Author: kannadanewsnow09

ಬೆಂಗಳೂರು: ಪಿತ್ತಕಲ್ಲು ಮತ್ತು ಸೋಂಕಿತ ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ 93 ವರ್ಷದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸುಧಾರಿತ ರೋಬೋಟ್ ನೆರವಿನ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲಾಯಿತು. ಫೋರ್ಟಿಸ್ ಆಸ್ಪತ್ರೆಯ ಮಿನಿಮಲ್ ಆಕ್ಸೆಸ್ ಮತ್ತು ರೊಬೊಟಿಕ್ ಜನರಲ್ ಸರ್ಜರಿ ನಿರ್ದೇಶಕ ಡಾ. ಶ್ರೀಧರ ವಿ ಮಾತನಾಡಿ, 93 ವರ್ಷದ ಸೋಮೇಶ್ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು 4-6 ದಿನಗಳಿಂದ ತೀವ್ರ ಹೊಟ್ಟೆ ನೋವು ಅನುಭವಿಸುತ್ತಿದ್ದರು. ಸಾಕಷ್ಟು ಕಡೆ ತೋರಿಸಿದರೂ ಸೂಕ್ತ ಕಾರಣ ತಿಳಿದಿರಲಿಲ್ಲ. ಬಳಿಕ ಅವರು ಫೋರ್ಟಿಸ್‌ಗೆ ದಾಖಲಾದರು, ಅವರನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ಬಳಿಕ ಅವರಿಗೆ ಪಿತ್ತಕಲ್ಲುಗಳೊಂದಿಗೆ ಸೋಂಕಿತ ಪಿತ್ತಕೋಶ ಇರುವುದು ಕಂಡು ಬಂತು. ಅಷ್ಟೇ ಅಲ್ಲದೆ, ರೋಗಿಯು ಈ ಮೊದಲೇ ಹೃದ್ರೋಗ, ಮಧುಮೇಹ, ಅಧಿಕ ರಕ್ತದೊತ್ತಡದ ಇತಿಹಾಸ ಹೊಂದಿದ್ದು, ಈ ಹಿಂದೆ ಹೃದಯ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಆಂಜಿಯೋಪ್ಲ್ಯಾಸ್ಟಿಗೆ ಒಳಪಟ್ಟಿದ್ದರು. ಈ ಎಲ್ಲಾ ಕಾರಣದಿಂದ ಹಾಗೂ ಅವರ ವಯಸ್ಸಿನ ಕಾರಣದಿಂದ ಅವರಿಗೆ ಓಪನ್‌ ಸರ್ಜರಿ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಅವರಿಗೆ…

Read More

ಬೆಂಗಳೂರು : ಟ್ರಾವೆಲ್ ಹಾಗೂ ಲೀಶರ್ ಇಂಡಿಯಾ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ‘ಅತ್ಯುತ್ತಮ ದೇಶೀಯ ಏರ್‌ಪೋರ್ಟ್ ಲಾಂಜ್’ ಮನ್ನಣೆಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ ಪಡೆದುಕೊಂಡಿದೆ. ಇದಲ್ಲದೆ, ಕಾಂಡೆ ನಾಸ್ಟ್ ರೀಡರ್ಸ್ ಚಾಯ್ಸ್ ಅವಾರ್ಡ್ಸ್‌ -2024 ನಲ್ಲಿ ಟರ್ಮಿನಲ್ 2 ನಲ್ಲಿನ ಅಂತಾರಾಷ್ಟ್ರೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್‌ಗೆ ‘ಮೆಚ್ಚಿನ ವಿಮಾನ ನಿಲ್ದಾಣ ಲಾಂಜ್’ ಎಂಬ ಶೀರ್ಷಿಕೆಯ ಮನ್ನಣೆಯನ್ನು ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ, ಸೌಕರ್ಯ, ಸೌಲಭ್ಯ ಮತ್ತು ಅಸಾಧಾರಣ ಸೇವೆ ನೀಡುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬದ್ದತೆಯನ್ನು ಎತ್ತಿಹಿಡಿಯುತ್ತದೆ. ಪ್ರತಿಷ್ಠಿತ ಟ್ರಾವೆಲ್ + ಲೀಶರ್ ಮತ್ತು ಕಾಂಡೆ ನಾಸ್ಟ್ ಟ್ರಾವೆಲರ್ ನಿಯತಕಾಲಿಕೆಗಳು ಪ್ರಯಾಣ ಮತ್ತು ಆತಿಥ್ಯ ಉದ್ಯಮದಲ್ಲಿನ ಅತ್ಯುತ್ತಮ ಸಂಸ್ಥೆಗಳನ್ನು ಓದುಗರ ಆಯ್ಕೆಯ ಮೂಲಕ ಪ್ರಶಸ್ತಿಗೆ ಆಯ್ಕೆ ಮಾಡುತ್ತವೆ. ಈ ಪುರಸ್ಕಾರಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 080 ಲಾಂಜ್ ಬಗ್ಗೆ ಪ್ರಯಾಣಿಕರು…

Read More

ಮಂಡ್ಯ:  ದಸರಾದಲ್ಲಿ ಮಾತ್ರ ನುಡಿಸುವ ಪೊಲೀಸ್ ಬ್ಯಾಂಡ್ ಇದೇ ಪ್ರಪ್ರಥಮವಾಗಿ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತದ ರಸಧಾರೆ ಹರಿಸಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ವೇದಿಕೆ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಕಷ್ಟು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇ ದಿನ (ಡಿ.22ರ ಭಾನುವಾರ ಸಂಜೆ) ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ವಾದ್ಯಮೇಳ ನಡೆಯಲಿದೆ ಎಂದರು. ಡಿ.22ರಂದು ಗೋಷ್ಠಿಗಳು ಮುಕ್ತಾಯದ ನಂತರ ಸಂಜೆ  ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್ ನಿಂದ 45 ನಿಮಿಷಗಳ ಕಾಲ ಹತ್ತಕ್ಕೂ ಹೆಚ್ಚು ಹಾಡುಗಳಿಗೆ ವಾದ್ಯವೃಂದದವರು ಸಂಗೀತ ಪ್ರಸ್ತುತಿಪಡಿಸಲಿದ್ದಾರೆ ಎಂದು ಹೇಳಿದರು. ದಾಸರ ಕೀರ್ತನೆಗಳು, ಭಕ್ತಿ ಗೀತೆಗಳು, ಕನ್ನಡದ ಗೀತೆಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಗೀತೆಗಳನ್ನು ನುಡಿಸಲಿದ್ದಾರೆ. ಪೊಲೀಸ್ ಬ್ಯಾಂಡ್ ಕೇವಲ ದಸರಾದಲ್ಲಿ…

Read More

ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜೆ.ಮಂಜುನಾಥ್ ,ಉಪಾಧ್ಯಕ್ಷರಾಗಿ ಕೆ.ಸಿ.ಕೃಷ್ಣಪ್ಪ, ಖಚಾಂಚಿಯಾಗಿ ಹೆಚ್.ಎನ್.ಗೌತಮ್ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಛೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಬಳಿಕ ಮಾತನಾಡಿದ ಜೆ.ಮಂಜುನಾಥ್, ಹೆಚ್.ಎನ್.ಗೌತಮ್, ಬೆಂಗಳೂರು ಸಹಕಾರ ಮಹಾಮಂಡಳದ ಅಧೀನದಲ್ಲಿರುವ ಕಟ್ಟಡವನ್ನು ಬೆಂಗಳೂರು ಸಹಕಾರ ಒಕ್ಕೂಟಕ್ಕೆ ತೆಗೆದು ಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿದೆ,ಸಹಕಾರ ಬ್ಯಾಂಕು,ಸೊಸೈಟಿಗಳನ್ನು ನಡೆಸುತ್ತಿರುವವರಿಗೆ ಸೂಕ್ತ ತರಬೇತಿ ನೀಡುವುದು ನಮ್ಮ ಉದ್ದೇಶವಾಗಿದ್ದು ಈ ನಿಟ್ಟಿನಲ್ಲಿ ತರಬೇತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. https://kannadanewsnow.com/kannada/panchayat-raj-amendment-bill-passed-by-voice-vote-in-legislative-council/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.19ರ ನಾಳೆ ಈ ಪ್ರದೇಶಗಳಲ್ಲಿ ಪವರ್ ಕಟ್ “ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, ೧೭ ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ…

Read More

ಬೆಳಗಾವಿ ಸುವರ್ಣಸೌಧ: ವಿಪಕ್ಷ ಬಿಜೆಪಿಗೆ ಭಾರೀ ಮುಖಭಂಗ ಎನ್ನುವಂತೆ ವಿಧಾನ ಪರಿಷತ್ತಿನಲ್ಲಿಯೂ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವು ಧ್ವನಿ ಮತದ ಮೂಲಕ ಅಂಗೀಕಾರ ದೊರೆಯಿತು. ನಿನ್ನೆಯಷ್ಟೇ ವಿಧಾನಸಭೆಯಲ್ಲಿ  ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 ಹಾಗೂ 33ರ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ. 2ನೇ ಪ್ರಕರಣದ ಆರ್-ಎ ಖಂಡದಲ್ಲಿ ರಾಜ್ಯ ಸರ್ಕಾರ ಎಂದರೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಭಾರೆಯಲ್ಲಿರುವ ಮಂತ್ರಿ ಎಂದು ತಿದ್ದುಪಡಿ ಮಾಡಲಾಗಿದೆ. 13ನೇ ಪ್ರಕರಣದಲ್ಲಿ ರಾಜ್ಯಪಾಲರು ಎಂಬ ಪದ ಬದಲಾಗಿ ಮುಖ್ಯಮಂತ್ರಿಯವರು ಎಂದು ಪ್ರತಿಯೋಜಿಸಿ, ಮುಖ್ಯಮಂತ್ರಿಗಳನ್ನು ವಿಶ್ವ ವಿದ್ಯಾಲಯದ ಕುಲಪತಿಗಳನ್ನಾಗಿಸಿದೆ. 15(2)ನೇ ಪ್ರಕರಣದಲ್ಲಿ ವೈಜ್ಞಾನಿಕ ಅವಿಷ್ಕಾರ ಹಾಗೂ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಯುಜಿಸಿ…

Read More

ಬೆಂಗಳೂರು: ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 21-12-2024 ರಿಂದ 30-12-2024 (10 ದಿನಗಳು) ವರೆವಿಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಂದುವರಿದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. https://kannadanewsnow.com/kannada/16644-podi-free-villages-have-been-made-in-the-state-minister-krishna-byre-gowda/ ಪಿಂಚಣಿ ಅರ್ಜಿಗಳನ್ನು ಅಪ್ಲೋಡ್ ಮಾಡಲು ಉದ್ಯೋಗದಾತರಿಗೆ ಜ.31, 2025 ರವರೆಗೆ ವಿಸ್ತರಿಸಿದ EPFO – Kannada News | India News | Breaking news | Live news | Kannada | Kannada News | Karnataka News | Karnataka News

Read More

ಬೆಂಗಳೂರು: ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಅಮೇರಿಕಾಕಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆರಳಿದ್ದಾರೆ. ಅಲ್ಲದೇ ಡಿಸೆಂಬರ್ 24ರಂದು ಆಪರೇಷನ್ ನಡೆಯಲಿದೆ. ಆ ಬಳಿಕ ಚಿಕಿತ್ಸೆ ಪಡೆದು ಜನವರಿ.26ಕ್ಕೆ ಬೆಂಗಳೂರಿಗೆ ಅವರು ವಾಪಾಸ್ಸಾಗಲಿದ್ದಾರೆ. ಅಮೇರಿಕಾಕ್ಕೆ ತೆರಳುವ ಮುನ್ನಾ ಸುದ್ದಿಗಾರರೊಂದಿಗೆ ಭಾವುಕರಾಗಿಯೇ ಮಾತನಾಡಿದಂತ ನಟ ಶಿವರಾಜ್ ಕುಮಾರ್, ನಿನ್ನೆಯಿಂದಲೇ ನಾನು ಅಮೇರಿಕಾಕಕ್ಕೆ ತೆರಳುತ್ತಿರುವಂತ ವಿಷಯ ತಿಳಿದು ಮನೆಗೆ ಸಂಬಂಧಿಕರು, ಕುಟುಂಬಸ್ಥರು, ಅಭಿಮಾನಿಗಳು ಆಗಮಿಸಿ, ಮಾತನಾಡಿಸುತ್ತಿ್ದದಾರೆ ಎಂದರು. ನನಗೆ ಡಿಸೆಂಬರ್.24ರಂದು ಆಪರೇಷನ್ ಮಾಡಲು ಅಮೇರಿಕಾದಲ್ಲಿ ವೈದ್ಯರು ನಿಗದಿ ಪಡಿಸಿದ್ದಾರೆ. ಆ ಬಳಿಕ ವೈದ್ಯರ ನಿರೀಕ್ಷೆಯಲ್ಲಿದ್ದು ಜನವರಿ 26ರಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದೇನೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಅಂತ ತಿಳಿಸಿದರು. ಸ್ವಲ್ಪ ದುಃಖ ಆಯಿತು. 35 ದಿನ ಮನೆಯಿಂದ ಆಚೆ ಇರಬೇಕಲ್ವ ಎಂಬುದಾಗಿ ನಟ ಶಿವರಾಜ್ ಕುಮಾರ್ ಭಾವುಕರಾಗಿಯೇ ನುಡಿದರು. https://kannadanewsnow.com/kannada/no-question-of-stopping-grihalakshmi-project-cm-siddaramaiah/ https://kannadanewsnow.com/kannada/alert-mobile-users-beware-if-you-see-these-signs-it-means-your-phone-is-hacked/

Read More

ಬೆಳಗಾವಿ : ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ…

Read More

ಬೆಳಗಾವಿ ಸುವರ್ಣಸೌಧ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು,ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ಕಂದಾಯ ಹಾಗೂ ಭೂ ಮಾಪನ ಇಲಾಖೆಯ ನಡವಳಿಗಳೊಂದಿಗೆ ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದರು. ಈ ಹಿಂದೆ, ಮ್ಯುಟೇಷನ್ ಪೋಡಿಯಂತಹ ಪ್ರಕ್ರಿಯೆಯನ್ನು ಪೂರೈಸಲು ನಾಲ್ಕರಿಂದ ಆರು ತಿಂಗಳವರೆಗೆ ಕಾಲಾವಕಾಶ ತೆಗೆದುಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರವು ರೈತರಿಗೆ ಸಂಬಂಧಪಟ್ಟ ಇಂತಹ ಕೆಲಸಗಳಿಗೆ ಆದ್ಯತೆ ನೀಡಿ ಎಲ್ಲಾ ಹಂತಗಳ ಪ್ರಕ್ರಿಯೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳನ್ನು ಒದಗಿಸುವ…

Read More