Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ನಿಮ್ಮ ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವುದು ತೊಂದರೆಯಿಲ್ಲದ ಆದಾಯ ತೆರಿಗೆ ಮರುಪಾವತಿ ಮತ್ತು ತಡೆರಹಿತ ಹಣಕಾಸು ವಹಿವಾಟುಗಳಿಗೆ ಅತ್ಯಗತ್ಯ. ಆದಾಯ ತೆರಿಗೆ ಇಲಾಖೆಯು ಈ ಸಂಪರ್ಕದ ಮಹತ್ವವನ್ನು ಒತ್ತಿಹೇಳುತ್ತಿರುವುದರಿಂದ, ಭಾರತದಾದ್ಯಂತ ತೆರಿಗೆದಾರರು ತಮ್ಮ ಬ್ಯಾಂಕ್ ಖಾತೆಗಳಿಗೆ PAN ಅನ್ನು ಲಿಂಕ್ ಮಾಡಲು ಸರಳ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅದನ್ನು ಪರಿಣಾಮಕಾರಿಯಾಗಿ ಮಾಡಲು ನಿಮಗೆ ಸಹಾಯ ಮಾಡಲು ಸ್ಪಷ್ಟವಾದ, ಹಂತ-ಹಂತದ ಮಾರ್ಗದರ್ಶಿ ಇಲ್ಲಿದೆ. ನಿಮ್ಮ PAN ಅನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದು ಏಕೆ ಮುಖ್ಯ ನಿಮ್ಮ PAN ಅನ್ನು ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡುವುದರಿಂದ ಆದಾಯ ತೆರಿಗೆ ಇಲಾಖೆಯು ನಿಮ್ಮ ಖಾತೆಗೆ ನೇರವಾಗಿ ಮರುಪಾವತಿಗಳನ್ನು ಪ್ರಕ್ರಿಯೆಗೊಳಿಸಲು ಅನುಮತಿಸುತ್ತದೆ. ವಿಳಂಬವನ್ನು ಕಡಿಮೆ ಮಾಡುತ್ತದೆ ಮತ್ತು ದೋಷಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಹಣಕಾಸಿನ ಟ್ರ್ಯಾಕಿಂಗ್ನಲ್ಲಿ ಸಹಾಯ ಮಾಡುತ್ತದೆ. ತೆರಿಗೆ ಕ್ರೆಡಿಟ್ಗಳು, ಹೂಡಿಕೆಗಳು ಮತ್ತು ಇತರ ಆದಾಯ-ಸಂಬಂಧಿತ ವಹಿವಾಟುಗಳನ್ನು…
ಬೆಂಗಳೂರು; ರಾಜ್ಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಏನೆಲ್ಲಾ ಕಾಮಗಾರಿ ಕೈಗೊಳ್ಳಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹಾಗಾದ್ರೇ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಮುಂದಿದೆ ಓದಿ. ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ…
ಬೆಂಗಳೂರು; ನಾಯಿ, ಹಾವು ಅಥವಾ ಇತರೆ ಪ್ರಾಣಿಗಳ ದಾಳಿ ಪ್ರಕರಣದಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೇ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ಸರ್ವೋಚ್ಚ ನ್ಯಾಯಾಲಯವು ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ ಈ ನಿರ್ದೇಶನಗಳನ್ನು ನೀಡಿದೆ. ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಮುಂಗಡ ಹಣಕ್ಕೆ ಒತ್ತಾಯಿಸದೆ ಚಿಕಿತ್ಸೆ ನೀಡಬೇಕು ಎಂದಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ಇಮ್ಯುನೊಗ್ಲೋಬ್ಯುಲಿನ್ನ ದಾಸ್ತಾನು (Stock) ಇರಿಸಿಕೊಳ್ಳಬೇಕು ಎಂಬುದಾಗಿ ತಿಳಿಸಿದೆ. ರೇಬೀಸ್ಅನ್ನು ರಾಜ್ಯದಲ್ಲಿ ಅಧಿಸೂಚಿಸಲಾದ ರೋಗವೆಂದು ಘೋಷಿಸಿದ್ದು, ನಾಯಿ ಅಥವಾ ಇತರೆ ಯಾವುದೇ ಪ್ರಾಣಿ ಕಡಿತದ ಪ್ರಕರಣಗಳು ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ನಿಯಮದಂತೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ಉಲ್ಲೇಖಿಸಿದಂತೆ, ಈಕ್ವೈನ್ ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಮತ್ತು ಆ್ಯಂಟಿ-ರೇಬೀಸ್ ಲಸಿಕೆಯನ್ನು ಹಾಗೂ ಅಗತ್ಯ…
ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ 4,056 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1992194310377238935 https://kannadanewsnow.com/kannada/here-is-the-list-of-works-that-can-be-undertaken-under-the-mlas-local-area-development-scheme/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/
ಬೆಂಗಳೂರು: ಜೆಡಿಎಸ್ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಬೆಳ್ಳಿನಾಣ್ಯ ವಾಟ್ಸಪ್ ಲೈನ್ ನಂಬರ್ ಅನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಲೋಕಾರ್ಪಣೆ ಮಾಡಿದರು. ರಾಷ್ಟ್ರೀಯ ಮಂಡಳಿ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ನಂತರ ಶನಿವಾರ ನಡೆದ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಹೆಚ್.ಡಿ. ದೇವೇಗೌಡರ ಜತೆಗೆ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ನಾಯಕರು, ಜಿಲ್ಲಾಧ್ಯಕ್ಷರು, ವಿವಿಧ ರಾಜ್ಯ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಜತ ಮಹೋತ್ಸವದ ಮುಖ್ಯ ಆಕರ್ಷಣೆಯಾಗಿ ಪಕ್ಷದ ಚಿನ್ಹೆ ತೆನೆಹೊತ್ತ ರೈತ ಮಹಿಳೆ, ಹೆಚ್.ಡಿ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಚಿತ್ರಗಳು ಇರುವ ಬೆಳ್ಳಿ ನಾಣ್ಯವನ್ನು ಲೋಕಾರ್ಪಣೆ ಮಾಡಲಾಯಿತು. ಬಳಿಕ ಮಾಜಿ ಪ್ರಧಾನಿಗಳು ವಾಟ್ಸಪ್ ಲೈನ್ ನಂಬರ್ 9964002028 ಬಿಡುಗಡೆ ಮಾಡಿದರು. ಎರಡು ನಿರ್ಣಯಗಳ ಅಂಗೀಕಾರ: ಜೆಡಿಎಸ್…
ಬೆಂಗಳೂರು: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ದಾಖಲಾಗಿದ್ದಂತ ಜಾತಿ ನಿಂದನೆ ಪ್ರಕರಣದಲ್ಲಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ನಡೆಸಿದರು. ಒಂದು ಲಕ್ಷ ರೂಪಾಯಿ ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂಬ ಷರತ್ತು ವಿಧಿಸಿ ನಿರೀಕ್ಷೆಣಾ ಜಾಮೀನು ನೀಡಿದೆ. ಅಂದಹಾಗೇ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ರಾಜಶೇಖರ ತಳವಾರ ಎಂಬುವರು ದಾಖಲಿಸಿದ್ದಂತ ದೂರನ್ನು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಿ ರಮೇಶ್ ಕತ್ತಿಗೆ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/ https://kannadanewsnow.com/kannada/good-news-for-the-rural-people-of-the-state-fishing-will-now-be-allowed-in-the-lakes/
ಮಂಡ್ಯ : ಮದ್ದೂರು ನಗರದ ದೊಡ್ಡಿ ಬೀದಿಯ ಗ್ಯಾಸ್ ಚಂದ್ರು ಅವರ ಮನೆಯಲ್ಲಿ ನಡೆದಿದ್ದಂತಹ ಲಕ್ಷಾಂತರ ರೂಪಾಯಿ ಚಿನ್ನಾಭರಣಗಳ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಾಜಿ ಪುರಸಭಾ ಅಧ್ಯಕ್ಷ ಎಂ.ಕೆ.ಮರೀಗೌಡನನ್ನು ಬಂಧಿಸಿ ಸುಮಾರು 15 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 26-8-25 ರಂದು ಸಂಜೆ ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಅವರ ಮನೆಗೆ ಮುಸುಕುಧಾರಿಯೊಬ್ಬ ನುಗ್ಗಿ ಅವರ ಪತ್ನಿ ಸುಶೀಲಮ್ಮ ಅವರನ್ನು ಬೆದರಿಸಿ ಮೈ ಮೇಲಿದ್ದ ವಜ್ರದ ಓಲೆ, ಬಳೆ ಸೇರಿದಂತೆ ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಕೃತ್ಯಕ್ಕೆ ಸಂಬಂಧಿಸಿದಂತೆ ಪೋಲೀಸರು ತನಿಖೆ ಕೈಗೊಂಡಿದ್ದ ವೇಳೆಗೆ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ಹಿಂದೂ ಮುಸ್ಲಿಂ ಗಲಭೆ ನಡೆದ ಹಿನ್ನೆಲೆಯಲ್ಲಿ ಕೆಲ ಪೋಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಪರಿಣಾಮ…
ಮಂಡ್ಯ : ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಪ್ರತಿ ಗ್ರಾಮಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊತ್ತನಹಳ್ಳಿ, ಹೊಸಕೆರೆ, ನಿಲುವಾಗಿಲು, ಸೀನಪ್ಪನದೊಡ್ಡಿ ಹಾಗೂ ಎನ್.ಕೋಡಿಹಳ್ಳಿ ಗ್ರಾಮಗಳಲ್ಲಿ ಅಂದಾಜು 2.50 ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಅರಿವಿಟ್ಟುಕೊಂಡು ಹಗಲು-ರಾತ್ರಿ ಎನ್ನದೇ ಅಭಿವೃದ್ಧಿ ಕಾರ್ಯಗಳಿಗೆ ಮುಂದಾಗಿದ್ದೇನೆ. ಯಾರು ಕೂಡ ನನಗೆ ಅರ್ಜಿ ಕೊಟ್ಟು ನಮ್ಮ ಗ್ರಾಮಗಳ ಅಭಿವೃದ್ಧಿ ಮಾಡಿ ಎಂದು ಕೇಳಿಲ್ಲ. ಆದರೆ ಕ್ಷೇತ್ರದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿ 1500 ಕೋಟಿಗೂ ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ಜನ ನನ್ನ ಮೇಲೆ ಪ್ರೀತಿ ವಿಶ್ವಾಸ ಅಭಿಮಾನ ಇಟ್ಟಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಸದಾ ಸಿದ್ಧನಿದ್ದೇನೆ ಎಂದರು. ರಾಜಕಾರಣ ಶಾಶ್ವತವಲ್ಲ ಅಭಿವೃದ್ಧಿ ಕಾರ್ಯಗಳೇ…
ಮುಂಬೈ: ನಗರದಲ್ಲಿ ರಾಸಾಯನಿಕ ಸೋರಿಕೆಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಅಸ್ವಸ್ಥಗೊಂಡಿರುವಂತ ಘಟನೆ ನಡೆದಿದೆ. ಮುಂಬೈ ನಗರದ ಮೂರು ಅಂತಸ್ಥಿನ ಕಟ್ಟಡದಲ್ಲಿ ರಾಸಾಯನಿಕ ಸೋರಿಕೆಯಾಗಿ ಘೋರ ದುರಂತವೇ ಸಂಭವಿಸಿದೆ. ರಾಸಾಯನಿಕ ಸೋರಿಕೆಯಿಂದಾಗಿ ವಿಷಾನಿಲ ಸೇವಿಸಿದಂತ ಓರ್ವ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಇನ್ನೂ ಅಸ್ವಸ್ಥಗೊಂಡಿರುವಂತ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-the-rural-people-of-the-state-fishing-will-now-be-allowed-in-the-lakes/ https://kannadanewsnow.com/kannada/private-hospitals-will-have-their-licenses-revoked-if-they-demand-advance-payment-for-this-treatment-state-government-warns/
ಮಂಡ್ಯ : ವಿಶೇಷ ಚೇತನ ಮಕ್ಕಳೆಂದು ಪೋಷಕರು ಕೀಳರಿಮೆ ತೋರಬೇಡಿ. ವಿಶೇಷ ಚೇತನ ಮಕ್ಕಳು ಇತರೆ ಮಕ್ಕಳಿಗಿಂತ ವಿಶಿಷ್ಟ ಬುದ್ದಿಶಕ್ತಿಯನ್ನು ಹೊಂದಿದ್ದು, ಅವರಿಗೆ ಆತ್ಮಸ್ಥೈರ್ಯ ಮತ್ತು ಸರ್ಕಾರದ ಸವಲತ್ತುಗಳನ್ನು ಒದಗಿಸಿದರೆ ಇತರರಂತೆ ಸಕ್ರಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆಂದು ಶಾಸಕ ಕೆ.ಎಂ.ಉದಯ್ ಆತ್ಮಸ್ಥೈರ್ಯ ತುಂಬಿದರು. ಮದ್ದೂರು ನಗರದ ಕಸ್ತೂರಬಾ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಹಾಗೂ ಹಲವು ಸ್ವಯಂ ಸೇವಾ ಸಂಸ್ಥೆಗಳು ವಿಶೇಷ ಚೇತನ ಮಕ್ಕಳಿಗೆ ನಾನಾ ರೀತಿಯ ನೆರವು ನೀಡುತ್ತಿದ್ದು ಶಾಲೆಗಳಿಗೆ ದಾಖಲಾಗುವ ತಮ್ಮ ಮಗುವಿನ ಸಂಪೂರ್ಣ ವಿವರವನ್ನು ಶಿಕ್ಷಕರಿಗೆ ತಿಳಿಸಿ ಇಂಥಹ ಶಿಬಿರಗಳಲ್ಲಿ ಅವರಿಗೆ ದೊರೆಯಬಹುದಾದ ಸಾಧನ ಸಲಕರಣೆಗಳು ಹಾಗೂ ಹೆಚ್ಚಿನ ಚಿಕಿತ್ಸೆ ಸೇರಿದಂತೆ ಅಗತ್ಯ ನೆರವನ್ನು ಪಡೆಯಬಹುದಾಗಿದೆ. ಪೋಷಕರು ಇಂಥಹ ಮಕ್ಕಳನ್ನು ನಿರ್ಲಕ್ಷಿಸದೇ ದೇವರು ಕೊಟ್ಟ ವರ ಎಂದು ಭಾವಿಸಿ…














