Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮಘಟ್ಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ 6 ಅಧಿಸೂಚನೆ ಹೊರಡಿಸಿದ್ದು, 2024ರಲ್ಲಿ 6ನೇ ಅಧಿಸೂಚನೆ ಆದ ಬಳಿಕ 10 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ನಂತರ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲೂ ಪರಾಮರ್ಶಿಸಿ, ಸಚಿವ ಸಂಪುಟದಲ್ಲಿ ಕಸ್ತೂರಿ ರಂಗನ್ ವರದಿಗೆ ರಾಜ್ಯದ ಒಪ್ಪಿಗೆ ಇಲ್ಲ ಎಂದು ನಿರ್ಣಯಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸ್ಪಷ್ಟಪಡಿಸಿದರು. ಕಸ್ತೂರಿ ರಂಗನ್ ವರದಿಯಲ್ಲಿ ರಾಜ್ಯದ ಪಶ್ಚಿಮಘಟ್ಟದ ಸುಮಾರು 20,668 ಚದರ ಕಿಲೋ ಮೀಟರ್ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಶಿಫಾರಸು ಮಾಡಲಾಗಿದೆ ಈ ಪೈಕಿ 16ಸಾವಿರ ಚದರ ಕಿಲೋ ಮೀಟರ್…

Read More

ಬೆಳಗಾವಿ ಸುವರ್ಣಸೌಧ : ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ ಮುಂದಿಟ್ಟು ವಿವರಣೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಇದೊಂದು ಸರಳ ವಿಧೇಯಕ. ಇದರಲ್ಲಿರುವುದು ದೇಶದ ಹಳೆಯ ಕಾನೂನು. ಬಹುತೇಕ ರಾಜ್ಯಗಳಲ್ಲಿ ಹೋಲಿಕೆ ಇರುವ ಕಾನೂನು. ಈ ಹಿಂದೆ ಕೇಂದ್ರ ಸರ್ಕಾರ ಮಾದರಿ ವಿಧೇಯಕವನ್ನು ರೂಪಿಸಿದ ನಂತರ ಅದನ್ನು ಎಲ್ಲಾ ರಾಜ್ಯಗಳೂ ಒಂದೇ ಮಾದರಿಯಲ್ಲಿ ಅಳವಡಿಸಿಕೊಂಡಿದ್ದವು. ಆದರೆ, ಪ್ರಸ್ತುತ ಈ ವಿಧೇಯಕದಲ್ಲಿ ಕೆಲವು ಸರಳ ತಿದ್ದುಪಡಿಗಳನ್ನು ತರಲಾಗಿದೆ ಎಂದರು. ಮೂಲ ವೀಧೇಯಕದಲ್ಲಿ ಉಲ್ಲಂಘನೆಯಾದರೆ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇತ್ತು. ಆದರೆ, ಇಂತಹ ಸಣ್ಣಪುಟ್ಟ ತಪ್ಪಿಗೆ ಜೈಲು ಶಿಕ್ಷೆ ಸರಿಯಲ್ಲ ಎಂಬ ಚರ್ಚೆ ಇದೀಗ ದೇಶದಾದ್ಯಂತ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ತಿದ್ದುಪಡಿಯ ಕರಡನ್ನು ಸಿದ್ದಪಡಿಸಿ ನಮಗೆ ಕಳಿಸಿಕೊಟ್ಟಿದೆ. ನಾವು ಈ ತಿದ್ದುಪಡಿ ಮೂಲಕ ಹೊಸ ಕಾನೂನುಗಳನ್ನು…

Read More

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು. ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ…

Read More

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ. ಒಟ್ಟು 73 ವೈದ್ಯಕೀಯ ಹಾಗೂ 34 ದಂತ ವೈದ್ಯಕೀಯ ಸೀಟುಗಳನ್ನು ಈ ಸುತ್ತಿನಲ್ಲಿ ಹಂಚಿಕೆ ‌ಮಾಡಲಾಗಿದೆ. 26 ವೈದ್ಯಕೀಯ ಸೀಟು ಹಂಚಿಕೆಗೆ ಬಾಕಿ ಉಳಿದಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರು ಡಿ.17ರಂದು ಸಂಜೆ 4 ಗಂಟೆಯೊಳಗೆ ಶುಲ್ಕ ಪಾವತಿಸಿ (ವೈದ್ಯಕೀಯ ಶುಲ್ಕ ಠೇವಣಿ ಕಡಿತ ಮಾಡಿಕೊಂಡು), ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ ಅಂದೇ ಸಂಜೆ 6 ಗಂಟೆ ಒಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. https://kannadanewsnow.com/kannada/state-governments-firm-stance-on-t-p-zp-elections-minister-bairati-suresh/ https://kannadanewsnow.com/kannada/breaking-this-time-the-ipl-match-will-be-inaugurated-in-bangalore-ksca-president-venkatesh-prasad/

Read More

ಬೆಳಗಾವಿ ಸುವರ್ಣ ವಿಧಾನಸೌಧ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ ಎರಡು ವರ್ಷಗಳಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಗಟ್ಟಿ ನಿರ್ಧಾರ ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪ್ರತಿಪಕ್ಷಗಳಿಗೆ ಮಾರುತ್ತರ ನೀಡಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ ಎಂದು ಆಕ್ಷೇಪಿಸಿದಾಗ ಎದ್ದು ನಿಂತ ಸಚಿವರು, ಈ ಹಿಂದೆ ಆರೇಳು ವರ್ಷಗಳಿಂದ ಅಧಿಕಾರ ನಡೆಸಿದ ಬಿಜೆಪಿ ಚುನಾವಣೆ ನಡೆಸದೇ ಕಾಲಹರಣ ಮಾಡುತ್ತಾ ಮತ್ತು ಈ ಬಗ್ಗೆ ಯಾವುದೇ ಧ್ವನಿ ಎತ್ತಿರಲಿಲ್ಲ. ಯಾವುದೇ ತಾಲೂಕು, ಜಿಲ್ಲಾ ಪಂಚಾಯ್ತಿ ಅಥವಾ ಪಾಲಿಕೆಗಳಿಗೆ ಚುನಾವಣೆಯನ್ನೇ ನಡೆಸುವ ಧೈರ್ಯ ತೋರಲಿಲ್ಲ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ತಾಲೂಕು, ಜಿಲ್ಲಾ ಪಂಚಾಯ್ತಿ ಮತ್ತು ಪಾಲಿಕೆಗಳಿಗೆ ಚುನಾವಣೆ ನಡೆಸಲು ಮುಂದಾಗಿದೆ ಎಂದು ತಿರುಗೇಟು ನೀಡಿದರು. ಬಡ, ಮಧ್ಯಮ…

Read More

ಬೆಳಗಾವಿ : ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಎಂ.ಬಿ. ನೇಮಣ್ಣ ಗೌಡ @ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು, ಈ ಸಂಬಂಧ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು ನಂತರ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು. ಈ ದೂರುಗಳ ಹಿನ್ನೆಲೆಯಲ್ಲಿ ಎಫ್.ಐ.ಆರ್. ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ…

Read More

ಬೆಂಗಳೂರು: ಸಾರಿಗೆ ಬಸ್ಸುಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3974 ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಬರೋಬ್ಬರಿ 7.61 ಲಕ್ಷ ದಂಡವನ್ನು ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದವರಿಂದ ವಸೂಲಿ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನವೆಂಬರ್-2025 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40414 ವಾಹನಗಳನ್ನು ತನಿಖೆಗೊಳಪಡಿಸಿ 3961 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಎಂದಿದೆ. 3974 ಟಿಕೇಟ್ ರಹಿತ ಪ್ರಯಾಣಿಕರಿಂದ 7,61,334/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 99,143/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.

Read More

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನು ಪ್ರಿಯಕನೊಬ್ಬ ಆಕೆಯ ಗಂಡನಿಗೆ ಕಳುಹಿಸಿದ್ದಾನೆ. ಮುಂದೆ ಆಗಿದ್ದೇನು ಅಂತ ಮುಂದೆ ಸುದ್ದಿ ಓದಿ..  4 ವರ್ಷಗಳಿಂದ ಪರಸ್ಪರ ಪ್ರೀತಿಸಿದ್ದಂತ ಆ ಇಬ್ಬರು ಮದುವೆಯಾಗೋದಕ್ಕೂ ನಿರ್ಧರಿಸಿದ್ದರು. ಆದರೇ ಇದಕ್ಕೆ ಜಾತಿ ಅಡ್ಡಬಂದು, ಪ್ರೀತಿ ಕೊನೆಗೊಂಡಿತ್ತು. ಯುವತಿ ತನ್ನ ಮನೆಯವರು ತೋರಿಸಿದಂತ ಯುವಕನನ್ನು ಮದುವೆಯಾಗಿ, ಗಂಡನ ಜೊತೆಗೆ ಸುಖವಾಗಿ ಸಂಸಾರ ನಡೆಸುತ್ತಿದ್ದಳು. ತನ್ನ ಪ್ರೇಯಸಿ ಬೇರೆಯ ಯುವಕನನ್ನು ಮದುವೆಯಾದಳು ಎಂಬ ಸಿಟ್ಟಿನಿಂದ ಪ್ರಿಯತಮ ಮಾತ್ರ ಮಾಡಿದ್ದು, ಪ್ರಿಯತಮೆಯ ಖಾಸಗಿ ವೀಡಿಯೋಗಳನ್ನೇ ಗಂಡನಿಗೆ ಕಳುಹಿಸಿದ್ದಾಗಿದೆ. ಇದರಿಂದ ಕೆರಳಿ ಕೆಂಡವಾದಂತ ಆಕೆಯ ಗಂಡ, ತಾನು ಕಟ್ಟಿದಂತ ತಾಳಿ ಕಿತ್ತು ಮನೆಯಿಂದ ವಿವಾಹಿತೆಯನ್ನು ಹೊರ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಅಲ್ಲಿಂದ ನೇರವಾಗಿ ಇದಕ್ಕೆ ಕಾರಣವಾದಂತ ಪ್ರಿಯಕರನ ಮನೆಯ ಮುಂದೆ ನ್ಯಾಯ ಕೊಡಿಸುವಂತೆ ಧರಣಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಪಲಿಚೆರ್ಲು ಗ್ರಾಮದಲ್ಲಿ ಈ ರೀತಿಯ ಘಟನೆ ನಡೆದಿದೆ. ಪಲಿಚೆರ್ಲು ಗ್ರಾಮ ಅಂಬರೀಶ್ ಮನೆಯ ಮುಂದೆ ಕೆಂಚನಹಳ್ಳಿ ಗ್ರಾಮದ ವಿವಾಹಿತೆ ಧರಣಿ…

Read More

ಬೆಂಗಳೂರು; ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯ ಬಗ್ಗೆ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತ್ರ ಸೂಕ್ತ ಕ್ರಮ ವಹಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶಗಳು ಪತ್ತೆಯಾಗಿವೆ ಎಂಬ ಕುರಿತು ಜಾಲತಾಣಗಳಲ್ಲಿ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. https://twitter.com/KarnatakaVarthe/status/2000530076887384522 https://kannadanewsnow.com/kannada/golden-jubilee-celebration-for-sagar-government-pre-university-college-on-december-23rd-and-24th-invitation-letter-released/ https://kannadanewsnow.com/kannada/are-you-making-this-mistake-beware-your-irctc-account-will-be-banned-more-than-3-crore-accounts-have-already-been-banned/

Read More

ಬೆಂಗಳೂರು : ಬೆಂಗಳೂರಿಗರು ಈ ಚಳಿಗಾಲದಲ್ಲಿಯೂ ಕ್ರಿಸ್ ಮಸ್ ಸಂಭ್ರಮದ ಬೆಚ್ಚನೆಯ ಅನುಭವವನ್ನು ಪಡೆದುಕೊಳ್ಳಲಿ ಎಂಬ ಕಾರಣಕ್ಕೆ ‘ಟಿರಾ’ದಿಂದ ಸೌಂದರ್ಯ, ಆಹಾರ, ಸಂಗೀತ ಮತ್ತು ಕ್ರಿಯೇಟಿವ್ ಕಾರ್ಯಾಗಾರವನ್ನು ಒಟ್ಟಾಗಿ ತರಲಾಗಿದೆ. ಆರಂಭದ ವಾರಾಂತ್ಯಕ್ಕೆ ಹಬ್ಬದ ಸಂಭ್ರಮ, ಔತಣ, ನೇರ ಪ್ರದರ್ಶನಗಳು, ಸುಂದರ ಕ್ಷಣಗಳು ಮತ್ತು ಖುಷಿ ತರುವ ಕ್ರಿಸ್ ಮಸ್ ಟ್ರೀ ಲೈಟಿಂಗ್ ಜೊತೆಗೆ ಅತಿಥಿಗಳು ಆನಂದವನ್ನು ಅನುಭವಿಸುವ ಕ್ಷಣಗಳನ್ನು ಉಣಬಡಿಸಲಾಯಿತು. ಈ ಸಂಭ್ರಮಾಚರಣೆಯು ಹಬ್ಬದ ಅನುಭವನ್ನು ವಿಸ್ತರಿಸಿದೆ. ಇದರೊಂದಿಗೆ ಯಾರೆಲ್ಲ ಮಾಲ್ ಗೆ ಭೇಟಿ ನೀಡುತ್ತಾರೋ ಅವರೆಲ್ಲರೂ ಜನವರಿಯ ಮೊದಲ ವಾರದ ತನಕ ಈ ಹಬ್ಬದ ಸಂಭ್ರಮವನ್ನು ಆನಂದಿಸುತ್ತಾರೆ. ಟಿರಾ ಕೆಫೆಗಳಲ್ಲಿಯ ಆಕ್ಟಿವಿಟಿ ಝೋನ್ ಮತ್ತು ಟಿರಾ ಸ್ಟೋರ್ ನಲ್ಲಿ ಈ ಹಬ್ಬದ ಋತುವಿನ ಪೂರ್ತಿಯಾಗಿ ಇಂಟರಾಕ್ಟಿವ್ ಹಾಗೂ ರಿವಾರ್ಡ್ ದೊರೆಯುವಂಥ ಚಟುವಟಿಕೆಗಳನ್ನು ಟಿರಾದಿಂದ ಆಯೋಜಿಸಲಾಗಿದೆ. ಕೇವಲ 150 ರೂಪಾಯಿಗೆ ಕ್ರಿಸ್ ಮಸ್ ಥೀಮ್ ಇರುವಂಥ ಆಹಾರ ಹಾಗೂ ಪಾನೀಯವನ್ನು ಟಿರಾ ಕೆಫೆಯಿಂದ ನೀಡಲಾಗುತ್ತದೆ. ಹೀಗೆ ಪ್ರತಿ ಖರೀದಿಗೆ ಅದೇ…

Read More