Author: kannadanewsnow09

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವಂತ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೂ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು, ತಜ್ಞವೈದ್ಯರು, ಕಾರ್ಮಿಕ…

Read More

ಮಂಡ್ಯ : ಅಯ್ಯಪ್ಪ ಮಾಲಾದಾರಿಗಳ ಮಿನಿ ಬಸ್ ಹಾಗೂ ಗ್ಯಾಸ್ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಚಾಲಕ ಹಾಗೂ ಇಬ್ಬರು ಮಾಲಾದಾರಿಗಳು ಗಾಯಗೊಂಡಿರುವ ಘಟನೆ ಮದ್ದೂರು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎಲಿವೇಟೆಡ್ ರಸ್ತೆಯಲ್ಲಿ ಗುರುವಾರ ಸಂಜೆ ಜರುಗಿದೆ. ಬೆಂಗಳೂರಿನ ಕುಂಬಳಗೂಡುವಿನಿಂದ 22 ಮಂದಿ ಖಾಸಗಿ ಮಿನಿ ಬಸ್ ನಲ್ಲಿ ಶಬರಿಮಲೆ ಅಯ್ಯಪ್ಪ ಯಾತ್ರೆಗೆ ತೆರಳುತ್ತಿದ್ದಾಗ ಮದ್ದೂರು ನಗರದ ಕೊಲ್ಲಿ ವೃತ್ತದ ಮೇಲ್ಬಾಗದ ಎಲಿವೇಟೆಡ್ ರಸ್ತೆಯಲ್ಲಿ ಬಸ್ ಪಂಚರ್ ಆಗಿದೆ. ಬಸ್ ನ ಟೈರ್ ಅನ್ನು ಬದಲಾಯಿಸಲು ಚಾಲಕನಿಗೆ ಇಬ್ಬರು ಮಾಲಾದಾರಿಗಳು ಸಹಾಯ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ಗ್ಯಾಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಮತ್ತು ಇಬ್ಬರು ಮಾಲಾದಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಳಿದವರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮದ್ದೂರು ಸಂಚಾರ ಪೊಲೀಸರು ವಾಹನ ಸವಾರರ…

Read More

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದ್ದು, ಈವರೆಗೆ 180 ಜನ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಆಡುಗೋಡಿ ಸಿಎಆರ್ ಕವಾಯತು ಮೈದಾನದಲ್ಲಿ ಇಂದು ನಡೆದ ‘ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು. ಕ್ರೀಡಾ ಮೀಸಲಾತಿಯ ಸದ್ಬಳಕೆ ಮಾಡಿಕೊಂಡು 180 ಜನ ಪಿಎಸ್‌ಐ, ಪೇದೆ ಹುದ್ದೆಗಳಿಗೆ ನೇಮಕಾತಿ ಹೊಂದಿದ್ದಾರೆ‌. ಅದೇರೀತಿ, ಪೊಲೀಸ್ ಕುಟುಂಬದಿಂದ ಬಂದ ಮಕ್ಕಳಿಗೆ ಸಿಇಟಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು. ಕ್ರೀಡೆ ದೈಹಿಕವಾಗಿ ಮಾತ್ರವಲ್ಲದೇ, ಮಾನಸಿಕವಾಗಿಯೂ ನಮ್ಮನ್ನು ಹೆಚ್ಚು ಸದೃಡಗೊಳಿಸುತ್ತದೆ. ನಮ್ಮ ಜೀವನದ ಅನೇಕ ಸಂದರ್ಭಗಳಲ್ಲಿ ಸೋಲು-ಗೆಲುವುಗಳ ಅನುಭವಗಳು ಎದುರಾಗುತ್ತವೆ. ಸೋತಾಗ ನಿರಾಶೆಯಾಗುತ್ತದೆ. ಕ್ರೀಡೆಗಳು ಆತ್ಮಸ್ಥೈರ್ಯ ಹೆಚ್ಚಿಸುತ್ತದೆ. ಕರ್ನಾಟಕ ಪೊಲೀಸ್ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅನೇಕ ಸಂದರ್ಭಗಳಲ್ಲಿ ಸದನದ…

Read More

ಬೆಂಗಳೂರು : ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ (ಕೆವಿಟಿಎಸ್‌ಡಿಸಿ) ನಿಗಮ ಈಗ ಜರ್ಮನ್‌ ಭಾಷಾ ಕಲಿಕಾ ಕೇಂದ್ರವನ್ನು ಆರಂಭಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಡೊಯಿಚೆ ಫಾಕ್‌ಕ್ರಾಪ್ಟ್‌ ಏಜೆಂಟುರ್‌ ಫರ್‌ ಎಸುಂಡ್‌ಟಾಯ್ಟ್‌ ಮತ್ತು ಫ್ಲೆಗೆಬುರುಫ್‌ ಜಿಎಂಬಿಹೆಚ್ (ಡಿಇಎಫ್‌ಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಜರ್ಮನಿ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದ ಟೆಲ್ಕ್‌ನ ಗ್ಲೋಬಲ್ ಬ್ಯುಸಿನೆಸ್ ನಿರ್ದೇಶಕ ಬ್ರೂನೋ ಕಾರ್ಲೆಸ್ಸೊ ಒಪ್ಪಂದಕ್ಕೆ ಸಹಿ ಹಾಕಿದರು. ಆರೋಗ್ಯ ಕ್ಷೇತ್ರದಲ್ಲಿ ಭಾರತ-ಜರ್ಮನಿ ಸಹಕಾರವನ್ನು ಬಲಪಡಿಸಲು ಪೀಣ್ಯದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ (ಕೆಜಿಟಿಟಿಐ) ಹೊಸ ಜರ್ಮನಿ ಭಾಷಾ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಈಗಾಗಲೇ ಆಕಾಂಕ್ಷಿತ ಅಭ್ಯರ್ಥಿಗಳ ಆಯ್ಕೆ ಮಾಡಲು ಆರಂಭಿಸಿದೆ. ಮುಖ್ಯವಾಗಿ ನರ್ಸ್‌ಗಳಿಗೆ ವೃತ್ತಿಪರತೆ, ವಲಸೆ ಹಾಗೂ ಇತರೆ ವಿಷಯಗಳಿಗೆ…

Read More

ಬೆಂಗಳೂರು: ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿಯಾಗಿದೆ. ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹುಳಿಮಾವಿನ ಸರಸ್ವತಿಪುರಂನಲ್ಲಿ ಹದಗೆಟ್ಟ ರಸ್ತೆಯಿಂದಾಗಿ ಬೈಕ್ ನಿಂದ ಬಿದ್ದು ಗೋಕಾಕ್ ನ ಶಾಂತಮ್ಮ(46) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಸ್ನೇಹಿತೆಯ ಜೊತೆಯಲ್ಲಿ ಬೈಕ್ ನಲ್ಲಿ ಶಾಂತಮ್ಮ ತೆರಳುತ್ತಿದ್ದರು. ಈ ವೇಳೆಯಲ್ಲಿ ಹದಗೆಟ್ಟ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದಂತ ಟಿಪ್ಪರ್ ಹರಿದು ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಳಿಮಾವು ಸಂಚಾರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/kea-has-announced-the-schedule-for-the-competitive-examination-for-the-recruitment-of-various-posts/ https://kannadanewsnow.com/kannada/breaking-ibps-clerk-prelims-result-released-download-scorecard-like-this/

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಪೊಲೀಸರ ಕ್ಯಾಪ್ ಬದಲಾವಣೆ ಮಾಡಲಾಗಿತ್ತು. ಈ ಬದಲಾದಂತ ಹೊಸ ಬ್ಲೂ ಕ್ಯಾಪ್ ಅನ್ನು ಶಿವಮೊಗ್ಗ ಜಿಲ್ಲೆಯ ಕೆ ಎಸ್ ಆರ್ ಪಿ ಪೊಲೀಸರಿಗೆ ಇಂದು ವಿತರಣೆ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರದ ಆದೇಶದಂತೆ ದಿ: 20-11-2025 ರಂದು 8 ನೇ ಪಡೆ, ಕೆ.ಎಸ್.ಆರ್.ಪಿ, ಮಾಚೇನಹಳ್ಳಿ, ಶಿವಮೊಗ್ಗ ಘಟಕದ 500 ಆರ್‌ಹೆಚ್‌ಸಿ ಹಾಗೂ ಆರ್‌ಪಿಸಿ ರವರಿಗೆ ಕೆಎಸ್‌ಆರ್‌ಪಿ ಕಮಾಂಡೆಂಟ್ ಆದ ಎಸ್. ಯುವಕುಮಾರ್‌ರವರು ಹೊಸ ನೇವಿ ಬ್ಲೂ ಪೀಕ್ ಕ್ಯಾಪ್‌ನ್ನು ಎಲ್ಲಾ ಸಿಬ್ಬಂದಿಗಳಿಗೂ ವಿತರಿಸಿದರು. ಈ ಸಮಾರಂಭದಲ್ಲಿ ಡೆಪ್ಯೂಟಿ ಕಮಾಂಡೆಂಟ್ ಎಸ್. ಚಂದ್ರಶೇಖರ್ ಹಾಗೂ ಸಹಾಯಕ ಕಮಾಂಡೆಂಟ್ ರಾಚಪ್ಪ ಬಿ. ಕಾಜಗಾರ, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/written-examination-for-recruitment-of-973-vacant-posts-in-various-departments-and-corporations-from-december-20-kea-information/

Read More

ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಹೆಚ್ ಕೆ) ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ ಕೆ ಹಾಗೂ ನಾನ್- ಹೆಚ್ ಕೆ – ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.…

Read More

ಬೆಂಗಳೂರು : “ಸಿಎಂ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತನ್ನು ತಪ್ಪುವವರಲ್ಲ. ಅವರು ಯಾರಿಗೆ ಮಾತು ಕೊಟ್ಟರೂ ತಪ್ಪುವುದಿಲ್ಲ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಅವರನ್ನು ಭೇಟಿ ಮಾಡಿದಾಗ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿದಿರಾ ಎಂದು ಕೇಳಿದಾಗ, “ಸಿಎಂ ಅವರ ಬಳಿ ಅಧಿಕಾರ ಹಸ್ತಾಂತರ ವಿಚಾರ ಚರ್ಚೆ ಮಾಡಿಲ್ಲ. ಅಷ್ಟು ದೊಡ್ಡವನೂ ನಾನಲ್ಲ. ಅವರು ಹಿರಿಯ ನಾಯಕರು. ಅವರಿಗೆ ತಮ್ಮದೇ ಆದ ಜವಾಬ್ದಾರಿ ಇದೆ. ಕರ್ನಾಟಕದ ಜನರಿಗೆ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದಾರೆ. ಈ ಸರ್ಕಾರದಲ್ಲೂ ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದಾರೋ ಅದರಂತೆ ನಡೆಯುತ್ತಿದ್ದಾರೆ” ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿರುವ ಬಗ್ಗೆ ಕೇಳಿದಾಗ, “ಕರ್ನಾಟಕದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿಗೆ ಎರಡೂವರೆ ವರ್ಷ ತುಂಬಿದೆ. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳನ್ನು…

Read More

ಬೆಂಗಳೂರು: ಇಲ್ಲಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡು ಚಿರತೆಯೊಂದು ಸಾವನ್ನಪ್ಪಿದೆ. ಬೆಂಗಳೂರಿನ ಬನ್ನೇರುಘಟ್ಟ ಉದ್ಯಾನವನದಲ್ಲಿದ್ದಂತ ಗಂಡು ಚಿರತೆಯೊಂದು ಅನಾರೋಗ್ಯಕ್ಕೆ ಒಳಗಾಗಿತ್ತು. ಇಂದು ಅನಾರೋಗ್ಯದಿಂದಾಗಿ ಗಂಡು ಚಿರತೆ ಸಾವನ್ನಪ್ಪಿದೆ. 2023ರಲ್ಲಿ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಿಂದ ರಕ್ಷಣೆ 3 ತಿಂಗಳ ಮರಿ ಇದ್ದಾಗ ರಕ್ಷಣೆ ಮಾಡಿ ಕರೆತರಲಾಗಿತ್ತು. ಅ.30ರಿಂದ ಆಹಾರ ಸೇವನೆ ಕಡಿಮೆಯನ್ನು ಚಿರತೆ ಮಾಡಿತ್ತು. ತೀವ್ರ ಜ್ವರದಿಂದ ಬಳಲುತ್ತಿದ್ದ ಗಂಡು ಚಿರತೆ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/suggest-solutions-to-bengalurus-problems-and-win-a-prize-of-rs-25-lakhs/ https://kannadanewsnow.com/kannada/alert-using-these-passwords-could-lead-to-your-data-leak-be-careful/

Read More