Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಸಾಗರ: ಮಲೆನಾಡಿನ ಹೆಬ್ಬಾಗಿಲು ಹಾಗೂ ರಾಜ್ಯದ ಪ್ರಮುಖ ವಾಣಿಜ್ಯ ಕೇಂದ್ರವಾದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ( High Court Circuit Bench) ಸ್ಥಾಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಸಾಗರ ತಾಲ್ಲೂಕು ಶಾಖೆಯ ವತಿಯಿಂದ ಶುಕ್ರವಾರ ಉಪವಿಭಾಗಾಧಿಕಾರಿಗಳ (AC) ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಾಂಸ್ಕೃತಿಕ ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಜಿಲ್ಲೆ ರಾಜ್ಯದ ರಾಜಕೀಯ ಮತ್ತು ಸಾಂಸ್ಕೃತಿಕ ಭೂಪಟದಲ್ಲಿ ಶಿವಮೊಗ್ಗಕ್ಕೆ ವಿಶಿಷ್ಟ ಸ್ಥಾನವಿದೆ. ದೇಶದ ಹೆಮ್ಮೆಯ ಸಾಹಿತಿಗಳಾದ ರಾಷ್ಟ್ರಕವಿ ಕುವೆಂಪು, ಜಿ.ಎಸ್. ಶಿವರುದ್ರಪ್ಪ ಸೇರಿದಂತೆ ಸುವಿಖ್ಯಾತ ಕವಿಗಳು, ರಂಗಭೂಮಿ ಕಲಾವಿದರನ್ನು ನಾಡಿಗೆ ನೀಡಿದ ಕೀರ್ತಿ ಈ ಜಿಲ್ಲೆಯದ್ದಾಗಿದೆ. ಅಷ್ಟೇ ಅಲ್ಲದೆ, ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳನ್ನು ನೀಡಿದ ಹೆಗ್ಗಳಿಕೆಯೂ ಜಿಲ್ಲೆಗಿದೆ. ಐತಿಹಾಸಿಕವಾಗಿ ದಲಿತ ಹೋರಾಟ, ಉಳುವವನೇ ಹೊಲದೊಡೆಯ ಎಂಬ ಭೂಹಕ್ಕಿನ ಹೋರಾಟಗಳ ಕೇಂದ್ರಬಿಂದುವಾಗಿ ಶಿವಮೊಗ್ಗ ಜಿಲ್ಲೆ ಸದಾ ಮುಂಚೂಣಿಯಲ್ಲಿದೆ ಎಂದು ಮನವಿಯಲ್ಲಿ ಹೆಮ್ಮೆಯಿಂದ ಸ್ಮರಿಸಲಾಗಿದೆ. ಭೌಗೋಳಿಕ ಅರ್ಹತೆ ಮತ್ತು ಸಂಪರ್ಕ ಸೌಲಭ್ಯ ಹೈಕೋರ್ಟ್ ಸಂಚಾರಿ ಪೀಠದ ಸ್ಥಾಪನೆಗೆ…

Read More

ನವದೆಹಲಿ: “ಕ್ರಿಕೆಟ್ ಎನ್ನುವುದು ಕೇವಲ ಆಟವಲ್ಲ, ಇಲ್ಲಿ ಕೀರ್ತಿ ಹೆಚ್ಚಿದಂತೆಲ್ಲಾ ಹಣವೂ ಹುಡುಕಿಕೊಂಡು ಬರುತ್ತದೆ” ಎಂಬ ಮಾತಿಗೆ ಈಗ ಬಿಹಾರದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಕಣ್ಣೆದುರಿನ ಉದಾಹರಣೆಯಾಗಿದ್ದಾರೆ. ಕೇವಲ ತಮ್ಮ ಅದ್ಭುತ ಬ್ಯಾಟಿಂಗ್ ಪ್ರತಿಭೆಯಿಂದ ಇಡೀ ವಿಶ್ವದ ದಿಗ್ಗಜ ಬೌಲರ್‌ಗಳನ್ನು ಬೆದರಿಸಿರುವ ಈ ಹದಿಹರೆಯದ ಹುಡುಗ, ಈಗ ಕಾರ್ಪೊರೇಟ್ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾನೆ. ಐಪಿಎಲ್ 2026ರ ಟಾಪ್ ಸ್ಕೋರರ್ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ, ಬರೋಬ್ಬರಿ 240ಕ್ಕೂ ಹೆಚ್ಚಿನ ಭೀಕರ ಸ್ಟ್ರೈಕ್ ರೇಟ್‌ನಲ್ಲಿ 680 ರನ್ ಚಚ್ಚುವ ಮೂಲಕ ಟೂರ್ನಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇವರ ಈ ಬಿರುಸಿನ ಆಟ ಕ್ರಿಕೆಟ್ ಅಭಿಮಾನಿಗಳು ಹಾಗೂ ತಜ್ಞರ ಮನಗೆದ್ದಿದ್ದು, ಸದ್ಯ ದೇಶದ ಅತ್ಯಂತ ಪ್ರೀತಿಯ ಕ್ರಿಕೆಟಿಗನಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಒಪ್ಪಂದ ಮತ್ತು ಆಫರ್‌ಗಳ ಮಹಾಪೂರ ‘ಕ್ರಿಕ್ ಬ್ಲಾಗರ್’ ವರದಿಯ ಪ್ರಕಾರ, ಸೂರ್ಯವಂಶಿ ಸದ್ಯ ತಮ್ಮ ಬ್ಯಾಟ್ ಸ್ಪಾನ್ಸರ್‌ಶಿಪ್‌ನಿಂದ ವಾರ್ಷಿಕ…

Read More

ವಿಜಯಪುರ: ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೊಮ್ಮೆ ನೆತ್ತರ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಸದಸ್ಯರು ಸೇರಿದಂತೆ ಬರೋಬ್ಬರಿ ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಲಾಗಿರುವ ಘಟನೆ ವಿಜಯಪುರ ಜಿಲ್ಲೆಯಿಂದ ವರದಿಯಾಗಿದೆ. ಈ ರಕ್ತಸಿಕ್ತ ಕೃತ್ಯವು ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಗಳ ವಿವರ ಆಸ್ತಿ ಜಗಳದ ಹಗೆತನಕ್ಕೆ ಬಲಿಯಾದವರನ್ನು ಗೋವಿಂದಪುರ ಗ್ರಾಮದ ನಿವಾಸಿಗಳಾದ ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಹಾಗೂ ಶಬ್ಬೀರ್ ನದಾಫ್ ಸೇರಿದಂತೆ ಒಟ್ಟು ಆರು ಜನ ಎಂದು ಗುರುತಿಸಲಾಗಿದೆ. ಮೃತರ ಪೈಕಿ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಕುಟುಂಬದ ಜಗಳಕ್ಕೆ ಮತ್ತಿಬ್ಬರು ಬಲಿಯಾಗಿದ್ದಾರೆ ಎನ್ನಲಾಗಿದೆ. ಹಳೆಯ ಆಸ್ತಿ ವಿವಾದವೇ ಕಾರಣ? ಪ್ರಾಥಮಿಕ ಮಾಹಿತಿ ಪ್ರಕಾರ, ಇವರ ನಡುವೆ ಕಳೆದ ಕೆಲವು ದಿನಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ತೀವ್ರ ಕೌಟುಂಬಿಕ ಕಲಹ ಮತ್ತು ವಿವಾದ ನಡೆದಿತ್ತು ಎನ್ನಲಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ, ವಿರೋಧಿಗಳು ಮಾರಕಾಸ್ತ್ರಗಳಿಂದ…

Read More

ಬೆಂಗಳೂರು: ತಂತ್ರಜ್ಞಾನ ಮತ್ತು ‘ಕೃತಕ ಬುದ್ಧಿಮತ್ತೆ’ (ಎಐ) ಬಳಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತಲೂ ವೇಗವಾಗಿ ಮುನ್ನುಗ್ಗುತ್ತಿದೆ. ‘ICRIER-ಪ್ರೊಸಸ್ ಸೆಂಟರ್’ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯಾಸ್ ಡಿಜಿಟಲ್ ಎಕಾನಮಿ’ (ಸೈಡ್‌ 2026) ವರದಿಯು, ಭಾರತದ ಈ ಅದ್ಭುತ ಡಿಜಿಟಲ್ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸಿದೆ. ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಐದನೇ ಸ್ಥಾನ ಜಾಗತಿಕ ಜಿಡಿಪಿಯಲ್ಲಿ ಶೇ. 96ರಷ್ಟು ಪಾಲು ಹೊಂದಿರುವ ವಿಶ್ವದ 71 ದೇಶಗಳ ಡಿಜಿಟಲ್ ಬೆಳವಣಿಗೆಯನ್ನು ಈ ವರದಿಯಲ್ಲಿ ಪರಾಮರ್ಶೆ ಮಾಡಲಾಗಿದೆ. 2025ರಲ್ಲಿ ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಎಂಟನೇ ಸ್ಥಾನದಲ್ಲಿದ್ದ ಭಾರತ, ಕೇವಲ ಒಂದೇ ವರ್ಷದಲ್ಲಿ ಭಾರಿ ಪ್ರಗತಿ ಸಾಧಿಸಿ ಇದೀಗ ಐದನೇ ಸ್ಥಾನಕ್ಕೆ ಜಿಗಿದಿದೆ. ಸಾಫ್ಟ್‌ವೇರ್, ಐಟಿ ಸೇವೆಗಳು ಮತ್ತು ಕ್ಲೌಡ್ ಸಿಸ್ಟಮ್‌ಗಳಂತಹ ಡಿಜಿಟಲ್ ಸೇವೆಗಳನ್ನು ರಫ್ತು ಮಾಡುವಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇದರಿಂದ ಬರೋಬ್ಬರಿ 328 ಬಿಲಿಯನ್ ಡಾಲರ್ (ಸುಮಾರು 31 ಲಕ್ಷ ಕೋಟಿ ರೂ.) ಆದಾಯ ಗಳಿಸಿದೆ. AI ರೇಸ್‌ನಲ್ಲಿ ಮುಂಚೂಣಿಯಲ್ಲಿದೆ ಭಾರತ! ಕೃತಕ ಬುದ್ಧಿಮತ್ತೆ ಅಥವಾ…

Read More

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ವಿದ್ಯಮಾನವೊಂದು ನಡೆದಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಾರಥ್ಯದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಸ್ಟಾರ್ ಕ್ರಿಕೆಟಿಗ ರಿಷಭ್ ಪಂತ್ ಇಟ್ಟಿದ್ದ ಪ್ರಸ್ತಾಪಕ್ಕೆ ಫ್ರಾಂಚೈಸಿ ಗ್ರೀನ್ ಸಿಗ್ನಲ್ ನೀಡಿದೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಂತ್ ಅವರ ರಾಜೀನಾಮೆ ಮನವಿಯನ್ನು ಆಡಳಿತ ಮಂಡಳಿ ಪುರಸ್ಕರಿಸಿದೆ. ಪಂತ್ ನಿರ್ಧಾರಕ್ಕೆ ಸಿಕ್ಕಿತು ಗೌರವ ಈ ಮಹತ್ವದ ಬದಲಾವಣೆ ಕುರಿತು ಪ್ರಕಟಣೆ ನೀಡಿರುವ ಲಕ್ನೋ ತಂಡದ ಆಡಳಿತ ಮಂಡಳಿ, “ರಿಷಭ್ ಪಂತ್ ಅವರೇ ಸ್ವತಃ ಮುಂಚೂಣಿಗೆ ಬಂದು ನಾಯಕತ್ವದ ಹೊಣೆಗಾರಿಕೆಯಿಂದ ಪಕ್ಕಕ್ಕೆ ಸರಿಯುವ ಇಚ್ಛೆ ವ್ಯಕ್ತಪಡಿಸಿದ್ದರು. ಅವರ ಈ ವೈಯಕ್ತಿಕ ನಿರ್ಧಾರವನ್ನು ನಾವು ಗೌರವದಿಂದ ಒಪ್ಪಿಕೊಂಡಿದ್ದೇವೆ. ಇಂತಹ ನಿರ್ಣಾಯಕ ಘಟ್ಟದಲ್ಲಿ ತೀರ್ಮಾನ ಕೈಗೊಳ್ಳುವುದು ಸುಲಭವಲ್ಲ. ತಂಡವನ್ನು ಮುನ್ನಡೆಸುವಲ್ಲಿ ಮತ್ತು ಡ್ರೆಸ್ಸಿಂಗ್ ರೂಮ್‌ನಲ್ಲಿ ಧನಾತ್ಮಕ ವಾತಾವರಣ ನಿರ್ಮಿಸುವಲ್ಲಿ ಪಂತ್ ನೀಡಿದ ಅತ್ಯಮೂಲ್ಯ ಕೊಡುಗೆಗೆ ನಾವು ಸದಾ ಋಣಿಯಾಗಿದ್ದೇವೆ” ಎಂದು ತಿಳಿಸಿದೆ. https://TWITTER.com/LucknowIPL/status/2060322784715342265 ಹೊಸದಾಗಿ ತಂಡ ಕಟ್ಟಲು ಲಕ್ನೋ…

Read More

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂಗಳದಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ನಾಯಕತ್ವದ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂದು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮಾಡಿದ್ದ ವಿನಂತಿಯನ್ನು ಫ್ರಾಂಚೈಸಿ ಅಧಿಕೃತವಾಗಿ ಒಪ್ಪಿಕೊಂಡಿದೆ. ಇದರೊಂದಿಗೆ ಪಂತ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಲಕ್ನೋ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಗೌರವಪೂರ್ವಕವಾಗಿ ಒಪ್ಪಿಕೊಂಡ ಫ್ರಾಂಚೈಸಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಆಡಳಿತ ಮಂಡಳಿ, “ರಿಷಭ್ ಪಂತ್ ಅವರೇ ಸ್ವತಃ ಫ್ರಾಂಚೈಸಿಯನ್ನು ಸಂಪರ್ಕಿಸಿ ಈ ವಿನಂತಿ ಮಾಡಿಕೊಂಡಿದ್ದರು. ಅವರ ನಿರ್ಧಾರವನ್ನು ನಾವು ಗೌರವಪೂರ್ವಕವಾಗಿ ಸ್ವೀಕರಿಸಿದ್ದೇವೆ. ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಎಂದಿಗೂ ಸುಲಭವಲ್ಲ. ನಾಯಕನಾಗಿ ಈ ಡ್ರೆಸ್ಸಿಂಗ್ ರೂಮ್‌ಗೆ ರಿಷಭ್ ನೀಡಿದ ಕೊಡುಗೆಗೆ ನಾವು ಸದಾ ಕೃತಜ್ಞರಾಗಿರುತ್ತೇವೆ” ಎಂದು ತಿಳಿಸಿದೆ. https://twitter.com/LucknowIPL/status/2060322784715342265 ಮರುಸಂಘಟನೆಯತ್ತ ಲಕ್ನೋ ತಂಡದ ಗಮನ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ತಂಡದ ಮುಂದಿನ ನಡೆ ಬಗ್ಗೆಯೂ ಎಲ್‌ಎಸ್‌ಜಿ ಸ್ಪಷ್ಟನೆ ನೀಡಿದೆ. “ನಮ್ಮ ಸಂಪೂರ್ಣ ಗಮನ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಸಾರ್ವಜನಿಕರು ಪ್ರಯಾಣಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸೀಟುಗಳ ಲಭ್ಯತೆ ಹಾಗೂ ದೂರದ ಪ್ರಯಾಣದ ವೇಳೆ ಹೋಟೆಲ್‌ಗಳಲ್ಲಿ ಆಗುತ್ತಿರುವ ಅನ್ಯಾಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಯಾಣಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಎರಡು ಪ್ರತ್ಯೇಕ ಕಡಕ್ ಟಿಪ್ಪಣಿಗಳ ಮೂಲಕ ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ. 1. ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರ ಸೀಟು ಬೇರೆಯವರಿಗೆ ಸಿಕ್ಕರೆ ಕಠಿಣ ಕ್ರಮ! ರಾಜ್ಯದ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರತಿನಿತ್ಯ ಸುಮಾರು 1.25 ಕೋಟಿಗೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಆದರೆ, ಬಸ್ಸುಗಳಲ್ಲಿ ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ (ವಿಕಲಚೇತನರಿಗೆ) ಮೀಸಲಾದ ಸೀಟುಗಳಲ್ಲಿ ಇತರೆ ಸಾಮಾನ್ಯ ಪ್ರಯಾಣಿಕರು ಕುಳಿತು ಪ್ರಯಾಣಿಸುತ್ತಿರುವುದು ಸಚಿವರ ಗಮನಕ್ಕೆ ಬಂದಿದೆ. ಇದರಿಂದಾಗಿ ಅರ್ಹ ಹಿರಿಯ ನಾಗರಿಕರಿಗೆ…

Read More

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು 2 ಕೋಟಿ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಜಾತ್ರೆಗೆ ಮುನ್ನಾ ಘೋಷಣೆ ಮಾಡಿದ್ದರು. ಅದರಂತೆ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅನುದಾನ ನೀಡಲು ಮನವಿ ಮಾಡಿದ್ದರು. ಶಾಸಕರ ಮನವಿಗೆ ತಕ್ಷಣವೇ ಸ್ಪಂದಿಸಿದ್ದಂತ ಅವರು, 2 ಕೋಟಿ ಅನುದಾನ ಮಂಜೂರಾತಿಗೆ ಟಿಪ್ಪಣಿ ಹೊರಡಿಸಿದ್ದರು. ಆ ಬಳಿಕ ಅದು ಮಂಜೂರಾಗಿಲ್ಲ. ಹಾಗೇ ಹೀಗೆ ಎನ್ನುವ ಆರೋಪಿಗಳನ್ನು ಬಿಜೆಪಿ ಮುಖಂಡರು ಮಾಡಿದ್ದರು. ಇದೀಗ ರಾಜ್ಯ ರಾಜಕೀಯದ ಹೈವೋಲ್ಟ್ ಪಟ್ಟದ ಕದನದ ನಡುವೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ವಿರೋಧ ಪಕ್ಷಗಳ ತೀವ್ರ ಟೀಕೆ ಮತ್ತು ಆರೋಪಗಳ ನಡುವೆಯೂ ಹಠ ಬಿಡದ ಶಾಸಕರು, ರಾಜ್ಯ ಸರ್ಕಾರದಿಂದ ₹2 ಕೋಟಿ ವಿಶೇಷ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬರುವಲ್ಲಿ ಯಶಸ್ವಿಯಾಗಿದ್ದಾರೆ. ಎಸ್‌ಎಫ್‌ಸಿ ವಿಶೇಷ ಅನುದಾನದಡಿ ಹಣ ಮಂಜೂರು ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಮೂಲಭೂತ…

Read More

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗಲು ಕ್ಷಣಗಣನೆ ಆರಂಭವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯದ ಮುಂದಿನ ಸಾರಥಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ತಮ್ಮ ಆಪ್ತ ಜ್ಯೋತಿಷಿಗಳ ಸಲಹೆಯ ಮೇರೆಗೆ ಡಿ.ಕೆ. ಶಿವಕುಮಾರ್ ಅವರು ಮುಂದಿನ ತಿಂಗಳು ಅಂದರೆ ಜೂನ್ 5 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ರಾಜಕೀಯ ಬದಲಾವಣೆಯ ಈ ಹೊತ್ತಿನಲ್ಲಿ, ಪ್ರಮಾಣ ವಚನ ಕಾರ್ಯಕ್ರಮ ಹಾಗೂ ಮುಹೂರ್ತದ ಕುರಿತಾದ ಸಂಪೂರ್ಣ ವಿವರಗಳು ಹೀಗಿವೆ: ಜೂನ್ 5ರ ಶುಕ್ರವಾರ ಮಧ್ಯಾಹ್ನ ‘ಅಭಿಜಿನ್ ಲಗ್ನ’ದಲ್ಲಿ ಪದಗ್ರಹಣ ಭಾವಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಜೂನ್ 5ನೇ ತಾರೀಖಿನ ಶುಕ್ರವಾರದಂದು ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಅವರು ಸೋಮವಾರ ಅಥವಾ ಬುಧವಾರದಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಚರ್ಚೆಗಳು ನಡೆದಿದ್ದವು. ಆದರೆ, ಡಿಕೆಶಿ ಅವರ ಆಪ್ತ ಜ್ಯೋತಿಷಿ…

Read More

ಪುಣೆ: ಭಾರತೀಯ ಸೇನೆಯ ವೈದ್ಯರು ತಮ್ಮ ವೃತ್ತಿಪರತೆ ಮತ್ತು ಅದ್ಭುತ ಕೌಶಲ್ಯದ ಮೂಲಕ ಮತ್ತೊಮ್ಮೆ ದೇಶದ ಜನರ ಹೃದಯ ಗೆದ್ದಿದ್ದಾರೆ. ಪುಣೆಯ ‘ಆರ್ಮಿ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯೋ-ಥೊರಾಸಿಕ್ ಸೈನ್ಸಸ್’ (AICTS) ಸಂಸ್ಥೆಯ ಮಿಲಿಟರಿ ವೈದ್ಯರು, 9 ತಿಂಗಳ ಹಸುಗೂಸಿನ ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದ ಅಪಾಯಕಾರಿ ಎಲ್‌ಇಡಿ (LED) ಬಲ್ಬ್ ಅನ್ನು ಅತ್ಯಂತ ಸಂಕೀರ್ಣ ಬ್ರಾಂಕೋಸ್ಕೋಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಪರೂಪದ ಹಾಗೂ ಅತ್ಯಂತ ಅಪಾಯಕಾರಿಯಾಗಿದ್ದ ಈ ತುರ್ತು ವೈದ್ಯಕೀಯ ಕಾರ್ಯಾಚರಣೆಯ ಮೂಲಕ ಸೇನಾ ವೈದ್ಯರು ಮಗುವಿಗೆ ಹೊಸ ಜೀವನ ನೀಡಿದ್ದಾರೆ. ಉಸಿರಾಟದ ನಳಿಕೆಯಲ್ಲಿ ಸಿಲುಕಿತ್ತು ತುಕ್ಕು ಹಿಡಿಯುವ ತಂತಿ! ಮಗುವಿನ ಎಡ ಶ್ವಾಸಕೋಶದ ಆಳವಾದ ಉಸಿರಾಟದ ನಳಿಕೆಯಲ್ಲಿ ಸಣ್ಣ ಎಲ್‌ಇಡಿ ಬಲ್ಬ್ ಸಿಲುಕಿಕೊಂಡಿತ್ತು. ಕೇವಲ ಬಲ್ಬ್ ಮಾತ್ರವಲ್ಲದೆ, ಅದಕ್ಕೆ ಅಳವಡಿಸಲಾಗಿದ್ದ, ಸುಲಭವಾಗಿ ತುಕ್ಕು ಹಿಡಿಯುವ (Corrosive wires) ತಂತಿಗಳು ಸಹ ಶ್ವಾಸಕೋಶದ ಒಳಗೆ ಪ್ರವೇಶಿಸಿದ್ದವು. ಇದು ಮಗುವಿನ ಜೀವಕ್ಕೆ ತೀವ್ರ ಉಸಿರಾಟದ ಸಂಕಟವನ್ನು ತಂದೊಡ್ಡಿತ್ತು. ತೆರೆದ ಶಸ್ತ್ರಚಿಕಿತ್ಸೆ ಇಲ್ಲದೆ ಜೀವ…

Read More