Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಂತ ಬಿ.ಆರ್ ಜಯಂತ್ ಅವರು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರ ನಡೆದಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ  ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಆರ್.ಜಯಂತ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ಐದು ವರ್ಷಗಳಿಂದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಬಿ.ಆರ್.ಜಯಂತ್ ವೈಯಕ್ತಿಕ ಕಾರಣದಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ತಮ್ಮ ರಾಜೀನಾಮೆ ಪತ್ರವನ್ನು ಶಿವಮೊಗ್ಗ ಜಿಲ್ಲಾಧ್ಯಕ್ಷರ ಮೂಲಕ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ. ಈ ಮೂಲಕ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಜಯಂತ್ ಗುಡ್ ಬೈ ಹೇಳಿದ್ದಾರೆ. ತನ್ನ ರಾಜೀನಾಮೆ ಪತ್ರದಲ್ಲಿ ತಮಗೆ ಐದು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ ಪಕ್ಷದ ಪದಾಧಿಕಾರಿಗಳಿಗೆ, ಪ್ರಮುಖರಿಗೆ, ಕಾರ್ಯಕರ್ತರಿಗೆ ಕೃತಜ್ಞತೆಗಳು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/india-scraps-free-movement-regime-with-myanmar/ https://kannadanewsnow.com/kannada/udupis-parusurama-theme-park-scam-state-govt-orders-cid-probe/

Read More

ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಆರೋಪ ಕೇಳಿ ಬಂದಿತ್ತು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಇಡೀ ಪ್ರಕರಮವನ್ನು ಸಿಐಡಿ ತನಿಕೆಗೆ ಒಪ್ಪಿಸಿ ಆದೇಶಿಸಿದ್ದಾರೆ. ಈ ಮೂಲಕ ಪರುಶುರಾಮ ಥೀಂ ಪಾರ್ಕ್ ಹಗರಣವನ್ನು ರಾಜ್ಯ ಸರ್ಕಾರದಿಂದ ಸಿಐಡಿ ತನಿಖೆಗೆ ವಹಿಸಿ ಆದೇಶಿಸಲಾಗಿದೆ. ಉಡುಪಿಯ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದ ಬಗ್ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವಂತ ಲಕ್ಷ್ಮೀ ಹೆಬ್ಬಾಳ್ಕರ್ ತನಿಖೆಗೆ ವಹಿಸುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಶಿಫಾರಸ್ಸು ಮಾಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಈಗ ಸಿಎಂ ಸಿದ್ಧರಾಮಯ್ಯ ಅವರು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದ್ದಾರೆ. ಅಂದಹಾಗೇ ಫೆಬ್ರವರಿ.2ರಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಬಿಜೆಪಿ ಅವಧಿಯಲ್ಲಿ ನಿರ್ಮಿಸಲಾಗಿದ್ದಂತ ಪರಶುರಾಮ ಥೀಂ ಪಾರ್ಕ್ ನಲ್ಲಿನ ಕಳಪೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಬಳಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಂತ ವ್ಯಕ್ತಿಯೊಬ್ಬ ಸಿದ್ಧರಾಮಯ್ಯ ವಿರುದ್ಧವೇ ಅವರಿಗೆ ಧಿಕ್ಕಾರ ಎಂಬುದಾಗಿ ಕೂಗಿರೋದಾಗಿ ತಿಳಿದು ಬಂದಿದೆ. ಇಂದು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದ ನಿಮಿತ್ತ, ಬೆಂಗಳೂರಿನ ವಿಧಾನಸೌಧದ ಬಳಿಗೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಪರಿಹರಿಸಿಕೊಳ್ಳೋದಕ್ಕಾಗಿ ಸಿಎಂ ಸಿದ್ಧರಾಮಯ್ಯ ಭೇಟಿಗೆ ಆಗಮಿಸಿದ್ದರು. ಬೆಳಿಗ್ಗೆ 10.30ರಿಂದ ಕಾಯುತ್ತಿದ್ದಂತ ಅವರಿಗೆ ಸಿಎಂ ದರ್ಶನವೇ ಆಗಲಿಲ್ಲ. ಇದರಿಂದ ಸಿಟ್ಟಾದಂತ ಅವರು ಆ ಜನಸಂದಣಿಯ ನಡುವೆ ಸಿಎಂ ಸಿದ್ಧರಾಮಯ್ಯಗೆ ಧಿಕ್ಕಾರ, ಸಿಎಂ ಸಿದ್ಧರಾಮಯ್ಯಗೆ ಧಿಕ್ಕಾರ ಎಂಬುದಾಗಿ ಧಿಕ್ಕಾರವನ್ನು ಕೂಗಿದ್ದಾರೆ. ಕೂಡಲೇ ಆ ವ್ಯಕ್ತಿಯ ಬಳಿಗೆ ಬಂದಂತ ಪೊಲೀಸರು, ಆತನ ಸಮಸ್ಯೆ ಏನು ಎಂಬುದನ್ನು ವಿಚಾರಿಸಿ, ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಕರೆದೊಯ್ದು, ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಸರಿಪಡಿಸಿದ್ದಾರೆ. ಈ ಬಳಿಕ ಸಂತಸಗೊಂಡಂತ ಆತ, ಸಿಎಂ ಸಿದ್ಧರಾಮಯ್ಯಗೆ ಜೈ, ಸಿಎಂ ಸಿದ್ಧರಾಮಯ್ಯಗೆ ಜೈ ಎಂಬುದಾಗಿ ಜೈಕಾರವನ್ನು ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.…

Read More

ಬೆಂಗಳೂರು: ಶಾಲೆಯಲ್ಲಿ ನೀಡಿದಂತ ಮಧ್ಯಾಹ್ನದ ಬಿಸಿಯೂಟ ಸೇವಿಸಿದಂತ ಇಬ್ಬರು ಶಿಕ್ಷಕರು ಸಹಿತ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರೋ ಘಟನೆ ಸೀನಪ್ಪನಹಳ್ಳಿಯ ಅಂಬಾಭವಾನಿ ಅನುದಾನಿತ ಪ್ರೌಢ ಶಾಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯಲ್ಲಿರುವಂತ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ನೀಡಲಾಗಿದ್ದಂತ ಮೊಸರನ್ನ ಸೇವಿಸಿದಂತ ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ. ಮನೆಗೆ ತೆರಳಿಂದಂತ ವಿದ್ಯಾರ್ಥಿಗಳಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಕೂಡಲೇ ಹಿಬ್ಬಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಸೇರಿಸಿದ್ದಾರೆ. ಇನ್ನೂ 10 ಮಕ್ಕಳು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಕುಣಿಗಲ್ ನ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಟಿಹೆಚ್ಓ, ಆರೋಗ್ಯ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿ, ಮಾಹಿತಿ ಪಡೆದಿದ್ದಾರೆ. ಇದೀಗ ಅನೇಕ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/india-scraps-free-movement-regime-with-myanmar/ https://kannadanewsnow.com/kannada/cm-janaspandana-siddaramaiah-extends-humanitarian-assistance-to-specially-abled-person/

Read More

ಬೆಂಗಳೂರು: ತನ್ನ ಸಮಸ್ಯೆ ಹೇಳಿಕೊಂಡು ಡಿಗ್ರಿ ಮುಗಿಸಿದ್ದಂತ ವಿಶೇಷ ಚೇತನ ಯುವತಿಯೊಬ್ಬಳು ಇಂದು ಸಿಎಂ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದರು. ಆಕೆಯ ಮನವಿ ಪಡೆದಂತ ಅವರು, ಸ್ಥಳದಲ್ಲೇ ಪರಿಹಾರವನ್ನು ಸೂಚಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದೆಡೆಗಳಿಂದ ಸಾವಿರಾರು ಜನರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಆಗಮಿಸಿದ್ದಾರೆ. ಮಧ್ಯಾಹ್ನವಾದರೂ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಮಾತ್ರ ಕಡಿಮೆಯಾಗುತ್ತಿಲ್ಲ. ಇನ್ನೂ ಹೆಚ್ಚು ಹೆಚ್ಚೇ ಆಗುತ್ತಿದ್ದು, ಉರಿ ಬಿಸಿಲಿನಲ್ಲೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನರ ಬಳಿಗೆ ಸರ್ಕಾರ ಎಂಬ ರೀತಿ, ಸಮಸ್ಯೆಯನ್ನು ಶಾಂತ ಚಿತ್ತದಿಂದ ಕೇಳುತ್ತ, ಅದನ್ನು ಪರಿಹರಿಸೋ ಕಾರ್ಯದಲ್ಲಿ ತೊಡಗಿದ್ದಾರೆ. ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಡಬಲ್ ಡಿಗ್ರಿ ಮಗುಸಿದ್ದಂತ ಬೆಂಗಳೂರಿನ ವಿಶೇಷ ಚೇತನ ಯುವತಿ ನವ್ಯಶ್ರೀ ಎಂಬುವರು ತಾಯಿ ರಮಾಮಣಿ ಅವರ ಜೊತೆಗೆ ಬಂದು ಉದ್ಯೋಗಕ್ಕಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಳಿ ಮನವಿ ಮಾಡಿದರು. ವಿಕಲ ಚೇತನ ಯುವತಿಯು…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸೌಧದ ಮುಂಬಾಗದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ವಿಶೇಷ ಚೇತನ ವ್ಯಕ್ತಿಗೆ ಮಾನವೀಯ ನೆರವು ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಶೇಷ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಇಂದು ತಮ್ಮಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಮನವಿ ಮಾಡಿದರು ಅಂತ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರ ಮನವಿಯನ್ನು ಸ್ವೀಕರಿಸಿದಂತ ನಾನು ಅರ್ಜಿ ಪರಿಶೀಲಿಸಿ, ಚಿಕಿತ್ಸೆಗೆ ಆದಷ್ಟು ಶೀಘ್ರವೇ ನೆರವು ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರ ಡಯಾಲಿಸಿಸ್ ಚಿಕಿತ್ಸೆಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುತ್ತದೆ ಅಂತ ಹೇಳಿದ್ದಾರೆ. https://twitter.com/CMofKarnataka/status/1755517786355536069 ರಾಯಚೂರಿನ ಶುಶಾಂತ್ ಗೆ  ಸಿಎಂ ಸಿದ್ಧರಾಮಯ್ಯ ಆರ್ಥಿಕ ನೆರವು ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು…

Read More

ಬೆಂಗಳೂರು: ಮಕ್ಕಳಿಗೆ ಮಾನಸೀಕ ಒತ್ತಡವನ್ನು ತಗ್ಗಿಸಿ, ಬೌದ್ಧಿಕ ಬೆಳವಣಿಗೆ ಹೆಚ್ಚಿಸೋ ನಿಟ್ಟಿನಲ್ಲಿ ಈ ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುತ್ತಿದೆ. ಸಪ್ಲಿಮೆಂಟರಿ ಪರೀಕ್ಷೆಯನ್ನು ರದ್ದುಗೊಳಿಸಿ, ಮೂರು ಬಾರಿ ಮುಖ್ಯ ಪರೀಕ್ಷೆಯನ್ನೇ ನಡೆಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳೇ ಎಕ್ಸಾಂನಲ್ಲಿ ಫೇಲ್ ಆದ್ರೂ ತಲೆ ಕೆಡಿಸಿಕೊಳ್ಳಬೇಡಿ. ಮೂರು ಬಾರಿಯೂ ಮುಖ್ಯ ಪರೀಕ್ಷೆ ಬರೆಯೋದಕ್ಕೆ ಅವಕಾಶ ಸಿಗಲಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಮುಂಚೆ ಸೆಪ್ಲಿಮೆಂಟರಿ ಪರೀಕ್ಷೆಯನ್ನು ಈ ಮೊದಲು ವಾರ್ಷಿಕ ಪರೀಕ್ಷೆಯ ನಂತ್ರ ನಡೆಸಲಾಗುತ್ತಿತ್ತು. ಅದನ್ನು ಬದಲಾವಣೆ ಮಾಡಿ ಮೂರು ಬಾರಿ ಪರೀಕ್ಷೆಯನ್ನ ನಡೆಸಲಾಗುತ್ತಿದೆ. ಫೇಲ್ ಆಗಿದ್ದಾರೆ ಎಂಬುದು ಮಕ್ಕಳ ಮಾರ್ಕ್ಸ್ ಕಾರ್ಡ್ ನಲ್ಲಿ ಬರಬಾರದು ಎಂಬ ಕಾರಣಕ್ಕೆ ಬದಲಾವಣೆ ಮಾಡಲಾಗಿದೆ ಎಂದರು. ಲಾಂಗ್ ಜಂಪ್ ನಲ್ಲಿ ಒಂದು, ಎರಡು ಮೂರು ಬಾರಿ ಅವಕಾಶ ನೀಡುತ್ತೀವಲ್ಲ. ಹಾಗೆಯೇ ಈ ವರ್ಷದಿಂದ ಮೂರು ಬಾರಿ ಎಸ್ ಎಸ್ ಎಲ್ ಸಿ…

Read More

ಬೆಂಗಳೂರು: ಪುಸ್ತಕ ಪ್ರಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ವೀರಲೋಕದಿಂದ ಫೆಬ್ರವರಿ.10, 11ರಂದು ಪುಸ್ತಕ ಸಂತೆಯನ್ನು ಆಯೋಜಿಸಲಾಗಿದೆ. ಈ ಕುರಿತಂತೆ ವೀರಲೋಕ ಪ್ರಕಾಶನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕನ್ನಡ ಪುಸ್ತಕ ಲೋಕಕ್ಕೆ ಕಸುವು ತುಂಬುವ ಪ್ರಯತ್ನದ ಸಲುವಾಗಿ, ಪುಸ್ತಕ ಸಂತೆಯನ್ನು ದಿನಾಂಕ 10-02-2024 ಮತ್ತು 11-02-2024ರಂದು ಆಯೋಜಿಸಲಾಗಿದೆ ಎಂದಿದೆ. ಬೆಂಗಳೂರಿನ ಸ್ವಾಭಿಮಾನಿ ಉದ್ಯಾನವನ, ಹೆಚ್ ಎಸ್ ಆರ್ ಬಡವಾಣೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಎರಡು ದಿನ ಪುಸ್ತಕ ಸಂತೆ ನಡೆಯಲಿದೆ. ಸಂತೆಗೆ ಬನ್ನಿ, ಇಲ್ಲಿ ಪುಸ್ತಕದ ಜೊತೆಗೆ ಎಲ್ಲವೂ ಉಂಟು. ಹಾಡು, ಹರಟೆ, ಆಹಾರ, ಮಕ್ಕಳಿಗೆ ಆಟ ಎಲ್ಲವೂ ನಮ್ಮ ವೀರಲೋಕ ಪ್ರಕಾಶನದಿಂದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ. ಇನ್ನೂ ನೀವು ಮಳಿಗೆ ಇಡಲು ಇಚ್ಚಿಸಿದ್ರೇ 7022122121 ಅಥವಾ 8861212172ಗೆ ಕರೆ ಮಾಡಿ. ನಿಮ್ಮ ಸ್ಟಾಲ್ ಬುಕ್ ಮಾಡಿ ಅಂತ ತಿಳಿಸಿದೆ. ಅಲ್ಲದೇ ಹೆಚ್ಚಿನ ಮಾಹಿತಿಗಾಗಿ ಇದೇ ಸಂಖ್ಯೆಗೆ ಸಂಪರ್ಕಿಸಿ, ಪಡೆಯಬಹುದಾಗಿದೆ. https://kannadanewsnow.com/kannada/breaking-a-portion-of-delhis-gokulpuri-metro-station-has-collapsed-some-injured/ https://kannadanewsnow.com/kannada/india-scraps-free-movement-regime-with-myanmar/

Read More

ನವದೆಹಲಿ: ಭಾರತದ ಗಡಿಗಳನ್ನು ಭದ್ರಪಡಿಸುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದ ನಂತರ ಮ್ಯಾನ್ಮಾರ್ ನೊಂದಿಗಿನ ಮುಕ್ತ ಸಂಚಾರ ಆಡಳಿತವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವಾಲಯ ಗುರುವಾರ ಪ್ರಕಟಿಸಿದೆ. ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ಲಾಟ್ಫಾರ್ಮ್ ಎಕ್ಸ್ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪೋಸ್ಟ್ ಮಾಡಿದ್ದಾರೆ. https://twitter.com/AmitShah/status/1755482704152305786 1,643 ಕಿ.ಮೀ ಉದ್ದದ ಭಾರತ-ಮ್ಯಾನ್ಮಾರ್ ಗಡಿಗೆ ಬೇಲಿ ಹಾಕಲು ಭಾರತ ಮಂಗಳವಾರ ನಿರ್ಧರಿಸಿದ ನಂತರ ಈ ಬೆಳವಣಿಗೆ ನಡೆದಿದೆ. https://kannadanewsnow.com/kannada/breaking-a-portion-of-delhis-gokulpuri-metro-station-has-collapsed-some-injured/ https://kannadanewsnow.com/kannada/shakti-project-effect-women-fight-with-slippers-in-bmtc-bus/

Read More

ನವದೆಹಲಿ: ದೇಶದ ಆಂತರಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಭಾರತ ಮತ್ತು ಮ್ಯಾನ್ಮಾರ್ ನಡುವಿನ ಮುಕ್ತ ಚಲನೆ ಆಡಳಿತವನ್ನು (ಎಫ್ಎಂಆರ್) ರದ್ದುಗೊಳಿಸಲು ಗೃಹ ಸಚಿವಾಲಯ (ಎಂಎಚ್ಎ) ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಪ್ರಕಟಿಸಿದ್ದಾರೆ. ಮ್ಯಾನ್ಮಾರ್ ಗಡಿಯಲ್ಲಿರುವ ಭಾರತದ ಈಶಾನ್ಯ ರಾಜ್ಯಗಳ ಜನಸಂಖ್ಯಾ ರಚನೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಮಿತ್ ಶಾ ಹೇಳಿದರು. ಈ ಕುರಿತಂತೆ ಎಕ್ಸ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ವಿದೇಶಾಂಗ ಸಚಿವಾಲಯವು ಪ್ರಸ್ತುತ ಅದನ್ನು ರದ್ದುಗೊಳಿಸುವ ಪ್ರಕ್ರಿಯೆಯಲ್ಲಿರುವುದರಿಂದ, ಎಫ್ಎಂಆರ್ ಅನ್ನು ತಕ್ಷಣವೇ ಅಮಾನತುಗೊಳಿಸಲು ಎಂಎಚ್ಎ ಶಿಫಾರಸು ಮಾಡಿದೆ ಎಂದು ತಿಳಿಸಿದ್ದಾರೆ. https://twitter.com/AmitShah/status/1755482704152305786

Read More