Author: kannadanewsnow09

ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನಡೆಸಿದರು. ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಇಂದು ವಿಧಾನಸೌಧದ ಕೊಠಡಿ ಸಂಖ್ಯೆ: 334 ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 160 ಮಕ್ಕಳು ಪಾಲ್ಗೊಂಡಿದ್ದರು. ಮಕ್ಕಳ ದಿನಾಚರಣೆಯಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಸ್ಮರಿಸುವುದರ ಜೊತೆಗೆ, ಭವಿಷ್ಯದ ಕರ್ನಾಟಕದ ನಿರ್ಮಾಣಕ್ಕೆ ಮಕ್ಕಳಿಂದ ಸಲಹೆಗಳನ್ನು ಪಡೆಯುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಮಕ್ಕಳೊಂದಿಗೆ ಸಂವಾದ ನಡೆಸಿದ್ದು, ಸಂವಾವದಲ್ಲಿ ಮಕ್ಕಳು ಕೇಳಿದ ಪ್ರಶ್ನೆಗಳು ಹಾಗೂ ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ. 1. ಕೌಸಲ್ಯ, 9ನೇ ತರಗತಿ, ಪಾಲಿಕೆ ಪ್ರೌಢಶಾಲೆ, ಭೈರಸಂದ್ರ: ಪ್ರಶ್ನೆ: ನಮ್ಮ ಬೆಂಗಳೂರು ನಗರದಲ್ಲಿ ದಿನೇ ದಿನೇ ಜನಸಂಖ್ಯೆ ತುಂಬಾ ಹೆಚ್ಚಾಗುತ್ತಿದೆ. ಇದರಿಂದ ವಾಹನಗಳ ಬಳಕೆಯು ಹೆಚ್ಚಾಗುತ್ತಿದ್ದು, ವಾಯು ಮಾಲಿನ್ಯ ಶಬ್ಧ ಮಾಲಿನ್ಯ ಮತ್ತು ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇದರಿಂದ ನಮಗೆ ಶಾಲೆಗಾಗಲಿ, ನಮ್ಮ…

Read More

ನವದೆಹಲಿ: ಎನ್ಸಿಡಿ ರಿಸ್ಕ್ ಫ್ಯಾಕ್ಟರ್ ಕೊಲಾಬರೇಶನ್ (ಎನ್ಸಿಡಿ-ಆರ್ಐಎಸ್ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಯ ಇತ್ತೀಚಿನ ವರದಿಯ ಪ್ರಕಾರ, ಭಾರತವು 2022 ರಲ್ಲಿ ಜಾಗತಿಕವಾಗಿ ಅತಿ ಹೆಚ್ಚು ಮಧುಮೇಹಿಗಳನ್ನು ದಾಖಲಿಸಿದೆ, ಇದು ವಿಶ್ವದ 828 ಮಿಲಿಯನ್ ಪ್ರಕರಣಗಳಲ್ಲಿ ಕಾಲು ಭಾಗಕ್ಕಿಂತ ಹೆಚ್ಚು. ದಿ ಲ್ಯಾನ್ಸೆಟ್ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ಭಾರತದಲ್ಲಿ ಸುಮಾರು 62% ಮಧುಮೇಹಿಗಳು ತಮ್ಮ ಸ್ಥಿತಿಗೆ ಯಾವುದೇ ಚಿಕಿತ್ಸೆಯನ್ನು ಪಡೆಯುತ್ತಿಲ್ಲ. ಎನ್ಸಿಡಿ-ಆರ್ಐಎಸ್ಸಿ ಸಾಂಕ್ರಾಮಿಕವಲ್ಲದ ರೋಗಗಳನ್ನು ಪತ್ತೆಹಚ್ಚುವ ವಿಶ್ವಾದ್ಯಂತ 1,500 ಕ್ಕೂ ಹೆಚ್ಚು ಆರೋಗ್ಯ ತಜ್ಞರ ಸಹಯೋಗವಾಗಿದೆ. ಅವರ ಇತ್ತೀಚಿನ ಸಂಶೋಧನೆಗಳು 2022 ರಲ್ಲಿ ಭಾರತದಲ್ಲಿ ಸುಮಾರು 212 ಮಿಲಿಯನ್ ಜನರು, ಜನಸಂಖ್ಯೆಯ ಸುಮಾರು 23.7% ಜನರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದು ಸೂಚಿಸುತ್ತದೆ. ಆದರೂ, ಈ ವ್ಯಕ್ತಿಗಳಲ್ಲಿ ಸುಮಾರು 133 ಮಿಲಿಯನ್ ಜನರು ಔಷಧಿಗಳನ್ನು ತೆಗೆದುಕೊಳ್ಳುತ್ತಿಲ್ಲ ಅಥವಾ ಯಾವುದೇ ಚಿಕಿತ್ಸೆಯನ್ನು ಪಡೆಯುತ್ತಿಲ್ಲ, ಇದು ಚಿಕಿತ್ಸೆ ನೀಡದ ಮಧುಮೇಹ ಪ್ರಕರಣಗಳಲ್ಲಿ ಭಾರತವನ್ನು ಜಾಗತಿಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರಿಸಿದೆ. ಇದಕ್ಕೆ ಹೋಲಿಸಿದರೆ, ಹೋಲಿಸಬಹುದಾದ ಜನಸಂಖ್ಯೆಯನ್ನು…

Read More

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆಯ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಅಖಾಡಕ್ಕೆ ಇಳಿದಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಲಿದ್ದಾರೆ. ದಿನಾಂಕ 15-11-2024ರ ನಾಳೆ ಬೆಳಿಗ್ಗೆ 9.55ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮುಂಬೈ ಏರ್ಪೋರ್ಟ್ ತಲುಪಲಿರುವಂತ ಅವರು, ಅಲ್ಲಿಂದ ರಸ್ತೆಯ ಮೂಲಕ ಸಾಗಿ ಮುಂಬೈ ವೆಸ್ಟ್ ವಿಧಾನಸಭಾ ಕ್ಷೇತ್ರವಾದಂತ ಬಿವಂಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಚಾಂದಿವಲಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿರುವಂತ ಅವರು, ರಾತ್ರಿ 7.55ಕ್ಕೆ ಮುಂಬೈನಿಂದ ವಿಮಾನದಲ್ಲಿ ಹೊರಟು, ಬೆಂಗಳೂರನ್ನು ರಾತ್ರಿ 9.55ಕ್ಕೆ ತಲುಪಲಿದ್ದಾರೆ. ದಿನಾಂಕ 16-11-2024ರಂದು ಮರು ದಿನ ಬೆಳಿಗ್ಗೆ 9 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ವಿಶೇಷ ಏರ್ ಕ್ರಾಫ್ಟ್ ಮೂಲಕ ಮಹರಾಷ್ಟ್ರದ ಸೊಲ್ಲಾಪುರ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11 ಗಂಟೆಗೆ…

Read More

ಬೆಂಗಳೂರು : 66/11 kV ರಾಜನಕುಂಟೆ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  “ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ನ.16ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 12:00 ಯಿಂದ ಮಧ್ಯಾಹ್ನ 13:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ…

Read More

ಬೆಂಗಳೂರು: 220/66/11 kV ಹೆಬ್ಬಾಳ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-4 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶನಿವಾರ (16.11.2024) ರಂದು ಬೆಳಗ್ಗೆ 12:00 ಯಿಂದ ಮಧ್ಯಾಹ್ನ 13:30 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80’…

Read More

ಬೆಂಗಳೂರು : “ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದರು. https://kannadanewsnow.com/kannada/it-takes-hard-work-sacrifice-and-diligence-to-achieve-in-life-deputy-cm-dk-shivakumar-shivakumar/ https://kannadanewsnow.com/kannada/are-they-horses-donkeys-or-donkeys-to-buy-mlas-mlc-ct-ravi/

Read More

ಬೆಂಗಳೂರು : “ಮಕ್ಕಳು ಕನಸನ್ನು ಕಾಣಬೇಕು. ಆ ಕನಸನ್ನು ಸಾಕಾರಗೊಳಿಸಲು ಶ್ರಮ ಪಡಬೇಕು, ಜೀವನದಲ್ಲಿ ತ್ಯಾಗ ಹಾಗೂ ಶ್ರದ್ಧೆ ಇರಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಕುಳಿತಲ್ಲಿಯೇ ಕುಳಿತು ಕನಸು ಕಂಡರೆ ಪ್ರಯೋಜನವಿಲ್ಲ, ಅದಕ್ಕೆ ಪ್ರಯತ್ನ ಪಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ನಡೆದ ಬೆಂಗಳೂರು ನಗರ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮಕ್ಕಳ ಜತೆಗೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಮಾತನಾಡಿದರು. “ನೀವು ಸಾಗಿದ ಹಾದಿಯನ್ನು ಮರೆತರೆ ಫಲ ದೊರೆಯುವುದಿಲ್ಲ. ನಿಮ್ಮನ್ನು ಸಾಕಿದ ಪೋಷಕರು, ವ್ಯಕ್ತಿತ್ವ ಬೆಳೆಸಿದ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ಯಾವುದನ್ನು ಬೇಕಾದರೂ ಬದಲಿಯಾಗಿ ಪಡೆಯಬಹುದು. ಪೋಷಕರು ಮತ್ತು ಶಿಕ್ಷಕರನ್ನು ಬದಲಿಯಾಗಿ ಪಡೆಯಲು ಸಾಧ್ಯವಿಲ್ಲ. ಎಷ್ಟೇ ಎತ್ತರಕ್ಕೆ ಬೆಳೆದರೂ ನೀವು ಈ ಪ್ರಾಥಮಿಕ ವಿಚಾರಗಳನ್ನು ಮರೆಯಬಾರದು” ಎಂದು ಹೇಳಿದರು. “ಮಕ್ಕಳೇ ಈ ದೇಶದ ಆಸ್ತಿ. ನೀವು ಸಹ…

Read More

ಶಿವಮೊಗ್ಗ: ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಡಿಸಿಯ ಹಣವನ್ನು ಉತ್ತಮ ರೀತಿಯಲ್ಲಿ ಸದ್ವಿನಿಯೋಗ ಮಾಡಿಕೊಳ್ಳಬೇಕು. ಕಾಲೇಜು ಅಭಿವೃದ್ಧಿಗೆ ಬೇಕಿರುವಂತ ಎಲ್ಲಾ ಸಹಕಾರವನ್ನು ನೀಡುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಡಿಸಿ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಪ್ರಾಂಶುಪಾಲರಾದಂತ ಡಾ.ಸಣ್ಣ ಹನುಮಂತಪ್ಪ ಅವರು ಅಜೆಂಡಾ ಮಂಡಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಈ ವರ್ಷ 2 ಕೋಟಿ ಅನುದಾನ ಬಂದಿದೆ. 8-10 ಕೊಠಡಿಗಳ ಅವಶ್ಯಕತೆ ಇದೆ. ಈಗಾಗಲೇ ರಾಜ್ಯ ಸರ್ಕಾರದಿಂದ 5 ಎಕರೆ ಜಮೀನನ್ನು ಕಾಲೇಜಿನ ಪಕ್ಕದಲ್ಲಿ ನೀಡಲಾಗಿದೆ. ಮೂಲ ಸೌಕರ್ಯಾಭಿವೃದ್ಧಿಗೆ ಇನ್ನೂ ಐದು ಎಕರೆ ಹೆಚ್ಚುವರಿಯಾಗಿ ಬೇಕಿದೆ. ವಾಹನ ನಿಲ್ದಾಣ ನಿರ್ಮಾಣ ಮಾಡಿಕೊಡುವಂತೆಯೂ ಸಿಡಿಸಿ ಅಧ್ಯಕ್ಷರಾದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರಲ್ಲಿ ಮನವಿ ಮಾಡಿದರು. ಸದ್ಯ ಸಿಡಿಸಿ ಖಾತೆಯಲ್ಲಿ 10.20 ಲಕ್ಷ ಇದೆ. ಇದರಲ್ಲಿ ಗುತ್ತಿಗೆ ನೌಕರರ ವೇತನಕ್ಕೆ 1.20 ಲಕ್ಷ ಹೋಗಲಿದೆ. ಕರೆಂಟ್…

Read More

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ನಡೆದಂತ ಉಪ ಚುನಾವಣೆಯ ಮತದಾನಕ್ಕೆ ತೆರೆ ಬಿದ್ದಿದೆ. ಯಾವ ಕ್ಷೇತ್ರದಲ್ಲಿ ಇಂದು ಎಷ್ಟು ಮತದಾನ ನಡೆದಿದೆ ಎನ್ನುವ ಶೇಕಡಾವಾರು ಅಧಿಕೃತ ಮಾಹಿತಿ ಮುಂದಿದೆ ಓದಿ. ಈ ಕುರಿತಂತೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆದಂತ ಉಪ ಚುನಾವಣೆಯ ಮತದಾದ ಶೇಕಡವಾರು ವಿವರ ಈ ಕೆಳಗಿನಂತಿದೆ ಎಂದಿದೆ. ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಶೇ.80.48ರಷ್ಟು ಮತದಾನವಾಗಿದೆ. ಸಂಡೂರಿನಲ್ಲಿ ಶೇ.76.24 ಹಾಗೂ ಚನ್ನಪಟ್ಟಣದಲ್ಲಿ ದಾಖಲೆಯ ಶೇ.88.80ರಷ್ಟು ಮತದಾನವಾಗಿರುವುದಾಗಿ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದೆ. https://twitter.com/ceo_karnataka/status/1856708463537066241 https://kannadanewsnow.com/kannada/fir-registered-against-puneeth-kerehalli-for-derogatory-remarks-against-minister-zameer-ahmed/ https://kannadanewsnow.com/kannada/state-government-constitutes-commission-under-nagamohan-to-implement-internal-reservation/

Read More

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನ ಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಪುನೀತ್ ಕೆರೆ ಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್ ಐ ಆರ್ ದಾಖಲಾಗಿದೆ. ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ಅವರು ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲ ತಾಣದ ಫೇಸ್ ಬುಕ್ ಲಿಂಕ್ ನಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿರುತ್ತಾರೆ. ಧರ್ಮ -ಧರ್ಮ ಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಕಾರಿ ಹೇಳಿಕೆ ನೀಡಿರುತ್ತಾರೆ. ಪದೇ ಪದೇ ಅವಾಚ್ಯ ಶಬ್ದ ಗಳಿಂದ ಸಚಿವರನ್ನು ನಿಂದಿಸಿರುತ್ತಾರೆ. ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿರುತ್ತಾರೆ. ಹೀಗಾಗಿ…

Read More