Subscribe to Updates
Get the latest creative news from FooBar about art, design and business.
Author: kannadanewsnow09
ಕೊಲಂಬೊ: ಶ್ರೀಲಂಕಾದ ದಕ್ಷಿಣ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ಬುಧವಾರ ಭೀಕರ ಜಲಗಂಡಾಂತರ ಸಂಭವಿಸಿದೆ. ಇರಾನ್ ದೇಶಕ್ಕೆ ಸೇರಿದ ಹಡಗಿನ ಮೇಲೆ ಜಲಾಂತರ್ಗಾಮಿ (Submarine) ದಾಳಿ ನಡೆದಿದ್ದು, ಕನಿಷ್ಠ 101 ಜನರು ನಾಪತ್ತೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ ಎಂದು ಶ್ರೀಲಂಕಾ ನೌಕಾಪಡೆ ಹಾಗೂ ರಕ್ಷಣಾ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ವರದಿ ಮಾಡಿದೆ. ನಡುಸಮುದ್ರದಲ್ಲಿ ಸಂಭವಿಸಿದ ದುರಂತ ಬುಧವಾರ ಶ್ರೀಲಂಕಾ ಕರಾವಳಿಯಿಂದ ಸ್ವಲ್ಪ ದೂರದಲ್ಲಿ ಈ ಘಟನೆ ನಡೆದಿದೆ. ಹಡಗಿನಿಂದ ತುರ್ತು ಸಂದೇಶ (Distress Call) ಬಂದ ತಕ್ಷಣ ಕಾರ್ಯಪ್ರವೃತ್ತವಾಗಿರುವ ಶ್ರೀಲಂಕಾ ಮಿಲಿಟರಿ, ಬೃಹತ್ ಮಟ್ಟದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ದಾಳಿಯ ತೀವ್ರತೆಗೆ ಹಡಗು ಮುಳುಗುತ್ತಿದ್ದು, ಅದರಲ್ಲಿದ್ದ ನೂರಾರು ಮಂದಿ ಸಮುದ್ರ ಪಾಲಾಗಿದ್ದಾರೆ ಎಂದು ನೌಕಾಪಡೆ ದೃಢಪಡಿಸಿದೆ. ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ ರಕ್ಷಣಾ ಸಚಿವಾಲಯದ ವಕ್ತಾರರು ಈ ಬಗ್ಗೆ ಮಾಹಿತಿ ನೀಡಿ, “ಇರಾನ್ ಹಡಗಿನಿಂದ ತುರ್ತು ಸಂಕೇತ ಲಭ್ಯವಾದ ತಕ್ಷಣ ಶ್ರೀಲಂಕಾ ನೌಕಾಪಡೆಯು ರಕ್ಷಣಾ ನೌಕೆಗಳನ್ನು ಸ್ಥಳಕ್ಕೆ ರವಾನಿಸಿದೆ,”…
ಬೆಂಗಳೂರು: ಹೊರವಲಯದ ಪ್ರಯಾಣಿಕರಿಗೆ ಸುಸಜ್ಜಿತ ಹಾಗೂ ಆರಾಮದಾಯಕ ಪ್ರಯಾಣದ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹತ್ವದ ಹೆಜ್ಜೆ ಇಟ್ಟಿದೆ. ದಿನಾಂಕ 04 ಮಾರ್ಚ್ 2026 ರಂದು ಕೆಂಪುಗೌಡ ಬಸ್ ನಿಲ್ದಾಣದಿಂದ ರಾಮನಗರಕ್ಕೆ ಹಾಗೂ ಬನಶಂಕರಿಯಿಂದ ಕನಕಪುರಕ್ಕೆ ನೂತನ “ವಜ್ರ ವಿಸ್ತಾರ” ಹವಾನಿಯಂತ್ರಿತ (AC) ಬಸ್ ಸೇವೆಗಳನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಾಯಿತು. ಇಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೂತನ ಸಾರಿಗೆ ಸೇವೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೊರವಲಯದ ಜನರಿಗೆ ಬೆಂಗಳೂರಿನ ಸಂಪರ್ಕವನ್ನು ಸುಲಭಗೊಳಿಸಲು ಮತ್ತು ಹವಾನಿಯಂತ್ರಿತ ಸೇವೆಯನ್ನು ಕೈಗೆಟುಕುವಂತೆ ಮಾಡಲು ‘ವಜ್ರ ವಿಸ್ತಾರ’ ಯೋಜನೆಯನ್ನು ಜಾರಿಗೆ ತರಲಾಗಿದೆ,” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ವಿ.ಎಸ್. ಆರಾಧ್ಯ, ಹೆಚ್.ಎ.ಇಕ್ಬಾಲ್ ಹುಸೇನ್, ಮಾನ್ಯ ಶಾಸಕರು, ರಾಮನಗರ ವಿಧಾನಸಭಾ ಕ್ಷೇತ್ರ, ಸಂಸ್ಥೆಯ ಉಪಾಧ್ಯಕ್ಷರಾದ ನಿಕೇತ್ ರಾಜ್ ಎಂ. ಅವರೊಂದಿಗೆ ಕೆ.ಬಿ. ಶಿವಕುಮಾರ್, ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು; ಕೆ.ರಾಜು,…
ಢಾಕಾ: ಶ್ರೀಲಂಕಾ ಕರಾವಳಿಯಲ್ಲಿ ಇರಾನಿನ ಹಡಗಿನ ಮೇಲೆ ಜಲಾಂತರ್ಗಾಮಿ ದಾಳಿ ನಡೆದಿದ್ದು, ಕನಿಷ್ಠ 101 ಜನರು ಕಾಣೆಯಾಗಿದ್ದಾರೆ. 78 ಜನರು ಗಾಯಗೊಂಡಿದ್ದಾರೆ ಎಂದು ಶ್ರೀಲಂಕಾ ನೌಕಾಪಡೆ ಮತ್ತು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಹಿಂದೂ ಮಹಾಸಾಗರದ ಶ್ರೀಲಂಕಾ ಕರಾವಳಿ ತೀರದಲ್ಲಿ ಭೀಕರ ಜಲಗಂಡಾಂತರ ಸಂಭವಿಸಿದೆ. ಇರಾನ್ ದೇಶಕ್ಕೆ ಸೇರಿದ ಹಡಗಿನ ಮೇಲೆ ಜಲಾಂತರ್ಗಾಮಿ (Submarine) ದಾಳಿ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಲಂಕಾ ನೌಕಾಪಡೆ ಮತ್ತು ರಕ್ಷಣಾ ಸಚಿವಾಲಯದ ಮೂಲಗಳು ಈ ಭೀಕರ ದಾಳಿಯನ್ನು ಖಚಿತಪಡಿಸಿವೆ. ಇರಾನಿನ ಹಡಗನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದ್ದು, ಹಡಗಿನಲ್ಲಿದ್ದ ಸುಮಾರು 78 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಚುರುಕು: ದಾಳಿ ನಡೆದ ತಕ್ಷಣ ಕಾರ್ಯಪ್ರವೃತ್ತವಾಗಿರುವ ಶ್ರೀಲಂಕಾ ನೌಕಾಪಡೆಯು ಸಮರ ನೌಕೆಗಳನ್ನು ಮತ್ತು ಹೆಲಿಕಾಪ್ಟರ್ಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಿದೆ. ನಾಪತ್ತೆಯಾದ 101 ಜನರಿಗಾಗಿ…
ಬೆಂಗಳೂರು: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ದರ ಏರಿಕೆಯ ಬಿಸಿ ಮುಟ್ಟಿಸಿದೆ. 2025-26ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರ ವಿದ್ಯುತ್ ದರವನ್ನು ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಎಸ್ಕಾಂಗಳು (ESCOMs) ಅನುಭವಿಸುತ್ತಿರುವ ಭಾರಿ ಆರ್ಥಿಕ ಕೊರತೆಯನ್ನು ನೀಗಿಸುವ ಸಲುವಾಗಿ ಈ ಕ್ರಮ ಅನಿವಾರ್ಯವಾಗಿದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ. ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ದರ ಏರಿಕೆ: ರಾಜ್ಯದ ಆಯ್ದ ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನು ಹೆಚ್ಚಿಸಲಾಗಿದೆ. ಸುಮಾರು 1,254.88 ಕೋಟಿ ರೂ.ಗಳ ಬೃಹತ್ ಆದಾಯ ಕೊರತೆಯನ್ನು ಭರ್ತಿ ಮಾಡಲು ಆಯೋಗವು ಈ ನಿರ್ಧಾರ ಕೈಗೊಂಡಿದೆ. ಪರಿಷ್ಕೃತ ದರಗಳ ವಿವರ ಈ ಕೆಳಗಿನಂತಿದೆ: ವಾಣಿಜ್ಯ ಬಳಕೆ (LT-3A): ಸ್ಥಿರ ಶುಲ್ಕವನ್ನು ಪ್ರತಿ ಕಿಲೋವ್ಯಾಟ್ಗೆ 235 ರೂ.ಗೆ ಮತ್ತು ಇಂಧನ ಶುಲ್ಕವನ್ನು ಪ್ರತಿ ಯೂನಿಟ್ಗೆ 7.10 ರೂ.ಗೆ ನಿಗದಿಪಡಿಸಲಾಗಿದೆ. ಕೈಗಾರಿಕೆಗಳು (LT-5): ಪ್ರತಿ ಯೂನಿಟ್ ಇಂಧನ ಶುಲ್ಕ 5.20 ರೂ.ಗೆ ನಿಗದಿಪಡಿಸಲಾಗಿದೆ. ಹೈ…
GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್’ನಲ್ಲೇ ವಿದ್ಯುತ್ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್ಲೈನ್ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ ಕಲ್ಪಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪೋರ್ಟಲ್ನ ಹೊಸ ಆಯ್ಕೆಯನ್ನು ಅನಾವರಣಗೊಳಿಸಿದ ಬಳಿಕ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, “ಯೋಜನೆಯಲ್ಲಿ ಪಾರದರ್ಶಕತೆ, ಸಾರ್ವಜನಿಕರಿಗೆ ಸುಲಭ ಮಾಹಿತಿ ಒದಗಿಸಲು ಈ ಹೊಸ ಆಯ್ಕೆಯನ್ನು ಪರಿಚಯಿಸಲಾಗಿದೆ,” ಎಂದು ತಿಳಿಸಿದರು. “ಕರ್ನಾಟಕ ಸರ್ಕಾರದ ಪ್ರಮುಖ ನೀರಾವರಿ ಯೋಜನೆಯಾದ ‘ಗಂಗಾ ಕಲ್ಯಾಣ’ ಅಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಸಣ್ಣ/ಅತಿ ಸಣ್ಣ ರೈತರ ಭೂಮಿಯಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ಸೆಟ್ ಅಳವಡಿಸಿ, ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಕೊಳವೆ ಬಾವಿ ಕೊರೆದ ನಂತರ ವಿದ್ಯುತ್ ಮೂಲಸೌಕರ್ಯ ಕಲ್ಪಿಸುವ ಸಂದರ್ಭದಲ್ಲಿ ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿಯಲು ಸಾಧ್ಯವಾಗುತ್ತಿರಲಿಲ್ಲ. ಈಗ ಪೋರ್ಟಲ್ ಅಲ್ಲೇ ಮಾಹಿತಿ ತಿಳಿಯಲು ಅವಕಾಶ ಕಲ್ಪಿಸಲಾಗಿದೆ. ರೈತ ಬಂಧುಗಳು ಈ…
ಬೆಂಗಳೂರು: ವಿಕಲಚೇತನರನ್ನು ಆರ್ಥಿಕವಾಗಿ ಸ್ವಾಲವಂಬಿಗಳನ್ನಾಗಿ ಮಾಡಲು ಡಿಯಾಜಿಯೊ ಇಂಡಿಯಾ, ಅಂಗವಿಕಲ ವ್ಯಕ್ತಿಗಳ ಕೌಶಲ್ಯ ಮಂಡಳಿ ಸಹಭಾಗಿತ್ವದಲ್ಲಿ ಕೌಶಲ್ಯ ತರಬೇತಿ ನೀಡುತ್ತಿದ್ದು, ಈ ವರ್ಷದಲ್ಲಿ 100 ವಿಕಲಚೇತನರು ಪದವಿ ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ. ನಗರದಲ್ಲಿ ನಡೆದ ಘಟಿಕೋತ್ಸವದಲ್ಲಿ ಉತ್ತೀರ್ಣ ವಿಕಲಚೇತನರಿಗೆ ಪದವಿ ಪ್ರದಾನ ಮಾಡಲಾಯಿತು. ಈ ವೇಳೆ ಮಾತನಾಡಿದ ಡಿಯಾಜಿಯೊ ಇಂಡಿಯಾದ ಮುಖ್ಯ ಹಣಕಾಸು ಅಧಿಕಾರಿ ಪ್ರದೀಪ್, ದೈಹಿಕ ವೈಖಲ್ಯ ಇರುವವರಲ್ಲೂ ಕೌಶಲ್ಯವಿರುತ್ತದೆ ಅವರಿಗೆ ಸೂಕ್ತ ತರಬೇತಿ ನೀಡಿದರೆ, ತಮ್ಮ ಸ್ವಪ್ರಯತ್ನದಿಂದಲೇ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು, ಇದಕ್ಕೆ ಅವರಿಗೂ ಸೂಕ್ತ ಕೌಶಲ್ಯ ತರಬೇತಿ ನೀಡುವುದು ಅನಿವಾರ್ಯ, ಹೀಗಾಗಿ ಕೌಶಲ್ಯ ಮಂಡಳಿಯ ಸಹಯೋಗದಲ್ಲಿ ಬೆಂಗಳೂರಿನಲ್ಲಿ ಆಸಕ್ತ ವಿಕಲಚೇತರಿಗೆ ಎಫ್&ಬಿ ಸರ್ವಿಸಸ್, ಹಾಸ್ಪೆಟಾಲಿಸಿ ಆಪರೇಷನ್ಸ್, ಕಸ್ಟಮರ್ ಸರ್ವಿಸ್, ಸಾಫ್ಟ್ ಸ್ಕಿಲ್ಸ್ ಸೇರಿದಂತೆ ಹಲವು ರೀತಿಯ ತರಬೇತಿ ನೀಡಲಾಗುತ್ತಿದೆ. ಇವರಿಗೆ ಅರ್ಹ ತರಬೇತುದಾರರಿಂದ ತರಬೇತಿ ಕೊಡಿಸಲಾಗುತ್ತಿದೆ. ಈ ಶೈಕ್ಷಣಿಕ ಸಾಲಿನಲ್ಲಿ 100 ವಿಕಲಚೇತನರಿಗೆ ಪದವಿ ವಿತರಿಸಲಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ವಿಕಲಚೇತನರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ಸ್ವಶಕ್ತಿಯಿಂದಲೇ ಜೀವನ ನಡೆಸುವ…
ಶಿವಮೊಗ್ಗ: ದಶಕಗಳಿಂದ ಮಲೆನಾಡಿನ ರೈತರನ್ನು ಕಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಹಾಗೂ ಬಗರ್ ಹುಕುಂ ಸಾಗುವಳಿದಾರರ ಭೂ ಹಕ್ಕಿನ ವಿಚಾರದಲ್ಲಿ ಸರ್ಕಾರ ತೋರುತ್ತಿರುವ ವಿಳಂಬ ಧೋರಣೆಯನ್ನು ಖಂಡಿಸಿ, ‘ಮಲೆನಾಡು ರೈತ ಹೋರಾಟ ಸಮಿತಿ’ಯು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಶೀಘ್ರ ಕ್ರಮಕ್ಕೆ ಆಗ್ರಹಿಸಿದೆ. ಈ ಕುರಿತು ಸಮಿತಿಯ ಸಂಚಾಲಕರಾದ ಟಿ.ಎನ್. ಶ್ರೀನಿವಾಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದು ಕೂಡಲೇ ಸಮಸ್ಯೆ ಪರಿಹಾರಕ್ಕೆ ಚರ್ಚಿಸಲು ಸಭೆ ಕರೆಯುವಂತೆ ಪತ್ರ ಬರೆದು ಆಗ್ರಹಿಸಿದ್ದಾರೆ. ಭರವಸೆ ನೀಡಿ ಈಡೇರಿಸುವುದನ್ನೇ ಮರೆತ ಕಾಂಗ್ರೆಸ್ ಸರ್ಕಾರ ಕಳೆದ 2022ರ ನವೆಂಬರ್ 22ರಂದು ಶಿವಮೊಗ್ಗದಲ್ಲಿ ನಡೆದ ‘ಮಲೆನಾಡಿನ ಜನಾಕ್ರೋಶ’ ಬೃಹತ್ ಸಮಾವೇಶದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದ್ದರು. ಅಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿನ ರೈತರ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಸರ್ಕಾರ ಅಸ್ತಿತ್ವಕ್ಕೆ ಬಂದು 1000 ದಿನಗಳಾಗಿದ್ದರೂ, ಸಮಸ್ಯೆಗಳು ಬಗೆಹರಿಯುವ ಬದಲಿಗೆ ಮತ್ತಷ್ಟು ಬಿಗಡಾಯಿಸಿವೆ ಎಂದು ಸಮಿತಿ ದೂರಿದೆ. ಇಲಾಖೆಗಳ…
ಸಾಗರ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಹೋರಾಟಗಳು ತೀವ್ರಗೊಳ್ಳುತ್ತಿದ್ದು, ಅದರ ಭಾಗವಾಗಿ ಸಾಗರ ತಾಲ್ಲೂಕಿನ ಆರೋಗ್ಯ ಇಲಾಖೆಯ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಹೆಚ್ಚಿನ ಬಲ ತುಂಬಲು ನಿರ್ಧರಿಸಲಾಗಿದೆ. ಈ ಸಂಬಂಧ, ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂತೋಷ್ ಗೌತಮಪುರ ಅವರಿಗೆ ಆರೋಗ್ಯ ಇಲಾಖೆಯ ನೌಕರರ ನಿಯೋಗವು ಅಧಿಕೃತವಾಗಿ ಮನವಿ ಸಲ್ಲಿಸಿ, ಸಹಕಾರ ಕೋರಿತು. ಹೋರಾಟದ ಹಿನ್ನೆಲೆ ಮತ್ತು ಮನವಿ ಸಲ್ಲಿಕೆ ಆರೋಗ್ಯ ಇಲಾಖೆಯ ನೌಕರರು ತಮ್ಮ ವೃತ್ತಿಜೀವನದಲ್ಲಿ ಎದುರಿಸುತ್ತಿರುವ ವೇತನ ತಾರತಮ್ಯ, ಕೆಲಸದ ಒತ್ತಡ, ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಮಾರ್ಚ್.11ರಿಂದ ಮುಷ್ಕರ ಹಮ್ಮಿಕೊಂಡಿದ್ದಾರೆ. ಈ ಹೋರಾಟವು ಕೇವಲ ಒಂದು ಇಲಾಖೆಗೆ ಸೀಮಿತವಾಗದೆ, ಒಟ್ಟಾರೆ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ, ತಾಲ್ಲೂಕು ಮಟ್ಟದ ಮಾತೃ ಸಂಘಟನೆಯಾದ ಸರ್ಕಾರಿ ನೌಕರರ ಸಂಘದ ನಾಯಕತ್ವ ಮತ್ತು ಮಾರ್ಗದರ್ಶನ ಅತೀ ಅಗತ್ಯ ಎಂದು ನೌಕರರು ಅಭಿಪ್ರಾಯವಾಗಿದೆ. ಸಾಗರ ತಾಲ್ಲೂಕು…
ಬೆಂಗಳೂರು : ಭಾರತೀಯ ಸೇನೆಯು 2027ರ ನೇಮಕಾತಿ ವರ್ಷಕ್ಕಾಗಿ ಅಗ್ನಿಪಥ್ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಅಇಇ) ಆನ್ಲೈನ್ ನೋಂದಣಿಯನ್ನು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ನೋಂದಣಿ ಅವಧಿಯು 13 ಫೆಬ್ರವರಿ 2026 ರಿಂದ 01 ಏಪ್ರಿಲ್ 2026 ರವರೆಗೆ ನಡೆಯಲಿದೆ. ಲಭ್ಯವಿರುವ ವಿಭಾಗಗಳು: ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ (10ನೇ ಮತ್ತು 8ನೇ ತೇರ್ಗಡೆ), ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್), ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರಿನರಿ, ಸಿಪಾಯಿ ಫಾರ್ಮಾ. ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ www.joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ಬಗ್ಗೆ ವಿವರವಾದ ಮಾಹಿತಿಯು ವೆಬ್ಸೈಟ್ನಲ್ಲಿ ಲಭ್ಯವಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ, ಅಭ್ಯರ್ಥಿಗಳು ನೇಮಕಾತಿ ಕಚೇರಿ ಬೆಂಗಳೂರು:…
ಮಂಡ್ಯ : ಜೀವನದಲ್ಲಿ ಛಲ, ಶಿಸ್ತು ಮತ್ತು ಸಂಯಮ ಮೈಗೂಡಿಸಿಕೊಂಡ ವ್ಯಕ್ತಿ ಮಾತ್ರ ಮೇರು ಸಾಧನೆ ಮಾಡಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಡಾ.ಕೆ.ಎಸ್.ರಾಜಣ್ಣ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಶ್ರೀ ವಿವೇಕಾನಂದ ಶಾಲೆಯಲ್ಲಿ ಸೋಮವಾರ ನಡೆದ 2026 ನೇ ಸಾಲಿನ ವಿವೇಕ ಸಂಭ್ರಮ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ವಹಿಸಿ ಅವರು ಮಾತನಾಡಿದರು. ವಿದ್ಯೆ ಯಾರು ಕದಿಯಲಾಗದ ಆಸ್ತಿ ಹಾಗೂ ವಿದ್ಯೆಗೆ ಯಾವುದು ಸರಿಸಾಟಿಯಿಲ್ಲ ಎಂಬುವುದನ್ನು ತಿಳಿದು ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉನ್ನತ ಸ್ಥಾನಗಳಿಸಿ ರಾಷ್ಟ್ರ ಮತ್ತು ಅಂತರಾಷ್ಟ್ರಿಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂದು ತಿಳಿಸಿದರು. ಗ್ರಾಮಾಂತರ ಪ್ರದೇಶದಲ್ಲಿ ಶೋಭಾ ನಾಗೇಗೌಡ ದಂಪತಿ ಶಿಕ್ಷಣ ಸಂಸ್ಥೆ ಆರಂಭಿಸಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿರುವುದು ಪ್ರಶಂಸನೀಯ ಸಂಗತಿ ಎಂದರು. ನನಗೆ ಪೋಲಿಯೊದಿಂದಾಗಿ ಬಾಲ್ಯದಲ್ಲೇ ಕೈ-ಕಾಲುಗಳನ್ನು ಕಳೆದುಕೊಂಡರೂ, ಅಚಲ ಆತ್ಮವಿಶ್ವಾಸ ಹಾಗೂ ನಿಮ್ಮೆಲ್ಲರ ಸಹಕಾರದಿಂದ 2024ರ ಸಾಲಿನಲ್ಲಿ ದೇಶದ ಪ್ರತಿಷ್ಠಿತ…














