Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಡಿಸೆಂಬ 21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮದ ಕುರಿತು ಮಾತನಾಡಿದರು. ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೆರೆಗೆ ಲಸಿಕೆ ಹಾಕಲಾಗುವುದು ಎಂದರು. ಎಲ್ಲ ಸರಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು. 0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಲೇ ಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಲೇಬೇಕು. ಪೋಲಿಯೋ ಮುಕ್ತ ದೇಶವಾಗಿರುವ ಭಾರತ ಇದನ್ನು ಮುಂದುವರೆಸಲು ಸಾರ್ವಜನಿಕರ ಸಹಕಾರ ಅಗತ್ಯ. ಡಿಸೆಂಬರ್ 21 ರಂದು ಬೂತ್ಗಳಲ್ಲಿ ನಂತರ 2-3…

Read More

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ ಮಾಡಲಾಗಿದೆ ಎಂದು ತಿಳಿಸಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಾವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಾಗಿನಿಂದಲೂ ಈ ಯೋಜನೆಯನ್ನು ಬಿಜೆಪಿ ನಾಯಕರು ಟೀಕಿಸುತ್ತಲೇ ಬಂದಿದ್ದರು. ಹಾದಿ ಬೀದಿಯಲ್ಲಿ ಯೋಜನೆ ವಿರುದ್ಧ ಹೋರಾಟ ಮಾಡಿ ಮಾತನಾಡುತ್ತಿದ್ದರು. ಈಗ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿದ್ದು, ಕೋಟ್ಯಂತರ ಮಹಿಳೆಯರ ಬದುಕಿಗೆ ಆಸರೆಯಾಗಿದೆ. ಈಗ ಇದ್ದಕ್ಕಿದಂತೆ ಬಿಜೆಪಿ ನಾಯಕರಿಗೆ ಗೃಹಲಕ್ಷ್ಮೀ ಯೋಜನೆ ಬಗ್ಗೆ ಕಾಳಜಿ ಶುರುವಾಗಿದೆ ಎಂದರು. ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮಾ ಆಗಿಲ್ಲ. ಅದನ್ನು ಹಾಕಿಸುವ ಕೆಲಸ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಯಾವುದೇ ಗೊಂದಲವೂ ಇಲ್ಲ, ಗೊಂದಲಗಳೂ ಬೇಡ. ಅನಗತ್ಯವಾಗಿ ಬಿಜೆಪಿಯವರು ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಮಸಿಬಳಿಯುವ…

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದನ್ನು ಮುಖ್ಯಮಂತ್ರಿ ಕೂಡ ಒಪ್ಪಿಕೊಂಡಿದ್ದಾರೆ. ಈ ಯೋಜನೆ 1.20 ಕೋಟಿ ಜನರಿಗೆ ಸಂಬಂಧಿಸಿದೆ. ಜನವರಿ, ಫೆಬ್ರವರಿ ತಿಂಗಳ ಸಹಾಯಧನ ನೀಡದೆ ಮೇ, ಜೂನ್, ಜುಲೈ ತಿಂಗಳ ಸಹಾಯಧನ ನೀಡಲು ಹೇಗೆ ಸಾಧ್ಯ? ಈ ತಿಂಗಳ ಸಹಾಯಧನ ನೀಡದೆ ಮುಂದಕ್ಕೆ ಹೋಗಲಾಗಿದೆ ಎಂದರೆ ಜನರಿಗೆ ಮೋಸ ಮಾಡಿದ್ದಾರೆ ಅಥವಾ ಖಜಾನೆ ಖಾಲಿಯಾಗಿದೆ ಎಂದೇ ಅರ್ಥ ಎಂದರು. ಈ ಎರಡು ತಿಂಗಳ ಸಹಾಯಧನವನ್ನು ಏಕೆ ಸ್ಥಗಿತ ಮಾಡಲಾಗಿದೆ ಎಂದು ಸರ್ಕಾರ ಸದನಕ್ಕೆ ಮಾಹಿತಿ ನೀಡಬೇಕು. ಈ ಹಣವನ್ನು ಕಾಂಗ್ರೆಸ್ ಪಕ್ಷ ಬಳಸಿಕೊಂಡಿದೆಯೇ ಅಥವಾ ಸ್ವಂತಕ್ಕೆ ಸಚಿವರು ಬಳಸಿಕೊಂಡರಾ ಎಂಬ ಬಗ್ಗೆ ತಿಳಿಯಬೇಕಿದೆ. ಕೋಟ್ಯಂತರ…

Read More

ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿಯವರ ದ್ವೇಷದ ರಾಜಕಾರಣ ಬಿಜೆಪಿಯವರ ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ…

Read More

ಬೆಂಗಳೂರು: ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಪದವೀಧರರಾಗಿರುವಂತವರಿಗೆ ಉದ್ಯೋಗ ಅವಕಾಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ಕೂಡ ನೀಡಲಾಗುತ್ತದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಂಸ್ಥೆಯು ಮಾಹಿತಿ ನೀಡಿದ್ದು ಪದವಿ ವ್ಯಾಸಂಗ ಮಾಡಿದಂತ ಅಭ್ಯರ್ಥಿಗಳಿಂದ ಉದ್ಯೋಗಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಂ.ಎಸ್ ಆಫೀಸ್, ಎಕ್ಸೆಲ್, ವರ್ಡ್ ಸೇರಿದಂತೆ ಕಂಪ್ಯೂಟರ್ ಜ್ಞಾನ ಅತ್ಯಾವಶ್ಯಕವಾಗಿದೆ ಎಂದಿದೆ. ಪದವಿ ವ್ಯಾಸಂಗ ಮಾಡಿದಂತ ಫ್ರೆಶರ್ಸ್ ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ತಮ್ಮ ಇತ್ತೀಚಿನ ಬಯೋ ಡೆಟಾದೊಂದಿಗೆ ಅರ್ಜಿಯನ್ನು 9844554396 ಅಥವಾ 9035354573 ಸಂಖ್ಯೆಗಳಿಗೆ ವಾಟ್ಸ್ ಆಪ್ ಮಾಡುವಂತೆ ಮನವಿ ಮಾಡಿದೆ. ಅಲ್ಲದೇ ಹೆಚ್ಚಿನ ಮಾಹಿತಿಗಾಗಿ ಇದೇ ಸಂಖ್ಯೆಗೂ ಸಂಪರ್ಕಿಸುವಂತೆ ತಿಳಿಸಲಾಗಿದೆ. ಬೆಂಗಳೂರಿನಲ್ಲೇ ಇರುವಂತ ಸಂಸ್ಥೆ ಇದಾಗಿದ್ದು, ಪದವಿ ವ್ಯಾಸಂಗ ಮಾಡಿದಂತ, ಕಂಪ್ಯೂಟರ್ ಜ್ಞಾನ ಹೊಂದಿರುವಂತ ಯಾವುದೇ ಅಭ್ಯರ್ಥಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಉದ್ಯೋಗಕ್ಕಾಗಿ ಸಲ್ಲಿಸಬಹುದಾಗಿದೆ.

Read More

ಬೆಳಗಾವಿ ಸುವರ್ಣಸೌಧ : ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ ಹಾಗೂ ಘನತೆಯ ಜೀವನಕ್ಕೆ ಉದಾರ ಮನಸ್ಸಿನೀಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನ ಪರಿಷತ್ನಲ್ಲಿ ಸದಸ್ಯರಾದ ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಪರವಾನಗಿ ಭೂ ಮಾಪಕರನ್ನು ಖಾಲಿ ಹುದ್ದೆಗಳನ್ನು ತುಂಬಿಸುವುದಕ್ಕಾಗಿ ಸರ್ಕಾರ ನೇಮಕ ಮಾಡಿಲ್ಲ. ಬದಲಾಗಿ ಗುತ್ತಿಗೆ ಆಧಾರದಲ್ಲಿ ಮಾತ್ರ ನೇಮಕ ಮಾಡಿಕೊಳ್ಳಲಾಗಿದೆ. ಸರ್ವೇ ಇಲಾಖೆಯಲ್ಲಿ ಖಾಲಿ ಹುದ್ದೆಗಳೇ ಇಲ್ಲದ ಮೇಲೆ ಗುತ್ತಿಗೆ ನೌಕರರನ್ನು ಖಾಯಂ ಮಾಡುವುದು ಹೇಗೆ..?” ಎಂದು ಮರು ಪ್ರಶ್ನೆ ಹಾಕಿದರು. “ಅಸಲಿಗೆ ಇಲಾಖೆಯಲ್ಲಿ 750 ಸರ್ಕಾರಿ ಹುದ್ದೆ ಖಾಲಿ ಇದೆ. ಆದರೆ, ಅದಕ್ಕೂ ಇದಕ್ಕೂ ಸಂಬಂಧವೇ ಇಲ್ಲ. ಏಕೆಂದರೆ ನಾವು ಗುತ್ತಿಗೆ ನೌಕರರನ್ನು ಖಾಯಂ ಮಾಡಲು ಮುಂದಾದರೆ ತುಂಬಾ ಪ್ರಚಲಿತದಲ್ಲಿರುವ ಉಮಾದೇವಿ ಪ್ರಕರಣ ಎದುರಾಗುತ್ತದೆ. ಈ ಪ್ರಕರಣದಲ್ಲಿ ಗುತ್ತಿಗೆ ನೌಕರರನ್ನು…

Read More

ಬೆಳಗಾವಿ ಸುವರ್ಣಸೌಧ : ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ ಕಳೆದ 5 ವರ್ಷದ ಸರ್ಕಾರದ ಅವಧಿಯಲ್ಲಿ 8,500 ದರ್ಖಾಸ್ತಿ ಪೋಡಿ ಆಗಿತ್ತು. ಆದರೆ, ನಾವು ಜನವರಿಯಿಂದ ಈ ಅಭಿಯಾನ ಆರಂಭಿಸಿದ ಮೇಲೆ ಡಿಸೆಂಬರ್ ಒಳಗೆ 1,55,000 ಪೋಡಿ ಮಾಡಿಕೊಟ್ಟಿದ್ದೇವೆ. ನಿಯಮದಲ್ಲಿ ಬದಲಾವಣೆ ತಂದು ಸರಳೀಕರಣಗೊಳಿಸಿ ದಾಖಲಾತಿಗಳ ಅವಶ್ಯಕತೆಯನ್ನೇ ಕಡಿಮೆ ಮಾಡಿ ರೈತರಿಗೆ ಪೋಡಿ ಮಾಡಿಕೊಟ್ಟಿದ್ದೇವೆ” ಎಂದು ಮಾಹಿತಿ ನೀಡಿದರು. “1,55,000 ಪ್ರಕರಣಗಳನ್ನು ಸರ್ವೇಗೆ ತೆಗೆದುಕೊಂಡಿದ್ದೇವೆ. ಇದಲ್ಲದೆ, 1,60,000 ಪ್ರಕರಣಗಳು ದಾಖಲಾತಿ ಕೊರತೆಯಿಂದಾಗಿ ಪೋಡಿ ಮಾಡಲು ಸಾಧ್ಯವಿಲ್ಲ ಎಂದು ಮಿಸ್ಸಿಂಗ್ ರೆಕಾರ್ಡ್ಸ್ ಕಮಿಟಿಗೆ ಕಳುಹಿಸಿದ್ದೇವೆ. ಅಲ್ಲೂ ಸಹ ಕೆಲವು ಸರಳೀಕೃತ ಮಾರ್ಗಸೂಚಿ ಹಾಕಿ ಕೊಟ್ಟಿದ್ದೇನೆ. ಯಾರ ಬಳಿ…

Read More

ಬೆಳಗಾವಿ ಸುವರ್ಣಸೌಧ: ನಾಳೆ ಸಾಗರ ಜಿಲ್ಲೆಗೆ ಒತ್ತಾಯಿಸಿ ಹೋರಾಟಗಾರರು ಸಾಗರ ಬಂದ್ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಕೇಳಿದಂತ ಪ್ರಶ್ನೆಗೆ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ನಮ್ಮದೇ ಸರ್ಕಾರ ರಾಜ್ಯದಲ್ಲಿದೆ. ಜಿಲ್ಲೆ ಮಾಡುವುದಾದರೇ ಅದು ಮೊದಲು ಸಾಗರವನ್ನು ಮಾಡಬೇಕು. ಅದಕ್ಕಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೂ ಪತ್ರ ಬರೆಯಲಾಗಿದೆ ಎಂದರು. ನಾಳೆ ಸಾಗರ ಜಿಲ್ಲಾ ಹೋರಾಟ ಸಮಿತಿಯಿಂದ ಸಾಗರ ಬಂದ್ ನಡೆಸಲಾಗುತ್ತಿದೆ. ಅವರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಮಟ್ಟದಲ್ಲಿ ಜಿಲ್ಲೆ ಮಾಡುವುದಕ್ಕೆ ಏನು ಬೇಕೋ ಅದರ ಸಹಕಾರವನ್ನು ನಾನು ನೀಡುತ್ತೇನೆ. ನಾಳೆಯ ಸಾಗರ ಬಂದ್ ಯಶಸ್ವಿಯಾಗಲಿ ಎಂಬುದಾಗಿ ತಿಳಿಸಿದರು. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/amid-sagar-bandh-tomorrow-shahi-garments-announces-holiday-for-employees/ https://kannadanewsnow.com/kannada/mla-gkb-demands-for-a-new-police-station-in-tumari-bakoda-sagar-in-the-house-home-minister-gives-this-reply/

Read More

ಮುಂಬೈ : ಜಿಯೋದಿಂದ “ಜಿಯೋ ಹ್ಯಾಪಿ ನ್ಯೂ ಇಯರ್ 2026 ಪ್ಲಾನ್ ಗಳು” ಘೋಷಣೆ ಮಾಡಲಾಗಿದೆ. ಇದರ ಮೂಲಕ ಜಿಯೋ ಸಿಮ್ ಬಳಸುವ ಗ್ರಾಹಕರಿಗೆ ಈ ಹಿಂದೆಂದೂ ದೊರೆಯದಂಥ ಬೆನಿಫಿಟ್ ಗಳು ಸಿಗುತ್ತವೆ. ಏನು ಆ ಹೊಸ ವರ್ಷದ ಪ್ಲಾನ್ ಗಳು ಎಂಬ ಮಾಹಿತಿ ಹೀಗಿದೆ: ಹೀರೋ ಆ್ಯನುಯಲ್ ರೀಚಾರ್ಜ್ 3599: ಈ ಪ್ಲಾನ್ ನಲ್ಲಿ ಗ್ರಾಹಕರಿಗೆ ಅನ್ ಲಿಮಿಟೆಡ್ 5ಜಿ, ದಿನಕ್ಕೆ 2.5 ಜಿಬಿ ಡೇಟಾ ದೊರೆಯುತ್ತದೆ. ಇನ್ನು ಅನ್ ಲಿಮಿಟೆಡ್ ವಾಯ್ಸ್ ಕಾಲ್ ಗಳು ದೊರೆಯುತ್ತವೆ ಮತ್ತು ಪ್ರತಿ ದಿನ 100 ಎಸ್ಸೆಮ್ಮೆಸ್ ಉಚಿತವಾಗಿ ಸಿಗುತ್ತದೆ. ಈ ಪ್ಲಾನ್ ವ್ಯಾಲಿಡಿಟಿ 365 ದಿನ ಇರುತ್ತದೆ. ಈ ಪ್ಲಾನ್ ನಲ್ಲಿ ವಿಶೇಷ ಆಫರ್ ಸಹ ಒಂದು ಒಳಗೊಂಡಿದೆ. ಅದೇನೆಂದರೆ, 18 ತಿಂಗಳ ಉಚಿತ ಪ್ರೊ ಪ್ಲಾನ್ ‘ಗೂಗಲ್ ಜೆಮಿನಿ’ಯದು ಸಿಗುತ್ತದೆ. ಇದರ ಮೌಲ್ಯ 35,100 ರೂಪಾಯಿ ಆಗಿದೆ. ಆದರೆ ಇದು ಉಚಿತವಾಗಿಯೇ ಒಂದೂವರೆ ವರ್ಷದ ಅವಧಿಗೆ ಜಿಯೋ ಸಿಮ್ ಬಳಕೆ…

Read More

ಮಂಡ್ಯ : ಕಂದಾಯ ಇಲಾಖೆಯಿಂದ ನೀಡುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ತಾಲೂಕು ಕಛೇರಿಗೆ ಆಗಮಿಸಿದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಸೋಮನಹಳ್ಳಿ ಅಂದಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರ ಪಡೆಯಲು ರಾಜ್ಯ ಸರ್ಕಾರ ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ, ಈ ಆದೇಶದಿಂದ ಜನಸಾಮಾನ್ಯರಿಗೆ 500 ರೂಪಾಯಿಗೂ ಹೆಚ್ಚು ಖರ್ಚಾಗಲಿದೆ. ಇದರಿಂದ ಜನ ಸಾಮಾನ್ಯರಿಗೆ ಸಾಕಷ್ಟು ಆರ್ಥಿಕವಾಗಿ ಹೊರೆಯಾಗಲಿದ್ದು, ಈ ಹಿಂದೆ ಇದ್ದಂತೆ ಕೆಲವು ದಾಖಲೆಗಳನ್ನು ನೀಡಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ…

Read More