, ವಿಜಯ ನಗರ ಈಜುಕೊಳ ಈಜು ಕಲಿಯುವ ಮಕ್ಕಳಿಗೆ ಪ್ರಯೋಜನಕಾರಿಯಾಗಿದೆ. ಮಕ್ಕಳಿಗೆ ಪಠ್ಯದ ಜೊತೆ ಕ್ರೀಡೆ ಸೇರಿ ವಿವಿಧ ಪೂರಕ ಚಟುವಟಿಕೆಗಳು ಅಗತ್ಯ. ಈಜುಕೊಳ ಅಭಿವೃದ್ದಿಗೆ ನಗರಸಭೆಯಿಂದ ಅಗತ್ಯ ಸಹಕಾರ ನೀಡಲಾಗುತ್ತದೆ ಎಂದರು. ನಗರ ಪ್ರಾಧಿಕಾರದ ಸದಸ್ಯ ಸುರೇಶ್ ಬಾಬು ಮಾತನಾಡಿ, ಶಾಸಕರು ವಿಜಯ ನಗರ ಈಜುಕೊಳವನ್ನು ಸುಮಾರು 45 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಿದ್ದಾರೆ. ಮಕ್ಕಳಿಗೆ ಈಜು ಕಲಿಯಲು ಇಲ್ಲಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು ಸಿದ್ದರಾಜು ನೇತೃತ್ವದ ತಂಡ ಈಜು ಸ್ಪರ್ಧೆ ನಡೆಸಿ…
ಶಿವಮೊಗ್ಗ : ವಿಶೇಷ ಚೇತನ ಮಕ್ಕಳು ಸಮಾಜದ ಆಸ್ತಿ. ಅವರನ್ನು ಆರೈಕೆ ಮಾಡುವುದು, ಅವರ ಶೈಕ್ಷಣಿಕ ಚಟುವಟಿಕೆಗೆ ಪ್ರೇರಣೆ ನೀಡುವುದು ಪುಣ್ಯದ ಕೆಲಸ ಎಂದು ಸಾಗರ ನಗರಸಭೆ ಸದಸ್ಯ ಎಲ್. ಚಂದ್ರಪ್ಪ ತಿಳಿಸಿದರು. ಇಂಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಭೀಮನಕೋಣೆಯಲ್ಲಿ ಲಯನ್ಸ್ ಕ್ಲಬ್ ಸಾಗರ ಶ್ರೀಗಂಧ ಸಂಸ್ಥೆ ವತಿಯಿಂದ ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಮುಂಗರವಳ್ಳಿಯ ಚೈತನ್ಯ ವಿಶೇಷ ಶಿಕ್ಷಣ ಸಂಸ್ಥೆ ಮಾಡುತ್ತಿರುವ ಕೆಲಸ ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದಾಗಿದೆ. ವಿಶೇಷ ಚೇತನ ಮಕ್ಕಳಿಗೆ ಶಿಕ್ಷಣ ನೀಡುವ ಜೊತೆಗೆ ಅವರ ಆಸಕ್ತಿದಾಯಕ ಕ್ಷೇತ್ರವನ್ನು ಗುರುತಿಸಿ, ಅವರಿಗೆ ಅದರಲ್ಲಿ ಕೃಷಿ ಮಾಡಲು ಅವಕಾಶ ನೀಡುತ್ತಿದೆ. ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ, ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಈ ಶಾಲೆಯ ಮಕ್ಕಳು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಾಷ್ಟçಮಟ್ಟದಲ್ಲಿ ಮಾಡಿರುವ ಸಾಧನೆ ವಿಶೇಷವಾಗಿದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಕ್ಲಬ್ ಸಾಗರ…
ಶಿವಮೊಗ್ಗ: ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದ ಪ್ರಧಾನ ಅರ್ಚಕರಾದ ವೇದಬ್ರಹ್ಮ ಮಹಾಬಲೇಶ್ವರ ಭಟ್ (78) ಶನಿವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕಳೆದ ಹಲವು ವರ್ಷಗಳಿಂದ ಸಾಗರದಲ್ಲಿ ನೆಲೆಸಿದ್ದ ಮಹಾಬಲೇಶ್ವರ ಭಟ್ಟರು ರೈಲ್ವೆ ಸ್ಟೇಷನ್ ಸಮೀಪದ ಶಾರದಾಂಬಾ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಸಾಗರದ ಶೃಂಗೇರಿ ಶಂಕರಮಠದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಜ್ಯೋತಿಷ್ಯ ಶಾಸ್ತçದಲ್ಲಿ ಅತ್ಯಂತ ಪರಿಣಿತರಾದ ಅವರು ಭಕ್ತರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತಿದ್ದರು. ಮಹಾಬಲೇಶ್ವರ ಭಟ್ಟ ಅವರ ನಿಧನಕ್ಕೆ ಶೃಂಗೇರಿ ಶಾರದಾಪೀಠದ ಮುಖ್ಯ ಆಡಳಿತಾಧಿಕಾರಿ ಪಿ.ಎ.ಮುರಳಿ, ಸಾಗರ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್, ಶಾರದಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷ ವಿ.ಚಂದ್ರಶೇಖರ್, ಭಗವದ್ಗೀತೆ ಅಭಿಯಾನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ.ವಿ.ಜಯರಾಮ್, ಮಾ.ಸ.ನಂಜುಂಡಸ್ವಾಮಿ ಇತರರು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/extension-of-the-state-wide-caste-census-survey-until-the-31st-release-of-teachers-from-census-work/ https://kannadanewsnow.com/kannada/belagavi-dcc-bank-election-results-announced-lakshman-sawadi-wins-by-a-large-margin/
ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಇನ್ನೂ 9 ದಿನ ನಡೆಯಲಿರುವ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನ ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಸಮೀಕ್ಷಾದಾರರಿಗೆ ಮೂರು ದಿನ ರಜೆ: ಮುಖ್ಯಮಂತ್ರಿಗಳ ನಿರ್ದೇಶನದಂತೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅಕ್ಟೋಬರ್ 20, 21 ಹಾಗೂ 22 ರಂದು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ರಜೆ ನೀಡಲಾಗಿದೆ. ಅ.23 ಮೂರರಿಂದ ಸಮೀಕ್ಷೆ ಪುನಃ ಪ್ರಾರಂಭವಾಗಲಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿನ ವಿವಿಧ ಇಲಾಖೆಯ ಸಿಬ್ಬಂದಿಗಳನ್ನ ಬಳಸಿ ಅಕ್ಟೋಬರ್ 23 ರಿಂದ 31 ರವರೆಗೆ ಸಮೀಕ್ಷೆ ಕಾರ್ಯವನ್ನ ಪೂರ್ಣಗೊಳಿಸಲಿದ್ದಾರೆ ಎಂದು ಮಾಹಿತಿ…
ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಪ್ರೆಸ್ ಕ್ಲಬ್ ಮತ್ತು ಬಾಲ ಭವನ ಆಯೋಜಿಸಿದ್ದ ಚಿಣ್ಣರ ಜಾಗೃತಿ-ಪ್ರಶಸ್ತಿ ಸಂಭ್ರಮ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಪ್ರತಿ ಮಗುವೂ ಹುಟ್ಟುತ್ತಲೇ ಪ್ರತಿಭೆಗಳ ಕಣಜ ಆಗಿರುತ್ತದೆ. ಆ ಮಗುವಿನ ಮನಸ್ಸಿನ, ಆಲೋಚನೆಯ ಕಿಟಕಿ ತೆರೆದಾಗ ಪ್ರತಿಭೆ ಹೊರಗೆ ಬರುತ್ತದೆ. ಆದ್ದರಿಂದ ಮಕ್ಕಳನ್ನು ಯಾರೂ ಪ್ರತಿಭಾವಂತರನ್ನಾಗಿ ಮಾಡುವ ಅಗತ್ಯವಿಲ್ಲ. ಪ್ರತಿಭೆ ಅರಳಲು ಅಗತ್ಯವಾದ ವಾತಾವರಣ ಕಲ್ಪಿಸಿದರೆ ಸಾಕು ಎಂದರು. ಮಕ್ಕಳ ಬೆನ್ನು ತಟ್ಟುವುದು, ಪ್ರತಿಭೆ ಗುರುತಿಸುವುದು ಎಂದರೆ, ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ ಎಂದರು. ಇಂದು ಪುರಸ್ಕಾರಗೊಂಡ ಮಕ್ಕಳಿಗೆ ನಾನೊಂದು ಕಿವಿಮಾತು ಹೇಳಲು ಬಯಸುತ್ತೇನೆ. ನೀವುಗಳು ಕಲಿಕೆಯ ಕುತೂಹಲ…
ಬೆಂಗಳೂರು: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ಜಾತಿಗಣತಿಯ ಕಾರ್ಯದಿಂದ ಶಾಲಾ ಶಿಕ್ಷಕರನ್ನು ಬಿಡುಗಡೆಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಅಕ್ಟೋಬರ್.19ರ ಇಂದು ಮುಕ್ತಾಯಗೊಂಡಿತ್ತು. ಇಂತಹ ಸಮೀಕ್ಷೆಯನ್ನು ಅಕ್ಟೋಬರ್.31ರವರೆಗೆ ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ಸಭೆಯಲ್ಲಿ ಮೂರು ಜಿಲ್ಲೆಗಳಲ್ಲಿ ಸಮೀಕ್ಷೆ ಕುಂಟಿತಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಶೇ.99ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂಬುದಾಗಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/belagavi-dcc-bank-election-results-announced-lakshman-sawadi-wins-by-a-large-margin/ https://kannadanewsnow.com/kannada/instead-of-closing-ranks-criticizing-kiran-muzumdar-shaw-is-pointless-hdk/














