Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಮಹಿಳೆ ವಿವಸ್ತ್ರ ಆಗುವುದಕ್ಕೆ ಪೊಲೀಸರು ಬಿಟ್ಟಿಲ್ಲ. ಪೊಲೀಸರು ಕೂಡಲೇ ಕ್ರಮ ವಹಿಸಿದ್ದಾರೆ. ಪೊಲೀಸರು ವಿವಸ್ತ್ರಗೊಳಿಸಿಲ್ಲ, ಆಕೆಯೇ ಮಾಡಿಕೊಂಡಿದ್ದಾಳೆ ಎಂಬ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ. ಇನ್ನೂ ಕೂಡ ವಿವರವಾಗಿ ತನಿಖೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಬೇಕಾದರೆ ತನಿಖೆಯಾಗಬೇಕು ಎಂದರು. ಡಿ.ಕೆ.ಶಿವಕುಮಾರ್ ಜವಾಬ್ದಾರಿಯುತ ಸಚಿವರು ಮತ್ತು ಉಪ ಮುಖ್ಯಮಂತ್ರಿಗಳು. ಕುಮಾರಸ್ವಾಮಿ ಹೇಳುವ ಪ್ರಕಾರ ಹೆಚ್ಚಿನ ಅಧಿಕಾರ ಇಲ್ಲ ಎಂಬುದು ಸಂವಿಧಾನಾತ್ಮಕವಾಗಿ ಸರಿ ಇರಬಹುದು.…
ತುಮಕೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗಣೆ ಟ್ರಸ್ಟ್ ನಿಂದ ಜನವರಿ.10ರ ನಾಳೆ, ಜನವರಿ.11ರ ನಾಡಿದ್ದು ಎರಡು ದಿನಗಳ ಕಾಲ ಕಾಡುಗೊಲ್ಲ ಬುಡಕಟ್ಟು, ಸಾಹಿತ್ಯ ಮತ್ತು ಸಂಸ್ಕೃತಿ ಕುರಿತು ಅಧ್ಯಯನ ಶಿಬಿರ ನಡೆಸಲಾಗುತ್ತಿದೆ. ತುಮಕೂರಿನ ಶಿರಾದಲ್ಲಿರುವಂತ ಸಮತಾ ಮಹಾವಿದ್ಯಾಲಯದ ಆವರಣದಲ್ಲಿ ಈ ಅಧ್ಯಯನ ಶಿಬಿರ ನಡೆಯಲಿದೆ ಎಂಬುದಾಗಿ ಗಣೆ ಟ್ರಸ್ಟ್ ನ ಅಧ್ಯಕ್ಷೆ ಡಾ.ಪ್ರೇಮ.ಜಿ.ಕೆ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕಾಡುಗೊಲ್ಲ ಸಮುದಾಯಕ್ಕೆ ತಮ್ಮ ಬುಡಕಟ್ಟಿನ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಾಳೆ, ನಾಡಿದ್ದು ಎರಡು ದಿನಗಳ ಕಾಲ ಅಧ್ಯಯನ ಶಿಬಿರ ಏರ್ಪಡಿಸಲಾಗಿದೆ ಎಂದಿದ್ದಾರೆ. ಜನವರಿ.10ರ ನಾಳೆ ಬೆಳಗ್ಗೆ 10 ಗಂಟೆಗೆ ಶಿಬಿರವನ್ನು ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಲೋಕಸಭಾ ಸದಸ್ಯರಾದಂತ ಪಿ.ಕೋದಂಡರಾಮಯ್ಯ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೈಕೋರ್ಟ್ ಹಿರಿಯ ವಕೀಲರಾದಂತ ಪ್ರೊ.ರವಿವರ್ಮ ಕುಮಾರ್, ಕಾಡುಗೊಲ್ಲ ಅಭಿವೃದ್ಧಿ ನಿಗದ ಅಧ್ಯಕ್ಷರಾದಂತ ಮಹೇಶ್ ಎಂ ಆರೋಗೆರೆ, ಕನ್ನಡ ಸಾಹಿತ್ಯ…
ನಿದ್ರೆ ಎಂದರೆ ಕೇವಲ ವಿಶ್ರಾಂತಿಯಲ್ಲ. ಇದು ನಿಮ್ಮ ದೇಹವು ದುರಸ್ತಿ ಸ್ಥಿತಿಗೆ ಹೋಗುವ ಸಮಯ. ಸ್ನಾಯುಗಳನ್ನು ಗುಣಪಡಿಸುವುದು ಮತ್ತು ಹಾರ್ಮೋನುಗಳನ್ನು ಸಮತೋಲನಗೊಳಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮತ್ತು ನೆನಪುಗಳನ್ನು ಸಂಸ್ಕರಿಸುವವರೆಗೆ, ಆರೋಗ್ಯದ ಪ್ರತಿಯೊಂದು ಅಂಶಕ್ಕೂ ಗುಣಮಟ್ಟದ ನಿದ್ರೆ ಅತ್ಯಗತ್ಯ. ಆದಾಗ್ಯೂ, ತಡರಾತ್ರಿಯ ಸ್ಕ್ರೀನ್ ಸಮಯ, ಕೆಲಸದ ಒತ್ತಡ ಮತ್ತು ಜೀವನಶೈಲಿಯ ಅಭ್ಯಾಸಗಳಿಂದಾಗಿ, ಅನೇಕ ಜನರು ರಾತ್ರಿಗೆ ಶಿಫಾರಸು ಮಾಡಲಾದ 7–9 ಗಂಟೆಗಳ ನಿದ್ರೆಯನ್ನು ಪಡೆಯುತ್ತಿಲ್ಲ. ಈ ನಿರಂತರ ನಿದ್ರಾಹೀನತೆಯು ನಿಧಾನವಾಗಿ ಹಲವಾರು ಗಂಭೀರ ಆರೋಗ್ಯ ಸ್ಥಿತಿಗಳಿಗೆ ಕಾರಣವಾಗಬಹುದು. ದೆಹಲಿಯ ಜಿಟಿಬಿ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಡಾ. ಅಜಿತ್ ಕುಮಾರ್, ದೀರ್ಘಕಾಲದ ನಿದ್ರಾಹೀನತೆಗೆ ಸಂಬಂಧಿಸಿದ ಪ್ರಮುಖ ಅಪಾಯಗಳನ್ನು ವಿವರಿಸುತ್ತಾರೆ: 1. ಅರಿವಿನ ಮತ್ತು ನರವೈಜ್ಞಾನಿಕ ಸಮಸ್ಯೆಗಳು ನಿದ್ರೆಯ ಕೊರತೆಯು ಸಾಮಾನ್ಯವಾಗಿ ಮೆದುಳಿನಲ್ಲಿ ಕಂಡುಬರುತ್ತದೆ. ನಿದ್ರೆಯ ಕೊರತೆಯು ಏಕಾಗ್ರತೆ, ಮನಸ್ಥಿತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳ ಮೇಲೆ ಪರಿಣಾಮ ಬೀರುತ್ತದೆ. ಕಾಲಾನಂತರದಲ್ಲಿ, ಇದು ಕಾರಣವಾಗಬಹುದು: ಮೆದುಳಿನ ಮಂಜು ನೆನಪಿನ ನಷ್ಟ ಚಿಂತನಾ ಸಾಮರ್ಥ್ಯ ಕಡಿಮೆಯಾಗಿದೆ…
ಬೆಂಗಳೂರು; ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ಅಕ್ಕ ಪಡೆ ಸ್ಥಾಪನೆಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ. https://twitter.com/KarnatakaVarthe/status/2009258922239250666 https://kannadanewsnow.com/kannada/kea-announces-merit-list-for-d-pharma-admissions/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/
ಬೆಂಗಳೂರು: ಹಣಕಾಸು ಇಲಾಖೆಯವರು ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು. ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಗೃಹಲಕ್ಷ್ಮೀ ಸಹಕಾರ ಸಂಘಕ್ಕೆ…
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಜನರಿಗೆ ಎ-ಖಾತಾ ನೀಡುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ-ಖಾತಾ ನಿವೇಶನ, ಕಟ್ಟಡ, ಅಪಾರ್ಮೆಂಟ್ ಗಳಿಗೆ ಎ-ಖಾತಾ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸಿರುವ ಅಥವಾ ಮಾರಾಟ ಮಾಡುವ ಪ್ರಕ್ರಿಯೆಯನ್ನು ತಡೆಯುವ ಉದ್ದೇಶದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ – ಖಾತಾ ನಿವೇಶನ / ಕಟ್ಟಡ / ಅಪಾರ್ಟ್ಮೆಂಟ್ಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು ಎ – ಖಾತಾ ನೀಡಲು ತೀರ್ಮಾನಿಸಲಾಗಿದೆ. https://twitter.com/KarnatakaVarthe/status/2009247095866192037
BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಡಾ.ರಾಜ್ ಕುಮಾರ್ ಹಾಗೂ ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದೆ. 2020ನೇ ಸಾಲಿನ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಜಯಮಾಲಗೆ ನೀಡಿದ್ದರೇ, 2020ನೇ ಸಾಲಿನ ಪುಟ್ಟಣ ಕಣಗಾಲ್ ಪ್ರಶಸ್ತಿಯನ್ನು ಎಂ.ಎಸ್ ಸತ್ಯುಗೆ ನೀಡಲಾಗಿದೆ. ಪ್ರಗತಿ ಅಶ್ವತ್ಥ್ ನಾರಾಯಣರಿಗೆ 2020ನೇ ಸಾಲಿನ ಡಾ.ವಿಷ್ಣವರ್ಧನ್ ಪ್ರಶಸ್ತಿಯನ್ನು ಜೀವಮಾನ ಸಾಧನೆಗಾಗಿ ನೀಡಲಾಗಿದೆ. 2021ನೇ ಸಾಲಿನ ರಾಜ್ ಕುಮಾರ್ ಪ್ರಶಸ್ತಿಯನ್ನು ಸಾರಾ ಗೋವಿಂದುಗೆ ನೀಡಲಾಗಿದೆ. ನಿರ್ದೇಶಕ ಶಿವರುದ್ರಯ್ಯಗೆ 2021ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಹಿರಿಯ ನಟ ಎಂ.ಕೆ ಸುಂದರ್ ರಾಜ್ ಗೆ 2021ನೇ ಸಾಲಿನ ವಿಷ್ಣುವರ್ಧನ್ ಪ್ರಶಸ್ತಿಯನ್ನು ನೀಡಲಾಗಿದೆ.
ಬೆಂಗಳೂರು: ಭ್ರಷ್ಟಾಚಾರ ಹಾಗೂ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ ಮಾಫಿಯಾದ ವಿರುದ್ಧ ರಾಜ್ಯ ಬಿಜೆಪಿಯಿಂದ ಸಂಘಟಿತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಕರ್ನಾಟಕದಲ್ಲಿ ಸತ್ತಂತಿರುವ ಪೊಲೀಸ್ ಇಲಾಖೆಯನ್ನು ಎಚ್ಚರಿಸಿ ರಾಜಕೀಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲಿದ್ದೇವೆ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಜನರಿಗೆ ಎಚ್ಚರಿಕೆ ನೀಡಲು ಹಾಗೂ ಕಾಂಗ್ರೆಸ್ ಸರ್ಕಾರವು ವಿವಿಧ ಯೋಜನೆಗಳ ಬಗ್ಗೆ ಹರಡುತ್ತಿರುವ ಅಪಪ್ರಚಾರದ ವಿರುದ್ಧ ಸತ್ಯಾಂಶಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನೂ ನಾವು ಜವಾಬ್ದಾರಿಯಿಂದ ನಿರ್ವಹಿಸಲು ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಎಲ್ಲ ಮಂಡಲಗಳಲ್ಲಿ ಏಕರೂಪದ ಕಾರ್ಯಯೋಜನೆಗಳು ಮತ್ತು ಕಲಾಪಗಳು ನಡೆಯಬೇಕು ಎನ್ನುವ ಉದ್ದೇಶದಿಂದ ಕಾರ್ಯಕರ್ತರಿಗೆ ವಿಶೇಷ ತರಬೇತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಜಿ ಸಿಎಂ ವಿವರಿಸಿದರು. ಮುಂಬರುವ ಚುನಾವಣಾ ಸವಾಲುಗಳ ಕುರಿತು ಮಾತನಾಡಿದ ಅವರು,…
ಮಂಡ್ಯ: ಜಿಲ್ಲೆಯ ಮದ್ದೂರು ಬಳಿಯಲ್ಲಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಕಾರೊಂದು ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಮೈ- ಬೆಂ ದಶಪಥ ಹೆದ್ದಾರಿಯಲ್ಲಿ ಕಾರು ಹೊತ್ತಿ ಉರಿದಿದೆ. ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ದಂಪತಿ ಆಶ್ಚರ್ಯಕರ ರೀತಿ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿ ಗ್ರಾಮದ ಕಿರಣ್ ಹಾಗು ರಂಜಿತ ಅಪಾಯದಿಂದ ಪಾರಾದ ದಂಪತಿ ಆಗಿದ್ದಾರೆ. ಬೆಂಗಳೂರಿಗೆ ಹೋಗಿ ವಾಪಸ್ಸು ಬರುವ ವೇಳೆ ಹೆದ್ದಾರಿಯಲ್ಲಿ ಏಕಾಏಕಿ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಹೊಗೆ ಬರುತ್ತಿದ್ದಂತೆ ಕಾರಿನಿಂದ ಇಳಿದು ದಂಪತಿಗಳು ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ಶಮನ ಕಾರ್ಯಾಚರಣೆ ನಡೆಸಿದರು. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/ https://kannadanewsnow.com/kannada/tilak-varma-ruled-out-of-first-three-new-zealand-t20is/
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಬಹು-ಸ್ವರೂಪದ ವೈಟ್-ಬಾಲ್ ಸರಣಿಯ ಮೊದಲ ಮೂರು ಟಿ20ಐಗಳಿಂದ ಸ್ಟಾರ್ ಇಂಡಿಯಾ ಬ್ಯಾಟ್ಸ್ಮನ್ ತಿಲಕ್ ವರ್ಮಾ ಅಧಿಕೃತವಾಗಿ ಹೊರಗುಳಿದಿದ್ದಾರೆ. ಮೆನ್ ಇನ್ ಬ್ಲೂ ತಂಡವು ಮೂರು ಏಕದಿನ ಮತ್ತು ಐದು ಟಿ20ಐ ಪಂದ್ಯಗಳಲ್ಲಿ ಬ್ಲ್ಯಾಕ್ ಕ್ಯಾಪ್ಸ್ ಅನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಸರಣಿಗೆ ಮುಂಚಿತವಾಗಿ, ಭಾರತವು ಮೊದಲ ಮೂರು ಟಿ20ಐಗಳಿಗೆ ತಿಲಕ್ ವರ್ಮಾ ಅವರ ಸೇವೆಗಳನ್ನು ಹೊಂದಿರುವುದಿಲ್ಲ. ತಿಲಕ್ ಹೊಟ್ಟೆಯ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. https://kannadanewsnow.com/kannada/e-khata-benefits-for-unauthorized-layouts-plots-buildings-apartments-in-the-state/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/














