Subscribe to Updates
Get the latest creative news from FooBar about art, design and business.
Author: kannadanewsnow09
ಮುಂಬೈ : ವೈದ್ಯಕೀಯ ಲೋಕದಲ್ಲಿ ಅಚ್ಚರಿ ಬೆಳವಣಿಗೆ ನಡೆದಿದೆ. ಸರ್ ಎಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ (ಎಚ್ಎನ್ಆರ್ಎಫ್ಹೆಚ್) ಹಾಗೂ ಧೀರೂಭಾಯಿ ಅಂಬಾನಿ ಆಕ್ಯುಪೇಷನಲ್ ಹೆಲ್ತ್ (ಡಿಎಒಎಚ್) ಹಾಗೂ ಜಾಮ್ ನಗರದಲ್ಲಿನ ಸಮುದಾಯ ಕೇಂದ್ರದ ಸಹಯೋಗದಲ್ಲಿ ಟೆಲಿ- ರೊಬೋಟಿಕ್ ಸರ್ಜರಿ ಕಾರ್ಯಕ್ರಮ ಆರಂಭಿಸಿದೆ. ಇದಕ್ಕೆ ಸಂಪೂರ್ಣ ಬಲ ಸಿಕ್ಕಿರುವುದು ರಿಲಯನ್ಸ್ ಜಿಯೋದಿಂದ. ಭಾರತದಲ್ಲಿನ ರಿಮೋಟ್ ಶಸ್ತ್ರಕ್ರಿಯೆ ಚಿಕಿತ್ಸೆಗೆ ಈ ಉಪಕ್ರಮ ಹೊಸ ಯುಗದಂತೆ ದಾಖಲಾಗಿದೆ. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯ ಪರಿಣತ ಸರ್ಜನ್ ಗಳು ಇನ್ನು ಮುಂದೆ ತಾವಿರುವ ಸ್ಥಳದಿಂದಲೇ ದೇಶದಾದ್ಯಂತ ಇರುವ ಸಹಯೋಗಿ ಆರೋಗ್ಯಸೇವೆ ಕೇಂದ್ರಗಳಲ್ಲಿ ರೊಬೋಟಿಕ್ ನೆರವಿನ ಸರ್ಜರಿಗಳನ್ನು ಮಾಡಬಹುದು ಹಾಗೂ ಮಾರ್ಗದರ್ಶನ ನೀಡಬಹುದು. ಮೆಟ್ರೋ- ಮೆಟ್ರೋಯೇತರ ಪ್ರದೇಶಗಳಲ್ಲಿ ಇರುವಂಥ ರೋಗಿಗಳಿಗೆ ಕೂಡ ಸ್ಪೆಷಲೈಸ್ಡ್, ತುಂಬ ಸೂಕ್ಷ್ಮವಾದ ಚಿಕಿತ್ಸೆಯನ್ನು ನೇರವಾಗಿ ತರಲಾಗಿದೆ. ಉತ್ಕೃಷ್ಟ ದರ್ಜೆಯ ಚಿಕಿತ್ಸೆಗಳನ್ನು ಪಡೆಯುವುದಕ್ಕೆ ದೂರದ ಪ್ರದೇಶ ಎಂಬುದು ರೋಗಿಗಳ ಪಾಲಿಗೆ ದೊಡ್ಡ ತಡೆಯಾಗಿತ್ತು, ಈ ಕಾರ್ಯಕ್ರಮವು ಅದನ್ನು ತೊಡೆದುಹಾಕಿದೆ.ಪ್ರಯಾಣ ಮಾಡಬೇಕು ಎಂಬ ಅಗತ್ಯವಿಲ್ಲ ಹಾಗೂ ಸಮಯಕ್ಕೆ ಸರಿಯಾಗಿ…
ಶಿವಮೊಗ್ಗ: ಜಿಲ್ಲೆಯ ಹೊಸನಗರದ ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರನ್ನು ಒಳಗೊಂಡಂತೆ ದೇವಸ್ಥಾನ ಸಮಿತಿ ರಚನೆಗೊಂಡಿತ್ತು. ಈ ಸಮಿತಿಯು ಸೋಮವಾರದಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕಲಗೋಡು ರತ್ನಾಕರ್ ಪ್ರಸ್ತುತ ವರ್ಷದ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರವು ಸ್ಥಾನ ಪಡೆದಿದ್ದು ನಮಗೆಲ್ಲರಿಗೂ ಅತ್ಯಂತ ಖುಷಿಯ ವಿಷಯವಾಗಿದೆ. ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನವನ್ನು ಸಮಿತಿಯು ರಾಜ್ಯದ ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ಬೇಕಾದ ಎಲ್ಲಾ ರೀತಿಯ ಯೋಜನೆಯನ್ನು ಸಿದ್ಧಪಡಿಸಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಸಾಮಾನ್ಯ ಸಭೆಯ ನಂತರ ಸಾಗರ – ಹೊಸನಗರ ಕ್ಷೇತ್ರದ…
ಬೆಂಗಳೂರು: ಪತ್ರಕರ್ತರಿಗಾಗಿ ರೂಪುಗೊಂಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ಜಾರಿಗೆ ನೀಡಬೇಕು ಮತ್ತು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಈ ಯೋಜನೆಗಳನ್ನು ಜಾರಿಗೆ ನೀಡಿದ್ದರೂ, ಇನ್ನೂ ಒಬ್ಬ ಪತ್ರಕರ್ತರಿಗೂ ಈ ಯೋಜನೆ ಪ್ರಯೋಜನ ಸಿಗಲಿಲ್ಲ. ಇದಕ್ಕೆ ಕಠಿಣ ಷರತ್ತುಗಳು ಕಾರಣವಾಗಿವೆ ಎನ್ನುವುದನ್ನು ವಿವರಿಸಿದ್ದಾರೆ. ಇದಕ್ಕೆ ತಕ್ಷಣವೇ ಸ್ಪಂಧಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭರವಸೆ ನೀಡಿದ್ದಾರೆ. ಮಾನ್ಯತೆ ಪಡೆದಿರುವ ಪತ್ರಕರ್ತರಿಗೆ ಮಾತ್ರವೇ ಸೀಮಿತ ಮಾಡಿರುವ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮಾನ್ಯತೆ ಪಡೆದಿರುವ ಪತ್ರಿಕೆಯಲ್ಲಿ ಕೆಲಸ ಮಾಡುವ ಎಲ್ಲಾ ಪತ್ರಕರ್ತರಿಗೂ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದ್ದು, ಎಂಸಿಸಿ ಯಲ್ಲಿ ಸೀಟು ಸಿಕ್ಕಿರುವವರು ಮೂಲ ದಾಖಲೆಗಳನ್ನು ಹಿಂಪಡೆಯಲು ಡಿ.24ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 3,164 ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಸೀಟು ಹಂಚಿಕೆ ಮಾಡಿದ್ದು, ಸದರಿ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶ ಪ್ರಕಟಣೆ ನಂತರ ಕೆಲವರು ಎಂಸಿಸಿ ಯಲ್ಲಿ ಸೀಟು ಸಿಕ್ಕಿದ್ದು, ಅಲ್ಲಿಯದೇ ಇಷ್ಟ ಎನ್ನುವವರು ಮೂಲ ದಾಖಲೆಗಳ ಸಮೇತ ಕೆಇಎ ಸೀಟು ಬಿಟ್ಟು ಹೊರ ಹೋಗುವುದಕ್ಕೆ ಅವಕಾಶ ನೀಡಲಾಗಿದೆ. ಇದಕ್ಕೆ ಕಟ್ಟಿರುವ ಶುಲ್ಕದಲ್ಲಿ 25 ಸಾವಿರ ರೂಪಾಯಿ ಕಡಿತ ಮಾಡಿಕೊಳ್ಳಲಾಗುವುದು. ನಾಳೆ ಬೆಳಿಗ್ಗೆ 11 ಗಂಟೆಯೊಳಗೆ ಮೂಲ ದಾಖಲೆ ವಾಪಸ್ ಪಡೆದವರನ್ನು ಬಿಟ್ಟು ಹೊಸದಾಗಿ ಸೀಟು ಹಂಚಿಕೆ ಮಾಡಿ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಸೇವಾ ನಿರತ ಅಭ್ಯರ್ಥಿಗಳ…
ಶಿವಮೊಗ್ಗ: ಅತಿ ಹೆಚ್ಚು ಅಂಕ ಪಡೆದ ಅಂಕ ಪಟ್ಟಿಗಳು ನಮ್ಮ ಎದುರಿಗಿವೆ. ಆದರೆ ಕೌಶಲ್ಯವಿಲ್ಲದೇ ಇದ್ದರೆ ಸ್ಪರ್ಧಾ ಜಗತ್ತನ್ನು ಎದುರಿಸಲು ಸಾಧ್ಯವಿಲ್ಲ ಆ ದೃಷ್ಟಿಯಲ್ಲಿ ಯುವಜನರು ಸಜ್ಜಾಗಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲೆಯ ಸಂಸದ ಬಿವೈ ರಾಘವೇಂದ್ರ ಕಿವಿಮಾತು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ‘ಸುವರ್ಣ ಸಾಗರ’ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಸುವರ್ಣ ಮಹೋತ್ಸವ ಅಭಿಯಾನದ ಸಂದರ್ಭ. ನಾವು ಓದಿದ ಶಾಲೆಯನ್ನು ಸದಾ ನೆನಪಿಸಿಕೊಳ್ಳುವ ಮನಸುಗಳ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರಿ ಶಾಲಾಕಾಲೇಜುಗಳ ಅಭಿವೃದ್ದಿಗೆ ಸರ್ಕಾರ ಅಗತ್ಯ ಸೌಲಭ್ಯ ಕೊಡುತ್ತದೆ. ಆದರೆ ನಮ್ಮ ಪಾತ್ರ ಏನು ಎನ್ನುವ ಕುರಿತು ವಿದ್ಯಾರ್ಥಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಶಾಲಾ-ಕಾಲೇಜುಗಳು ವ್ಯಕ್ತಿತ್ವ ನಿರ್ಮಾಣದ ಕೇಂದ್ರವಾಗಿರುತ್ತದೆ. ಹದಿಹರೆಯದ ವಯಸ್ಸಿನಲ್ಲಿ ಅನೇಕ ತಪ್ಪುಗಳು ನಡೆಯುತ್ತದೆ. ಆದರೆ ನಿಮ್ಮ ಭವಿಷ್ಯವನ್ನು ಸದಾ ನೆನಪಿನಲ್ಲಿ ಇರಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಾಗ…
ಶಿವಮೊಗ್ಗ: ಸಾಗರ ತಾಲ್ಲೂಕಿನ ಹಿರೇಬಿಲಗುಂಜಿ, ತ್ಯಾಗರ್ತಿ, ಬರೂರು ಗ್ರಾಮ ಪಂಚಾಯಿತಿಗಳ ವ್ಯಾಪ್ತಿ ಕೆಪಿಟಿಸಿಎಲ್ ನ ಪ್ರಮುಖ ವಿದ್ಯುತ್ ಪರಿವರ್ತಕ ದುರಸ್ಥಿಯಾಗದ ಕಾರಣ ವಿದ್ಯುತ್ ಸರಬರಾಜಿನಲ್ಲಾಗುತ್ತಿರುವ ವ್ಯತ್ಯಯ ಖಂಡಿಸಿ ಸಾಗರ ಮೆಸ್ಕಾಂ ಉಪವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ವಿದ್ಯುತ್ ಬಳಕೆದಾರರ ಹಿತರಕ್ಷಣಾ ಸಮಿತಿ ಸಂಚಾಲಕ ಎಸ್.ವಿ.ಹಿತಕರ ಜೈನ್ ಮಾತನಾಡಿ ಕೋಟ್ಯಾಂತರ ರೂಗಳ ಪ್ರಮುಖ ವಿದ್ಯುತ್ ಪರಿವರ್ತಕ ಕೈಕೊಟ್ಟಾಗ ತುರ್ತು ಪರ್ಯಾಯ ಪರಿವರ್ತಕ ಅಳವಡಿಸಿ ವಿದ್ಯುತ್ ವ್ಯತ್ಯಯ ಆಗದಂತೆ ಮೆಸ್ಕಾಂ ಮತ್ತು ಕೆಪಿಟಿಸಿಎಲ್ ಸಂಸ್ಥೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಆದರೇ ಆನಂದಪುರಂ ವ್ಯಾಪ್ತಿ ಕೆಪಿಟಿಸಿಎಲ್ನ ವಿದ್ಯುತ್ ಪರಿವರ್ತಕ ದುರಸ್ಥಿಯಾಗದೇ 4 ದಿನಗಳಾದರೂ ಇದುವರೆಗೂ ದುರಸ್ಥಿಯಾಗುವ ಯಾವ ಲಕ್ಷಣಗಳು ಕಾಣುತ್ತಿಲ್ಲ.ಬದಲಾಗಿ ಇನ್ನೂ 7 ದಿನಗಳು ವಿದ್ಯುತ್ ವ್ಯತ್ಯಯವಾಗುತ್ತದೆ ಎಂದು ಮೆಸ್ಕಾಂ ಇಂಜಿನಿಯರ್ಗಳು ಮೆಸೇಜ್ ರವಾನಿಸಿದ್ದಾರೆ.ದಿನಗಳು ಉರುಳುತ್ತಿದ್ದರೂ ವಿದ್ಯುತ್ ಪರಿವರ್ತಕ ದುರಸ್ಥಿಯಾಗದಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು. ತುರ್ತು ಸಮರ್ಪಕ ವಿದ್ಯುತ್ ಒದಗಿಸದೇ ಇದ್ದಲ್ಲಿ ಅಗತ್ಯ ಕುಡಿಯುವ ನೀರು ಸರಬರಾಜಿಗೂ ಮತ್ತು ರೈತರ ಬೆಳೆ ಉಳಿಸಿಕೊಳ್ಳಲು…
ಬೆಂಗಳೂರು: ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆ ಎಸ್ ಆರ್ ಟಿ ಸಿ ಹೊರಡಿಸಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದಿದ್ದಾರೆ. ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ದಿನಾಂಕ: 01.01.2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ. 1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ…
ಬೆಂಗಳೂರು: ಬೆಂಗಳೂರಿನ ಯಶವಂತಪುರ ಮತ್ತು ಹೈದರಾಬಾದ್’ನ ಕಾಚಿಗುಡ ನಡುವೆ ಸಂಚರಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್ ಪ್ರೆಸ್’ ರೈಲು ಇನ್ನು ಮುಂದೆ ಆಂಧ್ರಪ್ರದೇಶದ ಹಿಂದೂಪುರ ನಿಲ್ದಾಣದಲ್ಲಿಯೂ ನಿಲುಗಡೆಯಾಗಲಿದೆ. ರೈಲ್ವೆ ಮಂಡಳಿಯು, ಡಿಸೆಂಬರ್ 27, 2025 ರಿಂದ ಜಾರಿಗೆ ಬರುವಂತೆ ಎರಡು ನಿಮಿಷಗಳ ಪ್ರಾಯೋಗಿಕ ನಿಲುಗಡೆಗೆ ಅನುಮೋದನೆ ನೀಡಿದೆ. ಹಿಂದೂಪುರ ನಿಲ್ದಾಣದಲ್ಲಿ ಈ ರೈಲಿನ ಆಗಮನ ಮತ್ತು ನಿರ್ಗಮನದ ವೇಳಾಪಟ್ಟಿ ಹೀಗಿದೆ: * ರೈಲು ಸಂಖ್ಯೆ 20703 ಕಾಚೆಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಿಂದೂಪುರಕ್ಕೆ ಮಧ್ಯಾಹ್ನ 12:08 ಗಂಟೆಗೆ ತಲುಪಿ, 12:10 ಗಂಟೆಗೆ ಅಲ್ಲಿಂದ ಹೊರಡಲಿದೆ. * ರೈಲು ಸಂಖ್ಯೆ 20704 ಯಶವಂತಪುರ-ಕಾಚೆಗುಡ ವಂದೇ ಭಾರತ್ ಎಕ್ಸ್ ಪ್ರೆಸ್ ಹಿಂದೂಪುರಕ್ಕೆ ಮಧ್ಯಾಹ್ನ 03:48 ಗಂಟೆಗೆ ಆಗಮಿಸಿ, 03:50 ಗಂಟೆಗೆ ತನ್ನ ಪ್ರಯಾಣ ಮುಂದುವರಿಸಲಿದೆ. ಈ ಹೊಸ ನಿಲುಗಡೆಯು ಹಿಂದೂಪುರ ಭಾಗದ ಪ್ರಯಾಣಿಕರಿಗೆ ವೇಗದ ಮತ್ತು ಸುಸಜ್ಜಿತ ಪ್ರಯಾಣದ ಸೌಲಭ್ಯವನ್ನು ಒದಗಿಸುವುದಲ್ಲದೆ, ಈ ಭಾಗದ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ. https://kannadanewsnow.com/kannada/womens-premier-league-jemimah-rodrigues-appointed-as-delhi-capitals-captain/
ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (WPL) 2026 ಸೀಸನ್ಗೆ ದೆಹಲಿ ಕ್ಯಾಪಿಟಲ್ಸ್ ಜೆಮಿಮಾ ರೊಡ್ರಿಗಸ್ ಅವರನ್ನು ನಾಯಕಿಯಾಗಿ ಘೋಷಿಸಿದೆ. ನಗದು-ಶ್ರೀಮಂತ ಲೀಗ್ನಲ್ಲಿ ತಂಡವನ್ನು ಸತತ ಮೂರು ಫೈನಲ್ಗೆ ಕೊಂಡೊಯ್ದ ಮೆಗ್ ಲ್ಯಾನಿಂಗ್ ಅವರಿಂದ ಅವರು ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಆದಾಗ್ಯೂ, ಭಾರತೀಯ ಕ್ರಿಕೆಟಿಗರ ಮೇಲೆ ಕೇಂದ್ರೀಕರಿಸಿ ಮತ್ತು ಅದೇ ಸಿದ್ಧಾಂತವನ್ನು ಮನಸ್ಸಿನಲ್ಲಿಟ್ಟುಕೊಂಡು, ಆಡಳಿತ ಮಂಡಳಿಯು ಬದಲಾವಣೆಯನ್ನು ತರಲು ಬಯಸಿತು. ಜೆಮಿಮಾ ಅವರನ್ನು ಉನ್ನತ ಮಟ್ಟದ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ. ಗಮನಾರ್ಹವಾಗಿ, 25 ವರ್ಷದ ಅವರು WPL ನಲ್ಲಿ ದೆಹಲಿಯ ಮೊದಲ ಸಹಿ ಹಾಕಿದರು. ಅಂದಿನಿಂದ ಅವರು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ, 27 ಪಂದ್ಯಗಳಲ್ಲಿ 139.66 ಸ್ಟ್ರೈಕ್ ದರದಲ್ಲಿ 507 ರನ್ ಗಳಿಸಿದ್ದಾರೆ. ಇತ್ತೀಚೆಗೆ, ಜೆಮಿಮಾ 2025 ರ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಜೇಯ ಶತಕ ಗಳಿಸಿದರು ಮತ್ತು ನಂತರ ವಿಶಾಖಪಟ್ಟಣದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ T20I ನಲ್ಲಿ ಅಜೇಯ 69 ರನ್ ಗಳಿಸಿದರು. ಕುತೂಹಲಕಾರಿಯಾಗಿ, ಫ್ರಾಂಚೈಸಿ ಜೆಮಿಮಾ ಅವರನ್ನು ಅಕ್ಟೋಬರ್ನಲ್ಲಿ ಅಭಿಮಾನಿಗಳ…
ಬೆಂಗಳೂರು: ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಡಿಸೆಂಬರ್ 25 ರಿಂದ 28, 2025 ರ ವರೆಗೆ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯು ಬೆಂಗಳೂರಿನ ರಾಜಾಜಿನಗರದ ಪ್ರಶಾಂತಿ ಆಯುರ್ವೇದಿಕ್ ಸೆಂಟರ್’ನಲ್ಲಿ ಇಂದು(23-12-2025) ನಡೆಯಿತು. ಈ ಸಮ್ಮೇಳನದ ರೂವಾರಿಗಳಾದ ಡಾ.ಗಿರಿಧರ ಕಜೆ ಸುದ್ದಿ ಗೋಷ್ಠಿಯನ್ನು ನಡೆಸಿ, ಐತಿಹಾಸಿಕ ವಿಶ್ವ ಸಮ್ಮೇಳನದ ಕುರಿತಾಗಿ ಮಾಹಿತಿ ನೀಡಿದರು. ಹಿಮಾಲಯ ವೆಲ್’ನೆಸ್ ಕಂಪನಿಯ ಡಾ. ಅಶೋಕ್, ದೂತಪಾಪೇಶ್ವರ ಕಂಪೆನಿಯ ಅಜಿತ್ ಹಾಗೂ ಅಭಿಷೇಕ್ ಉಪಸ್ಥಿತರಿದ್ದರು. ಕಜೆ ಆಯುರ್ವೇದ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಡಿಸೆಂಬರ್ 25 ರಿಂದ 28, 2025 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನವನ್ನು ಆಯೋಜಿಸಿದ್ದು, ಆಯುರ್ವೇದದ ವೈಶಿಷ್ಟ್ಯಗಳ ಅನಾವರಣ ಬೃಹತ್ ರೂಪದಲ್ಲಿ ನೆರವೇರಲಿದೆ. ನಾಡಿನ ಸಂತ ಮಹಂತರು – ಗಣ್ಯ ಮಾನ್ಯರು – ದೇಶ ವಿದೇಶಗಳ ಆಯುರ್ವೇದ ತಜ್ಞರ ಉಪಸ್ಥಿತಿಯಲ್ಲಿ ವಿಶಿಷ್ಟ ಆಯುರ್ವೇದ…













