Author: kannadanewsnow09

ಬೆಂಗಳೂರು: ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು. ನಿಯಮದಂತೆ ರದ್ಧತಿ ಸ್ವಯಂಚಾಲಿತ “ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ ರದ್ದಾಗುತ್ತದೆ. ಇದನ್ನು ರದ್ದು ಮಾಡುವ ವಿಶೇಷ ಅಧಿಕಾರ ಸಭಾಧ್ಯಕ್ಷರಿಗಿಲ್ಲ. ಒಂದು ವೇಳೆ ನ್ಯಾಯಾಲಯವು ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ಅವರ ಸದಸ್ಯತ್ವ ಮರುಸ್ಥಾಪನೆಯಾಗುತ್ತದೆ,” ಎಂದು ಯು.ಟಿ. ಖಾದರ್ ವಿವರಿಸಿದರು. ತಾರತಮ್ಯದ ಆರೋಪಕ್ಕೆ ತಿರುಗೇಟು ಶಾಸಕರನ್ನು ಅನರ್ಹಗೊಳಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಭಾಧ್ಯಕ್ಷರು ತಳ್ಳಿಹಾಕಿದರು. “ಅನರ್ಹತೆ ವಿಚಾರದಲ್ಲಿ ಪಕ್ಷಪಾತ ಮಾಡುವ ಪ್ರಶ್ನೆಯೇ ಇಲ್ಲ. ಶಾಸಕ…

Read More

ಬೆಂಗಳೂರು: ನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅಲ್ಲದೇ ಮೃತರಾದಂತವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಕಾಂಪೌಂಡ್ ಗೋಡೆ ಕುಸಿತಕ್ಕೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಬೀದಿ ಬದಿಯ ವ್ಯಾಪಾರಿಗಳು ಮಳೆಯಿಂದಾಗಿ ಕಾಂಪೌಂಡ್ ಗೋಡೆಯ ಬಳಿಯಲ್ಲಿ ಆಶ್ರಯ ಪಡೆದುಕೊಳ್ಳಲು ನಿಂತಿದ್ದರು. ಈ ಸಂದರ್ಭದಲ್ಲಿ ಕುಸಿತಗೊಂಡು ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು. https://kannadanewsnow.com/kannada/udf-wins-power-in-kerala-congress-alliance-predicts-grand-comeback-after-10-years/…

Read More

ಶಿವಮೊಗ್ಗ: ಆಧ್ಯಾತ್ಮಿಕ ಚೈತನ್ಯದ ನೆಲೆವೀಡು, ಸೊರಬ ತಾಲ್ಲೂಕಿನ ಕ್ಯಾಸನೂರಿನ ಖೇಚರಯೋಗಿ ಶ್ರೀ ಗುರುಬಸವದೇವರ ಸಂಸ್ಥಾನಮಠದಲ್ಲಿ ಬುಧವಾರ ಒಂದು ಐತಿಹಾಸಿಕ ಧಾರ್ಮಿಕ ಘಟ್ಟಕ್ಕೆ ಸಾಕ್ಷಿಯಾಯಿತು. ಶ್ರೀ ಗುರುಬಸವ ಸ್ವಾಮಿಗಳ ಕರ್ತೃಗದ್ದುಗೆ, ಶ್ರೀ ಚೌಡೇಶ್ವರಿ ದೇವಿಯ ಗುಡಿ ಹಾಗೂ ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭವು ಅತ್ಯಂತ ಭಕ್ತಿಭಾವದಿಂದ ಜರುಗಿತು. ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಸಂಸ್ಕಾರ ಅನಿವಾರ್ಯ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಶೈಲ ಜಗದ್ಗುರು ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಧರ್ಮದ ನೈಜ ಅರ್ಥವನ್ನು ಭಕ್ತರಿಗೆ ಮನವರಿಕೆ ಮಾಡಿಕೊಟ್ಟರು. “ವೀರಶೈವ ಎಂದರೆ ಕೇವಲ ಹೆಸರಿಗೆ ಲಿಂಗಧಾರಣೆ ಮಾಡಿದರೆ ಸಾಲದು. ಪ್ರತಿದಿನ ಇಷ್ಟಲಿಂಗ ಪೂಜೆಯನ್ನು ನಿಷ್ಠೆಯಿಂದ ಮಾಡುವವರೇ ನಿಜವಾದ ವೀರಶೈವರು. ಈ ಆಚಾರ ಮತ್ತು ಸಂಸ್ಕಾರವನ್ನು ನಾವು ಇಂದಿನ ಮಕ್ಕಳಲ್ಲಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಧರ್ಮವನ್ನು ಹಸ್ತಾಂತರಿಸಬೇಕು,” ಎಂದು ಕರೆ ನೀಡಿದರು. ಧರ್ಮ ಮತ್ತು ಸಮಾಜದ ನಡುವಿನ ಸಂಬಂಧದ ಕುರಿತು ಮಾತನಾಡಿದ ಅವರು, ಧರ್ಮವನ್ನು ನಾವು…

Read More

ಬೆಂಗಳೂರು: ನಗರದ ಬೌರಿಂಗ್ ಆಸ್ಪತ್ರೆಯ ಬಳಿಯಲ್ಲಿನ ಕಾಂಪೌಂಡ್ ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿತ್ತು. ಈ ಕಾಂಪೌಂಡ್ ಬಳಿಯಲ್ಲಿ ಆಶ್ರಯ ಪಡೆದಿದ್ದಂತ ಬೀದಿ ಬದಿಯ 8 ಮಂದಿ ವ್ಯಾಪಾರಿಗಳು ಸಾವನ್ನಪ್ಪಿದ್ದರು. ಈ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿದರು. ಅಲ್ಲದೇ ಕಾಂಪೌಂಡ್ ಕುಸಿತ ದುರಂತಕ್ಕೆ ಆಘಾತವನ್ನು ವ್ಯಕ್ತ ಪಡಿಸಿದರು. ಇಂದು ಬೆಂಗಳೂರು ನಗರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ನಗರದ ವಿವಿಧೆಡೆಯಲ್ಲಿ ಸುರಿದಂತ ಭಾರೀ ಮಳೆಯಿಂದಾಗಿ ಬಹುದೊಡ್ಡ ಅನಾಹುತವೇ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಶಿವಾಜಿನಗರ ಬಳಿಯಲ್ಲಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡು 8 ಮಂದಿ ಸಾವನ್ನಪ್ಪಿದ್ದರೇ, ನಾಲ್ಕಕ್ಕೂ ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಷಯವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೂಡಲೇ ಘಟನಾ ಸ್ಥಳಕ್ಕೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಸ್ಥಳದಲ್ಲಿದ್ದಂತ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಲ್ಲಿಂದ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು…

Read More

ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ನಗರಿ ಸಾಗರದಲ್ಲಿ ಯಕ್ಷಗಾನ ಪ್ರಿಯರಿಗಾಗಿ ಭರ್ಜರಿ ಪೌರಾಣಿಕ ಪ್ರದರ್ಶನವೊಂದನ್ನು ಆಯೋಜಿಸಲಾಗಿದೆ. ಜಿಲ್ಲೆಯ ಸಾಗರದ ನೆಹರು ಮೈದಾನದಲ್ಲಿ ಮೇ 2ರ ಶನಿವಾರ ರಾತ್ರಿ 9 ಗಂಟೆಯಿಂದ ಪ್ರಸಿದ್ಧ ಪೆರ್ಡೂರು ಮೇಳ ಹಾಗೂ ಅತಿಥಿ ಕಲಾವಿದರ ಸಾರಥ್ಯದಲ್ಲಿ ಯಕ್ಷಗಾನ ರಂಗೇರಲಿದೆ. ಪ್ರದರ್ಶನಗೊಳ್ಳಲಿರುವ ಪ್ರಸಂಗಗಳು: ಒಂದೇ ವೇದಿಕೆಯಲ್ಲಿ ನಾಲ್ಕು ಪ್ರಮುಖ ಪೌರಾಣಿಕ ಕಥಾನಕಗಳು ಅನಾವರಣಗೊಳ್ಳಲಿವೆ: ಕಚ ದೇವಯಾನಿ ಉತ್ತರನ ಪೌರುಷ ಮಾಗಧ ವಧೆ 4. ಸುಂದೋಪಸುಂದ ಕಲಾವಿದರ ದಂಡು: ಈ ಪ್ರದರ್ಶನದಲ್ಲಿ ಯಕ್ಷಗಾನ ರಂಗದ ಖ್ಯಾತನಾಮರು ಭಾಗವಹಿಸುತ್ತಿರುವುದು ವಿಶೇಷವಾಗಿದೆ. ಹಿಮ್ಮೇಳದಲ್ಲಿ: ರಾಘವೇಂದ್ರ ಆಚಾರ್ಯ ಜನ್ಸಾಲೆ ಹಾಗೂ ರಾಮಕೃಷ್ಣ ಹೆಗಡೆ ಹಿಲ್ಲೂರು ಅವರಂತಹ ದಿಗ್ಗಜ ಭಾಗವತರ ಜೊತೆಗೆ ಶಶಾಂಕ್, ಪ್ರಜ್ವಲ್, ಅನಿರುದ್ಧ ಸಾಥ್ ನೀಡಲಿದ್ದಾರೆ. ಮುಮ್ಮೇಳದಲ್ಲಿ: ನೀಲ್ಕೋಡು ಶಂಕರ ಹೆಗಡೆ, ಕಾರ್ತಿಕ್ ಚಿಟ್ಟಾಣಿ, ಚಂದ್ರಹಾಸ ಗೌಡ ಹೊಸಪಟ್ಟಣ, ಕಾರ್ತಿಕ್ ಕಣ್ಣಿ, ಪವನ್ ಸಾಣ್ಮನೆ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಅತಿಥಿ ಕಲಾವಿದರು: ಕೃಷ್ಣ ಯಾಜಿ, ವಿನಯ್ ಬೇರೊಳ್ಳಿ ಹಾಗೂ ಸುಧೀರ್…

Read More

ತಿರುವನಂತಪುರಂ: ದಕ್ಷಿಣ ಭಾರತದ ಕಮ್ಯುನಿಸ್ಟ್ ಭದ್ರಕೋಟೆ ಎಂದೇ ಕರೆಯಲ್ಪಡುವ ಕೇರಳದಲ್ಲಿ ಈ ಬಾರಿ ಆಡಳಿತ ವಿರೋಧಿ ಅಲೆ ಬೀಸುವ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ 10 ವರ್ಷಗಳಿಂದ ಅಧಿಕಾರದಿಂದ ದೂರವಿದ್ದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF), ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಎಲ್‌ಡಿಎಫ್ (LDF) ಆಡಳಿತವನ್ನು ಕೊನೆಗಾಣಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿವಿಧ ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಸಮೀಕ್ಷೆಗಳ ಅಂಕಿ-ಅಂಶಗಳು: ಕೇರಳದ ಒಟ್ಟು 140 ಸ್ಥಾನಗಳ ಪೈಕಿ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದ್ದು, ಪ್ರಮುಖ ಸಂಸ್ಥೆಗಳ ವರದಿ ಹೀಗಿದೆ: ಮ್ಯಾಟ್ರಿಜ್ (Matrize) ಸಮೀಕ್ಷೆ: UDF: 70-75 ಸ್ಥಾನಗಳು LDF: 60-65 ಸ್ಥಾನಗಳು NDA: 3-5 ಸ್ಥಾನಗಳು ಪೀಪಲ್ಸ್ ಪಲ್ಸ್ (People’s Pulse) ಸಮೀಕ್ಷೆ: UDF: 75-85 ಸ್ಥಾನಗಳು LDF: 55-65 ಸ್ಥಾನಗಳು NDA: 0-3 ಸ್ಥಾನಗಳು ಮುಖ್ಯಾಂಶಗಳು: ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೇಲುಗೈ: ಬಹುತೇಕ ಎಲ್ಲಾ ಸಮೀಕ್ಷೆಗಳು ಯುಡಿಎಫ್ ಮೈತ್ರಿಕೂಟವು ಬಹುಮತದ ಗಡಿಯನ್ನು ದಾಟಲಿದೆ ಅಥವಾ ಅದರ…

Read More

ಶಿವಮೊಗ್ಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಾಗರ ಶಾಖೆಯ ಚುನಾವಣಾ ಕಣ ರಂಗೇರಿದ್ದು, ಹಾಲಿ ಅಧ್ಯಕ್ಷ ಮಾಲ್ತೇಶ್ ನೇತೃತ್ವದ ‘ಸದ್ಗುರು ಶಿಕ್ಷಕರ ತಂಡ’ ಭರ್ಜರಿ ಪ್ರಚಾರ ನಡೆಸುತ್ತಿದೆ. ಮೇ 1ರಂದು ನಡೆಯಲಿರುವ ಈ ಚುನಾವಣೆಯಲ್ಲಿ ವೃತ್ತಿನಿಷ್ಠೆ ಮತ್ತು ಶಿಕ್ಷಕ ಸ್ನೇಹಿ ಆಡಳಿತದ ಭರವಸೆಯೊಂದಿಗೆ ಮಾಲ್ತೇಶ್ ತಂಡ ಮತದಾರರ ಮನ ಗೆಲ್ಲಲು ಮುಂದಾಗಿದೆ. ಪ್ರಮುಖ ಭರವಸೆಗಳು ಮತ್ತು ಸಾಧನೆಗಳು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಲ್ತೇಶ್ ಅವರು ತಮ್ಮ ತಂಡದ ಮುಂದಿರುವ ಗುರಿಗಳನ್ನು ಹಂಚಿಕೊಂಡಿದ್ದಾರೆ: ಗುರುಭವನ ನಿರ್ಮಾಣ: ಶಿಕ್ಷಕರಿಂದ ಯಾವುದೇ ಹಣ ಸಂಗ್ರಹಿಸದೆ, ಕೇವಲ ದಾನಿಗಳ ಸಹಕಾರದೊಂದಿಗೆ ಸಾಗರದಲ್ಲಿ ಭವ್ಯ ‘ಗುರುಭವನ’ ನಿರ್ಮಿಸುವುದು ಈ ತಂಡದ ಪ್ರಮುಖ ಉದ್ದೇಶವಾಗಿದೆ. ಹೋಬಳಿ ಮಟ್ಟದ ಹೆಲ್ಪ್‌ಡೆಸ್ಕ್: ಸಾಗರದ ‘ಸದ್ಗುರು ಕಾರ್ನರ್’ ಮಾದರಿಯಲ್ಲೇ ಪ್ರತಿ ಹೋಬಳಿಯಲ್ಲೂ ಶಿಕ್ಷಕರಿಗೆ ನೆರವಾಗಲು ಹೆಲ್ಪ್‌ಡೆಸ್ಕ್ ಸ್ಥಾಪಿಸುವ ಯೋಜನೆಯಿದೆ. ಸದ್ಗುರು ಕಾರ್ನರ್ ಯಶಸ್ಸು: ಕಳೆದ 18 ತಿಂಗಳ ಅವಧಿಯಲ್ಲಿ ಟ್ಯಾಕ್ಸ್ ಫಾರ್ಮ್‌ಗಳು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ‘ಸದ್ಗುರು ಕಾರ್ನರ್’ ಮೂಲಕ ನೀಡಿದ…

Read More

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಘಟನೆಯ ವಿವರ: ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿತ್ತು. ಅವಶೇಷಗಳಡಿ ಸಿಲುಕಿದವರು: ಪ್ರಾಥಮಿಕ ವರದಿಗಳ ಪ್ರಕಾರ, ಗೋಡೆ ಕುಸಿದಾಗ ಅದರ ಅಡಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ವಯಸ್ಕರು ಸಿಲುಕಿದ್ದರು ಎಂದು ಹೇಳಲಾಗುತ್ತು. ಅವರೆಲ್ಲರೂ ಬೀದಿ ಬದಿಯ ವ್ಯಾಪಾರಿಗಳೆಂದು ತಿಳಿದು ಬಂದಿತ್ತು. ಈ ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು, ಮತ್ತೋರ್ವನ ಸ್ಥಿತಿ ಗಂಂಭೀರವಾಗಿತ್ತು. ಅವರನ್ನು ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು,…

Read More

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾಗುತ್ತಿದ್ದಂತೆಯೇ ಹೊರಬಿದ್ದಿರುವ ವಿವಿಧ ಸಂಸ್ಥೆಗಳ ಎಕ್ಸಿಟ್ ಪೋಲ್ ಸಮೀಕ್ಷೆಗಳು ರಾಜ್ಯದಲ್ಲಿ ಮಹತ್ವದ ರಾಜಕೀಯ ಬದಲಾವಣೆಯ ಮುನ್ಸೂಚನೆ ನೀಡಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಗೆ ಹಿನ್ನಡೆಯಾಗಲಿದ್ದು, ಭಾರತೀಯ ಜನತಾ ಪಾರ್ಟಿ (BJP) ಮೊದಲ ಬಾರಿಗೆ ಅಧಿಕಾರದ ಗದ್ದುಗೆ ಏರಲಿದೆ ಎಂದು ಭವಿಷ್ಯ ನುಡಿದಿವೆ. ಒಟ್ಟು 294 ಸ್ಥಾನಗಳ ಬಂಗಾಳ ವಿಧಾನಸಭೆಯಲ್ಲಿ ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದ್ದು, ಪ್ರಮುಖ ಸಮೀಕ್ಷೆಗಳ ಅಂಕಿ-ಅಂಶಗಳು ಈ ಕೆಳಗಿನಂತಿವೆ: ವಿವಿಧ ಸಮೀಕ್ಷೆಗಳ ಭವಿಷ್ಯ: ಸಮೀಕ್ಷಾ ಸಂಸ್ಥೆ ಬಿಜೆಪಿ (BJP) ಟಿಎಂಸಿ (TMC) ಇತರೆ ಪ್ರಜಾ ಪೋಲ್ (Praja Poll) 178-208 85-110 0-5 ಪೋಲ್ ಡೈರಿ (Poll Diary) 142-171 99-127 5-9 ಚಾಣಕ್ಯ ಸ್ಟ್ರಾಟಜೀಸ್ 150-160 130-140 6-10 ಮ್ಯಾಟ್ರಿಜ್ (Matrize) 146-161 125-140 6-10 ಸಮೀಕ್ಷೆಗಳ ಮುಖ್ಯಾಂಶಗಳು: ಬಿಜೆಪಿ ಅಬ್ಬರ: ‘ಪ್ರಜಾ ಪೋಲ್’ ಸಮೀಕ್ಷೆಯು ಬಿಜೆಪಿಗೆ ಗರಿಷ್ಠ 208 ಸ್ಥಾನಗಳನ್ನು…

Read More

ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡ ಬೆನ್ನಲ್ಲೇ ಹೊರಬಿದ್ದಿರುವ ‘ಆಕ್ಸಿಸ್ ಮೈ ಇಂಡಿಯಾ’ ಎಕ್ಸಿಟ್ ಪೋಲ್ ಸಮೀಕ್ಷೆಗಳು ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವದಲ್ಲಿ ಆಡಳಿತಾರೂಢ ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಸೀಟುಗಳ ಹಂಚಿಕೆ ಭವಿಷ್ಯ: ಒಟ್ಟು 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಸಮೀಕ್ಷೆಯ ಪ್ರಕಾರ ರಾಜಕೀಯ ಪಕ್ಷಗಳ ಬಲಾಬಲ ಹೀಗಿರಲಿದೆ: ಎನ್‌ಡಿಎ (NDA): 88 ರಿಂದ 100 ಸ್ಥಾನಗಳು ಕಾಂಗ್ರೆಸ್: 24 ರಿಂದ 36 ಸ್ಥಾನಗಳು ಈ ಅಂಕಿ-ಅಂಶಗಳನ್ನು ಗಮನಿಸಿದರೆ ಬಿಜೆಪಿ ಮೈತ್ರಿಕೂಟವು ಬಹುಮತದ ಗಡಿಗಿಂತ ಸಾಕಷ್ಟು ಮುಂದಿದ್ದು, ಕಾಂಗ್ರೆಸ್ ಮತ್ತೊಮ್ಮೆ ಹೀನಾಯ ಸೋಲು ಅನುಭವಿಸಿ ಎರಡನೇ ಸ್ಥಾನಕ್ಕೆ ತೃಪ್ತಿಪಡುವ ಸಾಧ್ಯತೆಯಿದೆ. ಮತ ಹಂಚಿಕೆ ಪ್ರಮಾಣ: ಶೇಕಡಾವಾರು ಮತ ಹಂಚಿಕೆಯಲ್ಲೂ ಎನ್‌ಡಿಎ ಮೇಲುಗೈ ಸಾಧಿಸಲಿದೆ ಎಂದು…

Read More