Author: kannadanewsnow09

ಬೆಂಗಳೂರು: ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನಿಗಮದ ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ (ಸ್ಲೀಪರ್) ಬಸ್ಸುಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಮಹಿಳಾ ಸಾಧಕಿಯರಿಗೆ ಗೌರವ: ಕಾರ್ಯಕ್ರಮದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಇಂದು ಮಹತ್ತರ ಸಾಧನೆ ಮಾಡುತ್ತಿದ್ದಾರೆ. ಇಸ್ರೋ ಮತ್ತು ಸಿ.ಎಸ್.ಐ.ಆರ್-ಎನ್ಎಎಲ್ ಸಂಸ್ಥೆಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ, ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್‌ಗಾಗಿ ‘ದೃಷ್ಟಿ’ ತಂತ್ರಜ್ಞಾನ ಅಭಿವೃದ್ಧಿಪಡಿಸಿದ ಪದ್ಮಶ್ರೀ ಪುರಸ್ಕೃತ ಡಾ. ಶುಭ ವಿ. ಅವರ ಸಾಧನೆಯನ್ನು ಕೊಂಡಾಡಿದರು. ಸಾರಿಗೆ ನಿಗಮದಲ್ಲಿ ಮಹಿಳಾ ಶಕ್ತಿ: ಉದ್ಯೋಗಾವಕಾಶ: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 1.04 ಲಕ್ಷ ಸಿಬ್ಬಂದಿಗಳಿದ್ದು, ಇವರಲ್ಲಿ 8,956 ಮಹಿಳಾ ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ (ನಿರ್ವಾಹಕರು, ತಾಂತ್ರಿಕ ಮತ್ತು ಆಡಳಿತ) ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…

Read More

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ನಿವಾಸಿಗಳಆದಂತ ಶ್ರೀಧರ ಮರಕಡ, ಜನಾರ್ಧನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದಂತ ಮತ್ತೋರ್ವ ವ್ಯಕ್ತಿ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರಿನಲ್ಲಿದ್ದವರು ಸಕಲೇಶಪುರಕ್ಕೆ ಮದುವೆಗೆ ಹೋಗಿ ಬರುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/officials-raid-hotels-in-yadgir-46-illegal-domestic-cylinders-seized/ https://kannadanewsnow.com/kannada/pm-kisan-22nd-installment-money-released-check-if-it-has-reached-your-account-like-this/

Read More

ಯಾದಗಿರಿ: ರಾಜ್ಯದಲ್ಲಿ ಎಲ್‌ಪಿಜಿ ಬಿಕ್ಕಟ್ಟು ತಲೆದೂರಿರುವ ಬೆನ್ನಲ್ಲೇ, ಹೋಟೆಲ್‌ ಉದ್ಯಮದಲ್ಲಿ ಅಡ್ಡದಾರಿ ಹಿಡಿದಿರುವ ಮಾಲೀಕರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ಯಾದಗಿರಿಯ ವಿವಿಧ ಹೋಟೆಲ್‌ ಮತ್ತು ಕಾನಾವಳಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಬಳಸುತ್ತಿದ್ದ 46 ಗೃಹಬಳಕೆಯ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸುದ್ದಿಯ ಮುಖ್ಯಾಂಶಗಳು: ಅಕ್ರಮ ಬಳಕೆ: ನಿಯಮದ ಪ್ರಕಾರ ಹೋಟೆಲ್, ಕ್ಯಾಂಟೀನ್ ಮತ್ತು ಕಾನಾವಳಿಗಳಲ್ಲಿ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್‌ಗಳನ್ನೇ ಬಳಸಬೇಕು. ಆದರೆ, ಯಾದಗಿರಿಯ ಹಲವು ಹೋಟೆಲ್‌ಗಳಲ್ಲಿ ಲಾಭದ ಉದ್ದೇಶಕ್ಕಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ವಿಶೇಷ ಡ್ರೈವ್: ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಹೋಟೆಲ್‌ಗಳಿಂದ ಹಿಡಿದು ಗಾಂಧಿ ಚೌಕ, ಹಳೆ ಬಸ್ ನಿಲ್ದಾಣ ಮತ್ತು ಹೊಸ ಬಸ್ ನಿಲ್ದಾಣದವರೆಗಿನ ಎಲ್ಲಾ ಹೋಟೆಲ್‌ಗಳಲ್ಲಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು: ತಪಾಸಣೆ ವೇಳೆ ಅಧಿಕಾರಿಗಳು ಒಟ್ಟು 46 ಡೊಮೆಸ್ಟಿಕ್ (ಗೃಹಬಳಕೆ) ಸಿಲಿಂಡರ್‌ಗಳನ್ನು ಸೀಜ್ ಮಾಡಿದ್ದಾರೆ. ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಅಕ್ರಮ ಕಂಡುಬರದಿದ್ದರೂ, ಸಣ್ಣ ಹೋಟೆಲ್ ಮತ್ತು…

Read More

ದಕ್ಷಿಣ ಕನ್ನಡ: ಶಿರಾಡಿಘಾಟ್ ನಲ್ಲಿ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದಂತ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶಿರಾಡಿಘಾಟಿನ ಗುಂಡ್ಯ ಸಮೀಪದಲ್ಲಿ ಕೆ ಎಸ್ ಆರ್ ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದ್ದರಿಂದಾಗಿ ಕಾರಿನಲ್ಲಿ ತೆರಳುತ್ತಿದ್ದಂತ ಉಜಿರೆ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಉಪ್ಪಿನಂಗಡಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/withdraw-criminal-case-against-kannada-activists-mlc-ramesh-babu-demands-govt/ https://kannadanewsnow.com/kannada/investors-lose-rs-5-87-trillion-in-a-day-as-markets-tumble-heres-why/

Read More

ಬೆಂಗಳೂರು: ಕರ್ನಾಟಕದ ನೆಲ, ಜಲ ಮತ್ತು ಭಾಷೆಯ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಕನ್ನಡ ಚಳವಳಿಗಾರರು ಮತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸಭಾಪತಿಗಳಿಗೆ ಪತ್ರ ಬರೆದಿರುವ ಅವರು, ಶೂನ್ಯ ವೇಳೆಯಲ್ಲಿ ಈ ಸಾರ್ವಜನಿಕ ಮಹತ್ವದ ವಿಷಯವನ್ನು ಪ್ರಸ್ತಾಪಿಸಲು ಅನುಮತಿ ಕೋರಿದ್ದಾರೆ. ಸುದ್ದಿಯ ಪ್ರಮುಖ ಅಂಶಗಳು: ರಾಜ್ಯೋತ್ಸವ ಪ್ರಶಸ್ತಿ ನೀಡಲು ಮನವಿ: ಕನ್ನಡ ನಾಡು-ನುಡಿಗಾಗಿ ದಶಕಗಳಿಂದ ಹೋರಾಡುತ್ತಿರುವ ವಾಟಾಳ್ ನಾಗರಾಜ್ ಅವರೂ ಸೇರಿದಂತೆ ಅನೇಕ ಮಹನೀಯರಿಗೆ ಇದುವರೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿಲ್ಲ. ಅಂತಹ ಸಾಧಕರನ್ನು ಗುರುತಿಸಿ ಗೌರವಿಸಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿವೇಶನ ಮತ್ತು ಜಮೀನು ಮಂಜೂರಾತಿ: ದಶಕಗಳಿಂದ ಕನ್ನಡದ ಅಸ್ಮಿತೆಗಾಗಿ ಶ್ರಮಿಸುತ್ತಿರುವ ಕನ್ನಡ ಸಂಘ ಸಂಸ್ಥೆಗಳಿಗೆ ಸರ್ಕಾರವು ನಿವೇಶನ ಅಥವಾ ಜಮೀನು ಮಂಜೂರು ಮಾಡುವ ಮೂಲಕ ಆರ್ಥಿಕ ಶಕ್ತಿ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.…

Read More

ಬೆಂಗಳೂರು: ಸಮುದಾಯಕ್ಕೊಂದು ಆಸ್ಪತ್ರೆಯಲ್ಲ, ಜನಸಂಖ್ಯೆ ಆಧಾರದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಿದ್ದೇವೆ. ನಾವು ಅವೈಜ್ಞಾನಿಕ ನಡೆಗಳಿಗೆಲ್ಲ ಅವಕಾಶವನ್ನು ನೀಡುವುದಿಲ್ಲ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಯಾವುದೇ ಅಭಿವೃದ್ಧಿ ಕೆಲಸಕ್ಕೆ ಮೀಸಲಿಟ್ಟ ಹಣವನ್ನು ಮನಬಂದಂತೆ ಬಳಸಲು ಸಾಧ್ಯವಿಲ್ಲ. ಹೊಸ ಆಸ್ಪತ್ರೆಗಳ ನಿರ್ಮಾಣದ ವಿಚಾರದಲ್ಲಿ ಕೆಲವೊಂದು ನಿರ್ದಿಷ್ಟ ನಿಯಮಗಳಿವೆ ಎಂದರು. ​ಆಸ್ಪತ್ರೆಗಳನ್ನು ಅಥವಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಾಗ ಆಯಾ ಭಾಗದ ಜನಸಂಖ್ಯೆ ಮತ್ತು ಅಲ್ಲಿನ ಆರೋಗ್ಯ ಸೇವೆಯ ಅಗತ್ಯತೆಯನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು. ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆಯೇ ಹೊರತು, ಯಾವುದೇ ಒಂದು ಜಾತಿಯ ಜನರ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕಾಗಿ ಆಸ್ಪತ್ರೆಗಳನ್ನು ನಿರ್ಮಿಸಲು ಬರುವುದಿಲ್ಲ. ಒಟ್ಟಾರೆಯಾಗಿ, ಜನಸಾಮಾನ್ಯರ ಹಿತದೃಷ್ಟಿ ಮತ್ತು ಅಧಿಕೃತ ನಿಯಮಗಳೇ ಇಲ್ಲಿ ಅಂತಿಮ ಎಂಬುದಾಗಿ ಸ್ಪಷ್ಟ ಪಡಿಸಿದರು. https://kannadanewsnow.com/kannada/us-military-plane-crashes-in-iraq-four-killed/ https://kannadanewsnow.com/kannada/investors-lose-rs-5-87-trillion-in-a-day-as-markets-tumble-heres-why/

Read More

ಬಾಗ್ದಾದ್/ವಾಷಿಂಗ್ಟನ್: ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಕಾರ್ಯಾಚರಣೆಯಲ್ಲಿದ್ದ ಅಮೆರಿಕದ ‘ಕೆಸಿ-135’ (KC-135) ಇಂಧನ ಮರುಪೂರಣ ವಿಮಾನವು ಪಶ್ಚಿಮ ಇರಾಕ್‌ನಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಆರು ಮಂದಿಯ ಪೈಕಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ ಶುಕ್ರವಾರ ಖಚಿತಪಡಿಸಿದೆ. ಘಟನೆಯ ವಿವರ: ಅಪಘಾತ ಸಂಭವಿಸಿದ್ದು ಎಂದು?: ಮಾರ್ಚ್ 12 ರಂದು ಎರಡು ಕೆಸಿ-135 ವಿಮಾನಗಳು ಕಾರ್ಯಾಚರಣೆಯಲ್ಲಿದ್ದಾಗ ಈ ಘಟನೆ ನಡೆದಿದೆ. ಒಂದು ವಿಮಾನ ಸುರಕ್ಷಿತವಾಗಿ ಇಳಿದಿದ್ದರೆ, ಮತ್ತೊಂದು ವಿಮಾನ ಪತನಗೊಂಡಿದೆ. ಅಮೆರಿಕದ ಸ್ಪಷ್ಟನೆ: ವಿಮಾನ ಪತನಕ್ಕೆ ಶತ್ರುಗಳ ದಾಳಿ ಅಥವಾ ‘ಫ್ರೆಂಡ್ಲಿ ಫೈರ್’ (ತಮ್ಮದೇ ಪಡೆಯ ದಾಳಿ) ಕಾರಣವಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ಅಮೆರಿಕ ತಿಳಿಸಿದೆ. ಪ್ರಸ್ತುತ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಶತ್ರು ಪಡೆಯ ಹಕ್ಕು: ಇರಾಕ್‌ನಲ್ಲಿ ಸಕ್ರಿಯವಾಗಿರುವ ಇರಾನ್ ಬೆಂಬಲಿತ ‘ಇಸ್ಲಾಮಿಕ್ ರೆಸಿಸ್ಟೆನ್ಸ್’ ಎಂಬ ಸಶಸ್ತ್ರ ಗುಂಪು, “ನಮ್ಮ ದೇಶದ ಸಾರ್ವಭೌಮತ್ವವನ್ನು ರಕ್ಷಿಸಲು ನಾವು ಅಮೆರಿಕದ ವಿಮಾನವನ್ನು ಹೊಡೆದುರುಳಿಸಿದ್ದೇವೆ” ಎಂದು ಘಟನೆಯ ಜವಾಬ್ದಾರಿ…

Read More

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (AIFF) ನ ಸುದೀರ್ಘ ಅವಧಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಕುಶಾಲ್ ದಾಸ್ (66) ಅವರು ಶುಕ್ರವಾರ (ಮಾರ್ಚ್ 13, 2026) ನವದೆಹಲಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಸುದೀರ್ಘ ಸೇವೆ: ವೃತ್ತಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಕುಶಾಲ್ ದಾಸ್ ಅವರು 2010 ರಿಂದ 2022 ರವರೆಗೆ ಸತತ 12 ವರ್ಷಗಳ ಕಾಲ AIFF ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದು ಫೆಡರೇಶನ್ ಇತಿಹಾಸದಲ್ಲೇ ಅತ್ಯಂತ ಸುದೀರ್ಘ ಅವಧಿಯಾಗಿದೆ. ಐತಿಹಾಸಿಕ ಮೈಲಿಗಲ್ಲುಗಳು: ಇವರ ಅಧಿಕಾರಾವಧಿಯಲ್ಲಿ ಭಾರತವು 2017 ರ ಫಿಫಾ (FIFA) ಅಂಡರ್-17 ವಿಶ್ವಕಪ್ ಮತ್ತು 2022 ರ ಎಎಫ್‌ಸಿ (AFC) ಮಹಿಳಾ ಏಷ್ಯನ್ ಕಪ್‌ನಂತಹ ಪ್ರತಿಷ್ಠಿತ ಅಂತಾರಾಷ್ಟ್ರೀಯ ಟೂರ್ನಿಗಳನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಮಹಿಳಾ ಫುಟ್‌ಬಾಲ್‌ಗೆ ಚಾಲನೆ: 2017 ರಲ್ಲಿ ಭಾರತೀಯ ಮಹಿಳಾ ಲೀಗ್ (IWL) ಅನ್ನು ಪ್ರಾರಂಭಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು, ಇದು ದೇಶದಲ್ಲಿ…

Read More

ಬೆಂಗಳೂರು: ರಾಜಧಾನಿಯಲ್ಲಿ ಸಂಚಲನ ಮೂಡಿಸಿದ್ದ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಡಿಫಾಲ್ಟ್ ಜಾಮೀನು ಮಂಜೂರು ಮಾಡಿದೆ. ಪೊಲೀಸರು ನಿಗದಿತ ಸಮಯದಲ್ಲಿ ಆರೋಪಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಲು ವಿಫಲವಾದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಜಾಮೀನು ಪಡೆದ ಆರೋಪಿಗಳು: ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಈ ಕೆಳಗಿನ ಆರೋಪಿಗಳಿಗೆ ಜಾಮೀನು ನೀಡಿದೆ: ಜಗ್ಗ ಆಲಿಯಾಸ್ ಜಗದೀಶ್ ಕೆ. ಕಿರಣ್ ಬಿ. ವಿಮಲ್ ರಾಜ್ ಮದನ್ ಘಟನೆಯ ಹಿನ್ನೆಲೆ ಮತ್ತು ತಾಂತ್ರಿಕ ಲೋಪ: ನಿಯಮ: ಕಾನೂನಿನ ಪ್ರಕಾರ ಕೊಲೆ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ 90 ದಿನಗಳ ಒಳಗೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಬೇಕಾಗುತ್ತದೆ. ಪೊಲೀಸರ ನಡೆ: ಪೊಲೀಸರು ಈ ಪ್ರಕರಣಕ್ಕೆ ‘ಕೋಕಾ’ (KOKA) ಕಾಯ್ದೆಯನ್ನು ಅನ್ವಯಿಸಿದ್ದರು. ಈ ಕಾಯ್ದೆಯಡಿ ಚಾರ್ಜ್ ಶೀಟ್ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಪಡೆಯಲು ಅವಕಾಶವಿತ್ತು. ಹೈಕೋರ್ಟ್ ಆದೇಶ: ಆದರೆ, ಡಿಸೆಂಬರ್ 19 ರಂದು ಹೈಕೋರ್ಟ್ ಈ ಪ್ರಕರಣದ ಮೇಲೆ ಹೇರಲಾಗಿದ್ದ ‘ಕೋಕಾ’…

Read More

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆಯ ಕೂಗು ಮತ್ತೆ ಕೇಳಿಬರುತ್ತಿದ್ದು, ಹಿರಿಯ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಚಿವ ಸಂಪುಟ ಬದಲಾವಣೆಗೆ ಆಗ್ರಹಿಸಿದ್ದಾರೆ. ಸುಮಾರು 27 ರಿಂದ 28 ಜನ ಸಮಾನ ಮನಸ್ಕ ಶಾಸಕರು ಸೇರಿ ನಿನ್ನೆ ಸಭೆ ನಡೆಸಿದ್ದು, ಸಂಪುಟ ಪುನಾರಚನೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದೇನು? ಸಂಪುಟ ಪುನಾರಚನೆ ಅನಿವಾರ್ಯ: ಸಚಿವ ಸಂಪುಟ ರಚನೆಯಾಗಿ ಸುಮಾರು ಎರಡೂವರೆ ವರ್ಷಗಳಾಗುತ್ತಾ ಬಂದಿದೆ. ಇದುವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಹಾಗೂ ಸಂಪುಟದಲ್ಲಿ ಬದಲಾವಣೆ ತರಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಹಿರಿಯ ಶಾಸಕರಿಗೆ ಆದ್ಯತೆ: ಮೂರು-ನಾಲ್ಕು ಬಾರಿ ಗೆದ್ದಿರುವ ಸಾಕಷ್ಟು ಹಿರಿಯ ಶಾಸಕರು ನಮ್ಮಲ್ಲಿದ್ದಾರೆ. ಸದ್ಯ ಸಚಿವರಾಗಿರುವ ಹಿರಿಯರಲ್ಲಿ ಒಂದು ಏಳೆಂಟು ಜನರನ್ನು ಉಳಿಸಿಕೊಂಡು, ಉಳಿದವರಿಗೆ ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಹಾಗೂ ಸೀನಿಯರ್ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು…

Read More