Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. “ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ (ಮಾಧ್ಯಮ) ಮನವಿ ಮಾಡುತ್ತೇನೆ” ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ” ಎಂದು ತಿಳಿಸಿದರು. ಬಿಗ್ ಬಾಸ್ ವಿಚಾರವಾಗಿ ಕೇಳಿದಾಗ, “ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ…
ಬೆಂಗಳೂರು: ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಇನ್ಮುಂದೆ ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ರಾಜ್ಯ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯ ಆಗಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯಿಸಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ. ಉದ್ಯೋಗ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ. ವೇತನ ಸಹಿತ ಒಂದು ದಿನದ ರಜೆ ಸಿಗಲಿದೆ ಎಂದರು. ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು ಎಂದರು.…
BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ: ಸಂಪುಟದ ಮಹತ್ವ ನಿರ್ಧಾರ
ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರು ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಲೆಕ್ಕದಲ್ಲಿ ಆಹಾರ ಧಾನ್ಯಗಳ ಇಂದಿರಾ ಆಹಾರ ಕಿಟ್ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ‘ಇಂದಿರಾ ಆಹಾರ ಕಿಟ್ʼ (ಇಂದಿರಾ – ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮ) ಕಿಟ್ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಉಳಿದ 5 ಕೆಜಿ ಅಕ್ಕಿ ಲೆಕ್ಕದಲ್ಲಿ ತೊಗರಿ ಬೇಳೆ, ಹೆಸರು ಕಾಳು, ಸಕ್ಕರೆ, ಉಪ್ಪು ತಲಾ 1 ಕೆಜಿ ಹಾಗೂ 1 ಲೀಟರ್ ಅಡುಗೆ ಎಣ್ಣೆ ಪದಾರ್ಥವನ್ನು ಇಂದಿರಾ ಆಹಾರ ಕಿಟ್ನಲ್ಲಿ…
ಬೆಂಗಳೂರು: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ. “ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ 5 ಕೆಜಿ ಅಕ್ಕಿಯ ಬದಲಾಗಿ ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ತಿಂಗಳಿನಿಂದ ರೇಷನ್ ಕಾರ್ಡ್ ಬದಲಾಗಿ ಆಹಾರ ಕಿಟ್ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು ರೂ. 2000 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ/ನಿರ್ಮಾಣ ಕಾಮಗಾರಿಗಳನ್ನು ರೂ.1000 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರಿವೋಬನಹಳ್ಳಿಯಿಂದ ವತಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ…
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.. 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ. “ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ. ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ…
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು ಮೂರು ಲಕ್ಷ ಮನೆಗಳನ್ನು ಐದು ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ 25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು ಏಳು ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು…
ಬೆಂಗಳೂರು: ಬೆಂಗಳೂರು ಹೆಚ್ಚು ದಟ್ಟಣೆ ಇರುವ ನಗರಗಳ ಸಾಲಿನಲ್ಲಿ ಸೇರಿರುವುದು ಗೊತ್ತೇ ಇದೆ, ಇದೀಗ ಬೆಂಗಳೂರು ಪದೇ ಪದೇ ಸಂಚಾರ ನಿಯಮ ಉಲ್ಲಂಘಟನೆ ಮಾಡುವವರ ಪಟ್ಟಿಯಲ್ಲೂ ಸಹ ಅಗ್ರಸ್ಥಾನ ಪಡೆದುಕೊಂಡಿದೆ. ಹೌದು, ಭಾರತದ ಸುರಕ್ಷತೆ ಮತ್ತು ರಕ್ಷಣೆಯ ಕ್ಷೇತ್ರದ ಅಗ್ರ ಕಂಪನಿಗಳಲ್ಲಿ ಒಂದಾದ ACKO, ಇತ್ತೀಚಿಗೆ ನಡೆಸಿದ ಸಮೀಕ್ಷಾ ವರದಿಯಲ್ಲಿ ದೇಶದಲ್ಲೇ ಅತಿ ಹೆಚ್ಚು ಪುನಾವರ್ತಿತ ಸಂಚಾರ ನಿಯಮ ಉಲ್ಲಂಘನೆ ಮಾಡುವವರೂ ಬೆಂಗಳೂರಿಗರೇ ಎಂಬುದು ಬಹಿರಂಗವಾಗಿದೆ. ACKO ಸಂಸ್ಥೆ ಇತ್ತೀಚೆಗೆ ಡಿಸೆಂಬರ್ 2024 ರಿಂದ ಜೂನ್ 2025 ರವರೆಗೆ ಸಮೀಕ್ಷೆ ನಡೆಸಿದೆ. ಇದರ ಪ್ರಕಾರ, ಬೆಂಗಳೂರಿನ ವಾಹನ ಸವಾರರ ಪೈಕಿ ಶೇ. 10.8 ರಷ್ಟು ಜನರು 10 ಕ್ಕೂ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ, ಇದು ಭಾರತೀಯ ಮಹಾನಗರಗಳಲ್ಲಿಯೇ ಅತ್ಯಧಿಕವಾಗಿದೆ. ಅಧ್ಯಯನದ ಸಮಯದಲ್ಲಿ, ನಗರದಲ್ಲಿ 14.5 ಲಕ್ಷಕ್ಕೂ ಹೆಚ್ಚು ಸಂಚಾರ ತಪಾಸಣೆಗಳನ್ನು ನಡೆಸಲಾಗಿದ್ದು, ಸುಮಾರು ಶೇ. 61 ಮಂದಿ ಅಂದರೆ, ಪ್ರತಿ 10 ಜನರಲ್ಲಿ ಸುಮಾರು 6…
ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ನಾಳೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ. ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಆ ಮೂಲಕ ಸ್ಥಳೀಯರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು, ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಲು ಆರ್ ಬಿ ಡಿ ಮೋಟಾರ್ಸ್ ನಿಂದ ನಾಳೆ ರಾಯಲ್ ಎನ್ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್…
ಬೆಂಗಳೂರು: ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು. https://twitter.com/KarnatakaVarthe/status/1975903098028884211…