Author: kannadanewsnow09

ಬೆಂಗಳೂರು : “ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ ಅವರಿಗೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ‘ನಾನು, ಮುಖ್ಯಮಂತ್ರಿಯವರು ಹಾಗೂ ಜಮೀರ್ ಅಹಮದ್, ನಾಸೀರ್ ಹುಸೇನ್, ಸಲೀಂ ಅಹ್ಮದ್, ಹುಸೇನ್, ಹ್ಯಾರಿಸ್, ಜಬ್ಬಾರ್ ಅವರು ಎಲ್ಲ ಅಲ್ಪಸಂಖ್ಯಾತ ನಾಯಕರು, ಎಐಸಿಸಿ ಕಾರ್ಯದರ್ಶಿಗಳ ಜತೆ ಮಾತನಾಡಿ ಒಮ್ಮತದ ತೀರ್ಮಾನಕ್ಕೆ ಬಂದು ಶಾಮನೂರು ಅವರ ಕುಟುಂಬಕ್ಕೆ ಅವಕಾಶ ಮಾಡಿಕೊಡಲಾಗಿದೆ. ಒಗ್ಗಟ್ಟಿನಿಂದ ಚುನಾವಣೆ ಮಾಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಂಡು ಬರುವ ತೀರ್ಮಾನ ಮಾಡಲಾಗಿದೆ” ಎಂದರು. ನಾಳೆ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಭಾಗಿ “ಮಗನ ಬಿ ಫಾರಂ ಅನ್ನು ತಂದೆಯವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಕೈಯಲ್ಲಿ ಕೊಡಲಾಗಿದೆ. ಸೋಮವಾರ ದಾವಣಗೆರೆ ಹಾಗೂ ಬಾಗಲಕೋಟೆಗೆ…

Read More

ನವದೆಹಲಿ: ಭಾರತದ ಡಿಜಿಟಲ್ ಪಾವತಿ ಲೋಕವು ಏಪ್ರಿಲ್ 1, 2026 ರಿಂದ ಹೊಸ ಯುಗಕ್ಕೆ ಸಾಕ್ಷಿಯಾಗಲಿದೆ. ಹೆಚ್ಚುತ್ತಿರುವ ಆನ್‌ಲೈನ್ ವಂಚನೆಗಳಿಗೆ ಬ್ರೇಕ್ ಹಾಕಲು ಭಾರತೀಯ ರಿಸರ್ವ್ ಬ್ಯಾಂಕ್ (RBI), ಎಲ್ಲಾ ಡಿಜಿಟಲ್ ವಹಿವಾಟುಗಳಿಗೆ ‘ದ್ವಿ-ಅಂಶ ದೃಢೀಕರಣ’ (Two-Factor Authentication – 2FA) ಅನ್ನು ಕಡ್ಡಾಯಗೊಳಿಸಿದೆ. ಏಪ್ರಿಲ್ 1, 2026 ರಿಂದ ಏನು ಬದಲಾಗಲಿದೆ? ಹೊಸ ನಿಯಮದ ಪ್ರಕಾರ, ಪ್ರತಿಯೊಂದು ಡಿಜಿಟಲ್ ಪಾವತಿಯನ್ನು ಕನಿಷ್ಠ ಎರಡು ವಿಭಿನ್ನ ಹಂತಗಳಲ್ಲಿ ದೃಢೀಕರಿಸಬೇಕಾಗುತ್ತದೆ. ಇದಕ್ಕಾಗಿ ಬ್ಯಾಂಕುಗಳು ಮತ್ತು ಫಿಂಟೆಕ್ ಕಂಪನಿಗಳು ಈ ಕೆಳಗಿನ ಆಯ್ಕೆಗಳನ್ನು ನೀಡಬಹುದು: ಪಾಸ್‌ವರ್ಡ್‌ಗಳು ಅಥವಾ ಪಿನ್ (PIN) ಎಸ್‌ಎಂಎಸ್ ಆಧಾರಿತ ಒಟಿಪಿ (OTP) ಬಯೋಮೆಟ್ರಿಕ್ಸ್ (ಬೆರಳಚ್ಚು ಅಥವಾ ಮುಖ ಗುರುತಿಸುವಿಕೆ) ಹಾರ್ಡ್‌ವೇರ್ ಅಥವಾ ಸಾಫ್ಟ್‌ವೇರ್ ಟೋಕನ್‌ಗಳು ಪ್ರಮುಖ ಅಂಶ: ಕನಿಷ್ಠ ಒಂದು ದೃಢೀಕರಣವು ‘ಡೈನಾಮಿಕ್’ ಆಗಿರಬೇಕು, ಅಂದರೆ ಪ್ರತಿ ವಹಿವಾಟಿಗೆ ಅದು ಹೊಸದಾಗಿ ಸೃಷ್ಟಿಯಾಗಬೇಕು (ಉದಾಹರಣೆಗೆ OTP ಅಥವಾ ಲೈವ್ ಬಯೋಮೆಟ್ರಿಕ್). ಹೊಸ ನಿಯಮದ ಮುಖ್ಯಾಂಶಗಳು: ಕಡ್ಡಾಯ ದೃಢೀಕರಣ: ಎಲ್ಲಾ ಡಿಜಿಟಲ್…

Read More

ಓಮನ್: ಇಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆ ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುರ್ತು ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದಾರೆ. ಘಟನೆಯ ಹಿನ್ನೆಲೆ: ಶನಿವಾರ ಓಮನ್‌ನ ಅಲ್ ಬಾತಿನಾ ಗವರ್ನರೇಟ್‌ನಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಸಿಲುಕಿದ ವಾಹನವೊಂದರಲ್ಲಿದ್ದ ಮೂವರು ಮಲಯಾಳಿಗಳು ಸಂಕಷ್ಟಕ್ಕೆ ಈಡಾಗಿದ್ದಾರೆ. ಮೃತರನ್ನು ಕೇರಳದ ತೃಪ್ತಲ ಮೂಲದ ಯೂಸುಫ್ ಮತ್ತು ಶಮ್ಲಾ ಎಂದು ಗುರುತಿಸಲಾಗಿದೆ. ಇನ್ನು ಇದೇ ಭಾಗದ ರಮ್ಲಾ ಎಂಬ ಮಹಿಳೆ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಧಾನಿಗೆ ಪತ್ರದ ಸಾರಾಂಶ: ಭಾನುವಾರ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿ.ಡಿ. ಸತೀಶನ್ ಅವರು ಘಟನೆಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಪತ್ರದ ಮುಖ್ಯಾಂಶಗಳು ಇಲ್ಲಿವೆ: ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿ: ಓಮನ್‌ನಲ್ಲಿ ಇನ್ನೂ ಭಾರಿ ಮಳೆ ಮತ್ತು ಪ್ರವಾಹದ…

Read More

ದೈನಂದಿನ ತಪ್ಪದೆ ಹೇಳಬೇಕಾದ ಪ್ರಾರ್ಥನಾ ಶ್ಲೋಕಗಳು ಶ್ರೀ ಗಣಪತಿ ಶ್ಲೋಕ ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ | ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ || ಶ್ರೀ ಕೃಷ್ಣ ಶ್ಲೋಕ ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ | ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ || ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…

Read More

ಬೆಂಗಳೂರು : ಸರ್ಕಾರದ ಒಳಮಿಸಲಾತಿ ನೀತಿ, ಆಯೋಗಗಳ ವರದಿ ಹಾಗೂ ರೋಸ್ಟರ್ ವ್ಯವಸ್ಥೆಗಳ ವಿರೋಧವಾಗಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಮಾ. 24ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು. ವಸಂತನಗರದ ಜಸ್ಮಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೋವಿ, ಬಂಜಾರ,ಕೊರಮ,ಕೊರಚ,ಸೂಕ್ಷ್ಮ,ಅತಿಸೂಕ್ಷ್ಮ ಹಾಗೂ ಅಲೆಮಾರಿಗಳ 59 ಜಾತಿಗಳಿಗೆ ಅನ್ಯಾಯವಾಗುತ್ತಿದ್ದು, ಪರಿಶಿಷ್ಟ ಜಾತಿಗಳ ಒಳಮಿಸಲಾತಿ ವಿಚಾರದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಅವೈಜ್ಞಾನಿಕವಾಗಿದೆ‌. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗದ ವರದಿ ಅಪೂರ್ಣವಾಗಿದ್ದು, ಸಮೀಕ್ಷೆ ಸರಿಯಾದ ರೀತಿಯಲ್ಲಿ ನಡೆದಿಲ್ಲ ಎಂಬ ಆಕ್ಷೇಪವನ್ನು ಹಲವಾರು ಸಂಘಟನೆಗಳು ವ್ಯಕ್ತಪಡಿಸಿದ್ದರೂ, ಅದನ್ನು ಪರಿಗಣಿಸದೆ ವರದಿ ಸಲ್ಲಿಸಲಾಗಿದೆ ಎಂದರು. ಆಯೋಗದ ವರದಿಯಲ್ಲಿ ಭೋವಿ, ಬಂಜಾರ, ಕೊರಮ, ಕೊರಚ ಹಾಗೂ ಇತರ ಸೂಕ್ಷ್ಮ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಸರಿಯಾದ ರೀತಿಯಲ್ಲಿ ಲೆಕ್ಕಿಸಿಲ್ಲ. ಉದಾಹರಣೆಗೆ, 2011ರ ಜನಗಣತಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಇದ್ದ ಭೋವಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ವ್ಯಾಪ್ತಿಯ ಮಳ್ಳಕೊಪ್ಪ ಗ್ರಾಮದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಕಾಮಗಾರಿಯ ಸರ್ವೇ ಕಾರ್ಯ ನಡೆಸುತ್ತಿದ್ದ ತಂಡದ ಮೇಲೆ ಗ್ರಾಮದ ಗುಂಪೊಂದು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಏಳು ಮಂದಿಯ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನೆಲೆ: ಶನಿವಾರ ಮಧ್ಯಾಹ್ನ ಸುಮಾರು 1:30ರ ಸಮಯದಲ್ಲಿ ಮಳ್ಳಕೊಪ್ಪ ಗ್ರಾಮದ ಸರ್ವೇ ನಂಬರ್ 71/3ರಲ್ಲಿ ಶಿವಕುಮಾರ್ ಎಂಬುವವರ ಜಾಗದಲ್ಲಿ ಸರ್ವೇಯರ್ ಮಲ್ಲನಗೌಡ ಮತ್ತು ಅವರ ತಂಡವು ಹೈಟೆನ್ಷನ್ ವೈಯರ್ ಅಳವಡಿಕೆಗೆ ಸಂಬಂಧಿಸಿದಂತೆ ಸರ್ವೇ ಕಾರ್ಯದಲ್ಲಿ ನಿರತರಾಗಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಮಳ್ಳಕೊಪ್ಪ ಗ್ರಾಮದ ನಿವಾಸಿಗಳಾದ ಸಂಜು, ಸಂತೋಷ್, ರಾಘವೇಂದ್ರ, ಸಚಿನ್, ಸತೀಶ್, ಸುದೀಪ್ ಹಾಗೂ ಪರಮೇಶ್ ಎಂಬುವವರು, “ನಿಮಗೆ ಇಲ್ಲಿ ಕೆಲಸ ಮಾಡಲು ಅನುಮತಿ ನೀಡಿದವರು ಯಾರು?” ಎಂದು ಪ್ರಶ್ನಿಸಿ ಗಲಾಟೆ ಆರಂಭಿಸಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ: ಆರೋಪಿಗಳು ಸರ್ವೇ ತಂಡದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ,…

Read More

ಛತ್ತೀಸ್‌ಗಢ: ನವರಾತ್ರಿ ಹಬ್ಬದ ಸಂಭ್ರಮದ ನಡುವೆಯೇ ಛತ್ತೀಸ್‌ಗಢದ ಮಹಾಸಮುಂದ್ ಜಿಲ್ಲೆಯ ಪ್ರಸಿದ್ಧ ಬೆಟ್ಟದ ಮೇಲಿನ ದೇವಸ್ಥಾನವೊಂದರಲ್ಲಿ ಭೀಕರ ಅಪಘಾತ ಸಂಭವಿಸಿದೆ. ರೋಪ್‌ವೇ ಕೇಬಲ್ ತುಂಡಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, 17ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಘಟನೆಯ ವಿವರ: ನವರಾತ್ರಿ ಹಿನ್ನೆಲೆಯಲ್ಲಿ ಸಮುದ್ರ ಮಟ್ಟದಿಂದ ಸುಮಾರು 3,000 ಅಡಿ ಎತ್ತರದಲ್ಲಿರುವ ಈ ಜನಪ್ರಿಯ ಪುಣ್ಯಕ್ಷೇತ್ರಕ್ಕೆ ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಭಕ್ತರ ದಟ್ಟಣೆ ಹೆಚ್ಚಿದ್ದ ಸಮಯದಲ್ಲಿ ಹಠಾತ್ತನೆ ರೋಪ್‌ವೇ ಕೇಬಲ್ ತುಂಡಾಗಿದ್ದು, ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಮಡುಗಟ್ಟಿದ ಶೋಕ: ಕೇಬಲ್ ತುಂಡಾದ ತಕ್ಷಣ ದೇವಸ್ಥಾನದ ಆವರಣದಲ್ಲಿ ಭಾರೀ ಆತಂಕ ಮತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಮಹಿಳೆಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ರಕ್ಷಣಾ ಕಾರ್ಯ: ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಸಿಲುಕಿಕೊಂಡಿದ್ದ ಇತರ ಭಕ್ತರನ್ನು ಸುರಕ್ಷಿತವಾಗಿ ಕೆಳಗಿಳಿಸುವ ಕಾರ್ಯಾಚರಣೆ ನಡೆಸಿವೆ. ಹಬ್ಬದ ಪ್ರಯುಕ್ತ…

Read More

ಬೆಂಗಳೂರು: ಛಲವೊಂದಿದ್ದರೆ ಎಂತಹ ಕಷ್ಟಗಳನ್ನೂ ಮೆಟ್ಟಿ ನಿಲ್ಲಬಹುದು ಎಂಬುದಕ್ಕೆ ಮಂಡ್ಯದ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರ ಸಾಧನೆಯೇ ಸಾಕ್ಷಿ. ಮಾರ್ಚ್ 21ರ ಶನಿವಾರ ಕೇರಳದ ತ್ರಿವೇಂಡ್ರಮ್‌ನಲ್ಲಿ ನಡೆದ ‘7ನೇ ಇಂಡಿಯನ್ ಓಪನ್ 400 ಮೀಟರ್ ಸ್ಪರ್ಧೆ’ಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿಜಯಕುಮಾರಿ ಅವರು 2ನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಕಾಲಿಕ ನೆರವು ಕಾರಣವಾಯಿತು ಎಂಬುದಾಗಿ ವಿಜಯಕುಮಾರಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಗೌಡೇನಹಳ್ಳಿ ಮೂಲದ ವಿಜಯಕುಮಾರಿ, ಆರ್ಥಿಕ ಮುಗ್ಗಟ್ಟು ಮತ್ತು ಗಾಯದ ಸಮಸ್ಯೆಯಿಂದ ಕ್ರೀಡಾಲೋಕದಿಂದಲೇ ದೂರ ಸರಿಯುವ ನಿರ್ಧಾರಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಅವರ ನೆರವಿಗೆ ಬಂದಿದ್ದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಇವರ ಕಷ್ಟಕ್ಕೆ ಸ್ಪಂದಿಸಿದ ಡಿಸಿಎಂ ಅವರು ಸರ್ಕಾರದಿಂದ 10 ಲಕ್ಷ ರೂಪಾಯಿ ಪ್ರೋತ್ಸಾಹಧನ ಘೋಷಿಸಿದ್ದರು. ಆ ಪೈಕಿ ಮೊದಲ ಕಂತಿನ 5 ಲಕ್ಷ ರೂಪಾಯಿಗಳನ್ನು ಬಿಬಿಎಂಪಿ ಮೂಲಕ ಈಗಾಗಲೇ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯೊಬ್ಬಳು ಮಲಗಿದ್ದ ಪತಿಯ ಮರ್ಮಾಂಗಕ್ಕೆ ಒದ್ದು ತೀವ್ರವಾಗಿ ಹಲ್ಲೆ ನಡೆಸಿದ್ದಾಳೆ. ಘಟನೆಯ ವಿವರ: ವೆಂಕಟರಾಯನಕೋಟೆ ಗ್ರಾಮದ ದಂಪತಿಗಳು ಕಳೆದ ಒಂದು ವರ್ಷದ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಆದರೆ, ಮದುವೆಯಾದ ಕೆಲವು ಸಮಯದ ನಂತರ ಪತ್ನಿ ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಳು ಎನ್ನಲಾಗಿದೆ. ವಿನಾಕಾರಣ ಪತಿಯೊಂದಿಗೆ ಜಗಳ ತೆಗೆಯುತ್ತಿದ್ದ ಆಕೆ, ಘಟನೆ ನಡೆದ ದಿನದಂದು ಬೆಳಿಗ್ಗೆ ಪತಿಯ ಬಟ್ಟೆಗಳನ್ನು ಹರಿದು ಹಾಕಿ ದೊಡ್ಡ ಗಲಾಟೆ ಮಾಡಿದ್ದಳು. ಮಧ್ಯರಾತ್ರಿ ಕೃತ್ಯ: ಬೆಳಿಗ್ಗೆ ನಡೆದ ಜಗಳದ ಬಳಿಕ ಪತಿ ರಾತ್ರಿ ಮಲಗಿದ್ದಾಗ, ಪತ್ನಿ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಪತಿ, ತಾನೇ ಆಂಬುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಹೈಡ್ರಾಮಾ: ಪತಿ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದು ಮರುದಿನ ಬೆಳಿಗ್ಗೆ ಪತ್ನಿ ಆತನನ್ನು ನೋಡಲು ಬಂದಿದ್ದಾಳೆ. ಆದರೆ, ಪತಿಯ ಕುಟುಂಬಸ್ಥರು ಆಕೆಯನ್ನು ಒಳಗೆ ಬಿಡಲು…

Read More

ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆಯ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕರುನಾಡ ಹಬ್ಬ’ದ ಲಕ್ಕಿ ಡ್ರಾ ಫಲಿತಾಂಶ ಘೋಷಣೆ ವಿಳಂಬವಾಗುತ್ತಿರುವ ಕುರಿತು ಆಯೋಜಕರು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಕಳೆದ ನವೆಂಬರ್ 28, 29 ಮತ್ತು 30ರಂದು ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅದ್ಧೂರಿ ‘ಕರುನಾಡ ಹಬ್ಬ’ ಆಚರಿಸಲಾಗಿತ್ತು. ಈ ಸಂಭ್ರಮದ ಭಾಗವಾಗಿ ಬೈಕ್ ಸೇರಿದಂತೆ ವಿವಿಧ ಆಕರ್ಷಕ ಬಹುಮಾನಗಳ ‘ಲಕ್ಕಿ ಡ್ರಾ’ ಆಯೋಜಿಸಲಾಗಿತ್ತು. ವಿಳಂಬಕ್ಕೆ ಕಾರಣವೇನು? ಲಕ್ಕಿ ಡ್ರಾ ಟಿಕೆಟ್‌ಗಳ ಮಾರಾಟ ಪ್ರಕ್ರಿಯೆಯಲ್ಲಿ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗಿರಲಿಲ್ಲ. ಒಟ್ಟು ಲಭ್ಯವಿದ್ದ ಟಿಕೆಟ್‌ಗಳಲ್ಲಿ ಕೇವಲ 200 ರಿಂದ 300 ಟಿಕೆಟ್‌ಗಳು ಮಾತ್ರ ಮಾರಾಟವಾಗಿದ್ದವು. ಈ ಹಿನ್ನೆಲೆಯಲ್ಲಿ ಟಿಕೆಟ್ ಮಾರಾಟ ಪ್ರಕ್ರಿಯೆಯನ್ನು ಮುಂದುವರಿಸಬೇಕಾಗಿ ಬಂದಿದ್ದರಿಂದ ನಿಗದಿತ ಸಮಯದಲ್ಲಿ ಬಹುಮಾನ ಘೋಷಿಸಲು ಸಾಧ್ಯವಾಗಿಲ್ಲ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಸಂಘದಿಂದ ಈ ವಿನಂತಿ ಮಾರ್ಚ್ 31ರ ಒಳಗಾಗಿ ಸಂಘದ ತುರ್ತು ಸಭೆಯನ್ನು ಕರೆಯಲಾಗುವುದು. ಈಸಭೆಯಲ್ಲಿ…

Read More