Author: kannadanewsnow09

ಗುರುವಾರದ ದಿನದಂದು ಸಾಯಂಕಾಲದ ಸಮಯದಲ್ಲಿ ಎರಡು ಬಾಳೆಹಣ್ಣಿನಿಂದ ಈ ಉಪಾಯವನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳನ್ನು ದೂರ ಮಾಡಿಕೊಳ್ಳುವುದರ ಜೊತೆಗೆ ಐಷಾರಾಮಿ ಜೀವನವನ್ನು ನೀವು ಪಡೆದುಕೊಳ್ಳಬಹುದು. ಹಾಗಾದರೆ ಎರಡು ಬಾಳೆಹಣ್ಣಿನಿಂದ ಯಾವ ರೀತಿ ಈ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 9686268564. ಪ್ರತಿಯೊಬ್ಬರಿಗೂ ಜೀವನದಲ್ಲಿ ಆರ್ಥಿಕವಾಗಿ ಸದೃಢವಾಗಿರಬೇಕು, ಧನ ಯೋಗವನ್ನು ಪಡೆದುಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ, ಗುರುವಾರದ ದಿನವನ್ನು ಕೇವಲ ಗುರುಗಳ ವಾರ ಎಂದು ತಿಳಿದುಕೊಳ್ಳದೆ ಲಕ್ಷ್ಮಿಯ ವಾರ ಎಂದು ಕೂಡ…

Read More

ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಮುಂಬಾಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿಗಳು ದಿನಾಂಕ: 08.02.2024 ರಂದು ವಿಧಾನ ಸೌಧದಲ್ಲಿ ಜನಸ್ಪಂದನ ಕಾರ್ಯಕ್ರವನ್ನು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವ ತಯಾರಿ ಸಲುವಾಗಿ ದಿ. 07.02.2024 ರಂದು ಮತ್ತು ಕಾರ್ಯಕ್ರಮದ ದಿನ ದಿ. 08.02.2024 ಗಳಂದು ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ವೃತ್ತದಿಂದ ಗೇಟ್ ನಂಬರ್‌-04 ರವರಗೆ ಸಂಚಾರವನ್ನು ನಿಷೇಧಿಸಲಾಗಿರುತ್ತದೆ ಎಂದು ತಿಳಿಸಿದೆ. ದಿ. 07.02.2024 ಮತ್ತು 08.02.2024 ಗಳಂದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ 1. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವಾಗಿ ಡಿ. ದೇವರಾಜು ಅರಸು ರಸ್ತೆಯಲ್ಲಿ ಬರುವ ವಾಹನಗಳು ಎ.ಜಿ.ಎಸ್. ವೃತ್ತ ಮೂಲಕ ಎಂ.ಎಸ್. ಬಿಲ್ಡಿಂಗ್ ಒಳಭಾಗದಿಂದ ಪ್ರವೇಶಿಸಿ ಡಾ|| ಬಿ.ಆರ್. ಅಂಬೇಡ್ಕರ್…

Read More

ಬೆಂಗಳೂರು : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್.09 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು ( ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು(ಆರ್‍ಇಆರ್‍ಎ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಚೆಕ್…

Read More

ಬೆಂಗಳೂರು: ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ. ಈ ರೀತಿ ನೋಂದಣಿ ಮಾಡಿಕೊಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆಗೆ…

Read More

ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಅರ್ಥಾತ್ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ನೀವು ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಇದ್ದರೇ, ತಪ್ಪದೇ ಈ ದಾಖಲೆಗಳನ್ನು ಕೊಂಡೊಯ್ಯೋದು ಮರೆಯಬೇಡಿ. ಅವು ಏನು ಅಂತ ಮುಂದೆ ಓದಿ. ಫೆಬ್ರವರಿ 8ರ ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು…

Read More

ಬೆಂಗಳೂರು: ನಗರದ ಕುಂಬಾರಪೇಟೆ ಹರಿ ಮಾರ್ಕೆಟಿಂಗ್ ಒಳಗೆ ಡಬ್ಬಲ್ ಮರ್ಡರ್ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹಲಸೂರುಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹರಿ ಮಾರ್ಕೆಟಿಂಗ್ ಒಳಗಡೆ ಸುರೇಶ್ (55) ಹಾಗೂ ಮಹೇಂದ್ರ (68) ಎಂಬ ಇಬ್ಬರನ್ನು ಹತ್ಯೆಗೈಯ್ಯಲಾಗಿದೆ. ಆಸ್ತಿಯ ವಿಚಾರಕ್ಕಾಗಿ ಈ ಮರ್ಡರ್ ನಡೆಸಿದೆ ಎನ್ನಲಾಗುತ್ತಿದೆ. ಸುರೇಶ್, ಮಹೇಂದ್ರ ಅವರ ಸಂಬಂಧಿ ಭದ್ರ ಎಂಬಾತನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೇ ಹತ್ಯೆಯ ಬಳಿಕ ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರೋ ಹಲಸೂರು ಗೇಟ್ ಠಾಣೆಯ ಪೊಲೀಸರು, ಡಿಸಿಪಿ ಶೇಖರ್, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬಂಧಿತ ಆರೋಪಿ ಭದ್ರ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಡಿಸಿಪಿ ಶೇಖರ್ ಅವರು, ಡಬ್ಬಲ್ ಮರ್ಡರ್ ಮಾಡಿರೋ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.…

Read More

ಬೆಂಗಳೂರು: ನಗರದ ಕುಂಬಾರಪೇಟೆಯಲ್ಲಿ ಇಂದು ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಡಬ್ಬಲ್ ಮರ್ಡರ್ ಒಂದು ನಡೆದಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಗಳೂರಿನ ಹಲಸೂರು ಬಳಿಯ ಕುಂಬಾರಪೇಟೆಯಲ್ಲಿನ ಹರಿ ಮಾರ್ಕೆಟಿಂಗ್ ನಲ್ಲಿನ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಇಬ್ಬರ ಡಬ್ಬಲ್ ಮರ್ಡರ್ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಬೆಂಗಳೂರಿನ ಡಬ್ಬಲ್ ಮರ್ಡರ್ ಸ್ಥಳಕ್ಕೆ ಡಿಸಿಪಿ ಶೇಖರ್, ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಬೆಂಗಳೂರಿನ ಕುಂಬಾರಪೇಟೆಯಲ್ಲಿನ ಡಬ್ಬಲ್ ಮರ್ಡರ್ ಗೆ ಕಾರಣ ಏನು ಎಂಬುದು ಇನ್ನೂ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. https://kannadanewsnow.com/kannada/former-minister-mp-renukacharya-openly-challenged-congress-leaders/ https://kannadanewsnow.com/kannada/breaking-election-commission-announces-new-name-for-sharad-pawars-party/

Read More

ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ.ಎ‌ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರ ಪಕ್ಷ ಸೇರ್ಪಡೆಯಾದ ನಂತರ ಅವರು ಮಾಧ್ಹಮದವರ ಜೊತೆ ಮಾತನಾಡಿದರು. ಯುಪಿಎ ಅವಧಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿಎ ಸಮಯದಲ್ಲಿ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಕುರಿತು ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ಹೇಳಿದರು. ದೆಹಲಿಯಲ್ಲಿ ನಡೆದಿರುವುದು ಪ್ರತಿಭಟನೆಯಲ್ಲ. ಅದು ಕಾಂಗ್ರೆಸ್ ಕೃಪಾ ಪೋಷಕ ಪ್ರತಿಭಟನೆ.ದೆಹಲಿಯಲ್ಲಿ ಕರ್ನಾಟಕದ ಮಾನ ಮಾರ್ಯಾದೆ ಕಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ರಾಜ್ಯದ ಜನತೆಯ ಕ್ಷೆಮೆ…

Read More

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್ ರಹಿತ ತಂಬಾಕು ರಹಿತ, ಸ್ವಾಧಭರಿತ, ಸ್ವಾಧರಹಿತ ಹುಕ್ಕ ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರೆ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋನೆ, ಸಂಗ್ರಹಣೆ, ವ್ಯಾಪಾರವನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ ಟೊಬ್ಯಾಕೊ ಸರ್ವೇ 2016-17 ಅಧ್ಯಯನ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ವರೋಕ್ತ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ ಮಹಾರ, ಉತ್ಪಾದನೆ, ಹಂಚಿಕೆ…

Read More

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್ www.davangereuniversity.ac.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ. ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಿಷನ್ ಸಂಯೋಜಕರ ಒಂದು ಹುದ್ದೆಗೆ ಸಮಾಜ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕತೆ, ಔಷಧ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ನಿರ್ವಹಣೆಯಲ್ಲಿ ಪದವಿ ಪಡೆದಿದ್ದು. ಸಂಬಂಧಿತ ಕ್ಷೇತ್ರದಲ್ಲಿ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷ ಅನುಭವ ಹೊಂದಿರಬೇಕು. ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಂಟ್ ತಜ್ಞರ ಒಂದು ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್, ಇತರೆ ವಿಭಾಗದಲ್ಲಿ ಪದವಿ ಪಡೆದಿದ್ದು. ಸರ್ಕಾರೇತರ ಸಂಸ್ಥೆಗಳೊಂದಿಗೆ 3…

Read More