Subscribe to Updates
Get the latest creative news from FooBar about art, design and business.
Author: kannadanewsnow09
ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ. ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…
ಬೆಂಗಳೂರು: 2025ನೇ ಸಾಲಿನ ಬಿ.ಇಡಿ ದಾಖಲಾತಿಗೆ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರೀಕೃತ ದಾಖಲಾತಿ ಘಟಕವು ಬಿಡುಗಡೆ ಮಾಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಬಿ.ಇಡಿ ದಾಖಲಾತಿ ಸಂಬಂಧ ಮೊದಲ ಸೀಟು ಹಂಚಿಕೆ ಪಟ್ಟಿಯನ್ನು https://schooleducation.karnataka.gov.in/ ಜಾಲತಾಣದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ. ಈ ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು ಹಂಚಿಕೆಯಾದ ಕಾಲೇಜುಗಳಿಗೆ ಸೇರ ಬಯಸಿದಲ್ಲಿ ಯೂಸರ್ ಐಟಿ ಮತ್ತು ಪಾಸ್ ವರ್ಡ್ ಅನ್ನು ಬಳಸಿ ದಿನಾಂಕ 25-11-2025ರ ಇಂದಿನಿಂದ 05-12-2025ರವರೆಗೆ ನಿಗದಿತ ಶುಲ್ಕದ ಚಲನ್ ಅನ್ನು ಮುದ್ರಿಸಿಕೊಂಡು ಎಸ್ ಬಿ ಐ ಬ್ಯಾಂಕಿನ ಯಾವುದೇ ಶಾಖೆಯಲ್ಲಿ ಪಾವತಿಸಬಹುದು. ಅದರ ಮೂಲ ಪ್ರತಿ ಹಾಗೂ ಇತರೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಸಂಬಂಧಿಸಿದ ಜಿಲ್ಲಾ ನೋಡಲ್ ಕೇಂದ್ರಕ್ಕೆ ತೆರಳಿ, ದಾಖಲಾತಿ ಪತ್ರವನ್ನು ಪಡೆದುಕೊಳ್ಳಬೇಕು ಎಂದಿದ್ದಾರೆ. ಇನ್ನೂ ಮೊದಲ ಸುತ್ತಿನ ಆಯ್ಕೆಯಲ್ಲಿ ಹಂಚಿಕೆಯಾದ ಕಾಲೇಜಿಗೆ ಸೇರಲು ಬಯಸದೇ ಇರುವ ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್…
ಶಿವಮೊಗ್ಗ: ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂಬುದಾಗಿ ಕುವೆಂಪು ವಿವಿಯ ಕನ್ನಡ ಭಾರತಿಯ ಹಿರಿಯ ಪ್ರಾಧ್ಯಾಪಕರಾದಂತ ಡಾ.ಜಿ ಪ್ರಶಾಂತ್ ನಾಯಕ ಹೇಳಿದ್ದಾರೆ. ಇಂದು ಕುವೆಂಪು ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಡಾ. ಜಿ ಪ್ರಶಾಂತ್ ನಾಯಕ, ಹಿರಿಯ ಪ್ರಾಧ್ಯಾಪಕರು, ಕನ್ನಡ ಭಾರತಿ, ಕುವೆಂಪು ವಿಶ್ವವಿದ್ಯಾಲಯ, ಇವರು ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಆಚರಣೆಗಿಂತ ಕಾರ್ಯಾಚರಣೆ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಕನ್ನಡ ನಾಡು ನುಡಿಗಾಗಿ ನಾವೆಲ್ಲರೂ ಬದ್ಧವಾಗಿ ಮಾಡಬೇಕಾದ ಕಾರ್ಯಗಳು ಯಾವುವು ಎಂಬುದನ್ನು ಅತ್ಯಂತ ಮಾರ್ಮಿಕವಾಗಿ ಉದಾಹರಣೆಗಳ ಮೂಲಕ ಕನ್ನಡದ ಪ್ರಜ್ಞೆಯನ್ನು ಮೂಡಿಸುವ ತಮ್ಮ ವಿಶಿಷ್ಟ ಮಾತುಗಳನ್ನು ಆಡಿ ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುತ್ತಯ್ಯ ಎಸ್.ಎಂ ಅವರು ಮಾತನಾಡಿ…
ದಾವಣಗೆರೆ: ರಾಜ್ಯಕ್ಕೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ; ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟಕ್ಕೆ ಇವತ್ತು ಚಾಲನೆ ನೀಡಿ ಅವರು ಮಾತನಾಡಿದರು. ಹಂಗಾಮಿ ಮುಖ್ಯಮಂತ್ರಿ, ತಾತ್ಕಾಲಿಕ ಮುಖ್ಯಮಂತ್ರಿ ರಾಜ್ಯಕ್ಕೆ ಬೇಕಾಗಿಲ್ಲ; ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೋ, ಇನ್ಯಾರು ಸಿಎಂ ಆಗುತ್ತಾರೋ ಎಂಬುದು ರಾಜ್ಯದ ಜನರಿಗೆ ಆಸಕ್ತಿ ಇಲ್ಲ. ಬೆಳಗಾವಿಯ ಚಳಿಗಾಲದ ಅಧಿವೇಶನ ಪ್ರಾರಂಭಕ್ಕೆ ಮುಂಚಿತವಾಗಿ ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು ಎಂದು ತಿಳಿಸಿದರು. ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಮ್ಮ ಸಮಸ್ಯೆಯನ್ನು ಬೆಂಗಳೂರಿನಲ್ಲೋ, ದೆಹಲಿಯಲ್ಲೇ ಬಗೆಹರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು. ಮಲ್ಲಿಕಾರ್ಜುನ ಖರ್ಗೆ ಅಸಹಾಯಕರಾಗಿ ಮಾತು.. ಪಾಪ ಮಲ್ಲಿಕಾರ್ಜುನ ಖರ್ಗೆಯವರ ಮಾತು ಕೇಳಿದರೆ ಅಯ್ಯೋ…
ಕನಕಪುರ : “ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆ ನಡೆಸಲಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರ ನನಗೆ ಗೊತ್ತಿಲ್ಲ. ಇದು ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ. ಸಿಎಂ ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ. ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ…
ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು’ ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ ಆಯೋಜಿಸಿದ್ದ ಆಕ್ಸಿಯಂ ಸ್ಪೇಸ್-4 ಮಿಷನ್ ಯಶಸ್ವಿಯ ರುವಾರಿಯಾಗಿರುವ ಗಗನಯಾತ್ರಿ ಶ್ರೀಶುಭಾಂಶು ಶುಕ್ಲಾ ಅವರಿಗೆ ಅಭಿನಂದನೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಈ ವೇಳೆ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. `ನೀವು ಸಹ ನನ್ನಂತೆಯೇ ಗಗನಯಾನಿ ಆಗಬಹುದು. ಆದರೆ, ಇದೊಂದೇ ಆಗಬೇಕೆಂದು ಕನಸು ಕಾಣಬೇಡಿ. ಏಕೆಂದರೆ, ಈ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ನಾನು ಹೀರೋ ರೀತಿ ನಿಮಗೆ ಕಾಣಬಹುದು. ಆದರೆ, ನನ್ನ ಯಾತ್ರೆಗೆ ಸಾವಿರಾರೂ ಮಂದಿ ಕೆಲಸ ಮಾಡಿದ್ದಾರೆ. ಎಂಜಿನಿಯರ್, ವೈದ್ಯರು ಹೀಗೆ ಸಾಕಷ್ಟು ಮಂದಿ ಇದ್ದಾರೆ. ಅವರಂತೆ ನೀವು ಆಗಬಹುದು’ ಎಂದರು. ಸಾಕಷ್ಟು ಸ್ಫೂರ್ತಿ: `ನನ್ನ ಗಗನಯಾನಕ್ಕೆ ಸಾಕಷ್ಟು ಜನರ ಸ್ಪೂರ್ತಿ ಇದೆ. ಹೀಗಾಗಿ ಒಬ್ಬಿಬ್ಬರ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 27.11.2025 ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿ.ಎಂ.ಟಿ.ಸಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ನವೆಂಬರ್ 27 ರ ಗುರುವಾರ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. https://kannadanewsnow.com/kannada/government-jobs-rs-10-lakh-prize-for-each-of-the-winning-athletes-of-the-blind-world-cup-cm-siddaramaiah-announces/ https://kannadanewsnow.com/kannada/a-shocking-act-in-the-state-a-sinful-mother-killed-a-cow-because-she-thought-it-was-a-girl-child/
ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿ, ಸನ್ಮಾನಿಸಿದ ಬಳಿಕ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದರು. ಹಾಗೆಯೇ ಭಾರತ ತಂಡದ ಇತರೆ ರಾಜ್ಯಗಳನ್ನು ಪ್ರತಿನಿಧಿಸುವ ತಂಡದ ಆಟಗಾರರಿಗೆ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ. ತಂಡದಲ್ಲಿದ್ದ ಇತರೆ ರಾಜ್ಯಗಳ 13 ಆಟಗಾರ್ತಿಯರಿಗೂ ತಲಾ 2 ಲಕ್ಷ ರೂಪಾಯಿ ನಗದು ಬಹುಮಾನ ಸಿಗಲಿದೆ. ತಂಡದ ನಾಯಕಿ, ತುಮಕೂರಿನ ಶಿರಾ ಮೂಲದ ದೀಪಿಕಾ ಅವರ ನಾಯಕತ್ವ ಮತ್ತು ಆಟದ ವೈಖರಿಯನ್ನು ಸಿಎಂ ವಿಶೇಷವಾಗಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹದೇವಪ್ಪ ಹಾಗೂ ಉನ್ನತ ಶಿಕ್ಷಣ ಸಚಿವರಾದ…
ಶಿವಮೊಗ್ಗ: ಪ್ರಸ್ತುತ ಶೈಕ್ಷಣಿಕ ವಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗಗಳು “ಅಂಚಿಗೆ ತಳ್ಳಲ್ಪಟ್ಟಿವೆ” ಎಂದು ಕನ್ನಡದ ಹಿರಿಯ ವಿಮರ್ಶಕ ಮತ್ತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಕಳವಳ ವ್ಯಕ್ತಪಡಿಸಿದರು. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಸೋಮವಾರ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ತಂತ್ರಜ್ಞಾನ ಹಾಗೂ ಆರ್ಥಿಕವಾಗಿ ಲಾಭದಾಯಕ ಎಂದು ಪರಿಗಣಿಸಲಾಗುವ ಕ್ಷೇತ್ರಗಳಿಗೆ ಒಲವು ಹೆಚ್ಚಿದ ಕಾರಣ ಹಾಗೂ ಆರ್ಥಿಕತೆಗೆ ಕೊಡುಗೆ ನೀಡದ ಜ್ಞಾನಕ್ಷೇತ್ರಗಳೆಂಬ ಕಾರಣದಿಂದ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಡುತ್ತಿವೆ. ಹಿಂದೆ ಸಮಾಜವನ್ನು ಕಟ್ಟುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಈ ಮಾನವಿಕ ವಿಭಾಗಗಳು, ಇಂದು ತಮ್ಮ ಶಕ್ತಿಯನ್ನು ತಾವೇ ಕುಂದಿಸಿಕೊಂಡು ಮಾರ್ಜಿನಲೈಸ್ ಆಗಿವೆ” ಎಂದು ವಿಶ್ಲೇಷಿಸಿದರು. ಇದೇ ಸಂದರ್ಭದಲ್ಲಿ ವಿಭಾಗದ ಸಾಹಿತ್ಯ ಸಂಘಕ್ಕೆ ಚಾಲನೆ ನೀಡಲಾಯಿತು. ವಿಭಾಗದ ಅಧ್ಯಕ್ಷ ಡಾ. ದತ್ತಾತ್ರೇಯ ಮಾತನಾಡಿ, ಇಂಗ್ಲಿಷ್…
ಶಿವಮೊಗ್ಗ : ಕ್ರೀಡೆಗಳು ಪ್ರತಿ ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕರಿಯಾಗಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ನಗರದ ಡಿ. ಎ. ಆರ್. ಕವಾಯತು ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಬಲೂನುಗಳನ್ನು ಹಾರಿ ಬಿಡುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಪೊಲೀಸ್ ಇಲಾಖೆಯ ವತಿಯಿಂದ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ ಕ್ರೀಡಾಕೂಟವು ವ್ಯವಸ್ಥಿತವಾಗಿ ಆಯೋಜಿಸಲಾಗುತ್ತಿದ್ದು, ಇತರರು ಅನುಸರಿಸುವಂತಿದೆ. ಅದನ್ನು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ನೌಕರರು ಕೂಡ ಕ್ರೀಡೆಯನ್ನು ಪೊಲೀಸ್ ಕ್ರೀಡಾಕೂಟವನ್ನು ಅನುಸರಿಸುತ್ತಿರುವುದು ಸಂತೋಷ ಎನಿಸಿದೆ ಎಂದರು. ಕ್ರೀಡೆ ಸ್ಫೂರ್ತಿದಾಯಕ ಆಗಿರುವಂತೆ ಪ್ರೇರಣಾದಾಯಕವಾಗಿದೆ. ದೈಹಿಕ ಸದೃಢತೆಗೆ ಸಹಕಾರಿಯಾಗಿದೆ ಎಂದ ಅವರು ಸದಾ ಲವಲವಿಕೆಯಿಂದಿರಲು, ಉತ್ಸುಕರಾಗಿರಲು ಪೂರಕವಾಗಿದೆ ಎಂದರು. ಪೊಲೀಸರು ತಮ್ಮ ದೈನಂದಿನ ಕಾರ್ಯದಲ್ಲಿ ಎದುರಾಗುವ ಸಮಸ್ಯೆ- ಸವಾಲುಗಳನ್ನು ಎದುರಿಸಲು, ಉತ್ತಮ ಸೇವೆ ಸಲ್ಲಿಸುವಲ್ಲಿ ಕ್ರೀಡೆ ಸಹಾಯಕವಾಗಿದೆ ಎಂದರು. ಜಿಲ್ಲೆಯಲ್ಲಿ ಶಾಂತಿ – ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ, ಕೋಮುಗಲಭೆ ಮತ್ತಿತರ ಕುಕೃತ್ಯಗಳನ್ನು ನಿಯಂತ್ರಿಸುವಲ್ಲಿ…














