Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ. ರಾಜ್ಯದ 19 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ…
ಬೆಂಗಳೂರು : ಮಂಡ್ಯ – ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ಪೂರೈಸಲು ಅಗತ್ಯ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ರೂ. 350. 00 ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿ ಮಂಡ್ಯ ನಗರ ಸಭೆಯ ಪೌರಾಯುಕ್ತರಿಗೆ ಕಳಿಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ ತಿಳಿಸಿದರು. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಲವು ವರ್ಷಗಳಿಂದ ನೀರು ಸರಬರಾಜು ವಿತರಣಾ ಕೊಳವೆ ಮಾರ್ಗಗಳನ್ನು ಬಳಸದೇ ಇದ್ದ ಕಾರಣ ಕೊಳವೆಗಳು ಹಾಳಾಗಿರುವ ಮಾಹಿತಿಯನ್ನು ಗೃಹ ಮಂಡಳಿ ಹಾಗೂ ಮಂಡ್ಯ ನಗರ ಸಭೆ ಅವರಿಗೆ ತಿಳಿಸಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ…
ಬೆಂಗಳೂರು : ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕುಗಳಲ್ಲಿ ಕೆಐಡಿಬಿ ಪ್ರದೇಶಕ್ಕೆ ವಶಪಡಿಸಿಕೊಳ್ಳಲಾದ ಜಮೀನಿನ ಭೂ ಮಾಲೀಕರು ಯಾರು ಪ್ರೋತ್ಸಹ ಧನ (Incentives) ಪಡೆದಿರುತ್ತಾರೋ ಅವರುಗಳಿಗೆ ಉದ್ಯೋಗ ಒದಗಿಸುವುದಾಗಿ ಸಚಿವ ಎಂ.ಬಿ.ಪಾಟೀಲ್ ಭರವಸೆ ನೀಡಿದರು. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಂ.ಎಲ್.ಅನಿಲ್ಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿಯಂತೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಾಲೂಕುಗಳಲ್ಲಿ ಬಿಜಿಎಂಎಲ್ ವ್ಯಾಪ್ತಿಯಲ್ಲಿ 12,335.51 ಎಕರೆ ಹಾಗೂ ಬಿಇಎಂಎಲ್ ವ್ಯಾಪ್ತಿಯಲ್ಲಿ 1846 ಎಕರೆ ಜಮೀನಿರುತ್ತದೆ. ಬಿಜಿಎಂಎಲ್ ಹಾಗೂ ಬಿಇಎಂಎಲ್ ಸಂಸ್ಥೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ತಿಳಿಸಿದರು. ಬಿಇಎಂಎಲ್ ಗೆ ನೀಡಿದ 1846 ಎಕರೆ ಜಮೀನಿನಲ್ಲಿ ಸಂಸ್ಥೆಯು ತನ್ನ ಉದ್ದೇಶಿತ ಕಾರ್ಯ ಚಟುವಟಿಕೆಗಳಿಗಾಗಿ ಉಪಯೋಗಿಸಿಕೊಂಡು ಸಂಸ್ಥೆಗೆ ಅವಶ್ಯವಿಲ್ಲದ 967.20 ಜಮೀನನ್ನು ಹೆಚ್ಚುವರಿ ಜಮೀನೆಂದು ನಿರ್ಧರಿಸಿ ಸರ್ಕಾರವು ಹಿಂತೆಗೆದುಕೊಂಡಿದೆ. ಬಿಜಿಎಂಎಲ್ನಿಂದ ಯಾವುದೇ ಜಮೀನನ್ನು ಹಿಂತೆಗೆದುಕೊಂಡಿರುವುದಿಲ್ಲ. ಬಿಇಎಂಎಲ್ ನಿಂದ ಹಿಂತೆಗೆದುಕೊಡ ಜಮೀನಿನ ಪೈಕಿ 658.20 ಎಕರೆ…
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರ ಬರೋಬ್ಬರಿ ₹76,509 ಕೋಟಿ ಖರ್ಚು ಮಾಡಿದೆ. ಇದು ಸತ್ಯ ಎನ್ನುವುದು ಸದನದಲ್ಲಿರುವ ಪ್ರತಿಯೊಬ್ಬರಿಗೂ ಸ್ಪಷ್ಟವಾಗಿ ಗೊತ್ತಿದೆ. ನಮ್ಮ ಸರ್ಕಾರ ದಿವಾಳಿಯಾಗಿದ್ದರೆ ₹76,509 ಕೋಟಿ ಕೊಡಲು ಸಾಧ್ಯವಿತ್ತೇ? ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸಿಬಿಡುತ್ತೆ ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತಾ? ರಾಜ್ಯದ ಜನರನ್ನು ಯಾವಾಗಲೂ ಮೂರ್ಖರನ್ನಾಗಿಸಲು ಪ್ರಯತ್ನಿಸಿದರೆ ಸಾಧ್ಯವಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಇಂದು ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದಂತ ಅವರು, 05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು ಎಂದರು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ…
ಬೆಂಗಳೂರು: ಅಭಿವೃದ್ಧಿ ಯೋಜನೆಗಳಿಗೂ ಹಣ ಮೀಸಲಿಟ್ಟು, ಗ್ಯಾರಂಟಿಗಳ ಜೊತೆಗೆ ಕರ್ನಾಟಕದ ಪ್ರಗತಿಯನ್ನೂ ಮಾಡಿದ್ದೇವೆ. 1.26 ಕೋಟಿ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ ಎಂಬುದಾಗಿ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ಧರಾಮಯ್ಯ ಉತ್ತರಿಸಿದರು. ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿ ಇಲ್ಲದ ಸ್ಥಿತಿ ಬಂದಿದೆ. ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ. ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ ಎಂಬುದಾಗಿ ಹೇಳಿದರು. 1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಿದಲ್ಲವೋ , ಅಲ್ಲಿಯವರೆಗೂ ಸಮಾನತೆ ಬರಲು ಸಾಧ್ಯವಿಲ್ಲ ಎಂದು…
ನವದೆಹಲಿ: ಎಂಟು ದಿನಗಳ ಕಾರ್ಯಾಚರಣೆಗಾಗಿ ಹಾರಾಟ ನಡೆಸಿದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್, ನಿರಂತರ ತಾಂತ್ರಿಕ ದೋಷಗಳಿಂದಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಒಂಬತ್ತು ತಿಂಗಳುಗಳಿಗಿಂತ ಹೆಚ್ಚು ಕಾಲ ಕಳೆದಿದ್ದಾರೆ. ಮಾರ್ಚ್ 19 ಕ್ಕಿಂತ ಮುಂಚೆಯೇ ಅವರು ಸ್ಪೇಸ್ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಭೂಮಿಗೆ ಮರಳಲು ತಯಾರಿ ನಡೆಸುತ್ತಿರುವಾಗ, ಅವರ ದೀರ್ಘಕಾಲದ ಕಕ್ಷೆಯ ಅವಧಿಯು ಅವರಿಗೆ ಆರ್ಥಿಕವಾಗಿ ಏನು ಗಳಿಸುತ್ತದೆ ಎಂಬುದರ ಬಗ್ಗೆ ಆಸಕ್ತಿ ಹುಟ್ಟಿಕೊಂಡಿದೆ. ಗಗನಯಾತ್ರಿ ಪರಿಹಾರವನ್ನು ವಿವರ ಗಗನಯಾತ್ರಿಗಳು ವಿಸ್ತೃತ ಕಾರ್ಯಾಚರಣೆಗಳಿಗೆ ಸಹ ಅಧಿಕಾವಧಿ ವೇತನವನ್ನು ಪಡೆಯುವುದಿಲ್ಲ ಎಂದು ನಿವೃತ್ತ ನಾಸಾ ಗಗನಯಾತ್ರಿ ಕ್ಯಾಡಿ ಕೋಲ್ಮನ್ ಸ್ಪಷ್ಟಪಡಿಸಿದ್ದಾರೆ. ಫೆಡರಲ್ ಉದ್ಯೋಗಿಗಳೆಂದು ವರ್ಗೀಕರಿಸಲ್ಪಟ್ಟ ಅವರು ಬಾಹ್ಯಾಕಾಶದಲ್ಲಿ ತಮ್ಮ ಸಮಯವನ್ನು ಪ್ರಮಾಣಿತ ಕೆಲಸವೆಂದು ಪರಿಗಣಿಸಲಾಗುತ್ತದೆ. ನಾಸಾ ಆಹಾರ ಮತ್ತು ವಸತಿಯಂತಹ ಅಗತ್ಯಗಳನ್ನು ಪೂರೈಸುತ್ತದೆ. ಅವರು ಸಾಧಾರಣ ದೈನಂದಿನ ಭತ್ಯೆಯನ್ನು ಪಡೆಯುತ್ತಾರೆ. ಸಣ್ಣ ವೆಚ್ಚಗಳಿಗೆ ಸುಮಾರು $4 (ರೂ. 347) ಎಂದು ಕೋಲ್ಮನ್ ವಾಷಿಂಗ್ಟನ್ಗೆ ತಿಳಿಸಿದರು. 2010-11ರಲ್ಲಿ ಅವರ…
ಬೆಂಗಳೂರು: ರಾಜ್ಯದಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೂರ್ಯನ ಶಾಖ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು ಅಂತ ಈ ಕೆಳಗಿನಂತೆ ಮಾರ್ಗಸೂಚಿಯಲ್ಲಿ ಸಲಹೆ ನೀಡಿದೆ. ಬಿಸಿಲ ಝಳ ಹೆಚ್ಚಳ: ಈ ಸಲಹೆ ಪಾಲಿಸೋದು ಮರಯೆಬೇಡಿ ಸಾರ್ವಜನಿಕರು ರೇಡಿಯೋ, ಟಿವಿ ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು. ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು. ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟಗಳು ಅಥವಾ ಚಪ್ಪಲಗಳನ್ನು ಬಳಸಿ ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ಒರಿ. ನೀವು ಹೊರಗೆ…
ಬೆಂಗಳೂರು: ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ ಆಚರಣೆ ಆಗುವ ಬದಲಿಗೆ ಇದನ್ನೊಂದು ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಉತ್ಸವವನ್ನಾಗಿ ರೂಪಿಸಬೇಕು. ಇಡೀ ರಾಷ್ಟ್ರದ ಗಮನ ಸೆಳೆಯುವಂತೆ ಉತ್ಸವ ಆಚರಣೆಯಾಗಬೇಕು ಎಂದು ಹೇಳಿದರು. ಉತ್ಸವದಲ್ಲಿ ಸಂಗೀತ, ನೃತ್ಯ ಹಾಗೂ ಜಾನಪದ ಕಲಾ ವೈಭವಗಳನ್ನು ಪ್ರತಿಬಿಂಬಿಸುವಂತಹ ಕಾರ್ಯಕ್ರಮಗಳು ಆಯೋಜನೆಯಾಗಲಿದೆ ಎಂದು ತಿಳಿಸಿದರು. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವಕ್ಕೆ ಬಾದಾಮಿಯಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಎರಡನೇ ದಿನ ಪಟ್ಟದಕಲ್ಲು ಹಾಗೂ ಸಮಾರೋಪ ಸಮಾರಂಭ ಐಹೊಳೆಯಲ್ಲಿ ನಡೆಯಲಿದೆ. ವರ್ಷಾಂತ್ಯಕ್ಕೆ ಉತ್ಸವ…
ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆಗೆ ಟೆಂಡರ್ ಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಸಿದ್ದರಾಮಯ್ಯ ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇದನ್ನು “ಅಲ್ಪಸಂಖ್ಯಾತ ತುಷ್ಟೀಕರಣ” ಮತ್ತು “ಸಾಂವಿಧಾನಿಕ ದುಷ್ಕೃತ್ಯ” ಎಂದು ವಿರೋಧಿಸುತ್ತಿರುವ ಬಿಜೆಪಿ, ಕರ್ನಾಟಕ ಸರ್ಕಾರದ ಮಸೂದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ಹೇಳಿದೆ. ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಪ್ರವರ್ಗ -2 ಬಿ ಅಡಿಯಲ್ಲಿ ವರ್ಗೀಕರಿಸಲಾದ ಮುಸ್ಲಿಮರಿಗೆ 4% ಕೋಟಾದೊಂದಿಗೆ ಮೀಸಲಾತಿ ನೀಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಮಸೂದೆಗೆ ಕಳೆದ ವಾರ ಸಚಿವ ಸಂಪುಟ ಅನುಮೋದನೆ ನೀಡಿತು. ಪ್ರಸ್ತುತ, ಕರ್ನಾಟಕವು ಎಸ್ಸಿ / ಎಸ್ಟಿಗಳಿಗೆ ನಿರ್ಮಾಣ ಕಾರ್ಯಗಳ ಗುತ್ತಿಗೆಗಳಲ್ಲಿ 24% ಮೀಸಲಾತಿಯನ್ನು ಹೊಂದಿದೆ – ಪರಿಶಿಷ್ಟ ಜಾತಿಗಳಿಗೆ 17.15% ಮತ್ತು ಪರಿಶಿಷ್ಟ ಪಂಗಡಗಳಿಗೆ 6.95%. ಸರಕು ಮತ್ತು ಸೇವೆಗಳ ಖರೀದಿಗಾಗಿ, ಪ್ರಸ್ತುತ ಎಸ್ಸಿ / ಎಸ್ಟಿ (24%) ಮತ್ತು ವರ್ಗ -1 (4%) ಮತ್ತು ವರ್ಗ -2 ಎ (15%) ಗೆ ಸೇರಿದ ಒಬಿಸಿಗಳಿಗೆ ಗುತ್ತಿಗೆಗಳನ್ನು ಕಾಯ್ದಿರಿಸಲಾಗಿದೆ.…
ಬೆಂಗಳೂರು: ರಾಜ್ಯದಲ್ಲಿ ವಯೋ ವೃದ್ಧರನ್ನು ಆಸ್ಪತ್ರೆಗೆ ಸೇರಿಸಿ ಬಿಟ್ಟು ಹೋಗುವ ಮಕ್ಕಳಿಗೆ ಬಿಸಿ ಮುಟ್ಟಿಸಲು ಸರ್ಕಾರ ನಿರ್ಧರಿಸಿದೆ. ಇನ್ಮುಂದೆ ಪೋಷಕರನ್ನು ಆರೈಕೆ ಮಾಡದ ಮಕ್ಕಳಿಗೆ ಆಸ್ತಿ ವರ್ಗಾವಣೆ ರದ್ದುಗೊಳಿಸಲು ಅಗತ್ಯ ಕ್ರಮವಹಿಸಲಾಗಿದೆ. ತಮ್ಮ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಚಿಕಿತ್ಸೆ ನೆಪದಲ್ಲಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಮಕ್ಕಳು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಅಂತಹ ಪೋಷಕರು ತಮ್ಮ ಮಕ್ಕಳ ಪರವಾನಗಿ ಮಾಡಿರುವ ವಿಲ್ ಅಥವಾ ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ ಇವರು ತಿಳಿಸಿದ್ದಾರೆ. https://twitter.com/KarnatakaVarthe/status/1901868512596967532 https://kannadanewsnow.com/kannada/good-news-for-milk-producers-state-govt-hikes-incentive-by-rs-2/ https://kannadanewsnow.com/kannada/87-92-kg-gold-biscuits-11-expensive-watches-seized-by-dri-officials-in-ahmedabad/











