Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಹಸುವನ್ನು (ಗೋವು) ದೇಶದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳು ಬೃಹತ್ ಧರಣಿ ನಡೆಸಿವೆ. ತಾಲೂಕಿನ ಅಂಜುಮನ್ ಕಮಿಟಿ ಹಾಗೂ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಧರಣಿಯಲ್ಲಿ ಪಾಲ್ಗೊಂಡಿದ್ದ ನೂರಾರು ಮುಸ್ಲಿಂ ಮುಖಂಡರು ಹಾಗೂ ಸಾರ್ವಜನಿಕರು, “ಭಾರತ್ ಮಾತಾ ಕೀ ಜೈ” ಮತ್ತು “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಗ್ರಹವನ್ನು ಸರ್ಕಾರದ ಮುಂದಿಟ್ಟರು. ಮುಸ್ಲಿಂ ಸಮಾಜದ ವಿವಿಧ ಒಕ್ಕೂಟಗಳು ಮತ್ತು ತಾಲೂಕು ಮುಸ್ಲಿಂ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದ್ದು, ದೇಶದಲ್ಲಿ ಗೋವಿಗೆ ಇರುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗೌರವಿಸಿ ತಕ್ಷಣವೇ ಕೇಂದ್ರ ಸರ್ಕಾರ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಅಧಿಕೃತವಾಗಿ ಘೋಷಿಸಬೇಕು ಎಂದು ಧರಣಿಯ ನೇತೃತ್ವ ವಹಿಸಿದ್ದ ಮುಖಂಡರು ಒತ್ತಾಯಿಸಿದ್ದಾರೆ. https://kannadanewsnow.com/kannada/unique-achievement-in-forest-protection-letter-of-appreciation-from-the-department-to-drfo-mailarappa-of-sagars-biligaru-branch/
ಶಿವಮೊಗ್ಗ: ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆ ಎಂಬುದು ಕೇವಲ ಒಂದು ವೃತ್ತಿಯಲ್ಲ; ಅದೊಂದು ನಿರಂತರ ಸವಾಲು ಹಾಗೂ ಬದ್ಧತೆಯ ಕೆಲಸ. ಕಾಡಿನ ಒತ್ತುವರಿ ತಡೆಯುವುದು, ವನ್ಯಜೀವಿಗಳ ಬೇಟೆಯನ್ನು ಹತ್ತಿಕ್ಕುವುದು ಮತ್ತು ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸುವುದು ಅಷ್ಟು ಸುಲಭದ ಮಾತಲ್ಲ. ಇಂತಹ ಕಠಿಣ ಸವಾಲುಗಳ ಮಧ್ಯೆಯೂ ಧೃತಿಗೆಡದೆ, ಅತ್ಯಂತ ಶ್ರದ್ಧೆ ಹಾಗೂ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ಇಲಾಖೆಗೆ ಮಾದರಿಯಾದವರು ಕಾರ್ಗಲ್ ವನ್ಯಜೀವಿ ವಲಯದ ಬಿಳಿಗಾರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಮೈಲಾರಪ್ಪ. ಅರಣ್ಯ ರಕ್ಷಣೆ ಮತ್ತು ಒತ್ತುವರಿ ತೆರವುಗೊಳಿಸುವಲ್ಲಿ ಇವರು ತೋರಿದ ಅಪ್ರತಿಮ ಸೇವೆಯನ್ನು ಪರಿಗಣಿಸಿ, ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಸನ್ನ ಕೃಷ್ಣ ಪಟಗಾರ್ (ಭಾ.ಅ.ಸೇ.) ಅವರು ಅಧಿಕೃತವಾಗಿ “ಪ್ರಶಂಸಾ ಪತ್ರ” ನೀಡಿ ಗೌರವಿಸಿದ್ದಾರೆ. ಅರಣ್ಯ ಅತಿಕ್ರಮಣಕ್ಕೆ ಬ್ರೇಕ್ ಮತ್ತು ದಕ್ಷ ಕಾರ್ಯಾಚರಣೆ DRFO ಮೈಲಾರಪ್ಪ ಅವರು ತಮ್ಮ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಕೇವಲ ಹೊಸ ಒತ್ತುವರಿಗಳನ್ನು ತಡೆಯುವುದಷ್ಟೇ ಅಲ್ಲದೆ, ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹಿರಿಯ ನಾಯಕನ ಮನವೊಲಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದು, ಈ ಕುರಿತು ಸುರ್ಜೇವಾಲ ಅವರೇ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ತಾಜ್ ವೆಸ್ಟೆಂಡ್ನಲ್ಲಿ ನಡೆದ ಹೈವೋಲ್ಟೇಜ್ ಸಭೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಹಾಗೂ ಸಚಿವ ಕೃಷ್ಣ ಭೈರೇಗೌಡ ಅವರ ನಡುವೆ ಮಹತ್ವದ ಸಭೆ ನಡೆಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಮಾಲೋಚನೆಯಲ್ಲಿ ಸಚಿವರ ಅಸಮಾಧಾನಕ್ಕೆ ಕಾರಣವಾದ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ…
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ರಾಜಕೀಯ ವಿದ್ಯಮಾನವೊಂದಕ್ಕೆ ತೆರೆ ಬಿದ್ದಿದ್ದು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ. ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅವರು ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಕಟಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲ, “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿದು ಎಂದಿನಂತೆ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ” ಎಂದು ಸ್ಪಷ್ಟಪಡಿಸಿದರು. ಹಿರಿಯ ನಾಯಕನ ಅನುಭವ ಪಕ್ಷಕ್ಕೆ ಆಸ್ತಿ ರಾಮಲಿಂಗಾರೆಡ್ಡಿ ಅವರ ಸುದೀರ್ಘ ರಾಜಕೀಯ ಪಯಣವನ್ನು ಸ್ಮರಿಸಿದ ಸುರ್ಜೇವಾಲ, “ಅವರು ಎನ್ಎಸ್ಯುಐ (NSUI) ವಿದ್ಯಾರ್ಥಿ ಸಂಘಟನೆಯ ದಿನಗಳಿಂದಲೂ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಜೊತೆಯಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಸತತ 8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರ ರಾಜಕೀಯ ಅನುಭವ ಪಕ್ಷಕ್ಕೆ ಅತ್ಯಂತ ಮೌಲ್ಯಯುತವಾದದ್ದು,” ಎಂದರು. ರಾಜೀನಾಮೆ…
ನಮ್ಮ ದೈನಂದಿನ ಅಡುಗೆಯಲ್ಲಿ ಹಸಿರು ಮೆಣಸಿನಕಾಯಿಗೆ (Green Chilli) ಪ್ರಮುಖ ಸ್ಥಾನವಿದೆ. ಖಾರ ಹಾಗೂ ವಿಶಿಷ್ಟ ಸುವಾಸನೆ ನೀಡುವ ಈ ತರಕಾರಿ/ಮಸಾಲೆ ಬೆಳೆ ಜಾಗತಿಕವಾಗಿ ಭಾರಿ ಬೇಡಿಕೆಯನ್ನು ಹೊಂದಿದೆ. ಆದರೆ, “ವಿಶ್ವದಲ್ಲೇ ಅತಿ ಹೆಚ್ಚು ಹಸಿರು ಮೆಣಸಿನಕಾಯಿ ಉತ್ಪಾದಿಸುವ ದೇಶ ಯಾವುದು?” ಎಂಬ ಪ್ರಶ್ನೆಗೆ ಉತ್ತರ ಭಾರತ. ಹೌದು, ಭಾರತವು ಜಾಗತಿಕವಾಗಿ ಹಸಿರು ಹಾಗೂ ಒಣ ಮೆಣಸಿನಕಾಯಿ ಎರಡರಲ್ಲೂ ಅತಿ ದೊಡ್ಡ ಉತ್ಪಾದಕ, ಗ್ರಾಹಕ ಮತ್ತು ರಫ್ತುದಾರ ದೇಶವಾಗಿ ಹೊರಹೊಮ್ಮಿದೆ. ವಿಶ್ವದ ಒಟ್ಟು ಮೆಣಸಿನಕಾಯಿ ಉತ್ಪಾದನೆಯಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿದೆ. ಭಾರತ ಮೊದಲ ಸ್ಥಾನದಲ್ಲಿರಲು ಕಾರಣಗಳೇನು? ಅನುಕೂಲಕರ ಹವಾಮಾನ ಮತ್ತು ಮಣ್ಣು: ಭಾರತದಲ್ಲಿನ ವೈವಿಧ್ಯಮಯ ಹವಾಮಾನ ಮತ್ತು ಫಲವತ್ತಾದ ಮಣ್ಣು ಮೆಣಸಿನಕಾಯಿ ಬೆಳೆಗೆ ಅತ್ಯಂತ ಸೂಕ್ತವಾಗಿದೆ. ವರ್ಷದ ಯಾವುದೇ ಅವಧಿಯಲ್ಲಾದರೂ ದೇಶದ ಯಾವುದಾದರೂ ಒಂದು ಭಾಗದಲ್ಲಿ ಮೆಣಸಿನಕಾಯಿ ಬೆಳೆಯಲಾಗುತ್ತಿರುತ್ತದೆ. ಸಾಂಪ್ರದಾಯಿಕ ಕೃಷಿ ಜ್ಞಾನ: ಭಾರತೀಯ ರೈತರು ತಲೆಮಾರುಗಳಿಂದ ಮಸಾಲೆ ಪದಾರ್ಥಗಳ ಕೃಷಿಯಲ್ಲಿ ಪರಿಣಿತಿ ಹೊಂದಿದ್ದು, ಆಧುನಿಕ…
ಬೆಂಗಳೂರು : “ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ದೇವರಾಜ ಅರಸು ಅವರು ನಮ್ಮನ್ನು ಅಗಲಿ 45 ವರ್ಷಗಳಾಗಿವೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಅವರ ಭಾಷಣಗಳನ್ನು ಕೇಳಿದ್ದೇನೆ. ಅವರು ರಾಜಿನಾಮೆ ಕೊಟ್ಟಾಗ ಮಾಡಿದ ಕೊನೇ ಭಾಷಣ ನನ್ನ ಕಿವಿಯಲ್ಲಿ ಹಾಗೆ ಉಳಿದಿದೆ. ಅವರು ಯಾವ ಭಾವನೆಯೊಂದಿಗೆ ರಾಜಕಾರಣ, ಅಧಿಕಾರ ನಡೆಸಿದ್ದರು ಎಂದು ಅವರು ಹೇಳಿದ್ದರು. ಇಂದಿರಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ಅರಸು ಅವರ ನಾಯಕತ್ವದಲ್ಲಿ ಉಳುವವನಿಗೆ ಭೂಮಿ ನೀಡಬೇಕು ಎಂದು ತಂದ ಭೂ ಸುಧಾರಣಾ ಕಾಯ್ದೆ ದೇಶಕ್ಕೆ ಒಂದು ಮಾದರಿ. ಅದೊಂದು ಕ್ರಾಂತಿ. ಅರಸು ಅವರೊಬ್ಬ ಧೀಮಂತ ನಾಯಕ. ಅವರು…
ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು. ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ…
ಬೆಂಗಳೂರು : “ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, “ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ” ಎಂದು ತಿಳಿಸಿದರು. ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ: ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯ ಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ…
ಬೆಂಗಳೂರು : ಅರಣ್ಯ, ಪ್ರಕೃತಿ, ಪರಿಸರ ಉಳಿಯದಿದ್ದರೆ ಮಾನವ ಕುಲವೇ ಉಳಿಯಲು ಸಾಧ್ಯವಿಲ್ಲ. ಹೀಗಾಗಿ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಈ ಜವಾಬ್ದಾರಿಯನ್ನು ಶುದ್ಧ ಅಂತಃಕರಣದಿಂದ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಅರಣ್ಯ ಸಚಿವರಾಗಿದ್ದ ತಮಗೆ ಕೃತಜ್ಞತೆ ಸಲ್ಲಿಸಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಲಯ ಅರಣ್ಯಾಧಿಕಾರಿಗಳಿಂದ ಗೌರವವಂದನೆ ಹಾಗೂ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಕೃತಿಯಲ್ಲಿ ಸಮತೋಲನ ಕಾಪಾಡಲು, ವನ್ಯಜೀವಿ ಸಂರಕ್ಷಣೆ, ಅರಣ್ಯ ಮತ್ತು ಜೀವವೈವಿಧ್ಯ ಸಂರಕ್ಷಣೆಯ ಹೊಣೆ ಹೊತ್ತಿರುವ ನೀವು ಎಚ್ಚರ ತಪ್ಪದಂತೆ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು. ಈಗ ಅರಣ್ಯ ಖಾತೆ ಸಚಿವನಲ್ಲದಿದ್ದರೂ ನನ್ನ ಮೇಲೆ ಅಭಿಮಾನವಿಟ್ಟು ಅಭಿನಂದಿಸಲು ಆಗಮಿಸಿರುವ ತಮ್ಮೆಲ್ಲರ ಅಭಿಮಾನದಿಂದ ಹೃದಯ ತುಂಬಿಬಂದಿದೆ. ನೀವು ಪ್ರಾಮಾಣಿಕತೆಯಿಂದ, ದಕ್ಷತೆಯಿಂದ ಅರಣ್ಯ, ವನ್ಯಜೀವಿ ಸಂರಕ್ಷಣೆ ಮಾಡಿದರೆ ಅದುವೇ ನೀವು ನನಗೆ ತೋರುವ ಅಭಿಮಾನ ಎಂದು ತಿಳಿಸಿದರು. ಇರುವುದೊಂದೇ ಭೂಮಿ, ಇದನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ…
ಶಿವಮೊಗ್ಗ: ಒಬ್ಬ ವ್ಯಕ್ತಿಗೆ ಈ ಮಟ್ಟದ ಒಂದು ಸತ್ಕಾರ ಅನ್ನುವಂತದ್ದು, ಒಂದು ಜಗದ ಬದುಕಿನಲ್ಲಿ ಸಾರ್ಥಕತೆಯನ್ನು ಕೊಡುತ್ತದೆ ಅಂತ ಹೇಳಿ ನನಗೆ ಅನಿಸುತ್ತದೆ. ಬಹಳ ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಗಾರರು ಮತ್ತು ಮಂಜಪ್ಪನವರ ಹಿತೈಷಿಗಳು ಈ ಸಭೆಯಲ್ಲಿ ಸೇರಿದ್ದೀರಿ. ನಾವು ಬಹಳ ಸನ್ಮಾನಗಳನ್ನು ಇದನ್ನು ನೋಡಿದ್ದೇವೆ. ಆದರೆ ಈ ಮಟ್ಟದಲ್ಲಿ ನಡೆಯುತ್ತಾ ಇರುವಂತದ್ದು ಮಂಜಪ್ಪನವರ ಸಾರ್ವಜನಿಕ ಬದುಕಿಗೆ ಒಂದು ದೊಡ್ಡ ಶಕ್ತಿಯನ್ನು ತುಂಬಿದೆ ಮತ್ತು ಮಾನ್ಯತೆಯನ್ನು ಕೊಟ್ಟಿದೆ ಅಂತ ಹೇಳಿ ನಾನು ಭಾವಿಸುತ್ತೇನೆ ಎಂಬುದಾಗಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆದ ಹೆಚ್.ಎಸ್ ಮಂಜಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸತ್ಕಾರ ಮತ್ತು ಬದುಕಿನ ಸಾರ್ಥಕತೆ ಒಬ್ಬ ವ್ಯಕ್ತಿಗೆ ಈ ಮಟ್ಟದ ಒಂದು ಸತ್ಕಾರ ಅನ್ನುವಂತದ್ದು, ಒಂದು ಜಗದ ಬದುಕಿನಲ್ಲಿ ಸಾರ್ಥಕತೆಯನ್ನು ಕೊಡುತ್ತದೆ ಅಂತ ಹೇಳಿ ನನಗೆ ಅನಿಸುತ್ತದೆ. ಬಹಳ ದೊಡ್ಡ ಪ್ರಮಾಣದಲ್ಲಿ ಅಡಿಕೆ ಬೆಳೆಗಾರರು ಮತ್ತು ಮಂಜಪ್ಪನವರ…














